Homeಕರ್ನಾಟಕಹಾವೇರಿ| ಪೌರ ಕಾರ್ಮಿಕರ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಾವೇರಿ| ಪೌರ ಕಾರ್ಮಿಕರ ಮೇಲೆ ಹಲ್ಲೆ: ಆರೋಪಿಗಳ ಬಂಧನ

- Advertisement -
- Advertisement -

ಹಾವೇರಿಯಲ್ಲಿ ಬ್ಯಾನರ್ ವಿಚಾರಕ್ಕೆ ಪೌರ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಹೊರತುಪಡಿಸಿ ಉಳಿದವರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಯ ಬಂಧನಕ್ಕೆ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾದ ಎಫ್‌ಐಆರ್ ಪ್ರತಿ ಪ್ರಕಾರ, ಟ್ರಾನ್ಸ್‌ಜೆಂಡರ್ ಅಕ್ಷತಾ, ಶಾಂತು, ಸುಬ್ಬು, ಅರ್ಜುನ, ಪ್ರಥಮ್, ಶಿವು ಕನಕಪುರ ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ. ಅಕ್ಷತಾ ಅವರನ್ನು ಪ್ರಮುಖ ಆರೋಪಿಯನ್ನಾಗಿ ಗುರುತಿಸಲಾಗಿದೆ.

ಪೀರಪ್ಪ ಶಿರಬಾಡಗಿ ಎಂಬವರು ನೀಡಿದ ದೂರು ಆಧರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪೌರ ಕಾರ್ಮಿಕರಾದ ಪೀರಪ್ಪ ಮತ್ತು ಕಾಂತೇಶ್ ಪ್ರಕರಣದ ಸಂತ್ರಸ್ತರು ಎನ್ನಲಾಗಿದೆ.

ಮತ್ತೊಂದು ದೂರನ್ನು ಸುರೇಶ್ ಎಂಬವರು ದಾಖಲಿಸಿದ್ದಾರೆ. ಈ ದೂರು ಆಧರಿಸಿ ಸುಮಾರು 10 ಜನರ ವಿರುದ್ದ ಎಫ್‌ಐಆರ್ ದಾಖಲಿಸಿರುವ ಮಾಹಿತಿ ಲಭ್ಯವಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸುರೇಶ್ ಅವರ ಪತ್ನಿ”ಶಾಂತು ಎಂಬಾತನ ಜನ್ಮದಿನದ ಹಿನ್ನೆಲೆ ಬ್ಯಾನರ್ ಹಾಕಲಾಗಿತ್ತು. ಪೌರ ಕಾರ್ಮಿಕರಾದ ಸುರೇಶ್ ಮತ್ತು ಪೀರಪ್ಪ ಪೌರಾಯುಕ್ತರ ಸೂಚನೆ ಮೇರೆಗೆ ಬ್ಯಾನರ್ ತೆರವುಗೊಳಿಸಿದ್ದರು. ಈ ಕಾರಣಕ್ಕೆ ಆರೋಪಿ ಅಕ್ಷತಾ ನಗರಸಭೆಗೆ ತೆರಳಿ ಪೌರಾಯುಕ್ತರ ಜೊತೆ ವಾಗ್ವಾದ ನಡೆಸಿದ್ದರು. ಈ ವೇಳೆ ಪೌರ ಕಾರ್ಮಿಕರೆಲ್ಲ ಪೌರಾಯುಕ್ತರ ಬೆಂಬಲಕ್ಕೆ ನಿಂತು ಅಕ್ಷತಾ ಜೊತೆ ವಾಗ್ವಾದ ನಡೆಸಿದ್ದರು ಎಂದು ತಿಳಿಸಿದ್ದಾರೆ.

ಮುಂದುವರಿದು, ಶನಿವಾರ ನಗರಸಭೆ ಸಮೀಪದ ಬಾರ್ ಒಂದರಲ್ಲಿ ಸುರೇಶ್ ಮತ್ತು ಪೀರಪ್ಪ ಕುಳಿತಿದ್ದಾಗ, ಏಕಾಏಕಿ ನುಗ್ಗಿದ ಕೆಲವರು ಪೀರಪ್ಪ ಮೇಲೆ ಮಾರಣಾಂತಿಕ ಹಲ್ಲೆ (ವೈರಲ್ ವಿಡಿಯೋದಲ್ಲಿ ಇರುವಂತೆ) ನಡೆಸಿದ್ದಾರೆ. ಅದನ್ನು ನೋಡಿ ಸುರೇಶ್ ಆರೋಗ್ಯದಲ್ಲಿ ಏರುಪೇರಾಗಿದೆ. ಅವರಿಗೆ ಮೂರ್ಚೆರೋಗ ಇತ್ತು. ಪ್ರಸ್ತುತ ಅವರು ಮನೆಯಲ್ಲೇ ಇದ್ದು, ಆಸ್ಪತ್ರೆಗೆ ಹೋಗಿ ಬರುವ ಮೂಲಕ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಿದ್ದಾರೆ. ಸುರೇಶ್ ಮೇಲೆ ಹಲ್ಲೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುರೇಶ್ ಅವರ ಸಂಬಂಧಿ ಗುರುರಾಜ್ ಎಂಬವರು ಮಾತನಾಡಿ, “ಬ್ಯಾನರ್ ತೆರವುಗೊಳಿಸಿದ ಕಾರಣಕ್ಕೇ ಹಲ್ಲೆ ನಡೆದಿದೆ. ಸುರೇಶ್ ಪೌರ ಕಾರ್ಮಿಕರಾಗಿ ಅವರ ಕೆಲಸ ಮಾಡಿದ್ದಾರೆ. ಆರೋಪಿಗಳಿಗೂ ಅವರಿಗೂ ಯಾವುದೇ ಹಳೆ ದ್ವೇಷ ಇರಲಿಲ್ಲ ಎಂದಿದ್ದಾರೆ. ಆರೋಪಿ ಅಕ್ಷತಾ ಬಗ್ಗೆ ವಿವರಿಸಿದಾಗ, “ಅವರು ಇಲ್ಲೇ ಓಡಾಡಿಕೊಂಡು ಇದ್ದರು. ಇದುವರೆಗೆ ಈ ರೀತಿ ಗೂಂಡಾಗಿರಿ ಮಾಡಿರುವುದು ನಮಗೆ ಗೊತ್ತಿಲ್ಲ. ಇದೇ ಮೊದಲ ಬಾರಿಗೆ ಹೀಗಾಗಿದೆ” ಎಂದಿದ್ದಾರೆ.

