Homeಕರ್ನಾಟಕಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

ಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

- Advertisement -
- Advertisement -

ಹಾವೇರಿ: ನಗರದಲ್ಲಿ ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದಂತೆ ಪೌರ ಕಾರ್ಮಿಕರ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಅವರನ್ನು ಪ್ರಮುಖ ಆರೋಪಿಯನ್ನಾಗಿ ಗುರುತಿಸಲಾಗಿದೆ.

ಜೂ.7ರಂದು (ಶನಿವಾರ) ನಗರದ ಬಾರ್​ನಲ್ಲಿದ್ದ ಪೌರಕಾರ್ಮಿಕ ರಾಜು ದೊಡ್ಡಮನಿ ಮೇಲೆ ಮಾರಣಾಂತಿಕ ದಾಳಿ ನಡೆದಿತ್ತು. ಬ್ಯಾಟ್ ಹಿಡಿದು ಬಂದ ಗುಂಪು ರಾಜು ಮೇಲೆ ಹಲ್ಲೆ ಮಾಡಿ ಪರಾರಿಯಾಗಿತ್ತು. ತೀವ್ರ ಗಾಯಗೊಂಡಿರುವ ರಾಜು ಹುಬ್ಬಳ್ಳಿಯ ಕಿಮ್ಸನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಹಲ್ಲೆಗೆ ಮಂಗಳಮುಖಿ ಅಕ್ಷತಾ ಕಾರಣ ಎಂದು ಪೌರಕಾರ್ಮಿಕರು ಅಕ್ಷತಾ ಮತ್ತು ಆಕೆಯ 9 ಬೆಂಬಲಿಗರ ಮೇಲೆ ಹಾವೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೊಲೀಸರ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾದ ಎಫ್‌ಐಆರ್ ಪ್ರತಿ ಪ್ರಕಾರ, ಟ್ರಾನ್ಸ್‌ಜೆಂಡರ್ ಅಕ್ಷತಾ, ಶಾಂತು, ಸುಬ್ಬು, ಅರ್ಜುನ, ಪ್ರಥಮ್, ಶಿವು ಕನಕಪುರ ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ. ಅಕ್ಷತಾ ಅವರನ್ನು ಪ್ರಮುಖ ಆರೋಪಿಯನ್ನಾಗಿ ಗುರುತಿಸಲಾಗಿದೆ.

ಪೀರಪ್ಪ ಶಿರಬಾಡಗಿ ಎಂಬವರು ನೀಡಿದ ದೂರು ಆಧರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪೌರ ಕಾರ್ಮಿಕರಾದ ಪೀರಪ್ಪ ಮತ್ತು ಕಾಂತೇಶ್ ಕೂಡ ಪ್ರಕರಣದ ಸಂತ್ರಸ್ತರು ಎನ್ನಲಾಗಿದೆ. ಮತ್ತೊಂದು ದೂರನ್ನು ಸುರೇಶ್ ಎಂಬವರು ದಾಖಲಿಸಿದ್ದಾರೆ. ಈ ದೂರು ಆಧರಿಸಿ ಸುಮಾರು 10 ಜನರ ವಿರುದ್ದ ಎಫ್‌ಐಆರ್ ದಾಖಲಿಸಿರುವ ಮಾಹಿತಿ ಲಭ್ಯವಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಅಕ್ಷತಾ ಅವರ ಆಪ್ತ ಮಹಮ್ಮದ್ ಅವರು,  ಅಕ್ಷತಾ ಅವರು ಸಾಮಾಜಿಕ ಕಾರ್ಯಕ್ರಗಳಲ್ಲಿ ತೊಡಗಿಸಿಕೊಂಡವರು. ಹಿಂದುಳಿತ, ಶೋಷಿತ ಜನರಿಗಾಗಿ ಕೆಲಸ ಮಾಡುವವರು. ಯುವಕರನ್ನು ಒಗ್ಗೂಡಿಸಿ ಉತ್ತಮ ಕಾರ್ಯಕ್ರಮಗಳಲ್ಲಿ ತೊಡುಗುವಂತೆ ಮಾಡಿದ್ದಾರೆ. ಅವರು ಪೌರ ಕಾರ್ಮಿಕರ ಮೇಲೆ ಹಲ್ಲೆ ಮಾಡಿಸುವವರು ಅಲ್ಲ ಎಂದು ಹೇಳಿದ್ದಾರೆ.

