Homeಕರ್ನಾಟಕಹಾವೇರಿ| ಪೌರ ಕಾರ್ಮಿಕರ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಾವೇರಿ| ಪೌರ ಕಾರ್ಮಿಕರ ಮೇಲೆ ಹಲ್ಲೆ: ಆರೋಪಿಗಳ ಬಂಧನ

- Advertisement -
- Advertisement -

ಹಾವೇರಿಯಲ್ಲಿ ಬ್ಯಾನರ್ ವಿಚಾರಕ್ಕೆ ಪೌರ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಹೊರತುಪಡಿಸಿ ಉಳಿದವರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಯ ಬಂಧನಕ್ಕೆ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾದ ಎಫ್‌ಐಆರ್ ಪ್ರತಿ ಪ್ರಕಾರ, ಟ್ರಾನ್ಸ್‌ಜೆಂಡರ್ ಅಕ್ಷತಾ, ಶಾಂತು, ಸುಬ್ಬು, ಅರ್ಜುನ, ಪ್ರಥಮ್, ಶಿವು ಕನಕಪುರ ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ. ಅಕ್ಷತಾ ಅವರನ್ನು ಪ್ರಮುಖ ಆರೋಪಿಯನ್ನಾಗಿ ಗುರುತಿಸಲಾಗಿದೆ.

ಪೀರಪ್ಪ ಶಿರಬಾಡಗಿ ಎಂಬವರು ನೀಡಿದ ದೂರು ಆಧರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪೌರ ಕಾರ್ಮಿಕರಾದ ಪೀರಪ್ಪ ಮತ್ತು ಕಾಂತೇಶ್ ಪ್ರಕರಣದ ಸಂತ್ರಸ್ತರು ಎನ್ನಲಾಗಿದೆ.

ಮತ್ತೊಂದು ದೂರನ್ನು ಸುರೇಶ್ ಎಂಬವರು ದಾಖಲಿಸಿದ್ದಾರೆ. ಈ ದೂರು ಆಧರಿಸಿ ಸುಮಾರು 10 ಜನರ ವಿರುದ್ದ ಎಫ್‌ಐಆರ್ ದಾಖಲಿಸಿರುವ ಮಾಹಿತಿ ಲಭ್ಯವಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸುರೇಶ್ ಅವರ ಪತ್ನಿ”ಶಾಂತು ಎಂಬಾತನ ಜನ್ಮದಿನದ ಹಿನ್ನೆಲೆ ಬ್ಯಾನರ್ ಹಾಕಲಾಗಿತ್ತು. ಪೌರ ಕಾರ್ಮಿಕರಾದ ಸುರೇಶ್ ಮತ್ತು ಪೀರಪ್ಪ ಪೌರಾಯುಕ್ತರ ಸೂಚನೆ ಮೇರೆಗೆ ಬ್ಯಾನರ್ ತೆರವುಗೊಳಿಸಿದ್ದರು. ಈ ಕಾರಣಕ್ಕೆ ಆರೋಪಿ ಅಕ್ಷತಾ ನಗರಸಭೆಗೆ ತೆರಳಿ ಪೌರಾಯುಕ್ತರ ಜೊತೆ ವಾಗ್ವಾದ ನಡೆಸಿದ್ದರು. ಈ ವೇಳೆ ಪೌರ ಕಾರ್ಮಿಕರೆಲ್ಲ ಪೌರಾಯುಕ್ತರ ಬೆಂಬಲಕ್ಕೆ ನಿಂತು ಅಕ್ಷತಾ ಜೊತೆ ವಾಗ್ವಾದ ನಡೆಸಿದ್ದರು ಎಂದು ತಿಳಿಸಿದ್ದಾರೆ.

ಮುಂದುವರಿದು, ಶನಿವಾರ ನಗರಸಭೆ ಸಮೀಪದ ಬಾರ್ ಒಂದರಲ್ಲಿ ಸುರೇಶ್ ಮತ್ತು ಪೀರಪ್ಪ ಕುಳಿತಿದ್ದಾಗ, ಏಕಾಏಕಿ ನುಗ್ಗಿದ ಕೆಲವರು ಪೀರಪ್ಪ ಮೇಲೆ ಮಾರಣಾಂತಿಕ ಹಲ್ಲೆ (ವೈರಲ್ ವಿಡಿಯೋದಲ್ಲಿ ಇರುವಂತೆ) ನಡೆಸಿದ್ದಾರೆ. ಅದನ್ನು ನೋಡಿ ಸುರೇಶ್ ಆರೋಗ್ಯದಲ್ಲಿ ಏರುಪೇರಾಗಿದೆ. ಅವರಿಗೆ ಮೂರ್ಚೆರೋಗ ಇತ್ತು. ಪ್ರಸ್ತುತ ಅವರು ಮನೆಯಲ್ಲೇ ಇದ್ದು, ಆಸ್ಪತ್ರೆಗೆ ಹೋಗಿ ಬರುವ ಮೂಲಕ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಿದ್ದಾರೆ. ಸುರೇಶ್ ಮೇಲೆ ಹಲ್ಲೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುರೇಶ್ ಅವರ ಸಂಬಂಧಿ ಗುರುರಾಜ್ ಎಂಬವರು ಮಾತನಾಡಿ, “ಬ್ಯಾನರ್ ತೆರವುಗೊಳಿಸಿದ ಕಾರಣಕ್ಕೇ ಹಲ್ಲೆ ನಡೆದಿದೆ. ಸುರೇಶ್ ಪೌರ ಕಾರ್ಮಿಕರಾಗಿ ಅವರ ಕೆಲಸ ಮಾಡಿದ್ದಾರೆ. ಆರೋಪಿಗಳಿಗೂ ಅವರಿಗೂ ಯಾವುದೇ ಹಳೆ ದ್ವೇಷ ಇರಲಿಲ್ಲ ಎಂದಿದ್ದಾರೆ. ಆರೋಪಿ ಅಕ್ಷತಾ ಬಗ್ಗೆ ವಿವರಿಸಿದಾಗ, “ಅವರು ಇಲ್ಲೇ ಓಡಾಡಿಕೊಂಡು ಇದ್ದರು. ಇದುವರೆಗೆ ಈ ರೀತಿ ಗೂಂಡಾಗಿರಿ ಮಾಡಿರುವುದು ನಮಗೆ ಗೊತ್ತಿಲ್ಲ. ಇದೇ ಮೊದಲ ಬಾರಿಗೆ ಹೀಗಾಗಿದೆ” ಎಂದಿದ್ದಾರೆ.