ಆಗಿದ್ದೇನು?

ಮಾಧ್ಯಮ ವರದಿಗಳ ಪ್ರಕಾರ, “ಕೊರವರ ಓಣಿಯ ವೃತ್ತದಲ್ಲಿ ಅಕ್ರಮವಾಗಿ ಆರೋಪಿ ಶಾಂತು ಜನ್ಮದಿನದ ಶುಭಾಷಯ ಕೋರುವ ಬ್ಯಾನರ್ ಹಾಕಲಾಗಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪೌರಾಯುಕ್ತ ಗಂಗಾಧರ ಬೆಲ್ಲದ ಅವರು ಬ್ಯಾನರ್ ತೆರವುಗೊಳಿಸಲು ಸಿಬ್ಬಂದಿ ರಂಗಪ್ಪ ಹೆರ್ಕಲ್ ಅವರಿಗೆ ಸೂಚಿಸಿದ್ದರು. ಬ್ಯಾನರ್ ತೆರವುಗೊಳಿಸಲು ರಂಗಪ್ಪ ಅವರು ಸ್ಥಳಕ್ಕೆ ಹೋದಾಗ ಆರೋಪಿ ಕೆ.ಸಿ.ಅಕ್ಷತಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಬಳಿಕ, ರಂಗಪ್ಪ ಸ್ಥಳದಿಂದ ಹೊರಟು ನಗರಸಭೆಗೆ ಬಂದಿದ್ದರು.

ಕ್ರಿಕೆಟ್‌ ಆಟವಾಡುತ್ತಿದ್ದ ಕೆಲ ಆರೋಪಿಗಳು, ಇತರೆ ಆರೋಪಿಗಳ ಜೊತೆ ಸೇರಿ ಬ್ಯಾಟ್‌ಗಳ ಸಮೇತ ನಗರಸಭೆ ಆವರಣಕ್ಕೆ ನುಗ್ಗಿದ್ದರು. ಸ್ಥಳದಲ್ಲಿದ್ದ ಪೌರಕಾರ್ಮಿಕರ ಜೊತೆ ಜಗಳ ತೆಗೆದಿದ್ದರು. ಗುತ್ತಿಗೆ ಪೌರಕಾರ್ಮಿಕರಾದ ಪೀರಪ್ಪ ಹಾಗೂ ಕಾಂತೇಶ್ ಅವರಿಗೆ ಹೊಡೆದು ಜೀವ ಬೆದರಿಕೆ ಹಾಕಿದ್ದರು.

ಪ್ರತಿಭಟನೆ

ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನ ಬಂಧಿಸಬೇಕು ಎಂದು ಒತ್ತಾಯಿಸಿ ನಗರಸಭೆಯ ಪೌರಕಾರ್ಮಿಕರು ಹಾವೇರಿ ಟೌನ್‌ ಪೊಲೀಸ್ ಠಾಣೆ ಎದುರು ಶನಿವಾರ ಪ್ರತಿಭಟನೆ ನಡೆಸಿದ್ದರು.

ನಗರಸಭೆ ಎದುರು ನಡೆದ ಗಲಾಟೆ ಸಂಬಂಧ ತಮ್ಮ ವಿರುದ್ಧ ದೂರು ನೀಡಿದರೆಂಬ ಕಾರಣಕ್ಕೆ ಪೌರ ಕಾರ್ಮಿಕರ ಮೇಲೆ ಶನಿವಾರ ಪುನಃ ಹಲ್ಲೆ ಮಾಡಲಾಗಿದ್ದು ಈ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.

ವಿಧಾನಸೌಧ ಮುಂಭಾಗ ಆರ್‌ಸಿಬಿ ತಂಡಕ್ಕೆ ಸನ್ಮಾನ: ಅಪಾಯದ ಮುನ್ನೆಚ್ಚರಿಕೆ ನೀಡಿತ್ತು ಪೊಲೀಸ್ ಇಲಾಖೆ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...