ಘಟನೆ ಬಗ್ಗೆ ವಿವರಿಸಿದ ಅವರು, ಶಾಂತು ಎಂಬ ಯುವಕನ ಜನ್ಮದಿನದ ಪ್ರಯುಕ್ತ ಬ್ಯಾನರ್ ಹಾಕಿದ್ದರು. ಅದನ್ನು ನಗರಸಭೆಯವರು ತೆರವು ಮಾಡಿದ್ದರು. ಈ ವೇಳೆ ಅಲ್ಲೆ ಇದ್ದ ಶಾಂತು ಪೌರ ಕಾರ್ಮಿಕರ ಜೊತೆ ವಾಗ್ವಾದ ನಡೆಸಿದ್ದರು. ಶಾಂತು ಅಕ್ಷತಾ ಅವರ ಜೊತೆ ಗುರುತಿಸಿಕೊಂಡಿದ್ದರಿಂದ ಬ್ಯಾನರ್ ತೆರವುಗೊಳಿಸಿದ ವಿಷಯವನ್ನು ಅಕ್ಷತಾಗೆ ತಿಳಿಸಿದ್ದರು. ಅಕ್ಷತಾ ಆತನಿಗೆ ಬುದ್ದಿಮಾತು ಹೇಳಿ, ನಗರಸಭೆಗೆ ತೆರಳಿ ಪೌರಾಯುಕ್ತರನ್ನು ಭೇಟಿಯಾಗಿದ್ದರು. ಅಲ್ಲಿ ಯುವಕರ ಬ್ಯಾನರ್ ವಾಪಸ್ ಕೊಡಿ, ಅವರು ಪರವಾನಿಗೆ ತೆಗೆದುಕೊಂಡು ಹಾಕುತ್ತಾರೆ ಎಂದು ಹೇಳಿ ಬಂದಿದ್ದರು. ಅಲ್ಲಿಗೆ ಒಂದು ಹಂತಕ್ಕೆ ವಿಷಯ ಮುಗಿದಿತ್ತು ಎಂದು ಮಹಮ್ಮದ್ ತಿಳಿಸಿದ್ದಾರೆ.

ಇದಾದ ಬಳಿಕ ಕೆಲ ಸಂಘಟನೆಗಳ ಮುಖಂಡರು ಮತ್ತು ಪೌರ ಕಾರ್ಮಿಕರು ನಗರಸಭೆ ಬಳಿ ಜಮಾಯಿಸಿ ಶಾಂತು ಜೊತೆ ವಾಗ್ವಾದ ನಡೆಸಿದ್ದಾರೆ. ಅಕ್ಷತಾ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ವಿಷಯವನ್ನು ಯುವಕರು ಅಕ್ಷತಾಗೆ ತಿಳಿಸಿದ್ದರು. ಅಕ್ಷತಾ ಸ್ಥಳಕ್ಕೆ ತೆರಳಿದಾಗ ಮತ್ತೆ ವಾಗ್ವಾದ ಜೋರಾಗಿದೆ. ಡಿಎಸ್‌ಎಸ್ ಮುಖಂಡ ಹೊನ್ನಪ್ಪ ಅವರ ನೇತೃತ್ವದಲ್ಲಿ ಸೇರಿದ್ದ ಮುಖಂಡರು ಮತ್ತು ಪೌರ ಕಾರ್ಮಿಕರು ಅಕ್ಷತಾಗೆ ನಿಂದಿಸಿದ್ದಾರೆ. ಗುಂಪು ಸೇರಿದ್ದ ಜನರು ಶಾಂತುಗೆ ಥಳಿಸಿದ್ದಾರೆ. ಬಳಿಕ ಅಕ್ಷತಾ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಅಕ್ಷತಾ ಬಟ್ಟೆ ಬಿಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತಂತೆ ವಿಡಿಯೋವನ್ನು ನೀವು ನೋಡಿರಬಹುದು. ಬೇಕಾದರೆ ನಗರಸಭೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಿ ಎಂದು ಮಹಮ್ಮದ್ ಹೇಳಿದ್ದಾರೆ.

