Homeಕರ್ನಾಟಕಹಾವೇರಿ| ಪೌರ ಕಾರ್ಮಿಕರ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಾವೇರಿ| ಪೌರ ಕಾರ್ಮಿಕರ ಮೇಲೆ ಹಲ್ಲೆ: ಆರೋಪಿಗಳ ಬಂಧನ

- Advertisement -
- Advertisement -

ಹಾವೇರಿಯಲ್ಲಿ ಬ್ಯಾನರ್ ವಿಚಾರಕ್ಕೆ ಪೌರ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಹೊರತುಪಡಿಸಿ ಉಳಿದವರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಯ ಬಂಧನಕ್ಕೆ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾದ ಎಫ್‌ಐಆರ್ ಪ್ರತಿ ಪ್ರಕಾರ, ಟ್ರಾನ್ಸ್‌ಜೆಂಡರ್ ಅಕ್ಷತಾ, ಶಾಂತು, ಸುಬ್ಬು, ಅರ್ಜುನ, ಪ್ರಥಮ್, ಶಿವು ಕನಕಪುರ ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ. ಅಕ್ಷತಾ ಅವರನ್ನು ಪ್ರಮುಖ ಆರೋಪಿಯನ್ನಾಗಿ ಗುರುತಿಸಲಾಗಿದೆ.

ಪೀರಪ್ಪ ಶಿರಬಾಡಗಿ ಎಂಬವರು ನೀಡಿದ ದೂರು ಆಧರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪೌರ ಕಾರ್ಮಿಕರಾದ ಪೀರಪ್ಪ ಮತ್ತು ಕಾಂತೇಶ್ ಪ್ರಕರಣದ ಸಂತ್ರಸ್ತರು ಎನ್ನಲಾಗಿದೆ.

ಮತ್ತೊಂದು ದೂರನ್ನು ಸುರೇಶ್ ಎಂಬವರು ದಾಖಲಿಸಿದ್ದಾರೆ. ಈ ದೂರು ಆಧರಿಸಿ ಸುಮಾರು 10 ಜನರ ವಿರುದ್ದ ಎಫ್‌ಐಆರ್ ದಾಖಲಿಸಿರುವ ಮಾಹಿತಿ ಲಭ್ಯವಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸುರೇಶ್ ಅವರ ಪತ್ನಿ”ಶಾಂತು ಎಂಬಾತನ ಜನ್ಮದಿನದ ಹಿನ್ನೆಲೆ ಬ್ಯಾನರ್ ಹಾಕಲಾಗಿತ್ತು. ಪೌರ ಕಾರ್ಮಿಕರಾದ ಸುರೇಶ್ ಮತ್ತು ಪೀರಪ್ಪ ಪೌರಾಯುಕ್ತರ ಸೂಚನೆ ಮೇರೆಗೆ ಬ್ಯಾನರ್ ತೆರವುಗೊಳಿಸಿದ್ದರು. ಈ ಕಾರಣಕ್ಕೆ ಆರೋಪಿ ಅಕ್ಷತಾ ನಗರಸಭೆಗೆ ತೆರಳಿ ಪೌರಾಯುಕ್ತರ ಜೊತೆ ವಾಗ್ವಾದ ನಡೆಸಿದ್ದರು. ಈ ವೇಳೆ ಪೌರ ಕಾರ್ಮಿಕರೆಲ್ಲ ಪೌರಾಯುಕ್ತರ ಬೆಂಬಲಕ್ಕೆ ನಿಂತು ಅಕ್ಷತಾ ಜೊತೆ ವಾಗ್ವಾದ ನಡೆಸಿದ್ದರು ಎಂದು ತಿಳಿಸಿದ್ದಾರೆ.

ಮುಂದುವರಿದು, ಶನಿವಾರ ನಗರಸಭೆ ಸಮೀಪದ ಬಾರ್ ಒಂದರಲ್ಲಿ ಸುರೇಶ್ ಮತ್ತು ಪೀರಪ್ಪ ಕುಳಿತಿದ್ದಾಗ, ಏಕಾಏಕಿ ನುಗ್ಗಿದ ಕೆಲವರು ಪೀರಪ್ಪ ಮೇಲೆ ಮಾರಣಾಂತಿಕ ಹಲ್ಲೆ (ವೈರಲ್ ವಿಡಿಯೋದಲ್ಲಿ ಇರುವಂತೆ) ನಡೆಸಿದ್ದಾರೆ. ಅದನ್ನು ನೋಡಿ ಸುರೇಶ್ ಆರೋಗ್ಯದಲ್ಲಿ ಏರುಪೇರಾಗಿದೆ. ಅವರಿಗೆ ಮೂರ್ಚೆರೋಗ ಇತ್ತು. ಪ್ರಸ್ತುತ ಅವರು ಮನೆಯಲ್ಲೇ ಇದ್ದು, ಆಸ್ಪತ್ರೆಗೆ ಹೋಗಿ ಬರುವ ಮೂಲಕ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಿದ್ದಾರೆ. ಸುರೇಶ್ ಮೇಲೆ ಹಲ್ಲೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುರೇಶ್ ಅವರ ಸಂಬಂಧಿ ಗುರುರಾಜ್ ಎಂಬವರು ಮಾತನಾಡಿ, “ಬ್ಯಾನರ್ ತೆರವುಗೊಳಿಸಿದ ಕಾರಣಕ್ಕೇ ಹಲ್ಲೆ ನಡೆದಿದೆ. ಸುರೇಶ್ ಪೌರ ಕಾರ್ಮಿಕರಾಗಿ ಅವರ ಕೆಲಸ ಮಾಡಿದ್ದಾರೆ. ಆರೋಪಿಗಳಿಗೂ ಅವರಿಗೂ ಯಾವುದೇ ಹಳೆ ದ್ವೇಷ ಇರಲಿಲ್ಲ ಎಂದಿದ್ದಾರೆ. ಆರೋಪಿ ಅಕ್ಷತಾ ಬಗ್ಗೆ ವಿವರಿಸಿದಾಗ, “ಅವರು ಇಲ್ಲೇ ಓಡಾಡಿಕೊಂಡು ಇದ್ದರು. ಇದುವರೆಗೆ ಈ ರೀತಿ ಗೂಂಡಾಗಿರಿ ಮಾಡಿರುವುದು ನಮಗೆ ಗೊತ್ತಿಲ್ಲ. ಇದೇ ಮೊದಲ ಬಾರಿಗೆ ಹೀಗಾಗಿದೆ” ಎಂದಿದ್ದಾರೆ.

