Homeಕರ್ನಾಟಕಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಪುಸ್ತಕ ಮಾರಾಟಗಾರರ ಗೋಳು ಕೇಳುವವರ್ಯಾರು?

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಪುಸ್ತಕ ಮಾರಾಟಗಾರರ ಗೋಳು ಕೇಳುವವರ್ಯಾರು?

- Advertisement -
- Advertisement -

ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮೊದಲ ದಿನವೇ ಜನ ಸಾಗರ ಹರಿದುಬಂದಿದೆ. ಕೆಲವು ಪುಸ್ತಕ ಮಾರಾಟಗಾರರಿಗೆ ತಕ್ಕಮಟ್ಟಿಗಿನ ಲಾಭವೂ ಆಗುತ್ತಿದೆ. ಆದರೆ ಪುಸ್ತಕ ಮಾರಾಟಗಾರರತ್ತ ಕನ್ನಡ ಸಾಹಿತ್ಯ ಪರಿಷತ್ತಿನ ಯಾವೊಬ್ಬ ಪ್ರತಿನಿಧಿಯೂ ಸುಳಿದಿಲ್ಲ. ಜೊತೆಗೆ ವಾಣಿಜ್ಯ ಮಳಿಗೆಯೊಳಗೆ ಒಂದಿಷ್ಟು ಪುಸ್ತಕ ಮಳಿಗೆಗಳನ್ನು ಹಾಕಿರುವುದರಿಂದಾಗಿ ಕೆಲವು ಪ್ರಕಾಶಕರು ಸಮಸ್ಯೆ ಎದುರಿಸುತ್ತಿದ್ದಾರೆ.

ಸಮ್ಮೇಳನದ ಆರಂಭದ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ಪುಸ್ತಕ ಮಳಿಗೆಗಳತ್ತ ಜನರು ಹರಿಬಂದಿದ್ದರು. ಎರಡನೇ ದಿನ ಮತ್ತಷ್ಟು ಪುಸ್ತಕ ಪ್ರೇಮಿಗಳು ಮಳಿಗೆಗಳತ್ತ ಧಾವಿಸುವ ನಿರೀಕ್ಷೆ ಇದೆ. ಆದರೆ ಸಮ್ಮೇಳನದ ಸಂಘಟಕರು ಪುಸ್ತಕ ಮಾರಾಟಗಾರರಿಗೆ ಬೇಕಾದ ಅಗತ್ಯತೆಗಳ ಕುರಿತು ಕೇಳುತ್ತಿಲ್ಲ. ಪ್ರತಿಸಲವೂ ಒಂದಲ್ಲ, ಒಂದು ಸಮಸ್ಯೆಯನ್ನು ಪ್ರಕಾಶಕರು ಅನುಭವಿಸುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಾಣಿಜ್ಯ ಮಳಿಗೆಯಲ್ಲಿ ಸಿಕ್ಕಿಕೊಂಡು ಸಮಸ್ಯೆ ಅನುಭವಿಸುತ್ತಿರುವ ಸಾಧನ ಪ್ರಕಾಶನದ ರವಿಚಂದ್ರ ರಾವ್ ಮಾತನಾಡಿ, “ಮಳಿಗೆಯೊಂದಕ್ಕೆ ಮೂರು ಸಾವಿರ ರೂಪಾಯಿಯನ್ನು ಕೊಡುತ್ತೇವೆ. ಪೋನ್ ಪೇ, ಗೂಗಲ್ ಪೇ ಮಾಡುವವರಿಗೆ ಇಂಟರ್ ನೆಟ್ ಸೌಲಭ್ಯವಿಲ್ಲ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ, ಮಳಿಗೆಗಳನ್ನು ರೂಪಿಸುತ್ತೀರಿ. ಸಾವಿರಾರು ಜನ ಸೇರುವ ಜಾಗದಲ್ಲಿ ನೆಟ್ ವರ್ಕ್ ಸಮಸ್ಯೆಯಾಗುತ್ತದೆ ಎಂಬ ಎಚ್ಚರಿಕೆ ಇರಬೇಕಿತ್ತಲ್ಲವೇ? ತಾತ್ಕಲಿಕವಾಗಿ ನೆಟ್ ವರ್ಕ್ ಸೌಲಭ್ಯ ಕಲ್ಪಿಸಬೇಕಿತ್ತು. ಕಸಾಪ ಅಧ್ಯಕ್ಷರಾದ ಜೋಶಿಯವರ ಮನೆಯಲ್ಲಿ ಏನಾದರೂ ಸಮಸ್ಯೆಯಾದರೆ, ತಕ್ಷಣಕ್ಕೆ ಕರೆ ಮಾಡಿ ಮಾತನಾಡಲು ಆಗದ ಪರಿಸ್ಥಿತಿ ಉಂಟಾಗಿದೆ’’ ಎಂದರು.