ಮುಂದುವರಿದು, ನಗರಸಭೆಯ ಮುಂದೆ ಇಷ್ಟೆಲ್ಲಾ ಘಟನೆಗಳು ಆದ ಬಳಿಕ, ನಗರಸಭೆಯ ಒಳಗೆ ಸಂಧಾನ ನಡೆದಿದೆ. ಅಲ್ಲಿ ನಗರಸಭೆ ಅಧ್ಯಕ್ಷರು, ಆಯುಕ್ತರು ಸೇರಿದಂತೆ ಪ್ರಮುಖರು ಇದ್ದರು. ದಲಿತ ಸಂಘಟನೆಗಳ ಪ್ರಮುಖರು ಮತ್ತು ಅಕ್ಷತಾ ಕಡೆಯವರು ಪರಸ್ಪರ ಮಾತುಕತೆ ಮೂಲಕ ವಿವಾದ ಬಗೆಹರಿಸಿಕೊಂಡಿದ್ದರು. ಅಕ್ಷತಾ ಅಲ್ಲಿಂದ ಮನೆಗೆ ತೆರಳಿದ್ದರು. ಆದರೆ, ನಗರಸಭೆ ಬಳಿ ನಡೆದ ಘಟನೆಯಿಂದ ಅವರ ಮನಸ್ಸಿಗೆ ಘಾಸಿಯಾಗಿತ್ತು. ಇನ್ನುಮುಂದೆ ಯಾವುದೇ ವಿಚಾರಕ್ಕೆ ತಲೆ ಹಾಕುವುದಿಲ್ಲ ಎಂದು ನನ್ನ ಬಳಿ ಹೇಳಿದ್ದರು. ಒಂದೆರಡು ದಿನ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಎಲ್ಲಾದರು ಹೋಗುತ್ತೇನೆ ಎಂದಿದ್ದರು. ಅಕ್ಷತಾ ಹೆಸರು ಹೇಳಿಕೊಂಡು ಯಾವುದೇ ಹೊಡೆದಾಟಕ್ಕೆ ಹೋಗಬೇಡಿ ಎಂದು ಆಕೆಯ ಪರವಾಗಿ ನಾನು ಯುವಕರಿಗೆ ಹೇಳಿ ಬಂದಿದ್ದೆ ಎಂದು ಮಹಮ್ಮದ್ ವಿವರಿಸಿದ್ದಾರೆ.

ನಗರಸಭೆಯ ಬಳಿ ನಡೆದ ಘಟನೆಯ ಬಳಿಕ ಅಕ್ಷತಾ ಯಾವುದೇ ವಿಚಾರಕ್ಕೆ ತಲೆ ಹಾಕಿರಲಿಲ್ಲ. ಆದರೆ, ಆಕೆ ಬುದ್ದಿವಾದ ಹೇಳಿದ ಬಳಿಕವೂ, ಮರುದಿನ ಶಾಂತು ನೇತೃತ್ವದಲ್ಲಿ ಯುವಕರು ಪೌರ ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾರೆ. ಅದಕ್ಕೂ ಅಕ್ಷತಾಗೂ ಯಾವುದೇ ಸಂಬಂಧ ಇಲ್ಲ. ಆದರೆ, ಸಂಘಟನೆಗಳ ಮುಖಂಡರು ಅಕ್ಷತಾಳೆ ಹಲ್ಲೆ ಮಾಡಿಸಿದ್ದಾಳೆ ಎಂದು ಆರೋಪಿಸಿದ್ದಾರೆ. ಯುವಕರಿಗೂ ಮತ್ತು ಪೌರ ಕಾರ್ಮಿಕರಿಗೆ  ಕೆಲಸ ವಿಚಾರಗಳಿಗೆ ಆಗಾಗ ವಾಗ್ವಾದಗಳು ನಡೆಯುತ್ತಿತ್ತು. ಅದರ ಮುಂದುವರಿದ ಭಾಗವಾಗಿ ಹಲ್ಲೆ ಮಾಡಿರಬಹುದು. ಅಲ್ಲದೆ ಅಕ್ಷತಾ ಯಾವುದೇ ಕಾರಣಕ್ಕೂ ಹಲ್ಲೆ ಮಾಡಿಸಿಲ್ಲ. ಆಕೆ ಪೌರ ಕಾರ್ಮಿಕರ ಪರವಾಗಿಯೇ ಕೆಲಸ ಮಾಡುವವರು ಎಂದು ಮಹಮ್ಮದ್ ಹೇಳಿದ್ದಾರೆ.

