Homeಕರ್ನಾಟಕಹಾವೇರಿ| ಪೌರ ಕಾರ್ಮಿಕರ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಾವೇರಿ| ಪೌರ ಕಾರ್ಮಿಕರ ಮೇಲೆ ಹಲ್ಲೆ: ಆರೋಪಿಗಳ ಬಂಧನ

- Advertisement -
- Advertisement -

ಹಾವೇರಿಯಲ್ಲಿ ಬ್ಯಾನರ್ ವಿಚಾರಕ್ಕೆ ಪೌರ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಹೊರತುಪಡಿಸಿ ಉಳಿದವರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಯ ಬಂಧನಕ್ಕೆ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾದ ಎಫ್‌ಐಆರ್ ಪ್ರತಿ ಪ್ರಕಾರ, ಟ್ರಾನ್ಸ್‌ಜೆಂಡರ್ ಅಕ್ಷತಾ, ಶಾಂತು, ಸುಬ್ಬು, ಅರ್ಜುನ, ಪ್ರಥಮ್, ಶಿವು ಕನಕಪುರ ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ. ಅಕ್ಷತಾ ಅವರನ್ನು ಪ್ರಮುಖ ಆರೋಪಿಯನ್ನಾಗಿ ಗುರುತಿಸಲಾಗಿದೆ.

ಪೀರಪ್ಪ ಶಿರಬಾಡಗಿ ಎಂಬವರು ನೀಡಿದ ದೂರು ಆಧರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪೌರ ಕಾರ್ಮಿಕರಾದ ಪೀರಪ್ಪ ಮತ್ತು ಕಾಂತೇಶ್ ಪ್ರಕರಣದ ಸಂತ್ರಸ್ತರು ಎನ್ನಲಾಗಿದೆ.

ಮತ್ತೊಂದು ದೂರನ್ನು ಸುರೇಶ್ ಎಂಬವರು ದಾಖಲಿಸಿದ್ದಾರೆ. ಈ ದೂರು ಆಧರಿಸಿ ಸುಮಾರು 10 ಜನರ ವಿರುದ್ದ ಎಫ್‌ಐಆರ್ ದಾಖಲಿಸಿರುವ ಮಾಹಿತಿ ಲಭ್ಯವಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸುರೇಶ್ ಅವರ ಪತ್ನಿ”ಶಾಂತು ಎಂಬಾತನ ಜನ್ಮದಿನದ ಹಿನ್ನೆಲೆ ಬ್ಯಾನರ್ ಹಾಕಲಾಗಿತ್ತು. ಪೌರ ಕಾರ್ಮಿಕರಾದ ಸುರೇಶ್ ಮತ್ತು ಪೀರಪ್ಪ ಪೌರಾಯುಕ್ತರ ಸೂಚನೆ ಮೇರೆಗೆ ಬ್ಯಾನರ್ ತೆರವುಗೊಳಿಸಿದ್ದರು. ಈ ಕಾರಣಕ್ಕೆ ಆರೋಪಿ ಅಕ್ಷತಾ ನಗರಸಭೆಗೆ ತೆರಳಿ ಪೌರಾಯುಕ್ತರ ಜೊತೆ ವಾಗ್ವಾದ ನಡೆಸಿದ್ದರು. ಈ ವೇಳೆ ಪೌರ ಕಾರ್ಮಿಕರೆಲ್ಲ ಪೌರಾಯುಕ್ತರ ಬೆಂಬಲಕ್ಕೆ ನಿಂತು ಅಕ್ಷತಾ ಜೊತೆ ವಾಗ್ವಾದ ನಡೆಸಿದ್ದರು ಎಂದು ತಿಳಿಸಿದ್ದಾರೆ.

ಮುಂದುವರಿದು, ಶನಿವಾರ ನಗರಸಭೆ ಸಮೀಪದ ಬಾರ್ ಒಂದರಲ್ಲಿ ಸುರೇಶ್ ಮತ್ತು ಪೀರಪ್ಪ ಕುಳಿತಿದ್ದಾಗ, ಏಕಾಏಕಿ ನುಗ್ಗಿದ ಕೆಲವರು ಪೀರಪ್ಪ ಮೇಲೆ ಮಾರಣಾಂತಿಕ ಹಲ್ಲೆ (ವೈರಲ್ ವಿಡಿಯೋದಲ್ಲಿ ಇರುವಂತೆ) ನಡೆಸಿದ್ದಾರೆ. ಅದನ್ನು ನೋಡಿ ಸುರೇಶ್ ಆರೋಗ್ಯದಲ್ಲಿ ಏರುಪೇರಾಗಿದೆ. ಅವರಿಗೆ ಮೂರ್ಚೆರೋಗ ಇತ್ತು. ಪ್ರಸ್ತುತ ಅವರು ಮನೆಯಲ್ಲೇ ಇದ್ದು, ಆಸ್ಪತ್ರೆಗೆ ಹೋಗಿ ಬರುವ ಮೂಲಕ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಿದ್ದಾರೆ. ಸುರೇಶ್ ಮೇಲೆ ಹಲ್ಲೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುರೇಶ್ ಅವರ ಸಂಬಂಧಿ ಗುರುರಾಜ್ ಎಂಬವರು ಮಾತನಾಡಿ, “ಬ್ಯಾನರ್ ತೆರವುಗೊಳಿಸಿದ ಕಾರಣಕ್ಕೇ ಹಲ್ಲೆ ನಡೆದಿದೆ. ಸುರೇಶ್ ಪೌರ ಕಾರ್ಮಿಕರಾಗಿ ಅವರ ಕೆಲಸ ಮಾಡಿದ್ದಾರೆ. ಆರೋಪಿಗಳಿಗೂ ಅವರಿಗೂ ಯಾವುದೇ ಹಳೆ ದ್ವೇಷ ಇರಲಿಲ್ಲ ಎಂದಿದ್ದಾರೆ. ಆರೋಪಿ ಅಕ್ಷತಾ ಬಗ್ಗೆ ವಿವರಿಸಿದಾಗ, “ಅವರು ಇಲ್ಲೇ ಓಡಾಡಿಕೊಂಡು ಇದ್ದರು. ಇದುವರೆಗೆ ಈ ರೀತಿ ಗೂಂಡಾಗಿರಿ ಮಾಡಿರುವುದು ನಮಗೆ ಗೊತ್ತಿಲ್ಲ. ಇದೇ ಮೊದಲ ಬಾರಿಗೆ ಹೀಗಾಗಿದೆ” ಎಂದಿದ್ದಾರೆ.

