Homeಕರ್ನಾಟಕಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಪುಸ್ತಕ ಮಾರಾಟಗಾರರ ಗೋಳು ಕೇಳುವವರ್ಯಾರು?

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಪುಸ್ತಕ ಮಾರಾಟಗಾರರ ಗೋಳು ಕೇಳುವವರ್ಯಾರು?

- Advertisement -
- Advertisement -

ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮೊದಲ ದಿನವೇ ಜನ ಸಾಗರ ಹರಿದುಬಂದಿದೆ. ಕೆಲವು ಪುಸ್ತಕ ಮಾರಾಟಗಾರರಿಗೆ ತಕ್ಕಮಟ್ಟಿಗಿನ ಲಾಭವೂ ಆಗುತ್ತಿದೆ. ಆದರೆ ಪುಸ್ತಕ ಮಾರಾಟಗಾರರತ್ತ ಕನ್ನಡ ಸಾಹಿತ್ಯ ಪರಿಷತ್ತಿನ ಯಾವೊಬ್ಬ ಪ್ರತಿನಿಧಿಯೂ ಸುಳಿದಿಲ್ಲ. ಜೊತೆಗೆ ವಾಣಿಜ್ಯ ಮಳಿಗೆಯೊಳಗೆ ಒಂದಿಷ್ಟು ಪುಸ್ತಕ ಮಳಿಗೆಗಳನ್ನು ಹಾಕಿರುವುದರಿಂದಾಗಿ ಕೆಲವು ಪ್ರಕಾಶಕರು ಸಮಸ್ಯೆ ಎದುರಿಸುತ್ತಿದ್ದಾರೆ.

ಸಮ್ಮೇಳನದ ಆರಂಭದ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ಪುಸ್ತಕ ಮಳಿಗೆಗಳತ್ತ ಜನರು ಹರಿಬಂದಿದ್ದರು. ಎರಡನೇ ದಿನ ಮತ್ತಷ್ಟು ಪುಸ್ತಕ ಪ್ರೇಮಿಗಳು ಮಳಿಗೆಗಳತ್ತ ಧಾವಿಸುವ ನಿರೀಕ್ಷೆ ಇದೆ. ಆದರೆ ಸಮ್ಮೇಳನದ ಸಂಘಟಕರು ಪುಸ್ತಕ ಮಾರಾಟಗಾರರಿಗೆ ಬೇಕಾದ ಅಗತ್ಯತೆಗಳ ಕುರಿತು ಕೇಳುತ್ತಿಲ್ಲ. ಪ್ರತಿಸಲವೂ ಒಂದಲ್ಲ, ಒಂದು ಸಮಸ್ಯೆಯನ್ನು ಪ್ರಕಾಶಕರು ಅನುಭವಿಸುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಾಣಿಜ್ಯ ಮಳಿಗೆಯಲ್ಲಿ ಸಿಕ್ಕಿಕೊಂಡು ಸಮಸ್ಯೆ ಅನುಭವಿಸುತ್ತಿರುವ ಸಾಧನ ಪ್ರಕಾಶನದ ರವಿಚಂದ್ರ ರಾವ್ ಮಾತನಾಡಿ, “ಮಳಿಗೆಯೊಂದಕ್ಕೆ ಮೂರು ಸಾವಿರ ರೂಪಾಯಿಯನ್ನು ಕೊಡುತ್ತೇವೆ. ಪೋನ್ ಪೇ, ಗೂಗಲ್ ಪೇ ಮಾಡುವವರಿಗೆ ಇಂಟರ್ ನೆಟ್ ಸೌಲಭ್ಯವಿಲ್ಲ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ, ಮಳಿಗೆಗಳನ್ನು ರೂಪಿಸುತ್ತೀರಿ. ಸಾವಿರಾರು ಜನ ಸೇರುವ ಜಾಗದಲ್ಲಿ ನೆಟ್ ವರ್ಕ್ ಸಮಸ್ಯೆಯಾಗುತ್ತದೆ ಎಂಬ ಎಚ್ಚರಿಕೆ ಇರಬೇಕಿತ್ತಲ್ಲವೇ? ತಾತ್ಕಲಿಕವಾಗಿ ನೆಟ್ ವರ್ಕ್ ಸೌಲಭ್ಯ ಕಲ್ಪಿಸಬೇಕಿತ್ತು. ಕಸಾಪ ಅಧ್ಯಕ್ಷರಾದ ಜೋಶಿಯವರ ಮನೆಯಲ್ಲಿ ಏನಾದರೂ ಸಮಸ್ಯೆಯಾದರೆ, ತಕ್ಷಣಕ್ಕೆ ಕರೆ ಮಾಡಿ ಮಾತನಾಡಲು ಆಗದ ಪರಿಸ್ಥಿತಿ ಉಂಟಾಗಿದೆ’’ ಎಂದರು.

