Homeಕರ್ನಾಟಕಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಪುಸ್ತಕ ಮಾರಾಟಗಾರರ ಗೋಳು ಕೇಳುವವರ್ಯಾರು?

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಪುಸ್ತಕ ಮಾರಾಟಗಾರರ ಗೋಳು ಕೇಳುವವರ್ಯಾರು?

- Advertisement -
- Advertisement -

ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮೊದಲ ದಿನವೇ ಜನ ಸಾಗರ ಹರಿದುಬಂದಿದೆ. ಕೆಲವು ಪುಸ್ತಕ ಮಾರಾಟಗಾರರಿಗೆ ತಕ್ಕಮಟ್ಟಿಗಿನ ಲಾಭವೂ ಆಗುತ್ತಿದೆ. ಆದರೆ ಪುಸ್ತಕ ಮಾರಾಟಗಾರರತ್ತ ಕನ್ನಡ ಸಾಹಿತ್ಯ ಪರಿಷತ್ತಿನ ಯಾವೊಬ್ಬ ಪ್ರತಿನಿಧಿಯೂ ಸುಳಿದಿಲ್ಲ. ಜೊತೆಗೆ ವಾಣಿಜ್ಯ ಮಳಿಗೆಯೊಳಗೆ ಒಂದಿಷ್ಟು ಪುಸ್ತಕ ಮಳಿಗೆಗಳನ್ನು ಹಾಕಿರುವುದರಿಂದಾಗಿ ಕೆಲವು ಪ್ರಕಾಶಕರು ಸಮಸ್ಯೆ ಎದುರಿಸುತ್ತಿದ್ದಾರೆ.

ಸಮ್ಮೇಳನದ ಆರಂಭದ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ಪುಸ್ತಕ ಮಳಿಗೆಗಳತ್ತ ಜನರು ಹರಿಬಂದಿದ್ದರು. ಎರಡನೇ ದಿನ ಮತ್ತಷ್ಟು ಪುಸ್ತಕ ಪ್ರೇಮಿಗಳು ಮಳಿಗೆಗಳತ್ತ ಧಾವಿಸುವ ನಿರೀಕ್ಷೆ ಇದೆ. ಆದರೆ ಸಮ್ಮೇಳನದ ಸಂಘಟಕರು ಪುಸ್ತಕ ಮಾರಾಟಗಾರರಿಗೆ ಬೇಕಾದ ಅಗತ್ಯತೆಗಳ ಕುರಿತು ಕೇಳುತ್ತಿಲ್ಲ. ಪ್ರತಿಸಲವೂ ಒಂದಲ್ಲ, ಒಂದು ಸಮಸ್ಯೆಯನ್ನು ಪ್ರಕಾಶಕರು ಅನುಭವಿಸುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಾಣಿಜ್ಯ ಮಳಿಗೆಯಲ್ಲಿ ಸಿಕ್ಕಿಕೊಂಡು ಸಮಸ್ಯೆ ಅನುಭವಿಸುತ್ತಿರುವ ಸಾಧನ ಪ್ರಕಾಶನದ ರವಿಚಂದ್ರ ರಾವ್ ಮಾತನಾಡಿ, “ಮಳಿಗೆಯೊಂದಕ್ಕೆ ಮೂರು ಸಾವಿರ ರೂಪಾಯಿಯನ್ನು ಕೊಡುತ್ತೇವೆ. ಪೋನ್ ಪೇ, ಗೂಗಲ್ ಪೇ ಮಾಡುವವರಿಗೆ ಇಂಟರ್ ನೆಟ್ ಸೌಲಭ್ಯವಿಲ್ಲ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ, ಮಳಿಗೆಗಳನ್ನು ರೂಪಿಸುತ್ತೀರಿ. ಸಾವಿರಾರು ಜನ ಸೇರುವ ಜಾಗದಲ್ಲಿ ನೆಟ್ ವರ್ಕ್ ಸಮಸ್ಯೆಯಾಗುತ್ತದೆ ಎಂಬ ಎಚ್ಚರಿಕೆ ಇರಬೇಕಿತ್ತಲ್ಲವೇ? ತಾತ್ಕಲಿಕವಾಗಿ ನೆಟ್ ವರ್ಕ್ ಸೌಲಭ್ಯ ಕಲ್ಪಿಸಬೇಕಿತ್ತು. ಕಸಾಪ ಅಧ್ಯಕ್ಷರಾದ ಜೋಶಿಯವರ ಮನೆಯಲ್ಲಿ ಏನಾದರೂ ಸಮಸ್ಯೆಯಾದರೆ, ತಕ್ಷಣಕ್ಕೆ ಕರೆ ಮಾಡಿ ಮಾತನಾಡಲು ಆಗದ ಪರಿಸ್ಥಿತಿ ಉಂಟಾಗಿದೆ’’ ಎಂದರು.