ಮಲ್ಲು ಕುಂಬಾರ್ ಲೈಂಗಿಕ ಅಲ್ಪಸಂಖ್ಯಾತರ ಪರ ಹೋರಾಟಗಾರರು

ಟ್ರಾನ್ಸ್‌ಜೆಂಡರ್ ಅಕ್ಷತಾ ಅವರು ಪೌರ ಕಾರ್ಮಿಕರ ಮೇಲೆ ಹಲ್ಲೆ ಮಾಡಿಸಿದ್ದಾರೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಪರ ಹೋರಾಟಗಾರ ಮಲ್ಲು ಕಂಬಾರ್, “ಪೌರ ಕಾರ್ಮಿಕರ ಮೇಲಿನ ಹಲ್ಲೆಯನ್ನು ನಾನು ಖಂಡಿಸುತ್ತೇನೆ. ಅದು ನಾಗರಿಕ ಸಮಾಜ ಒಪ್ಪುವಂತದ್ದಲ್ಲ. ಈ ಪ್ರಕರಣದಲ್ಲಿ ಅಕ್ಷತಾ ಅವರ ವಿರುದ್ದ ಆರೋಪ ಕೇಳಿ ಬಂದಿದೆ. ಆದರೆ, ಅವರ ಕಡೆಯವರು ಅಕ್ಷತಾ ಅವರ ಪಾತ್ರವಿಲ್ಲ ಎನ್ನುತ್ತಿದ್ದಾರೆ. ಆದ್ದರಿಂದ ಘಟನೆಯ ಹಿಂದಿನ ಸತ್ಯಾಸತ್ಯಾತೆ ಏನು ಎಂದು ನನಗೆ ಗೊತ್ತಿಲ್ಲ. ಸರಿಯಾದ ತನಿಖೆಯಿಂದ ಅದು ತಿಳಿದು ಬರಬೇಕಿದೆ. ಸದ್ಯಕ್ಕೆ ನಾನು ಪೌರ ಕಾರ್ಮಿಕರ ಮೇಲಿನ ಹಲ್ಲೆಯನ್ನು ಖಂಡಿಸುತ್ತೇನೆ. ಇದನ್ನು ಹೊರತು ಪ್ರಕರಣದಲ್ಲಿ ತಲೆ ಹಾಕಲು ಹೋಗುದಿಲ್ಲ. ನನ್ನ ಸಮುದಾಯವಾಗಲೀ, ಪೌರ ಕಾರ್ಮಿಕರಾಗಲಿ ಯಾರನ್ನೂ ಬೆಂಬಲಿಸುವುದಿಲ್ಲ ಎಂದಿದ್ದಾರೆ.

