Homeಕರ್ನಾಟಕಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಪುಸ್ತಕ ಮಾರಾಟಗಾರರ ಗೋಳು ಕೇಳುವವರ್ಯಾರು?

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಪುಸ್ತಕ ಮಾರಾಟಗಾರರ ಗೋಳು ಕೇಳುವವರ್ಯಾರು?

- Advertisement -
- Advertisement -

ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮೊದಲ ದಿನವೇ ಜನ ಸಾಗರ ಹರಿದುಬಂದಿದೆ. ಕೆಲವು ಪುಸ್ತಕ ಮಾರಾಟಗಾರರಿಗೆ ತಕ್ಕಮಟ್ಟಿಗಿನ ಲಾಭವೂ ಆಗುತ್ತಿದೆ. ಆದರೆ ಪುಸ್ತಕ ಮಾರಾಟಗಾರರತ್ತ ಕನ್ನಡ ಸಾಹಿತ್ಯ ಪರಿಷತ್ತಿನ ಯಾವೊಬ್ಬ ಪ್ರತಿನಿಧಿಯೂ ಸುಳಿದಿಲ್ಲ. ಜೊತೆಗೆ ವಾಣಿಜ್ಯ ಮಳಿಗೆಯೊಳಗೆ ಒಂದಿಷ್ಟು ಪುಸ್ತಕ ಮಳಿಗೆಗಳನ್ನು ಹಾಕಿರುವುದರಿಂದಾಗಿ ಕೆಲವು ಪ್ರಕಾಶಕರು ಸಮಸ್ಯೆ ಎದುರಿಸುತ್ತಿದ್ದಾರೆ.

ಸಮ್ಮೇಳನದ ಆರಂಭದ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ಪುಸ್ತಕ ಮಳಿಗೆಗಳತ್ತ ಜನರು ಹರಿಬಂದಿದ್ದರು. ಎರಡನೇ ದಿನ ಮತ್ತಷ್ಟು ಪುಸ್ತಕ ಪ್ರೇಮಿಗಳು ಮಳಿಗೆಗಳತ್ತ ಧಾವಿಸುವ ನಿರೀಕ್ಷೆ ಇದೆ. ಆದರೆ ಸಮ್ಮೇಳನದ ಸಂಘಟಕರು ಪುಸ್ತಕ ಮಾರಾಟಗಾರರಿಗೆ ಬೇಕಾದ ಅಗತ್ಯತೆಗಳ ಕುರಿತು ಕೇಳುತ್ತಿಲ್ಲ. ಪ್ರತಿಸಲವೂ ಒಂದಲ್ಲ, ಒಂದು ಸಮಸ್ಯೆಯನ್ನು ಪ್ರಕಾಶಕರು ಅನುಭವಿಸುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಾಣಿಜ್ಯ ಮಳಿಗೆಯಲ್ಲಿ ಸಿಕ್ಕಿಕೊಂಡು ಸಮಸ್ಯೆ ಅನುಭವಿಸುತ್ತಿರುವ ಸಾಧನ ಪ್ರಕಾಶನದ ರವಿಚಂದ್ರ ರಾವ್ ಮಾತನಾಡಿ, “ಮಳಿಗೆಯೊಂದಕ್ಕೆ ಮೂರು ಸಾವಿರ ರೂಪಾಯಿಯನ್ನು ಕೊಡುತ್ತೇವೆ. ಪೋನ್ ಪೇ, ಗೂಗಲ್ ಪೇ ಮಾಡುವವರಿಗೆ ಇಂಟರ್ ನೆಟ್ ಸೌಲಭ್ಯವಿಲ್ಲ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ, ಮಳಿಗೆಗಳನ್ನು ರೂಪಿಸುತ್ತೀರಿ. ಸಾವಿರಾರು ಜನ ಸೇರುವ ಜಾಗದಲ್ಲಿ ನೆಟ್ ವರ್ಕ್ ಸಮಸ್ಯೆಯಾಗುತ್ತದೆ ಎಂಬ ಎಚ್ಚರಿಕೆ ಇರಬೇಕಿತ್ತಲ್ಲವೇ? ತಾತ್ಕಲಿಕವಾಗಿ ನೆಟ್ ವರ್ಕ್ ಸೌಲಭ್ಯ ಕಲ್ಪಿಸಬೇಕಿತ್ತು. ಕಸಾಪ ಅಧ್ಯಕ್ಷರಾದ ಜೋಶಿಯವರ ಮನೆಯಲ್ಲಿ ಏನಾದರೂ ಸಮಸ್ಯೆಯಾದರೆ, ತಕ್ಷಣಕ್ಕೆ ಕರೆ ಮಾಡಿ ಮಾತನಾಡಲು ಆಗದ ಪರಿಸ್ಥಿತಿ ಉಂಟಾಗಿದೆ’’ ಎಂದರು.

