Homeಕರ್ನಾಟಕಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಪುಸ್ತಕ ಮಾರಾಟಗಾರರ ಗೋಳು ಕೇಳುವವರ್ಯಾರು?

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಪುಸ್ತಕ ಮಾರಾಟಗಾರರ ಗೋಳು ಕೇಳುವವರ್ಯಾರು?

- Advertisement -
- Advertisement -

ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮೊದಲ ದಿನವೇ ಜನ ಸಾಗರ ಹರಿದುಬಂದಿದೆ. ಕೆಲವು ಪುಸ್ತಕ ಮಾರಾಟಗಾರರಿಗೆ ತಕ್ಕಮಟ್ಟಿಗಿನ ಲಾಭವೂ ಆಗುತ್ತಿದೆ. ಆದರೆ ಪುಸ್ತಕ ಮಾರಾಟಗಾರರತ್ತ ಕನ್ನಡ ಸಾಹಿತ್ಯ ಪರಿಷತ್ತಿನ ಯಾವೊಬ್ಬ ಪ್ರತಿನಿಧಿಯೂ ಸುಳಿದಿಲ್ಲ. ಜೊತೆಗೆ ವಾಣಿಜ್ಯ ಮಳಿಗೆಯೊಳಗೆ ಒಂದಿಷ್ಟು ಪುಸ್ತಕ ಮಳಿಗೆಗಳನ್ನು ಹಾಕಿರುವುದರಿಂದಾಗಿ ಕೆಲವು ಪ್ರಕಾಶಕರು ಸಮಸ್ಯೆ ಎದುರಿಸುತ್ತಿದ್ದಾರೆ.

ಸಮ್ಮೇಳನದ ಆರಂಭದ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ಪುಸ್ತಕ ಮಳಿಗೆಗಳತ್ತ ಜನರು ಹರಿಬಂದಿದ್ದರು. ಎರಡನೇ ದಿನ ಮತ್ತಷ್ಟು ಪುಸ್ತಕ ಪ್ರೇಮಿಗಳು ಮಳಿಗೆಗಳತ್ತ ಧಾವಿಸುವ ನಿರೀಕ್ಷೆ ಇದೆ. ಆದರೆ ಸಮ್ಮೇಳನದ ಸಂಘಟಕರು ಪುಸ್ತಕ ಮಾರಾಟಗಾರರಿಗೆ ಬೇಕಾದ ಅಗತ್ಯತೆಗಳ ಕುರಿತು ಕೇಳುತ್ತಿಲ್ಲ. ಪ್ರತಿಸಲವೂ ಒಂದಲ್ಲ, ಒಂದು ಸಮಸ್ಯೆಯನ್ನು ಪ್ರಕಾಶಕರು ಅನುಭವಿಸುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಾಣಿಜ್ಯ ಮಳಿಗೆಯಲ್ಲಿ ಸಿಕ್ಕಿಕೊಂಡು ಸಮಸ್ಯೆ ಅನುಭವಿಸುತ್ತಿರುವ ಸಾಧನ ಪ್ರಕಾಶನದ ರವಿಚಂದ್ರ ರಾವ್ ಮಾತನಾಡಿ, “ಮಳಿಗೆಯೊಂದಕ್ಕೆ ಮೂರು ಸಾವಿರ ರೂಪಾಯಿಯನ್ನು ಕೊಡುತ್ತೇವೆ. ಪೋನ್ ಪೇ, ಗೂಗಲ್ ಪೇ ಮಾಡುವವರಿಗೆ ಇಂಟರ್ ನೆಟ್ ಸೌಲಭ್ಯವಿಲ್ಲ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ, ಮಳಿಗೆಗಳನ್ನು ರೂಪಿಸುತ್ತೀರಿ. ಸಾವಿರಾರು ಜನ ಸೇರುವ ಜಾಗದಲ್ಲಿ ನೆಟ್ ವರ್ಕ್ ಸಮಸ್ಯೆಯಾಗುತ್ತದೆ ಎಂಬ ಎಚ್ಚರಿಕೆ ಇರಬೇಕಿತ್ತಲ್ಲವೇ? ತಾತ್ಕಲಿಕವಾಗಿ ನೆಟ್ ವರ್ಕ್ ಸೌಲಭ್ಯ ಕಲ್ಪಿಸಬೇಕಿತ್ತು. ಕಸಾಪ ಅಧ್ಯಕ್ಷರಾದ ಜೋಶಿಯವರ ಮನೆಯಲ್ಲಿ ಏನಾದರೂ ಸಮಸ್ಯೆಯಾದರೆ, ತಕ್ಷಣಕ್ಕೆ ಕರೆ ಮಾಡಿ ಮಾತನಾಡಲು ಆಗದ ಪರಿಸ್ಥಿತಿ ಉಂಟಾಗಿದೆ’’ ಎಂದರು.