“ಇಲ್ಲಿ ವಾಣಿಜ್ಯ ಮಳಿಗೆ ಎಂದು ಬೋರ್ಡ್ ಹಾಕಿ ಪುಸ್ತಕ ಮಾರಾಟ ಮಾಡಲು ಅವಕಾಶ ನೀಡಿದ್ದಾರೆ. ಪುಸ್ತಕ ಮಳಿಗೆಗಳೆಲ್ಲ ಒಂದೇ ಕಡೆ ಇರಬೇಕು. ಇಲ್ಲಿಗೆ ಬರುವ ಗ್ರಾಹಕರು ಪುಸ್ತಕವನ್ನು ಖರೀದಿಸುವುದಕ್ಕಿಂತ ಬೇರೆ ವಸ್ತುಗಳ ಖರೀದಿಗೆ ಗಮನ ಕೊಡುತ್ತಾರೆ. ಪ್ರಕಾಶಕರನ್ನು ಕೆಳ ದರ್ಜೆಯಲ್ಲಿ ಕಸಾಪ ನೋಡುತ್ತಿದೆ. ಪ್ರಕಾಶಕರು, ಸಾಹಿತ್ಯ ಸಮ್ಮೇಳನ ಒಂದೇ ನಾಣ್ಯದ ಎರಡು ಮುಖಗಳು. ವೇದಿಕೆಗಳಲ್ಲಿ ನೀವಿದ್ದು, ನಿಮ್ಮ ಪ್ರಚಾರಕ್ಕೆ ಮಾತ್ರ  ಗಮನ ಕೊಡುತ್ತಿರುವುದಕ್ಕೆ ನಮ್ಮ ಧಿಕ್ಕಾರ’’ ಎಂದು ಕಿಡಿಕಾರಿದರು.

“ಮಹೇಶ ಜೋಶಿಯವರು ಯಾವುದೇ ಹೊಸ ನಿಯಮವನ್ನು ಜಾರಿಗೆ ತರುವಾಗ ಸೂಕ್ತ ಮಾಹಿತಿಯನ್ನು ನೀಡಬೇಕಿತ್ತು. ಪರಿಷತ್ ಸದಸ್ಯರಾಗಿದ್ದರಷ್ಟೇ ಪುಸ್ತಕ ಮಳಿಗೆ ಹಾಕಲು ಅವಕಾಶ ನೀಡುವುದಾಗಿ ನಿಯಮ ತಂದರು. ಆಪ್ ಮೂಲಕ ನೋಂದಣಿ ಮಾಡಿಕೊಳ್ಳಬೇಕಿತ್ತು. ಎಷ್ಟೋ ಮಂದಿ ಪ್ರಕಾಶಕರಿಗೆ ಮಾಹಿತಿ ಇರಲಿಲ್ಲ. ಹೊಸದಾಗಿ ತಯಾರಿ ಮಾಡಿರುವ ಆಪ್ ಸರಿಯಾಗಿ ಅಭಿವೃದ್ಧಿಪಡಿಸಲಾಗಿಲ್ಲ. ಬಹುತೇಕ ಮಾರಾಟಗಾರರು ಬಂದಿಲ್ಲ. ನಿಮಗೆ ವೇದಿಕೆ ಮತ್ತು ನಿಮ್ಮ ಹೆಸರು ಮುಖ್ಯವಷ್ಟೇ. ಜನಸಾಮಾನ್ಯರು ಮತ್ತು ಪುಸ್ತಕ ವ್ಯಾಪಾರಿಗಳು ಏನು ಮಾಡಬೇಕು?’’ ಎಂದು ಪ್ರಶ್ನಿಸಿದರು.

