Homeಕರ್ನಾಟಕಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಪುಸ್ತಕ ಮಾರಾಟಗಾರರ ಗೋಳು ಕೇಳುವವರ್ಯಾರು?

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಪುಸ್ತಕ ಮಾರಾಟಗಾರರ ಗೋಳು ಕೇಳುವವರ್ಯಾರು?

- Advertisement -
- Advertisement -

ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮೊದಲ ದಿನವೇ ಜನ ಸಾಗರ ಹರಿದುಬಂದಿದೆ. ಕೆಲವು ಪುಸ್ತಕ ಮಾರಾಟಗಾರರಿಗೆ ತಕ್ಕಮಟ್ಟಿಗಿನ ಲಾಭವೂ ಆಗುತ್ತಿದೆ. ಆದರೆ ಪುಸ್ತಕ ಮಾರಾಟಗಾರರತ್ತ ಕನ್ನಡ ಸಾಹಿತ್ಯ ಪರಿಷತ್ತಿನ ಯಾವೊಬ್ಬ ಪ್ರತಿನಿಧಿಯೂ ಸುಳಿದಿಲ್ಲ. ಜೊತೆಗೆ ವಾಣಿಜ್ಯ ಮಳಿಗೆಯೊಳಗೆ ಒಂದಿಷ್ಟು ಪುಸ್ತಕ ಮಳಿಗೆಗಳನ್ನು ಹಾಕಿರುವುದರಿಂದಾಗಿ ಕೆಲವು ಪ್ರಕಾಶಕರು ಸಮಸ್ಯೆ ಎದುರಿಸುತ್ತಿದ್ದಾರೆ.

ಸಮ್ಮೇಳನದ ಆರಂಭದ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ಪುಸ್ತಕ ಮಳಿಗೆಗಳತ್ತ ಜನರು ಹರಿಬಂದಿದ್ದರು. ಎರಡನೇ ದಿನ ಮತ್ತಷ್ಟು ಪುಸ್ತಕ ಪ್ರೇಮಿಗಳು ಮಳಿಗೆಗಳತ್ತ ಧಾವಿಸುವ ನಿರೀಕ್ಷೆ ಇದೆ. ಆದರೆ ಸಮ್ಮೇಳನದ ಸಂಘಟಕರು ಪುಸ್ತಕ ಮಾರಾಟಗಾರರಿಗೆ ಬೇಕಾದ ಅಗತ್ಯತೆಗಳ ಕುರಿತು ಕೇಳುತ್ತಿಲ್ಲ. ಪ್ರತಿಸಲವೂ ಒಂದಲ್ಲ, ಒಂದು ಸಮಸ್ಯೆಯನ್ನು ಪ್ರಕಾಶಕರು ಅನುಭವಿಸುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಾಣಿಜ್ಯ ಮಳಿಗೆಯಲ್ಲಿ ಸಿಕ್ಕಿಕೊಂಡು ಸಮಸ್ಯೆ ಅನುಭವಿಸುತ್ತಿರುವ ಸಾಧನ ಪ್ರಕಾಶನದ ರವಿಚಂದ್ರ ರಾವ್ ಮಾತನಾಡಿ, “ಮಳಿಗೆಯೊಂದಕ್ಕೆ ಮೂರು ಸಾವಿರ ರೂಪಾಯಿಯನ್ನು ಕೊಡುತ್ತೇವೆ. ಪೋನ್ ಪೇ, ಗೂಗಲ್ ಪೇ ಮಾಡುವವರಿಗೆ ಇಂಟರ್ ನೆಟ್ ಸೌಲಭ್ಯವಿಲ್ಲ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ, ಮಳಿಗೆಗಳನ್ನು ರೂಪಿಸುತ್ತೀರಿ. ಸಾವಿರಾರು ಜನ ಸೇರುವ ಜಾಗದಲ್ಲಿ ನೆಟ್ ವರ್ಕ್ ಸಮಸ್ಯೆಯಾಗುತ್ತದೆ ಎಂಬ ಎಚ್ಚರಿಕೆ ಇರಬೇಕಿತ್ತಲ್ಲವೇ? ತಾತ್ಕಲಿಕವಾಗಿ ನೆಟ್ ವರ್ಕ್ ಸೌಲಭ್ಯ ಕಲ್ಪಿಸಬೇಕಿತ್ತು. ಕಸಾಪ ಅಧ್ಯಕ್ಷರಾದ ಜೋಶಿಯವರ ಮನೆಯಲ್ಲಿ ಏನಾದರೂ ಸಮಸ್ಯೆಯಾದರೆ, ತಕ್ಷಣಕ್ಕೆ ಕರೆ ಮಾಡಿ ಮಾತನಾಡಲು ಆಗದ ಪರಿಸ್ಥಿತಿ ಉಂಟಾಗಿದೆ’’ ಎಂದರು.