“ಇಲ್ಲಿ ವಾಣಿಜ್ಯ ಮಳಿಗೆ ಎಂದು ಬೋರ್ಡ್ ಹಾಕಿ ಪುಸ್ತಕ ಮಾರಾಟ ಮಾಡಲು ಅವಕಾಶ ನೀಡಿದ್ದಾರೆ. ಪುಸ್ತಕ ಮಳಿಗೆಗಳೆಲ್ಲ ಒಂದೇ ಕಡೆ ಇರಬೇಕು. ಇಲ್ಲಿಗೆ ಬರುವ ಗ್ರಾಹಕರು ಪುಸ್ತಕವನ್ನು ಖರೀದಿಸುವುದಕ್ಕಿಂತ ಬೇರೆ ವಸ್ತುಗಳ ಖರೀದಿಗೆ ಗಮನ ಕೊಡುತ್ತಾರೆ. ಪ್ರಕಾಶಕರನ್ನು ಕೆಳ ದರ್ಜೆಯಲ್ಲಿ ಕಸಾಪ ನೋಡುತ್ತಿದೆ. ಪ್ರಕಾಶಕರು, ಸಾಹಿತ್ಯ ಸಮ್ಮೇಳನ ಒಂದೇ ನಾಣ್ಯದ ಎರಡು ಮುಖಗಳು. ವೇದಿಕೆಗಳಲ್ಲಿ ನೀವಿದ್ದು, ನಿಮ್ಮ ಪ್ರಚಾರಕ್ಕೆ ಮಾತ್ರ  ಗಮನ ಕೊಡುತ್ತಿರುವುದಕ್ಕೆ ನಮ್ಮ ಧಿಕ್ಕಾರ’’ ಎಂದು ಕಿಡಿಕಾರಿದರು.

“ಮಹೇಶ ಜೋಶಿಯವರು ಯಾವುದೇ ಹೊಸ ನಿಯಮವನ್ನು ಜಾರಿಗೆ ತರುವಾಗ ಸೂಕ್ತ ಮಾಹಿತಿಯನ್ನು ನೀಡಬೇಕಿತ್ತು. ಪರಿಷತ್ ಸದಸ್ಯರಾಗಿದ್ದರಷ್ಟೇ ಪುಸ್ತಕ ಮಳಿಗೆ ಹಾಕಲು ಅವಕಾಶ ನೀಡುವುದಾಗಿ ನಿಯಮ ತಂದರು. ಆಪ್ ಮೂಲಕ ನೋಂದಣಿ ಮಾಡಿಕೊಳ್ಳಬೇಕಿತ್ತು. ಎಷ್ಟೋ ಮಂದಿ ಪ್ರಕಾಶಕರಿಗೆ ಮಾಹಿತಿ ಇರಲಿಲ್ಲ. ಹೊಸದಾಗಿ ತಯಾರಿ ಮಾಡಿರುವ ಆಪ್ ಸರಿಯಾಗಿ ಅಭಿವೃದ್ಧಿಪಡಿಸಲಾಗಿಲ್ಲ. ಬಹುತೇಕ ಮಾರಾಟಗಾರರು ಬಂದಿಲ್ಲ. ನಿಮಗೆ ವೇದಿಕೆ ಮತ್ತು ನಿಮ್ಮ ಹೆಸರು ಮುಖ್ಯವಷ್ಟೇ. ಜನಸಾಮಾನ್ಯರು ಮತ್ತು ಪುಸ್ತಕ ವ್ಯಾಪಾರಿಗಳು ಏನು ಮಾಡಬೇಕು?’’ ಎಂದು ಪ್ರಶ್ನಿಸಿದರು.

