Homeಕರ್ನಾಟಕಹಾವೇರಿ| ಪೌರ ಕಾರ್ಮಿಕರ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಾವೇರಿ| ಪೌರ ಕಾರ್ಮಿಕರ ಮೇಲೆ ಹಲ್ಲೆ: ಆರೋಪಿಗಳ ಬಂಧನ

- Advertisement -
- Advertisement -

ಹಾವೇರಿಯಲ್ಲಿ ಬ್ಯಾನರ್ ವಿಚಾರಕ್ಕೆ ಪೌರ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಹೊರತುಪಡಿಸಿ ಉಳಿದವರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಯ ಬಂಧನಕ್ಕೆ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾದ ಎಫ್‌ಐಆರ್ ಪ್ರತಿ ಪ್ರಕಾರ, ಟ್ರಾನ್ಸ್‌ಜೆಂಡರ್ ಅಕ್ಷತಾ, ಶಾಂತು, ಸುಬ್ಬು, ಅರ್ಜುನ, ಪ್ರಥಮ್, ಶಿವು ಕನಕಪುರ ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ. ಅಕ್ಷತಾ ಅವರನ್ನು ಪ್ರಮುಖ ಆರೋಪಿಯನ್ನಾಗಿ ಗುರುತಿಸಲಾಗಿದೆ.

ಪೀರಪ್ಪ ಶಿರಬಾಡಗಿ ಎಂಬವರು ನೀಡಿದ ದೂರು ಆಧರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪೌರ ಕಾರ್ಮಿಕರಾದ ಪೀರಪ್ಪ ಮತ್ತು ಕಾಂತೇಶ್ ಪ್ರಕರಣದ ಸಂತ್ರಸ್ತರು ಎನ್ನಲಾಗಿದೆ.

ಮತ್ತೊಂದು ದೂರನ್ನು ಸುರೇಶ್ ಎಂಬವರು ದಾಖಲಿಸಿದ್ದಾರೆ. ಈ ದೂರು ಆಧರಿಸಿ ಸುಮಾರು 10 ಜನರ ವಿರುದ್ದ ಎಫ್‌ಐಆರ್ ದಾಖಲಿಸಿರುವ ಮಾಹಿತಿ ಲಭ್ಯವಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸುರೇಶ್ ಅವರ ಪತ್ನಿ”ಶಾಂತು ಎಂಬಾತನ ಜನ್ಮದಿನದ ಹಿನ್ನೆಲೆ ಬ್ಯಾನರ್ ಹಾಕಲಾಗಿತ್ತು. ಪೌರ ಕಾರ್ಮಿಕರಾದ ಸುರೇಶ್ ಮತ್ತು ಪೀರಪ್ಪ ಪೌರಾಯುಕ್ತರ ಸೂಚನೆ ಮೇರೆಗೆ ಬ್ಯಾನರ್ ತೆರವುಗೊಳಿಸಿದ್ದರು. ಈ ಕಾರಣಕ್ಕೆ ಆರೋಪಿ ಅಕ್ಷತಾ ನಗರಸಭೆಗೆ ತೆರಳಿ ಪೌರಾಯುಕ್ತರ ಜೊತೆ ವಾಗ್ವಾದ ನಡೆಸಿದ್ದರು. ಈ ವೇಳೆ ಪೌರ ಕಾರ್ಮಿಕರೆಲ್ಲ ಪೌರಾಯುಕ್ತರ ಬೆಂಬಲಕ್ಕೆ ನಿಂತು ಅಕ್ಷತಾ ಜೊತೆ ವಾಗ್ವಾದ ನಡೆಸಿದ್ದರು ಎಂದು ತಿಳಿಸಿದ್ದಾರೆ.

ಮುಂದುವರಿದು, ಶನಿವಾರ ನಗರಸಭೆ ಸಮೀಪದ ಬಾರ್ ಒಂದರಲ್ಲಿ ಸುರೇಶ್ ಮತ್ತು ಪೀರಪ್ಪ ಕುಳಿತಿದ್ದಾಗ, ಏಕಾಏಕಿ ನುಗ್ಗಿದ ಕೆಲವರು ಪೀರಪ್ಪ ಮೇಲೆ ಮಾರಣಾಂತಿಕ ಹಲ್ಲೆ (ವೈರಲ್ ವಿಡಿಯೋದಲ್ಲಿ ಇರುವಂತೆ) ನಡೆಸಿದ್ದಾರೆ. ಅದನ್ನು ನೋಡಿ ಸುರೇಶ್ ಆರೋಗ್ಯದಲ್ಲಿ ಏರುಪೇರಾಗಿದೆ. ಅವರಿಗೆ ಮೂರ್ಚೆರೋಗ ಇತ್ತು. ಪ್ರಸ್ತುತ ಅವರು ಮನೆಯಲ್ಲೇ ಇದ್ದು, ಆಸ್ಪತ್ರೆಗೆ ಹೋಗಿ ಬರುವ ಮೂಲಕ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಿದ್ದಾರೆ. ಸುರೇಶ್ ಮೇಲೆ ಹಲ್ಲೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುರೇಶ್ ಅವರ ಸಂಬಂಧಿ ಗುರುರಾಜ್ ಎಂಬವರು ಮಾತನಾಡಿ, “ಬ್ಯಾನರ್ ತೆರವುಗೊಳಿಸಿದ ಕಾರಣಕ್ಕೇ ಹಲ್ಲೆ ನಡೆದಿದೆ. ಸುರೇಶ್ ಪೌರ ಕಾರ್ಮಿಕರಾಗಿ ಅವರ ಕೆಲಸ ಮಾಡಿದ್ದಾರೆ. ಆರೋಪಿಗಳಿಗೂ ಅವರಿಗೂ ಯಾವುದೇ ಹಳೆ ದ್ವೇಷ ಇರಲಿಲ್ಲ ಎಂದಿದ್ದಾರೆ. ಆರೋಪಿ ಅಕ್ಷತಾ ಬಗ್ಗೆ ವಿವರಿಸಿದಾಗ, “ಅವರು ಇಲ್ಲೇ ಓಡಾಡಿಕೊಂಡು ಇದ್ದರು. ಇದುವರೆಗೆ ಈ ರೀತಿ ಗೂಂಡಾಗಿರಿ ಮಾಡಿರುವುದು ನಮಗೆ ಗೊತ್ತಿಲ್ಲ. ಇದೇ ಮೊದಲ ಬಾರಿಗೆ ಹೀಗಾಗಿದೆ” ಎಂದಿದ್ದಾರೆ.