“ಇಲ್ಲಿ ವಾಣಿಜ್ಯ ಮಳಿಗೆ ಎಂದು ಬೋರ್ಡ್ ಹಾಕಿ ಪುಸ್ತಕ ಮಾರಾಟ ಮಾಡಲು ಅವಕಾಶ ನೀಡಿದ್ದಾರೆ. ಪುಸ್ತಕ ಮಳಿಗೆಗಳೆಲ್ಲ ಒಂದೇ ಕಡೆ ಇರಬೇಕು. ಇಲ್ಲಿಗೆ ಬರುವ ಗ್ರಾಹಕರು ಪುಸ್ತಕವನ್ನು ಖರೀದಿಸುವುದಕ್ಕಿಂತ ಬೇರೆ ವಸ್ತುಗಳ ಖರೀದಿಗೆ ಗಮನ ಕೊಡುತ್ತಾರೆ. ಪ್ರಕಾಶಕರನ್ನು ಕೆಳ ದರ್ಜೆಯಲ್ಲಿ ಕಸಾಪ ನೋಡುತ್ತಿದೆ. ಪ್ರಕಾಶಕರು, ಸಾಹಿತ್ಯ ಸಮ್ಮೇಳನ ಒಂದೇ ನಾಣ್ಯದ ಎರಡು ಮುಖಗಳು. ವೇದಿಕೆಗಳಲ್ಲಿ ನೀವಿದ್ದು, ನಿಮ್ಮ ಪ್ರಚಾರಕ್ಕೆ ಮಾತ್ರ  ಗಮನ ಕೊಡುತ್ತಿರುವುದಕ್ಕೆ ನಮ್ಮ ಧಿಕ್ಕಾರ’’ ಎಂದು ಕಿಡಿಕಾರಿದರು.

“ಮಹೇಶ ಜೋಶಿಯವರು ಯಾವುದೇ ಹೊಸ ನಿಯಮವನ್ನು ಜಾರಿಗೆ ತರುವಾಗ ಸೂಕ್ತ ಮಾಹಿತಿಯನ್ನು ನೀಡಬೇಕಿತ್ತು. ಪರಿಷತ್ ಸದಸ್ಯರಾಗಿದ್ದರಷ್ಟೇ ಪುಸ್ತಕ ಮಳಿಗೆ ಹಾಕಲು ಅವಕಾಶ ನೀಡುವುದಾಗಿ ನಿಯಮ ತಂದರು. ಆಪ್ ಮೂಲಕ ನೋಂದಣಿ ಮಾಡಿಕೊಳ್ಳಬೇಕಿತ್ತು. ಎಷ್ಟೋ ಮಂದಿ ಪ್ರಕಾಶಕರಿಗೆ ಮಾಹಿತಿ ಇರಲಿಲ್ಲ. ಹೊಸದಾಗಿ ತಯಾರಿ ಮಾಡಿರುವ ಆಪ್ ಸರಿಯಾಗಿ ಅಭಿವೃದ್ಧಿಪಡಿಸಲಾಗಿಲ್ಲ. ಬಹುತೇಕ ಮಾರಾಟಗಾರರು ಬಂದಿಲ್ಲ. ನಿಮಗೆ ವೇದಿಕೆ ಮತ್ತು ನಿಮ್ಮ ಹೆಸರು ಮುಖ್ಯವಷ್ಟೇ. ಜನಸಾಮಾನ್ಯರು ಮತ್ತು ಪುಸ್ತಕ ವ್ಯಾಪಾರಿಗಳು ಏನು ಮಾಡಬೇಕು?’’ ಎಂದು ಪ್ರಶ್ನಿಸಿದರು.