ಕನ್ನಡದ ಬಗ್ಗೆ ಆಸೆ, ಆಸಕ್ತರಾದವರು ಕಸಾಪ ಅಧ್ಯಕ್ಷರಾಗುವುದು ಮುಖ್ಯ. ಐಎಎಸ್, ಐಪಿಎಸ್ ಅಧಿಕಾರಿಗಳಲ್ಲ. ಕನ್ನಡ ಪುಸ್ತಕ ಮತ್ತು ಪ್ರಕಾಶನದ ಬಗ್ಗೆ ಆಸಕ್ತಿ ಇರುವವರು ಅಧ್ಯಕ್ಷರಾಗಬೇಕು. ಜೋಶಿಯವರು ಕನ್ನಡ, ಕನ್ನಡ ಎನ್ನುತ್ತಾರೆ. ಇಲ್ಲಿನ ಮಳಿಗೆಗಳಿಗೆ ಕ್ರಮಾಂಕ ಕೊಡುವಾಗ ಎ, ಬಿ, ಸಿ, ಡಿ ಅಂತ ನೀಡಿದ್ದಾರೆ. ಅದನ್ನೇ ಅ, ಆ, ಇ, ಈ ಅಂತ ಕೊಡಬಹುದಿತ್ತಲ್ಲ’’ ಎಂದು ಬೇಸರ ವ್ಯಕ್ತಪಡಿಸಿದರು.

ಮಳಿಗೆಗಳಲ್ಲಿ ಬಿದ್ದಿರುವ ಕಸದ ವಿಲೇವಾರಿಗೆ ಕ್ರಮ ಜರುಗಿಸಿಲ್ಲ. ಮಳಿಗೆಗಳ ಮುಂದೆ ಕಸವನ್ನು ಗುಡ್ಡೆ ಹಾಕಿಕೊಂಡ ಪುಸ್ತಕ ಪ್ರೇಮಿಗಳನ್ನು ಒಳಗೆ ಕರೆಯುವಂತಾಗಿದೆ. ಈ ಹಿಂದಿನ ಸಮ್ಮೇಳನಗಳಲ್ಲಿ ಕಸಾಪ ಪ್ರತಿನಿಧಿಗಳು ನಮ್ಮತ್ತ ಬಂದು, ನಮ್ಮ ಅಗತ್ಯತೆಗಳ ಕುರಿತು ಕನಿಷ್ಠ ವಿಚಾರಿಸಿಕೊಳ್ಳುತ್ತಿದ್ದರು ಎಂದು ಪ್ರಕಾಶಕರೊಬ್ಬರು ತಿಳಿಸಿದರು.

ಮೊದಲೆಲ್ಲ ಪುಸ್ತಕ ಮಾರಾಟಗಾರರು ಜಿಲ್ಲಾ ಕಸಾಪ ಕಚೇರಿಯಲ್ಲಿ ನೊಂದಣಿ ಮಾಡಿಕೊಂಡಿದ್ದರೆ ಮುಗಿಯುತ್ತಿತ್ತು. ಆಪ್ ಮೂಲಕ ನೊಂದಣಿ ಎಂಬ ನಿಯಮ ತಂದು ಸಮ್ಮೇಳನ ಆರಂಭದಿಂದಲೇ ಪುಸ್ತಕ ಮಾರಾಟಗಾರರ ಮೇಲೆ ಪ್ರಹಾರ ಮಾಡಲಾಯಿತು. ಈಗ ಸಮ್ಮೇಳನದ ಸಮಯದಲ್ಲೂ ಕಸಾಪ ಪ್ರತಿನಿಧಿಗಳು ಪುಸ್ತಕ ಮಳಿಗೆಗಳತ್ತ ಸುಳಿಯದೆ ಮತ್ತದೇ ಧೋರಣೆ ಮುಂದುವರಿಸಿದ್ದಾರೆ ಎಂದು ಮಾರಾಟಗಾರರು ವಿಷಾಧಿಸಿದರು.

ಮತ್ತೊಬ್ಬ ಪ್ರಕಾಶಕರು ಪ್ರತಿಕ್ರಿಯಿಸಿ, “ಅಕ್ಷರ ಜಾತ್ರೆಗೆ ಜನಸಾಗರ ಹರಿದುಬರುತ್ತಿದೆ. ಧೂಳು ಎದ್ದೇಳದಂತೆ ಹಸಿರು ಕಾರ್ಪೇಟ್ ಹಾಸಿರುವುದರಿಂದ ಧೂಳಿನ ಸಮಸ್ಯೆ ತಲೆದೋರಿಲ್ಲದಿರುವುದು ಖುಷಿಯ ಸಂಗತಿ. ವಿಚಾರ ಸಾಹಿತ್ಯ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತ್ಯ ಕೃತಿಗಳಿಗೆ ಹೆಚ್ಚಿನ ಬೇಡಿಕೆ ಇದೆ. ಹಾವೇರಿ ಸಮ್ಮೇಳನ ಸ್ವಲ್ಪಮಟ್ಟಿಗೆ ಲಾಭವನ್ನು ಮಾಡಿಕೊಟ್ಟಿದೆ’’ ಎಂದರು.

ಇದನ್ನೂ ಓದಿ; ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...