ಆಗಿದ್ದೇನು?

ಮಾಧ್ಯಮ ವರದಿಗಳ ಪ್ರಕಾರ, “ಕೊರವರ ಓಣಿಯ ವೃತ್ತದಲ್ಲಿ ಅಕ್ರಮವಾಗಿ ಆರೋಪಿ ಶಾಂತು ಜನ್ಮದಿನದ ಶುಭಾಷಯ ಕೋರುವ ಬ್ಯಾನರ್ ಹಾಕಲಾಗಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪೌರಾಯುಕ್ತ ಗಂಗಾಧರ ಬೆಲ್ಲದ ಅವರು ಬ್ಯಾನರ್ ತೆರವುಗೊಳಿಸಲು ಸಿಬ್ಬಂದಿ ರಂಗಪ್ಪ ಹೆರ್ಕಲ್ ಅವರಿಗೆ ಸೂಚಿಸಿದ್ದರು. ಬ್ಯಾನರ್ ತೆರವುಗೊಳಿಸಲು ರಂಗಪ್ಪ ಅವರು ಸ್ಥಳಕ್ಕೆ ಹೋದಾಗ ಆರೋಪಿ ಕೆ.ಸಿ.ಅಕ್ಷತಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಬಳಿಕ, ರಂಗಪ್ಪ ಸ್ಥಳದಿಂದ ಹೊರಟು ನಗರಸಭೆಗೆ ಬಂದಿದ್ದರು.

ಕ್ರಿಕೆಟ್‌ ಆಟವಾಡುತ್ತಿದ್ದ ಕೆಲ ಆರೋಪಿಗಳು, ಇತರೆ ಆರೋಪಿಗಳ ಜೊತೆ ಸೇರಿ ಬ್ಯಾಟ್‌ಗಳ ಸಮೇತ ನಗರಸಭೆ ಆವರಣಕ್ಕೆ ನುಗ್ಗಿದ್ದರು. ಸ್ಥಳದಲ್ಲಿದ್ದ ಪೌರಕಾರ್ಮಿಕರ ಜೊತೆ ಜಗಳ ತೆಗೆದಿದ್ದರು. ಗುತ್ತಿಗೆ ಪೌರಕಾರ್ಮಿಕರಾದ ಪೀರಪ್ಪ ಹಾಗೂ ಕಾಂತೇಶ್ ಅವರಿಗೆ ಹೊಡೆದು ಜೀವ ಬೆದರಿಕೆ ಹಾಕಿದ್ದರು.

ಪ್ರತಿಭಟನೆ

ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನ ಬಂಧಿಸಬೇಕು ಎಂದು ಒತ್ತಾಯಿಸಿ ನಗರಸಭೆಯ ಪೌರಕಾರ್ಮಿಕರು ಹಾವೇರಿ ಟೌನ್‌ ಪೊಲೀಸ್ ಠಾಣೆ ಎದುರು ಶನಿವಾರ ಪ್ರತಿಭಟನೆ ನಡೆಸಿದ್ದರು.

ನಗರಸಭೆ ಎದುರು ನಡೆದ ಗಲಾಟೆ ಸಂಬಂಧ ತಮ್ಮ ವಿರುದ್ಧ ದೂರು ನೀಡಿದರೆಂಬ ಕಾರಣಕ್ಕೆ ಪೌರ ಕಾರ್ಮಿಕರ ಮೇಲೆ ಶನಿವಾರ ಪುನಃ ಹಲ್ಲೆ ಮಾಡಲಾಗಿದ್ದು ಈ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.

ವಿಧಾನಸೌಧ ಮುಂಭಾಗ ಆರ್‌ಸಿಬಿ ತಂಡಕ್ಕೆ ಸನ್ಮಾನ: ಅಪಾಯದ ಮುನ್ನೆಚ್ಚರಿಕೆ ನೀಡಿತ್ತು ಪೊಲೀಸ್ ಇಲಾಖೆ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...