ಹಾವೇರಿ ಪೌರ ಕಾರ್ಮಿಕರ ಮೇಲಿನ ಮಾರಣಾಂತಿಕ ಹಲ್ಲೆ ಸಂಬಂಧ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸುರೇಶ್ ಅವರ ಪತ್ನಿ” ಶಾಂತು ಎಂಬಾತನ ಜನ್ಮದಿನದ ಹಿನ್ನೆಲೆ ಬ್ಯಾನರ್ ಹಾಕಲಾಗಿತ್ತು. ಪೌರ ಕಾರ್ಮಿಕರಾದ ಸುರೇಶ್ ಮತ್ತು ಪೀರಪ್ಪ ಪೌರಾಯುಕ್ತರ ಸೂಚನೆ ಮೇರೆಗೆ ಬ್ಯಾನರ್ ತೆರವುಗೊಳಿಸಿದ್ದರು. ಈ ಕಾರಣಕ್ಕೆ ಆರೋಪಿ ಅಕ್ಷತಾ ನಗರಸಭೆಗೆ ತೆರಳಿ ಪೌರಾಯುಕ್ತರ ಜೊತೆ ವಾಗ್ವಾದ ನಡೆಸಿದ್ದರು. ಈ ವೇಳೆ ಪೌರ ಕಾರ್ಮಿಕರೆಲ್ಲ ಪೌರಾಯುಕ್ತರ ಬೆಂಬಲಕ್ಕೆ ನಿಂತು ಅಕ್ಷತಾ ಜೊತೆ ವಾಗ್ವಾದ ನಡೆಸಿದ್ದರು ಎಂದು ತಿಳಿಸಿದ್ದಾರೆ.

ಮುಂದುವರಿದು, ಶನಿವಾರ ನಗರಸಭೆ ಸಮೀಪದ ಬಾರ್ ಒಂದರಲ್ಲಿ ಸುರೇಶ್ ಮತ್ತು ಪೀರಪ್ಪ ಕುಳಿತಿದ್ದಾಗ, ಏಕಾಏಕಿ ನುಗ್ಗಿದ ಕೆಲವರು ಪೀರಪ್ಪ ಮೇಲೆ ಮಾರಣಾಂತಿಕ ಹಲ್ಲೆ (ವೈರಲ್ ವಿಡಿಯೋದಲ್ಲಿ ಇರುವಂತೆ) ನಡೆಸಿದ್ದಾರೆ. ಅದನ್ನು ನೋಡಿ ಸುರೇಶ್ ಆರೋಗ್ಯದಲ್ಲಿ ಏರುಪೇರಾಗಿದೆ. ಅವರಿಗೆ ಮೂರ್ಚೆರೋಗ ಇತ್ತು. ಪ್ರಸ್ತುತ ಅವರು ಮನೆಯಲ್ಲೇ ಇದ್ದು, ಆಸ್ಪತ್ರೆಗೆ ಹೋಗಿ ಬರುವ ಮೂಲಕ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಿದ್ದಾರೆ. ಸುರೇಶ್ ಮೇಲೆ ಹಲ್ಲೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುರೇಶ್ ಅವರ ಸಂಬಂಧಿ ಗುರುರಾಜ್ ಎಂಬವರು ಮಾತನಾಡಿ, “ಬ್ಯಾನರ್ ತೆರವುಗೊಳಿಸಿದ ಕಾರಣಕ್ಕೇ ಹಲ್ಲೆ ನಡೆದಿದೆ. ಸುರೇಶ್ ಪೌರ ಕಾರ್ಮಿಕರಾಗಿ ಅವರ ಕೆಲಸ ಮಾಡಿದ್ದಾರೆ. ಆರೋಪಿಗಳಿಗೂ ಅವರಿಗೂ ಯಾವುದೇ ಹಳೆ ದ್ವೇಷ ಇರಲಿಲ್ಲ ಎಂದಿದ್ದಾರೆ. ಆರೋಪಿ ಅಕ್ಷತಾ ಬಗ್ಗೆ ವಿವರಿಸಿದಾಗ, “ಅವರು ಇಲ್ಲೇ ಓಡಾಡಿಕೊಂಡು ಇದ್ದರು. ಇದುವರೆಗೆ ಈ ರೀತಿ ಗೂಂಡಾಗಿರಿ ಮಾಡಿರುವುದು ನಮಗೆ ಗೊತ್ತಿಲ್ಲ. ಇದೇ ಮೊದಲ ಬಾರಿಗೆ ಹೀಗಾಗಿದೆ” ಎಂದಿದ್ದಾರೆ.

