Homeಕರ್ನಾಟಕಬಿಜೆಪಿ ಶಾಸಕ ನೆಹರು ಓಲೇಕಾರ ಕಿರುಕುಳ ಆರೋಪ: ದಲಿತ ಕುಟಂಬದ ನಾಲ್ವರಿಂದ ಆತ್ಮಹತ್ಯೆ ಯತ್ನ

ಬಿಜೆಪಿ ಶಾಸಕ ನೆಹರು ಓಲೇಕಾರ ಕಿರುಕುಳ ಆರೋಪ: ದಲಿತ ಕುಟಂಬದ ನಾಲ್ವರಿಂದ ಆತ್ಮಹತ್ಯೆ ಯತ್ನ

- Advertisement -
- Advertisement -

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಹಳೇ ಶಿಡೇನೂರು ಗ್ರಾಮದಲ್ಲಿ ಜಮೀನು ವಿಚಾರದಲ್ಲಿ ಶಾಸಕ ನೆಹರು ಓಲೇಕಾರ ಮತ್ತು ಅವರ ಪುತ್ರ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಒಬ್ಬರು ಮಹಿಳೆ ಸೇರಿದಂತೆ ದಲಿತ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ 70 ವರ್ಷದ ಪಾಂಡಪ್ಪ ಕಬ್ಬೂರು, 65 ವರ್ಷದ ಗಂಗವ್ವ ಕಬ್ಬೂರು, ವರ್ಷದ 41 ಹನುಮಂತಪ್ಪ ಬಡಿಗೇರ್  ಮತ್ತು 72 ವರ್ಷದ ಗುರುಶಾಂತಪ್ಪ ಲಮಾಣಿ ಅವರನ್ನು ಬ್ಯಾಡಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ರವಾನಿಸಲಾಗಿದೆ.

ಆಸ್ಪತ್ರೆ ಎದುರು ಜಮಾಯಿಸಿದ ಗ್ರಾಮಸ್ಥರು ಬಿಜೆಪಿ ಶಾಸಕ ನೆಹರು ಓಲೇಕಾರ ವಿರುದ್ಧ ಘೋಷಣೆ ಕೂಗಿ ಶಾಸಕ ಹಾಗೂ ಅವರ ಪುತ್ರ ಮಂಜುನಾಥ್ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ‘ಇದು ಕುಪ್ಪಳ್ಳಿ ಕಹಳೆ’-ಪಠ್ಯಪುಸ್ತಕ ಹಗರಣ ವಿರೋಧಿಸಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಹಂಸಲೇಖ

2007-08 ರಲ್ಲಿ ರಾಜ್ಯ ಸರ್ಕಾರ 29 ದಲಿತ ಕುಟುಂಬಗಳಿಗೆ ತಲಾ ಒಂದು ಎಕರೆ 15 ಗುಂಟೆಗಳನ್ನು ನೀಡಿತ್ತು. ಗ್ರಾಮದ ಶೇಖರಗೌಡ ಪಾಟೀಲ ಎಂಬುವರು ದಲಿತ ಕುಟುಂಬಗಳಿಗೆ ನೀಡಿರುವ ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದಾರೆ. ಶಾಸಕರ ಮಗ ಮಂಜುನಾಥ್ ಅವರಿಗೆ ಬೆಂಬಲ ನೀಡಿದ್ದು, 15 ಗುಂಟೆ ಜಮೀನು ಬಿಟ್ಟು ನೀಡುವಂತೆ ದಲಿತ ಕುಟುಂಬಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಮಂಗಳವಾರವೂ ಮಂಜುನಾಥ್ ಗ್ರಾಮಕ್ಕೆ ಭೇಟಿ ನೀಡಿದ್ದು, ಜಮೀನು ಬಿಟ್ಟುಕೊಡುವಂತೆ ಕಿರುಕುಳ ನೀಡಿದ್ದಾರೆ. ಬಳಿಕ ನಾಲ್ವರು ವಿಷ ಸೇವಿಸಿದ್ದಾರೆ ಎಂದಿದ್ದಾರೆ. ಆದರೆ, ಶಾಸಕ ನೆಹರು ಓಲೇಕಾರ ಆರೋಪವನ್ನು ನಿರಾಕರಿಸಿದ್ದು, ಘಟನೆಯ ಹಿಂದೆ ಬ್ಯಾಡಗಿಯ ಕಾಂಗ್ರೆಸ್‌ ಮುಖಂಡ ಎಸ್‌.ಆರ್‌.ಪಾಟೀಲ ಅವರ ಕೈವಾಡವಿದೆ. ರೈತರನ್ನು ಅವರು ಪ್ರಚೋದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ನಾಲ್ವರ ಮೇಲೆ ಬುಧವಾರ ಪ್ರಕರಣ ದಾಖಲಾಗಿದೆ.

ಘಟನೆಯನ್ನು ಖಂಡಿಸಿರುವ ರಾಜ್ಯ ಕಾಂಗ್ರೆಸ್, “ದಲಿತರಿಗೆ ಮಂಜೂರಾಗಿದ್ದ ಅಲ್ಪ ಭೂಮಿಯಲ್ಲೂ ಬಿಜೆಪಿ ಶಾಸಕ ನೆಹರು ಓಲೆಕಾರ್ ಕುಟುಂಬಕ್ಕೆ ಪಾಲು ಬೇಕಂತೆ! ಸಿಎಂ ಬಸವರಾಜ ಬೊಮ್ಮಾಯಿಯವರೇ, ನಿಮ್ಮದೇ ಜಿಲ್ಲೆಯಲ್ಲಿ ನಡೆದ ದೌರ್ಜನ್ಯವಿದು. ಸಿನೆಮಾ ನೋಡುವುದಷ್ಟೇ ಅಲ್ಲ, ಇಲ್ಲೂ ಸ್ವಲ್ಪ ನೋಡಿ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿ, ದಲಿತರಿಗೆ ರಕ್ಷಣೆ ಕೊಡಿ. ಅವರ ಚಿಕಿತ್ಸೆ ಜವಾಬ್ದಾರಿಯನ್ನ ಸರ್ಕಾರವೇ ಹೊರಬೇಕು” ಎಂದಿದೆ.


ಇದನ್ನೂ ಓದಿ: ಪಠ್ಯಪುಸ್ತಕ ಹಗರಣ ಅಪ್‌ಡೇಟ್‌ | ಬಿಜೆಪಿಗರೆ ನೀವು ತುಕ್ಡೆ ಗ್ಯಾಂಗಿನ ನಾಯಕರು: ಸಿದ್ದರಾಮಯ್ಯ ಆಕ್ರೊಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. What is going on in our state?
    CM sir, please see what is happening in your state.
    You can witness cinemas later. First you attend burning problems of weaker sections.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...