ಆಗಿದ್ದೇನು?

ಮಾಧ್ಯಮ ವರದಿಗಳ ಪ್ರಕಾರ, “ಕೊರವರ ಓಣಿಯ ವೃತ್ತದಲ್ಲಿ ಅಕ್ರಮವಾಗಿ ಆರೋಪಿ ಶಾಂತು ಜನ್ಮದಿನದ ಶುಭಾಷಯ ಕೋರುವ ಬ್ಯಾನರ್ ಹಾಕಲಾಗಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪೌರಾಯುಕ್ತ ಗಂಗಾಧರ ಬೆಲ್ಲದ ಅವರು ಬ್ಯಾನರ್ ತೆರವುಗೊಳಿಸಲು ಸಿಬ್ಬಂದಿ ರಂಗಪ್ಪ ಹೆರ್ಕಲ್ ಅವರಿಗೆ ಸೂಚಿಸಿದ್ದರು. ಬ್ಯಾನರ್ ತೆರವುಗೊಳಿಸಲು ರಂಗಪ್ಪ ಅವರು ಸ್ಥಳಕ್ಕೆ ಹೋದಾಗ ಆರೋಪಿ ಕೆ.ಸಿ.ಅಕ್ಷತಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಬಳಿಕ, ರಂಗಪ್ಪ ಸ್ಥಳದಿಂದ ಹೊರಟು ನಗರಸಭೆಗೆ ಬಂದಿದ್ದರು.

ಕ್ರಿಕೆಟ್‌ ಆಟವಾಡುತ್ತಿದ್ದ ಕೆಲ ಆರೋಪಿಗಳು, ಇತರೆ ಆರೋಪಿಗಳ ಜೊತೆ ಸೇರಿ ಬ್ಯಾಟ್‌ಗಳ ಸಮೇತ ನಗರಸಭೆ ಆವರಣಕ್ಕೆ ನುಗ್ಗಿದ್ದರು. ಸ್ಥಳದಲ್ಲಿದ್ದ ಪೌರಕಾರ್ಮಿಕರ ಜೊತೆ ಜಗಳ ತೆಗೆದಿದ್ದರು. ಗುತ್ತಿಗೆ ಪೌರಕಾರ್ಮಿಕರಾದ ಪೀರಪ್ಪ ಹಾಗೂ ಕಾಂತೇಶ್ ಅವರಿಗೆ ಹೊಡೆದು ಜೀವ ಬೆದರಿಕೆ ಹಾಕಿದ್ದರು.

ಪ್ರತಿಭಟನೆ

ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನ ಬಂಧಿಸಬೇಕು ಎಂದು ಒತ್ತಾಯಿಸಿ ನಗರಸಭೆಯ ಪೌರಕಾರ್ಮಿಕರು ಹಾವೇರಿ ಟೌನ್‌ ಪೊಲೀಸ್ ಠಾಣೆ ಎದುರು ಶನಿವಾರ ಪ್ರತಿಭಟನೆ ನಡೆಸಿದ್ದರು.

ನಗರಸಭೆ ಎದುರು ನಡೆದ ಗಲಾಟೆ ಸಂಬಂಧ ತಮ್ಮ ವಿರುದ್ಧ ದೂರು ನೀಡಿದರೆಂಬ ಕಾರಣಕ್ಕೆ ಪೌರ ಕಾರ್ಮಿಕರ ಮೇಲೆ ಶನಿವಾರ ಪುನಃ ಹಲ್ಲೆ ಮಾಡಲಾಗಿದ್ದು ಈ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.

ವಿಧಾನಸೌಧ ಮುಂಭಾಗ ಆರ್‌ಸಿಬಿ ತಂಡಕ್ಕೆ ಸನ್ಮಾನ: ಅಪಾಯದ ಮುನ್ನೆಚ್ಚರಿಕೆ ನೀಡಿತ್ತು ಪೊಲೀಸ್ ಇಲಾಖೆ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...