Homeಕರ್ನಾಟಕಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಪುಸ್ತಕ ಮಾರಾಟಗಾರರ ಗೋಳು ಕೇಳುವವರ್ಯಾರು?

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಪುಸ್ತಕ ಮಾರಾಟಗಾರರ ಗೋಳು ಕೇಳುವವರ್ಯಾರು?

- Advertisement -
- Advertisement -

ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮೊದಲ ದಿನವೇ ಜನ ಸಾಗರ ಹರಿದುಬಂದಿದೆ. ಕೆಲವು ಪುಸ್ತಕ ಮಾರಾಟಗಾರರಿಗೆ ತಕ್ಕಮಟ್ಟಿಗಿನ ಲಾಭವೂ ಆಗುತ್ತಿದೆ. ಆದರೆ ಪುಸ್ತಕ ಮಾರಾಟಗಾರರತ್ತ ಕನ್ನಡ ಸಾಹಿತ್ಯ ಪರಿಷತ್ತಿನ ಯಾವೊಬ್ಬ ಪ್ರತಿನಿಧಿಯೂ ಸುಳಿದಿಲ್ಲ. ಜೊತೆಗೆ ವಾಣಿಜ್ಯ ಮಳಿಗೆಯೊಳಗೆ ಒಂದಿಷ್ಟು ಪುಸ್ತಕ ಮಳಿಗೆಗಳನ್ನು ಹಾಕಿರುವುದರಿಂದಾಗಿ ಕೆಲವು ಪ್ರಕಾಶಕರು ಸಮಸ್ಯೆ ಎದುರಿಸುತ್ತಿದ್ದಾರೆ.

ಸಮ್ಮೇಳನದ ಆರಂಭದ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ಪುಸ್ತಕ ಮಳಿಗೆಗಳತ್ತ ಜನರು ಹರಿಬಂದಿದ್ದರು. ಎರಡನೇ ದಿನ ಮತ್ತಷ್ಟು ಪುಸ್ತಕ ಪ್ರೇಮಿಗಳು ಮಳಿಗೆಗಳತ್ತ ಧಾವಿಸುವ ನಿರೀಕ್ಷೆ ಇದೆ. ಆದರೆ ಸಮ್ಮೇಳನದ ಸಂಘಟಕರು ಪುಸ್ತಕ ಮಾರಾಟಗಾರರಿಗೆ ಬೇಕಾದ ಅಗತ್ಯತೆಗಳ ಕುರಿತು ಕೇಳುತ್ತಿಲ್ಲ. ಪ್ರತಿಸಲವೂ ಒಂದಲ್ಲ, ಒಂದು ಸಮಸ್ಯೆಯನ್ನು ಪ್ರಕಾಶಕರು ಅನುಭವಿಸುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಾಣಿಜ್ಯ ಮಳಿಗೆಯಲ್ಲಿ ಸಿಕ್ಕಿಕೊಂಡು ಸಮಸ್ಯೆ ಅನುಭವಿಸುತ್ತಿರುವ ಸಾಧನ ಪ್ರಕಾಶನದ ರವಿಚಂದ್ರ ರಾವ್ ಮಾತನಾಡಿ, “ಮಳಿಗೆಯೊಂದಕ್ಕೆ ಮೂರು ಸಾವಿರ ರೂಪಾಯಿಯನ್ನು ಕೊಡುತ್ತೇವೆ. ಪೋನ್ ಪೇ, ಗೂಗಲ್ ಪೇ ಮಾಡುವವರಿಗೆ ಇಂಟರ್ ನೆಟ್ ಸೌಲಭ್ಯವಿಲ್ಲ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ, ಮಳಿಗೆಗಳನ್ನು ರೂಪಿಸುತ್ತೀರಿ. ಸಾವಿರಾರು ಜನ ಸೇರುವ ಜಾಗದಲ್ಲಿ ನೆಟ್ ವರ್ಕ್ ಸಮಸ್ಯೆಯಾಗುತ್ತದೆ ಎಂಬ ಎಚ್ಚರಿಕೆ ಇರಬೇಕಿತ್ತಲ್ಲವೇ? ತಾತ್ಕಲಿಕವಾಗಿ ನೆಟ್ ವರ್ಕ್ ಸೌಲಭ್ಯ ಕಲ್ಪಿಸಬೇಕಿತ್ತು. ಕಸಾಪ ಅಧ್ಯಕ್ಷರಾದ ಜೋಶಿಯವರ ಮನೆಯಲ್ಲಿ ಏನಾದರೂ ಸಮಸ್ಯೆಯಾದರೆ, ತಕ್ಷಣಕ್ಕೆ ಕರೆ ಮಾಡಿ ಮಾತನಾಡಲು ಆಗದ ಪರಿಸ್ಥಿತಿ ಉಂಟಾಗಿದೆ’’ ಎಂದರು.