“ಇಲ್ಲಿ ವಾಣಿಜ್ಯ ಮಳಿಗೆ ಎಂದು ಬೋರ್ಡ್ ಹಾಕಿ ಪುಸ್ತಕ ಮಾರಾಟ ಮಾಡಲು ಅವಕಾಶ ನೀಡಿದ್ದಾರೆ. ಪುಸ್ತಕ ಮಳಿಗೆಗಳೆಲ್ಲ ಒಂದೇ ಕಡೆ ಇರಬೇಕು. ಇಲ್ಲಿಗೆ ಬರುವ ಗ್ರಾಹಕರು ಪುಸ್ತಕವನ್ನು ಖರೀದಿಸುವುದಕ್ಕಿಂತ ಬೇರೆ ವಸ್ತುಗಳ ಖರೀದಿಗೆ ಗಮನ ಕೊಡುತ್ತಾರೆ. ಪ್ರಕಾಶಕರನ್ನು ಕೆಳ ದರ್ಜೆಯಲ್ಲಿ ಕಸಾಪ ನೋಡುತ್ತಿದೆ. ಪ್ರಕಾಶಕರು, ಸಾಹಿತ್ಯ ಸಮ್ಮೇಳನ ಒಂದೇ ನಾಣ್ಯದ ಎರಡು ಮುಖಗಳು. ವೇದಿಕೆಗಳಲ್ಲಿ ನೀವಿದ್ದು, ನಿಮ್ಮ ಪ್ರಚಾರಕ್ಕೆ ಮಾತ್ರ  ಗಮನ ಕೊಡುತ್ತಿರುವುದಕ್ಕೆ ನಮ್ಮ ಧಿಕ್ಕಾರ’’ ಎಂದು ಕಿಡಿಕಾರಿದರು.

“ಮಹೇಶ ಜೋಶಿಯವರು ಯಾವುದೇ ಹೊಸ ನಿಯಮವನ್ನು ಜಾರಿಗೆ ತರುವಾಗ ಸೂಕ್ತ ಮಾಹಿತಿಯನ್ನು ನೀಡಬೇಕಿತ್ತು. ಪರಿಷತ್ ಸದಸ್ಯರಾಗಿದ್ದರಷ್ಟೇ ಪುಸ್ತಕ ಮಳಿಗೆ ಹಾಕಲು ಅವಕಾಶ ನೀಡುವುದಾಗಿ ನಿಯಮ ತಂದರು. ಆಪ್ ಮೂಲಕ ನೋಂದಣಿ ಮಾಡಿಕೊಳ್ಳಬೇಕಿತ್ತು. ಎಷ್ಟೋ ಮಂದಿ ಪ್ರಕಾಶಕರಿಗೆ ಮಾಹಿತಿ ಇರಲಿಲ್ಲ. ಹೊಸದಾಗಿ ತಯಾರಿ ಮಾಡಿರುವ ಆಪ್ ಸರಿಯಾಗಿ ಅಭಿವೃದ್ಧಿಪಡಿಸಲಾಗಿಲ್ಲ. ಬಹುತೇಕ ಮಾರಾಟಗಾರರು ಬಂದಿಲ್ಲ. ನಿಮಗೆ ವೇದಿಕೆ ಮತ್ತು ನಿಮ್ಮ ಹೆಸರು ಮುಖ್ಯವಷ್ಟೇ. ಜನಸಾಮಾನ್ಯರು ಮತ್ತು ಪುಸ್ತಕ ವ್ಯಾಪಾರಿಗಳು ಏನು ಮಾಡಬೇಕು?’’ ಎಂದು ಪ್ರಶ್ನಿಸಿದರು.

