Homeಕರ್ನಾಟಕಬಿಜೆಪಿ ಶಾಸಕ ನೆಹರು ಓಲೇಕಾರ ಕಿರುಕುಳ ಆರೋಪ: ದಲಿತ ಕುಟಂಬದ ನಾಲ್ವರಿಂದ ಆತ್ಮಹತ್ಯೆ ಯತ್ನ

ಬಿಜೆಪಿ ಶಾಸಕ ನೆಹರು ಓಲೇಕಾರ ಕಿರುಕುಳ ಆರೋಪ: ದಲಿತ ಕುಟಂಬದ ನಾಲ್ವರಿಂದ ಆತ್ಮಹತ್ಯೆ ಯತ್ನ

- Advertisement -
- Advertisement -

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಹಳೇ ಶಿಡೇನೂರು ಗ್ರಾಮದಲ್ಲಿ ಜಮೀನು ವಿಚಾರದಲ್ಲಿ ಶಾಸಕ ನೆಹರು ಓಲೇಕಾರ ಮತ್ತು ಅವರ ಪುತ್ರ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಒಬ್ಬರು ಮಹಿಳೆ ಸೇರಿದಂತೆ ದಲಿತ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ 70 ವರ್ಷದ ಪಾಂಡಪ್ಪ ಕಬ್ಬೂರು, 65 ವರ್ಷದ ಗಂಗವ್ವ ಕಬ್ಬೂರು, ವರ್ಷದ 41 ಹನುಮಂತಪ್ಪ ಬಡಿಗೇರ್  ಮತ್ತು 72 ವರ್ಷದ ಗುರುಶಾಂತಪ್ಪ ಲಮಾಣಿ ಅವರನ್ನು ಬ್ಯಾಡಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ರವಾನಿಸಲಾಗಿದೆ.

ಆಸ್ಪತ್ರೆ ಎದುರು ಜಮಾಯಿಸಿದ ಗ್ರಾಮಸ್ಥರು ಬಿಜೆಪಿ ಶಾಸಕ ನೆಹರು ಓಲೇಕಾರ ವಿರುದ್ಧ ಘೋಷಣೆ ಕೂಗಿ ಶಾಸಕ ಹಾಗೂ ಅವರ ಪುತ್ರ ಮಂಜುನಾಥ್ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ‘ಇದು ಕುಪ್ಪಳ್ಳಿ ಕಹಳೆ’-ಪಠ್ಯಪುಸ್ತಕ ಹಗರಣ ವಿರೋಧಿಸಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಹಂಸಲೇಖ

2007-08 ರಲ್ಲಿ ರಾಜ್ಯ ಸರ್ಕಾರ 29 ದಲಿತ ಕುಟುಂಬಗಳಿಗೆ ತಲಾ ಒಂದು ಎಕರೆ 15 ಗುಂಟೆಗಳನ್ನು ನೀಡಿತ್ತು. ಗ್ರಾಮದ ಶೇಖರಗೌಡ ಪಾಟೀಲ ಎಂಬುವರು ದಲಿತ ಕುಟುಂಬಗಳಿಗೆ ನೀಡಿರುವ ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದಾರೆ. ಶಾಸಕರ ಮಗ ಮಂಜುನಾಥ್ ಅವರಿಗೆ ಬೆಂಬಲ ನೀಡಿದ್ದು, 15 ಗುಂಟೆ ಜಮೀನು ಬಿಟ್ಟು ನೀಡುವಂತೆ ದಲಿತ ಕುಟುಂಬಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಮಂಗಳವಾರವೂ ಮಂಜುನಾಥ್ ಗ್ರಾಮಕ್ಕೆ ಭೇಟಿ ನೀಡಿದ್ದು, ಜಮೀನು ಬಿಟ್ಟುಕೊಡುವಂತೆ ಕಿರುಕುಳ ನೀಡಿದ್ದಾರೆ. ಬಳಿಕ ನಾಲ್ವರು ವಿಷ ಸೇವಿಸಿದ್ದಾರೆ ಎಂದಿದ್ದಾರೆ. ಆದರೆ, ಶಾಸಕ ನೆಹರು ಓಲೇಕಾರ ಆರೋಪವನ್ನು ನಿರಾಕರಿಸಿದ್ದು, ಘಟನೆಯ ಹಿಂದೆ ಬ್ಯಾಡಗಿಯ ಕಾಂಗ್ರೆಸ್‌ ಮುಖಂಡ ಎಸ್‌.ಆರ್‌.ಪಾಟೀಲ ಅವರ ಕೈವಾಡವಿದೆ. ರೈತರನ್ನು ಅವರು ಪ್ರಚೋದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ನಾಲ್ವರ ಮೇಲೆ ಬುಧವಾರ ಪ್ರಕರಣ ದಾಖಲಾಗಿದೆ.

ಘಟನೆಯನ್ನು ಖಂಡಿಸಿರುವ ರಾಜ್ಯ ಕಾಂಗ್ರೆಸ್, “ದಲಿತರಿಗೆ ಮಂಜೂರಾಗಿದ್ದ ಅಲ್ಪ ಭೂಮಿಯಲ್ಲೂ ಬಿಜೆಪಿ ಶಾಸಕ ನೆಹರು ಓಲೆಕಾರ್ ಕುಟುಂಬಕ್ಕೆ ಪಾಲು ಬೇಕಂತೆ! ಸಿಎಂ ಬಸವರಾಜ ಬೊಮ್ಮಾಯಿಯವರೇ, ನಿಮ್ಮದೇ ಜಿಲ್ಲೆಯಲ್ಲಿ ನಡೆದ ದೌರ್ಜನ್ಯವಿದು. ಸಿನೆಮಾ ನೋಡುವುದಷ್ಟೇ ಅಲ್ಲ, ಇಲ್ಲೂ ಸ್ವಲ್ಪ ನೋಡಿ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿ, ದಲಿತರಿಗೆ ರಕ್ಷಣೆ ಕೊಡಿ. ಅವರ ಚಿಕಿತ್ಸೆ ಜವಾಬ್ದಾರಿಯನ್ನ ಸರ್ಕಾರವೇ ಹೊರಬೇಕು” ಎಂದಿದೆ.


ಇದನ್ನೂ ಓದಿ: ಪಠ್ಯಪುಸ್ತಕ ಹಗರಣ ಅಪ್‌ಡೇಟ್‌ | ಬಿಜೆಪಿಗರೆ ನೀವು ತುಕ್ಡೆ ಗ್ಯಾಂಗಿನ ನಾಯಕರು: ಸಿದ್ದರಾಮಯ್ಯ ಆಕ್ರೊಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. What is going on in our state?
    CM sir, please see what is happening in your state.
    You can witness cinemas later. First you attend burning problems of weaker sections.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....