ಆಗಿದ್ದೇನು?

ಮಾಧ್ಯಮ ವರದಿಗಳ ಪ್ರಕಾರ, “ಕೊರವರ ಓಣಿಯ ವೃತ್ತದಲ್ಲಿ ಅಕ್ರಮವಾಗಿ ಆರೋಪಿ ಶಾಂತು ಜನ್ಮದಿನದ ಶುಭಾಷಯ ಕೋರುವ ಬ್ಯಾನರ್ ಹಾಕಲಾಗಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪೌರಾಯುಕ್ತ ಗಂಗಾಧರ ಬೆಲ್ಲದ ಅವರು ಬ್ಯಾನರ್ ತೆರವುಗೊಳಿಸಲು ಸಿಬ್ಬಂದಿ ರಂಗಪ್ಪ ಹೆರ್ಕಲ್ ಅವರಿಗೆ ಸೂಚಿಸಿದ್ದರು. ಬ್ಯಾನರ್ ತೆರವುಗೊಳಿಸಲು ರಂಗಪ್ಪ ಅವರು ಸ್ಥಳಕ್ಕೆ ಹೋದಾಗ ಆರೋಪಿ ಕೆ.ಸಿ.ಅಕ್ಷತಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಬಳಿಕ, ರಂಗಪ್ಪ ಸ್ಥಳದಿಂದ ಹೊರಟು ನಗರಸಭೆಗೆ ಬಂದಿದ್ದರು.

ಕ್ರಿಕೆಟ್‌ ಆಟವಾಡುತ್ತಿದ್ದ ಕೆಲ ಆರೋಪಿಗಳು, ಇತರೆ ಆರೋಪಿಗಳ ಜೊತೆ ಸೇರಿ ಬ್ಯಾಟ್‌ಗಳ ಸಮೇತ ನಗರಸಭೆ ಆವರಣಕ್ಕೆ ನುಗ್ಗಿದ್ದರು. ಸ್ಥಳದಲ್ಲಿದ್ದ ಪೌರಕಾರ್ಮಿಕರ ಜೊತೆ ಜಗಳ ತೆಗೆದಿದ್ದರು. ಗುತ್ತಿಗೆ ಪೌರಕಾರ್ಮಿಕರಾದ ಪೀರಪ್ಪ ಹಾಗೂ ಕಾಂತೇಶ್ ಅವರಿಗೆ ಹೊಡೆದು ಜೀವ ಬೆದರಿಕೆ ಹಾಕಿದ್ದರು.

ಪ್ರತಿಭಟನೆ

ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನ ಬಂಧಿಸಬೇಕು ಎಂದು ಒತ್ತಾಯಿಸಿ ನಗರಸಭೆಯ ಪೌರಕಾರ್ಮಿಕರು ಹಾವೇರಿ ಟೌನ್‌ ಪೊಲೀಸ್ ಠಾಣೆ ಎದುರು ಶನಿವಾರ ಪ್ರತಿಭಟನೆ ನಡೆಸಿದ್ದರು.

ನಗರಸಭೆ ಎದುರು ನಡೆದ ಗಲಾಟೆ ಸಂಬಂಧ ತಮ್ಮ ವಿರುದ್ಧ ದೂರು ನೀಡಿದರೆಂಬ ಕಾರಣಕ್ಕೆ ಪೌರ ಕಾರ್ಮಿಕರ ಮೇಲೆ ಶನಿವಾರ ಪುನಃ ಮಾರಣಾಂತಿಕ ಹಲ್ಲೆ ಮಾಡಲಾಗಿದ್ದು ಈ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.

ಭಾರತದಿಂದ 300ಕ್ಕೂ ಅಧಿಕ ಜನರು ಬಾಂಗ್ಲಾಕ್ಕೆ ಗಡೀಪಾರು: ಧ್ವನಿ ಎತ್ತಿದ ಮಾನವ ಹಕ್ಕು ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...