“ಇಲ್ಲಿ ವಾಣಿಜ್ಯ ಮಳಿಗೆ ಎಂದು ಬೋರ್ಡ್ ಹಾಕಿ ಪುಸ್ತಕ ಮಾರಾಟ ಮಾಡಲು ಅವಕಾಶ ನೀಡಿದ್ದಾರೆ. ಪುಸ್ತಕ ಮಳಿಗೆಗಳೆಲ್ಲ ಒಂದೇ ಕಡೆ ಇರಬೇಕು. ಇಲ್ಲಿಗೆ ಬರುವ ಗ್ರಾಹಕರು ಪುಸ್ತಕವನ್ನು ಖರೀದಿಸುವುದಕ್ಕಿಂತ ಬೇರೆ ವಸ್ತುಗಳ ಖರೀದಿಗೆ ಗಮನ ಕೊಡುತ್ತಾರೆ. ಪ್ರಕಾಶಕರನ್ನು ಕೆಳ ದರ್ಜೆಯಲ್ಲಿ ಕಸಾಪ ನೋಡುತ್ತಿದೆ. ಪ್ರಕಾಶಕರು, ಸಾಹಿತ್ಯ ಸಮ್ಮೇಳನ ಒಂದೇ ನಾಣ್ಯದ ಎರಡು ಮುಖಗಳು. ವೇದಿಕೆಗಳಲ್ಲಿ ನೀವಿದ್ದು, ನಿಮ್ಮ ಪ್ರಚಾರಕ್ಕೆ ಮಾತ್ರ  ಗಮನ ಕೊಡುತ್ತಿರುವುದಕ್ಕೆ ನಮ್ಮ ಧಿಕ್ಕಾರ’’ ಎಂದು ಕಿಡಿಕಾರಿದರು.

“ಮಹೇಶ ಜೋಶಿಯವರು ಯಾವುದೇ ಹೊಸ ನಿಯಮವನ್ನು ಜಾರಿಗೆ ತರುವಾಗ ಸೂಕ್ತ ಮಾಹಿತಿಯನ್ನು ನೀಡಬೇಕಿತ್ತು. ಪರಿಷತ್ ಸದಸ್ಯರಾಗಿದ್ದರಷ್ಟೇ ಪುಸ್ತಕ ಮಳಿಗೆ ಹಾಕಲು ಅವಕಾಶ ನೀಡುವುದಾಗಿ ನಿಯಮ ತಂದರು. ಆಪ್ ಮೂಲಕ ನೋಂದಣಿ ಮಾಡಿಕೊಳ್ಳಬೇಕಿತ್ತು. ಎಷ್ಟೋ ಮಂದಿ ಪ್ರಕಾಶಕರಿಗೆ ಮಾಹಿತಿ ಇರಲಿಲ್ಲ. ಹೊಸದಾಗಿ ತಯಾರಿ ಮಾಡಿರುವ ಆಪ್ ಸರಿಯಾಗಿ ಅಭಿವೃದ್ಧಿಪಡಿಸಲಾಗಿಲ್ಲ. ಬಹುತೇಕ ಮಾರಾಟಗಾರರು ಬಂದಿಲ್ಲ. ನಿಮಗೆ ವೇದಿಕೆ ಮತ್ತು ನಿಮ್ಮ ಹೆಸರು ಮುಖ್ಯವಷ್ಟೇ. ಜನಸಾಮಾನ್ಯರು ಮತ್ತು ಪುಸ್ತಕ ವ್ಯಾಪಾರಿಗಳು ಏನು ಮಾಡಬೇಕು?’’ ಎಂದು ಪ್ರಶ್ನಿಸಿದರು.