ಕನ್ನಡದ ಬಗ್ಗೆ ಆಸೆ, ಆಸಕ್ತರಾದವರು ಕಸಾಪ ಅಧ್ಯಕ್ಷರಾಗುವುದು ಮುಖ್ಯ. ಐಎಎಸ್, ಐಪಿಎಸ್ ಅಧಿಕಾರಿಗಳಲ್ಲ. ಕನ್ನಡ ಪುಸ್ತಕ ಮತ್ತು ಪ್ರಕಾಶನದ ಬಗ್ಗೆ ಆಸಕ್ತಿ ಇರುವವರು ಅಧ್ಯಕ್ಷರಾಗಬೇಕು. ಜೋಶಿಯವರು ಕನ್ನಡ, ಕನ್ನಡ ಎನ್ನುತ್ತಾರೆ. ಇಲ್ಲಿನ ಮಳಿಗೆಗಳಿಗೆ ಕ್ರಮಾಂಕ ಕೊಡುವಾಗ ಎ, ಬಿ, ಸಿ, ಡಿ ಅಂತ ನೀಡಿದ್ದಾರೆ. ಅದನ್ನೇ ಅ, ಆ, ಇ, ಈ ಅಂತ ಕೊಡಬಹುದಿತ್ತಲ್ಲ’’ ಎಂದು ಬೇಸರ ವ್ಯಕ್ತಪಡಿಸಿದರು.

ಮಳಿಗೆಗಳಲ್ಲಿ ಬಿದ್ದಿರುವ ಕಸದ ವಿಲೇವಾರಿಗೆ ಕ್ರಮ ಜರುಗಿಸಿಲ್ಲ. ಮಳಿಗೆಗಳ ಮುಂದೆ ಕಸವನ್ನು ಗುಡ್ಡೆ ಹಾಕಿಕೊಂಡ ಪುಸ್ತಕ ಪ್ರೇಮಿಗಳನ್ನು ಒಳಗೆ ಕರೆಯುವಂತಾಗಿದೆ. ಈ ಹಿಂದಿನ ಸಮ್ಮೇಳನಗಳಲ್ಲಿ ಕಸಾಪ ಪ್ರತಿನಿಧಿಗಳು ನಮ್ಮತ್ತ ಬಂದು, ನಮ್ಮ ಅಗತ್ಯತೆಗಳ ಕುರಿತು ಕನಿಷ್ಠ ವಿಚಾರಿಸಿಕೊಳ್ಳುತ್ತಿದ್ದರು ಎಂದು ಪ್ರಕಾಶಕರೊಬ್ಬರು ತಿಳಿಸಿದರು.

ಮೊದಲೆಲ್ಲ ಪುಸ್ತಕ ಮಾರಾಟಗಾರರು ಜಿಲ್ಲಾ ಕಸಾಪ ಕಚೇರಿಯಲ್ಲಿ ನೊಂದಣಿ ಮಾಡಿಕೊಂಡಿದ್ದರೆ ಮುಗಿಯುತ್ತಿತ್ತು. ಆಪ್ ಮೂಲಕ ನೊಂದಣಿ ಎಂಬ ನಿಯಮ ತಂದು ಸಮ್ಮೇಳನ ಆರಂಭದಿಂದಲೇ ಪುಸ್ತಕ ಮಾರಾಟಗಾರರ ಮೇಲೆ ಪ್ರಹಾರ ಮಾಡಲಾಯಿತು. ಈಗ ಸಮ್ಮೇಳನದ ಸಮಯದಲ್ಲೂ ಕಸಾಪ ಪ್ರತಿನಿಧಿಗಳು ಪುಸ್ತಕ ಮಳಿಗೆಗಳತ್ತ ಸುಳಿಯದೆ ಮತ್ತದೇ ಧೋರಣೆ ಮುಂದುವರಿಸಿದ್ದಾರೆ ಎಂದು ಮಾರಾಟಗಾರರು ವಿಷಾಧಿಸಿದರು.

ಮತ್ತೊಬ್ಬ ಪ್ರಕಾಶಕರು ಪ್ರತಿಕ್ರಿಯಿಸಿ, “ಅಕ್ಷರ ಜಾತ್ರೆಗೆ ಜನಸಾಗರ ಹರಿದುಬರುತ್ತಿದೆ. ಧೂಳು ಎದ್ದೇಳದಂತೆ ಹಸಿರು ಕಾರ್ಪೇಟ್ ಹಾಸಿರುವುದರಿಂದ ಧೂಳಿನ ಸಮಸ್ಯೆ ತಲೆದೋರಿಲ್ಲದಿರುವುದು ಖುಷಿಯ ಸಂಗತಿ. ವಿಚಾರ ಸಾಹಿತ್ಯ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತ್ಯ ಕೃತಿಗಳಿಗೆ ಹೆಚ್ಚಿನ ಬೇಡಿಕೆ ಇದೆ. ಹಾವೇರಿ ಸಮ್ಮೇಳನ ಸ್ವಲ್ಪಮಟ್ಟಿಗೆ ಲಾಭವನ್ನು ಮಾಡಿಕೊಟ್ಟಿದೆ’’ ಎಂದರು.

ಇದನ್ನೂ ಓದಿ; ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...