“ಇಲ್ಲಿ ವಾಣಿಜ್ಯ ಮಳಿಗೆ ಎಂದು ಬೋರ್ಡ್ ಹಾಕಿ ಪುಸ್ತಕ ಮಾರಾಟ ಮಾಡಲು ಅವಕಾಶ ನೀಡಿದ್ದಾರೆ. ಪುಸ್ತಕ ಮಳಿಗೆಗಳೆಲ್ಲ ಒಂದೇ ಕಡೆ ಇರಬೇಕು. ಇಲ್ಲಿಗೆ ಬರುವ ಗ್ರಾಹಕರು ಪುಸ್ತಕವನ್ನು ಖರೀದಿಸುವುದಕ್ಕಿಂತ ಬೇರೆ ವಸ್ತುಗಳ ಖರೀದಿಗೆ ಗಮನ ಕೊಡುತ್ತಾರೆ. ಪ್ರಕಾಶಕರನ್ನು ಕೆಳ ದರ್ಜೆಯಲ್ಲಿ ಕಸಾಪ ನೋಡುತ್ತಿದೆ. ಪ್ರಕಾಶಕರು, ಸಾಹಿತ್ಯ ಸಮ್ಮೇಳನ ಒಂದೇ ನಾಣ್ಯದ ಎರಡು ಮುಖಗಳು. ವೇದಿಕೆಗಳಲ್ಲಿ ನೀವಿದ್ದು, ನಿಮ್ಮ ಪ್ರಚಾರಕ್ಕೆ ಮಾತ್ರ  ಗಮನ ಕೊಡುತ್ತಿರುವುದಕ್ಕೆ ನಮ್ಮ ಧಿಕ್ಕಾರ’’ ಎಂದು ಕಿಡಿಕಾರಿದರು.

“ಮಹೇಶ ಜೋಶಿಯವರು ಯಾವುದೇ ಹೊಸ ನಿಯಮವನ್ನು ಜಾರಿಗೆ ತರುವಾಗ ಸೂಕ್ತ ಮಾಹಿತಿಯನ್ನು ನೀಡಬೇಕಿತ್ತು. ಪರಿಷತ್ ಸದಸ್ಯರಾಗಿದ್ದರಷ್ಟೇ ಪುಸ್ತಕ ಮಳಿಗೆ ಹಾಕಲು ಅವಕಾಶ ನೀಡುವುದಾಗಿ ನಿಯಮ ತಂದರು. ಆಪ್ ಮೂಲಕ ನೋಂದಣಿ ಮಾಡಿಕೊಳ್ಳಬೇಕಿತ್ತು. ಎಷ್ಟೋ ಮಂದಿ ಪ್ರಕಾಶಕರಿಗೆ ಮಾಹಿತಿ ಇರಲಿಲ್ಲ. ಹೊಸದಾಗಿ ತಯಾರಿ ಮಾಡಿರುವ ಆಪ್ ಸರಿಯಾಗಿ ಅಭಿವೃದ್ಧಿಪಡಿಸಲಾಗಿಲ್ಲ. ಬಹುತೇಕ ಮಾರಾಟಗಾರರು ಬಂದಿಲ್ಲ. ನಿಮಗೆ ವೇದಿಕೆ ಮತ್ತು ನಿಮ್ಮ ಹೆಸರು ಮುಖ್ಯವಷ್ಟೇ. ಜನಸಾಮಾನ್ಯರು ಮತ್ತು ಪುಸ್ತಕ ವ್ಯಾಪಾರಿಗಳು ಏನು ಮಾಡಬೇಕು?’’ ಎಂದು ಪ್ರಶ್ನಿಸಿದರು.