ಆಗಿದ್ದೇನು?

ಮಾಧ್ಯಮ ವರದಿಗಳ ಪ್ರಕಾರ, “ಕೊರವರ ಓಣಿಯ ವೃತ್ತದಲ್ಲಿ ಅಕ್ರಮವಾಗಿ ಆರೋಪಿ ಶಾಂತು ಜನ್ಮದಿನದ ಶುಭಾಷಯ ಕೋರುವ ಬ್ಯಾನರ್ ಹಾಕಲಾಗಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪೌರಾಯುಕ್ತ ಗಂಗಾಧರ ಬೆಲ್ಲದ ಅವರು ಬ್ಯಾನರ್ ತೆರವುಗೊಳಿಸಲು ಸಿಬ್ಬಂದಿ ರಂಗಪ್ಪ ಹೆರ್ಕಲ್ ಅವರಿಗೆ ಸೂಚಿಸಿದ್ದರು. ಬ್ಯಾನರ್ ತೆರವುಗೊಳಿಸಲು ರಂಗಪ್ಪ ಅವರು ಸ್ಥಳಕ್ಕೆ ಹೋದಾಗ ಆರೋಪಿ ಕೆ.ಸಿ.ಅಕ್ಷತಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಬಳಿಕ, ರಂಗಪ್ಪ ಸ್ಥಳದಿಂದ ಹೊರಟು ನಗರಸಭೆಗೆ ಬಂದಿದ್ದರು.

ಕ್ರಿಕೆಟ್‌ ಆಟವಾಡುತ್ತಿದ್ದ ಕೆಲ ಆರೋಪಿಗಳು, ಇತರೆ ಆರೋಪಿಗಳ ಜೊತೆ ಸೇರಿ ಬ್ಯಾಟ್‌ಗಳ ಸಮೇತ ನಗರಸಭೆ ಆವರಣಕ್ಕೆ ನುಗ್ಗಿದ್ದರು. ಸ್ಥಳದಲ್ಲಿದ್ದ ಪೌರಕಾರ್ಮಿಕರ ಜೊತೆ ಜಗಳ ತೆಗೆದಿದ್ದರು. ಗುತ್ತಿಗೆ ಪೌರಕಾರ್ಮಿಕರಾದ ಪೀರಪ್ಪ ಹಾಗೂ ಕಾಂತೇಶ್ ಅವರಿಗೆ ಹೊಡೆದು ಜೀವ ಬೆದರಿಕೆ ಹಾಕಿದ್ದರು.

ಪ್ರತಿಭಟನೆ

ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನ ಬಂಧಿಸಬೇಕು ಎಂದು ಒತ್ತಾಯಿಸಿ ನಗರಸಭೆಯ ಪೌರಕಾರ್ಮಿಕರು ಹಾವೇರಿ ಟೌನ್‌ ಪೊಲೀಸ್ ಠಾಣೆ ಎದುರು ಶನಿವಾರ ಪ್ರತಿಭಟನೆ ನಡೆಸಿದ್ದರು.

ನಗರಸಭೆ ಎದುರು ನಡೆದ ಗಲಾಟೆ ಸಂಬಂಧ ತಮ್ಮ ವಿರುದ್ಧ ದೂರು ನೀಡಿದರೆಂಬ ಕಾರಣಕ್ಕೆ ಪೌರ ಕಾರ್ಮಿಕರ ಮೇಲೆ ಶನಿವಾರ ಪುನಃ ಹಲ್ಲೆ ಮಾಡಲಾಗಿದ್ದು ಈ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.

ವಿಧಾನಸೌಧ ಮುಂಭಾಗ ಆರ್‌ಸಿಬಿ ತಂಡಕ್ಕೆ ಸನ್ಮಾನ: ಅಪಾಯದ ಮುನ್ನೆಚ್ಚರಿಕೆ ನೀಡಿತ್ತು ಪೊಲೀಸ್ ಇಲಾಖೆ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...