ಆಗಿದ್ದೇನು?

ಮಾಧ್ಯಮ ವರದಿಗಳ ಪ್ರಕಾರ, “ಕೊರವರ ಓಣಿಯ ವೃತ್ತದಲ್ಲಿ ಅಕ್ರಮವಾಗಿ ಆರೋಪಿ ಶಾಂತು ಜನ್ಮದಿನದ ಶುಭಾಷಯ ಕೋರುವ ಬ್ಯಾನರ್ ಹಾಕಲಾಗಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪೌರಾಯುಕ್ತ ಗಂಗಾಧರ ಬೆಲ್ಲದ ಅವರು ಬ್ಯಾನರ್ ತೆರವುಗೊಳಿಸಲು ಸಿಬ್ಬಂದಿ ರಂಗಪ್ಪ ಹೆರ್ಕಲ್ ಅವರಿಗೆ ಸೂಚಿಸಿದ್ದರು. ಬ್ಯಾನರ್ ತೆರವುಗೊಳಿಸಲು ರಂಗಪ್ಪ ಅವರು ಸ್ಥಳಕ್ಕೆ ಹೋದಾಗ ಆರೋಪಿ ಕೆ.ಸಿ.ಅಕ್ಷತಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಬಳಿಕ, ರಂಗಪ್ಪ ಸ್ಥಳದಿಂದ ಹೊರಟು ನಗರಸಭೆಗೆ ಬಂದಿದ್ದರು.

ಕ್ರಿಕೆಟ್‌ ಆಟವಾಡುತ್ತಿದ್ದ ಕೆಲ ಆರೋಪಿಗಳು, ಇತರೆ ಆರೋಪಿಗಳ ಜೊತೆ ಸೇರಿ ಬ್ಯಾಟ್‌ಗಳ ಸಮೇತ ನಗರಸಭೆ ಆವರಣಕ್ಕೆ ನುಗ್ಗಿದ್ದರು. ಸ್ಥಳದಲ್ಲಿದ್ದ ಪೌರಕಾರ್ಮಿಕರ ಜೊತೆ ಜಗಳ ತೆಗೆದಿದ್ದರು. ಗುತ್ತಿಗೆ ಪೌರಕಾರ್ಮಿಕರಾದ ಪೀರಪ್ಪ ಹಾಗೂ ಕಾಂತೇಶ್ ಅವರಿಗೆ ಹೊಡೆದು ಜೀವ ಬೆದರಿಕೆ ಹಾಕಿದ್ದರು.

ಪ್ರತಿಭಟನೆ

ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನ ಬಂಧಿಸಬೇಕು ಎಂದು ಒತ್ತಾಯಿಸಿ ನಗರಸಭೆಯ ಪೌರಕಾರ್ಮಿಕರು ಹಾವೇರಿ ಟೌನ್‌ ಪೊಲೀಸ್ ಠಾಣೆ ಎದುರು ಶನಿವಾರ ಪ್ರತಿಭಟನೆ ನಡೆಸಿದ್ದರು.

ನಗರಸಭೆ ಎದುರು ನಡೆದ ಗಲಾಟೆ ಸಂಬಂಧ ತಮ್ಮ ವಿರುದ್ಧ ದೂರು ನೀಡಿದರೆಂಬ ಕಾರಣಕ್ಕೆ ಪೌರ ಕಾರ್ಮಿಕರ ಮೇಲೆ ಶನಿವಾರ ಪುನಃ ಹಲ್ಲೆ ಮಾಡಲಾಗಿದ್ದು ಈ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.

ವಿಧಾನಸೌಧ ಮುಂಭಾಗ ಆರ್‌ಸಿಬಿ ತಂಡಕ್ಕೆ ಸನ್ಮಾನ: ಅಪಾಯದ ಮುನ್ನೆಚ್ಚರಿಕೆ ನೀಡಿತ್ತು ಪೊಲೀಸ್ ಇಲಾಖೆ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...