ಕನ್ನಡದ ಬಗ್ಗೆ ಆಸೆ, ಆಸಕ್ತರಾದವರು ಕಸಾಪ ಅಧ್ಯಕ್ಷರಾಗುವುದು ಮುಖ್ಯ. ಐಎಎಸ್, ಐಪಿಎಸ್ ಅಧಿಕಾರಿಗಳಲ್ಲ. ಕನ್ನಡ ಪುಸ್ತಕ ಮತ್ತು ಪ್ರಕಾಶನದ ಬಗ್ಗೆ ಆಸಕ್ತಿ ಇರುವವರು ಅಧ್ಯಕ್ಷರಾಗಬೇಕು. ಜೋಶಿಯವರು ಕನ್ನಡ, ಕನ್ನಡ ಎನ್ನುತ್ತಾರೆ. ಇಲ್ಲಿನ ಮಳಿಗೆಗಳಿಗೆ ಕ್ರಮಾಂಕ ಕೊಡುವಾಗ ಎ, ಬಿ, ಸಿ, ಡಿ ಅಂತ ನೀಡಿದ್ದಾರೆ. ಅದನ್ನೇ ಅ, ಆ, ಇ, ಈ ಅಂತ ಕೊಡಬಹುದಿತ್ತಲ್ಲ’’ ಎಂದು ಬೇಸರ ವ್ಯಕ್ತಪಡಿಸಿದರು.

ಮಳಿಗೆಗಳಲ್ಲಿ ಬಿದ್ದಿರುವ ಕಸದ ವಿಲೇವಾರಿಗೆ ಕ್ರಮ ಜರುಗಿಸಿಲ್ಲ. ಮಳಿಗೆಗಳ ಮುಂದೆ ಕಸವನ್ನು ಗುಡ್ಡೆ ಹಾಕಿಕೊಂಡ ಪುಸ್ತಕ ಪ್ರೇಮಿಗಳನ್ನು ಒಳಗೆ ಕರೆಯುವಂತಾಗಿದೆ. ಈ ಹಿಂದಿನ ಸಮ್ಮೇಳನಗಳಲ್ಲಿ ಕಸಾಪ ಪ್ರತಿನಿಧಿಗಳು ನಮ್ಮತ್ತ ಬಂದು, ನಮ್ಮ ಅಗತ್ಯತೆಗಳ ಕುರಿತು ಕನಿಷ್ಠ ವಿಚಾರಿಸಿಕೊಳ್ಳುತ್ತಿದ್ದರು ಎಂದು ಪ್ರಕಾಶಕರೊಬ್ಬರು ತಿಳಿಸಿದರು.

ಮೊದಲೆಲ್ಲ ಪುಸ್ತಕ ಮಾರಾಟಗಾರರು ಜಿಲ್ಲಾ ಕಸಾಪ ಕಚೇರಿಯಲ್ಲಿ ನೊಂದಣಿ ಮಾಡಿಕೊಂಡಿದ್ದರೆ ಮುಗಿಯುತ್ತಿತ್ತು. ಆಪ್ ಮೂಲಕ ನೊಂದಣಿ ಎಂಬ ನಿಯಮ ತಂದು ಸಮ್ಮೇಳನ ಆರಂಭದಿಂದಲೇ ಪುಸ್ತಕ ಮಾರಾಟಗಾರರ ಮೇಲೆ ಪ್ರಹಾರ ಮಾಡಲಾಯಿತು. ಈಗ ಸಮ್ಮೇಳನದ ಸಮಯದಲ್ಲೂ ಕಸಾಪ ಪ್ರತಿನಿಧಿಗಳು ಪುಸ್ತಕ ಮಳಿಗೆಗಳತ್ತ ಸುಳಿಯದೆ ಮತ್ತದೇ ಧೋರಣೆ ಮುಂದುವರಿಸಿದ್ದಾರೆ ಎಂದು ಮಾರಾಟಗಾರರು ವಿಷಾಧಿಸಿದರು.

ಮತ್ತೊಬ್ಬ ಪ್ರಕಾಶಕರು ಪ್ರತಿಕ್ರಿಯಿಸಿ, “ಅಕ್ಷರ ಜಾತ್ರೆಗೆ ಜನಸಾಗರ ಹರಿದುಬರುತ್ತಿದೆ. ಧೂಳು ಎದ್ದೇಳದಂತೆ ಹಸಿರು ಕಾರ್ಪೇಟ್ ಹಾಸಿರುವುದರಿಂದ ಧೂಳಿನ ಸಮಸ್ಯೆ ತಲೆದೋರಿಲ್ಲದಿರುವುದು ಖುಷಿಯ ಸಂಗತಿ. ವಿಚಾರ ಸಾಹಿತ್ಯ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತ್ಯ ಕೃತಿಗಳಿಗೆ ಹೆಚ್ಚಿನ ಬೇಡಿಕೆ ಇದೆ. ಹಾವೇರಿ ಸಮ್ಮೇಳನ ಸ್ವಲ್ಪಮಟ್ಟಿಗೆ ಲಾಭವನ್ನು ಮಾಡಿಕೊಟ್ಟಿದೆ’’ ಎಂದರು.

ಇದನ್ನೂ ಓದಿ; ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...