ಕನ್ನಡದ ಬಗ್ಗೆ ಆಸೆ, ಆಸಕ್ತರಾದವರು ಕಸಾಪ ಅಧ್ಯಕ್ಷರಾಗುವುದು ಮುಖ್ಯ. ಐಎಎಸ್, ಐಪಿಎಸ್ ಅಧಿಕಾರಿಗಳಲ್ಲ. ಕನ್ನಡ ಪುಸ್ತಕ ಮತ್ತು ಪ್ರಕಾಶನದ ಬಗ್ಗೆ ಆಸಕ್ತಿ ಇರುವವರು ಅಧ್ಯಕ್ಷರಾಗಬೇಕು. ಜೋಶಿಯವರು ಕನ್ನಡ, ಕನ್ನಡ ಎನ್ನುತ್ತಾರೆ. ಇಲ್ಲಿನ ಮಳಿಗೆಗಳಿಗೆ ಕ್ರಮಾಂಕ ಕೊಡುವಾಗ ಎ, ಬಿ, ಸಿ, ಡಿ ಅಂತ ನೀಡಿದ್ದಾರೆ. ಅದನ್ನೇ ಅ, ಆ, ಇ, ಈ ಅಂತ ಕೊಡಬಹುದಿತ್ತಲ್ಲ’’ ಎಂದು ಬೇಸರ ವ್ಯಕ್ತಪಡಿಸಿದರು.

ಮಳಿಗೆಗಳಲ್ಲಿ ಬಿದ್ದಿರುವ ಕಸದ ವಿಲೇವಾರಿಗೆ ಕ್ರಮ ಜರುಗಿಸಿಲ್ಲ. ಮಳಿಗೆಗಳ ಮುಂದೆ ಕಸವನ್ನು ಗುಡ್ಡೆ ಹಾಕಿಕೊಂಡ ಪುಸ್ತಕ ಪ್ರೇಮಿಗಳನ್ನು ಒಳಗೆ ಕರೆಯುವಂತಾಗಿದೆ. ಈ ಹಿಂದಿನ ಸಮ್ಮೇಳನಗಳಲ್ಲಿ ಕಸಾಪ ಪ್ರತಿನಿಧಿಗಳು ನಮ್ಮತ್ತ ಬಂದು, ನಮ್ಮ ಅಗತ್ಯತೆಗಳ ಕುರಿತು ಕನಿಷ್ಠ ವಿಚಾರಿಸಿಕೊಳ್ಳುತ್ತಿದ್ದರು ಎಂದು ಪ್ರಕಾಶಕರೊಬ್ಬರು ತಿಳಿಸಿದರು.

ಮೊದಲೆಲ್ಲ ಪುಸ್ತಕ ಮಾರಾಟಗಾರರು ಜಿಲ್ಲಾ ಕಸಾಪ ಕಚೇರಿಯಲ್ಲಿ ನೊಂದಣಿ ಮಾಡಿಕೊಂಡಿದ್ದರೆ ಮುಗಿಯುತ್ತಿತ್ತು. ಆಪ್ ಮೂಲಕ ನೊಂದಣಿ ಎಂಬ ನಿಯಮ ತಂದು ಸಮ್ಮೇಳನ ಆರಂಭದಿಂದಲೇ ಪುಸ್ತಕ ಮಾರಾಟಗಾರರ ಮೇಲೆ ಪ್ರಹಾರ ಮಾಡಲಾಯಿತು. ಈಗ ಸಮ್ಮೇಳನದ ಸಮಯದಲ್ಲೂ ಕಸಾಪ ಪ್ರತಿನಿಧಿಗಳು ಪುಸ್ತಕ ಮಳಿಗೆಗಳತ್ತ ಸುಳಿಯದೆ ಮತ್ತದೇ ಧೋರಣೆ ಮುಂದುವರಿಸಿದ್ದಾರೆ ಎಂದು ಮಾರಾಟಗಾರರು ವಿಷಾಧಿಸಿದರು.

ಮತ್ತೊಬ್ಬ ಪ್ರಕಾಶಕರು ಪ್ರತಿಕ್ರಿಯಿಸಿ, “ಅಕ್ಷರ ಜಾತ್ರೆಗೆ ಜನಸಾಗರ ಹರಿದುಬರುತ್ತಿದೆ. ಧೂಳು ಎದ್ದೇಳದಂತೆ ಹಸಿರು ಕಾರ್ಪೇಟ್ ಹಾಸಿರುವುದರಿಂದ ಧೂಳಿನ ಸಮಸ್ಯೆ ತಲೆದೋರಿಲ್ಲದಿರುವುದು ಖುಷಿಯ ಸಂಗತಿ. ವಿಚಾರ ಸಾಹಿತ್ಯ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತ್ಯ ಕೃತಿಗಳಿಗೆ ಹೆಚ್ಚಿನ ಬೇಡಿಕೆ ಇದೆ. ಹಾವೇರಿ ಸಮ್ಮೇಳನ ಸ್ವಲ್ಪಮಟ್ಟಿಗೆ ಲಾಭವನ್ನು ಮಾಡಿಕೊಟ್ಟಿದೆ’’ ಎಂದರು.

ಇದನ್ನೂ ಓದಿ; ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...