ಕನ್ನಡದ ಬಗ್ಗೆ ಆಸೆ, ಆಸಕ್ತರಾದವರು ಕಸಾಪ ಅಧ್ಯಕ್ಷರಾಗುವುದು ಮುಖ್ಯ. ಐಎಎಸ್, ಐಪಿಎಸ್ ಅಧಿಕಾರಿಗಳಲ್ಲ. ಕನ್ನಡ ಪುಸ್ತಕ ಮತ್ತು ಪ್ರಕಾಶನದ ಬಗ್ಗೆ ಆಸಕ್ತಿ ಇರುವವರು ಅಧ್ಯಕ್ಷರಾಗಬೇಕು. ಜೋಶಿಯವರು ಕನ್ನಡ, ಕನ್ನಡ ಎನ್ನುತ್ತಾರೆ. ಇಲ್ಲಿನ ಮಳಿಗೆಗಳಿಗೆ ಕ್ರಮಾಂಕ ಕೊಡುವಾಗ ಎ, ಬಿ, ಸಿ, ಡಿ ಅಂತ ನೀಡಿದ್ದಾರೆ. ಅದನ್ನೇ ಅ, ಆ, ಇ, ಈ ಅಂತ ಕೊಡಬಹುದಿತ್ತಲ್ಲ’’ ಎಂದು ಬೇಸರ ವ್ಯಕ್ತಪಡಿಸಿದರು.

ಮಳಿಗೆಗಳಲ್ಲಿ ಬಿದ್ದಿರುವ ಕಸದ ವಿಲೇವಾರಿಗೆ ಕ್ರಮ ಜರುಗಿಸಿಲ್ಲ. ಮಳಿಗೆಗಳ ಮುಂದೆ ಕಸವನ್ನು ಗುಡ್ಡೆ ಹಾಕಿಕೊಂಡ ಪುಸ್ತಕ ಪ್ರೇಮಿಗಳನ್ನು ಒಳಗೆ ಕರೆಯುವಂತಾಗಿದೆ. ಈ ಹಿಂದಿನ ಸಮ್ಮೇಳನಗಳಲ್ಲಿ ಕಸಾಪ ಪ್ರತಿನಿಧಿಗಳು ನಮ್ಮತ್ತ ಬಂದು, ನಮ್ಮ ಅಗತ್ಯತೆಗಳ ಕುರಿತು ಕನಿಷ್ಠ ವಿಚಾರಿಸಿಕೊಳ್ಳುತ್ತಿದ್ದರು ಎಂದು ಪ್ರಕಾಶಕರೊಬ್ಬರು ತಿಳಿಸಿದರು.

ಮೊದಲೆಲ್ಲ ಪುಸ್ತಕ ಮಾರಾಟಗಾರರು ಜಿಲ್ಲಾ ಕಸಾಪ ಕಚೇರಿಯಲ್ಲಿ ನೊಂದಣಿ ಮಾಡಿಕೊಂಡಿದ್ದರೆ ಮುಗಿಯುತ್ತಿತ್ತು. ಆಪ್ ಮೂಲಕ ನೊಂದಣಿ ಎಂಬ ನಿಯಮ ತಂದು ಸಮ್ಮೇಳನ ಆರಂಭದಿಂದಲೇ ಪುಸ್ತಕ ಮಾರಾಟಗಾರರ ಮೇಲೆ ಪ್ರಹಾರ ಮಾಡಲಾಯಿತು. ಈಗ ಸಮ್ಮೇಳನದ ಸಮಯದಲ್ಲೂ ಕಸಾಪ ಪ್ರತಿನಿಧಿಗಳು ಪುಸ್ತಕ ಮಳಿಗೆಗಳತ್ತ ಸುಳಿಯದೆ ಮತ್ತದೇ ಧೋರಣೆ ಮುಂದುವರಿಸಿದ್ದಾರೆ ಎಂದು ಮಾರಾಟಗಾರರು ವಿಷಾಧಿಸಿದರು.

ಮತ್ತೊಬ್ಬ ಪ್ರಕಾಶಕರು ಪ್ರತಿಕ್ರಿಯಿಸಿ, “ಅಕ್ಷರ ಜಾತ್ರೆಗೆ ಜನಸಾಗರ ಹರಿದುಬರುತ್ತಿದೆ. ಧೂಳು ಎದ್ದೇಳದಂತೆ ಹಸಿರು ಕಾರ್ಪೇಟ್ ಹಾಸಿರುವುದರಿಂದ ಧೂಳಿನ ಸಮಸ್ಯೆ ತಲೆದೋರಿಲ್ಲದಿರುವುದು ಖುಷಿಯ ಸಂಗತಿ. ವಿಚಾರ ಸಾಹಿತ್ಯ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತ್ಯ ಕೃತಿಗಳಿಗೆ ಹೆಚ್ಚಿನ ಬೇಡಿಕೆ ಇದೆ. ಹಾವೇರಿ ಸಮ್ಮೇಳನ ಸ್ವಲ್ಪಮಟ್ಟಿಗೆ ಲಾಭವನ್ನು ಮಾಡಿಕೊಟ್ಟಿದೆ’’ ಎಂದರು.

ಇದನ್ನೂ ಓದಿ; ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...