ಕನ್ನಡದ ಬಗ್ಗೆ ಆಸೆ, ಆಸಕ್ತರಾದವರು ಕಸಾಪ ಅಧ್ಯಕ್ಷರಾಗುವುದು ಮುಖ್ಯ. ಐಎಎಸ್, ಐಪಿಎಸ್ ಅಧಿಕಾರಿಗಳಲ್ಲ. ಕನ್ನಡ ಪುಸ್ತಕ ಮತ್ತು ಪ್ರಕಾಶನದ ಬಗ್ಗೆ ಆಸಕ್ತಿ ಇರುವವರು ಅಧ್ಯಕ್ಷರಾಗಬೇಕು. ಜೋಶಿಯವರು ಕನ್ನಡ, ಕನ್ನಡ ಎನ್ನುತ್ತಾರೆ. ಇಲ್ಲಿನ ಮಳಿಗೆಗಳಿಗೆ ಕ್ರಮಾಂಕ ಕೊಡುವಾಗ ಎ, ಬಿ, ಸಿ, ಡಿ ಅಂತ ನೀಡಿದ್ದಾರೆ. ಅದನ್ನೇ ಅ, ಆ, ಇ, ಈ ಅಂತ ಕೊಡಬಹುದಿತ್ತಲ್ಲ’’ ಎಂದು ಬೇಸರ ವ್ಯಕ್ತಪಡಿಸಿದರು.

ಮಳಿಗೆಗಳಲ್ಲಿ ಬಿದ್ದಿರುವ ಕಸದ ವಿಲೇವಾರಿಗೆ ಕ್ರಮ ಜರುಗಿಸಿಲ್ಲ. ಮಳಿಗೆಗಳ ಮುಂದೆ ಕಸವನ್ನು ಗುಡ್ಡೆ ಹಾಕಿಕೊಂಡ ಪುಸ್ತಕ ಪ್ರೇಮಿಗಳನ್ನು ಒಳಗೆ ಕರೆಯುವಂತಾಗಿದೆ. ಈ ಹಿಂದಿನ ಸಮ್ಮೇಳನಗಳಲ್ಲಿ ಕಸಾಪ ಪ್ರತಿನಿಧಿಗಳು ನಮ್ಮತ್ತ ಬಂದು, ನಮ್ಮ ಅಗತ್ಯತೆಗಳ ಕುರಿತು ಕನಿಷ್ಠ ವಿಚಾರಿಸಿಕೊಳ್ಳುತ್ತಿದ್ದರು ಎಂದು ಪ್ರಕಾಶಕರೊಬ್ಬರು ತಿಳಿಸಿದರು.

ಮೊದಲೆಲ್ಲ ಪುಸ್ತಕ ಮಾರಾಟಗಾರರು ಜಿಲ್ಲಾ ಕಸಾಪ ಕಚೇರಿಯಲ್ಲಿ ನೊಂದಣಿ ಮಾಡಿಕೊಂಡಿದ್ದರೆ ಮುಗಿಯುತ್ತಿತ್ತು. ಆಪ್ ಮೂಲಕ ನೊಂದಣಿ ಎಂಬ ನಿಯಮ ತಂದು ಸಮ್ಮೇಳನ ಆರಂಭದಿಂದಲೇ ಪುಸ್ತಕ ಮಾರಾಟಗಾರರ ಮೇಲೆ ಪ್ರಹಾರ ಮಾಡಲಾಯಿತು. ಈಗ ಸಮ್ಮೇಳನದ ಸಮಯದಲ್ಲೂ ಕಸಾಪ ಪ್ರತಿನಿಧಿಗಳು ಪುಸ್ತಕ ಮಳಿಗೆಗಳತ್ತ ಸುಳಿಯದೆ ಮತ್ತದೇ ಧೋರಣೆ ಮುಂದುವರಿಸಿದ್ದಾರೆ ಎಂದು ಮಾರಾಟಗಾರರು ವಿಷಾಧಿಸಿದರು.

ಮತ್ತೊಬ್ಬ ಪ್ರಕಾಶಕರು ಪ್ರತಿಕ್ರಿಯಿಸಿ, “ಅಕ್ಷರ ಜಾತ್ರೆಗೆ ಜನಸಾಗರ ಹರಿದುಬರುತ್ತಿದೆ. ಧೂಳು ಎದ್ದೇಳದಂತೆ ಹಸಿರು ಕಾರ್ಪೇಟ್ ಹಾಸಿರುವುದರಿಂದ ಧೂಳಿನ ಸಮಸ್ಯೆ ತಲೆದೋರಿಲ್ಲದಿರುವುದು ಖುಷಿಯ ಸಂಗತಿ. ವಿಚಾರ ಸಾಹಿತ್ಯ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತ್ಯ ಕೃತಿಗಳಿಗೆ ಹೆಚ್ಚಿನ ಬೇಡಿಕೆ ಇದೆ. ಹಾವೇರಿ ಸಮ್ಮೇಳನ ಸ್ವಲ್ಪಮಟ್ಟಿಗೆ ಲಾಭವನ್ನು ಮಾಡಿಕೊಟ್ಟಿದೆ’’ ಎಂದರು.

ಇದನ್ನೂ ಓದಿ; ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...