“ಇಲ್ಲಿ ವಾಣಿಜ್ಯ ಮಳಿಗೆ ಎಂದು ಬೋರ್ಡ್ ಹಾಕಿ ಪುಸ್ತಕ ಮಾರಾಟ ಮಾಡಲು ಅವಕಾಶ ನೀಡಿದ್ದಾರೆ. ಪುಸ್ತಕ ಮಳಿಗೆಗಳೆಲ್ಲ ಒಂದೇ ಕಡೆ ಇರಬೇಕು. ಇಲ್ಲಿಗೆ ಬರುವ ಗ್ರಾಹಕರು ಪುಸ್ತಕವನ್ನು ಖರೀದಿಸುವುದಕ್ಕಿಂತ ಬೇರೆ ವಸ್ತುಗಳ ಖರೀದಿಗೆ ಗಮನ ಕೊಡುತ್ತಾರೆ. ಪ್ರಕಾಶಕರನ್ನು ಕೆಳ ದರ್ಜೆಯಲ್ಲಿ ಕಸಾಪ ನೋಡುತ್ತಿದೆ. ಪ್ರಕಾಶಕರು, ಸಾಹಿತ್ಯ ಸಮ್ಮೇಳನ ಒಂದೇ ನಾಣ್ಯದ ಎರಡು ಮುಖಗಳು. ವೇದಿಕೆಗಳಲ್ಲಿ ನೀವಿದ್ದು, ನಿಮ್ಮ ಪ್ರಚಾರಕ್ಕೆ ಮಾತ್ರ  ಗಮನ ಕೊಡುತ್ತಿರುವುದಕ್ಕೆ ನಮ್ಮ ಧಿಕ್ಕಾರ’’ ಎಂದು ಕಿಡಿಕಾರಿದರು.

“ಮಹೇಶ ಜೋಶಿಯವರು ಯಾವುದೇ ಹೊಸ ನಿಯಮವನ್ನು ಜಾರಿಗೆ ತರುವಾಗ ಸೂಕ್ತ ಮಾಹಿತಿಯನ್ನು ನೀಡಬೇಕಿತ್ತು. ಪರಿಷತ್ ಸದಸ್ಯರಾಗಿದ್ದರಷ್ಟೇ ಪುಸ್ತಕ ಮಳಿಗೆ ಹಾಕಲು ಅವಕಾಶ ನೀಡುವುದಾಗಿ ನಿಯಮ ತಂದರು. ಆಪ್ ಮೂಲಕ ನೋಂದಣಿ ಮಾಡಿಕೊಳ್ಳಬೇಕಿತ್ತು. ಎಷ್ಟೋ ಮಂದಿ ಪ್ರಕಾಶಕರಿಗೆ ಮಾಹಿತಿ ಇರಲಿಲ್ಲ. ಹೊಸದಾಗಿ ತಯಾರಿ ಮಾಡಿರುವ ಆಪ್ ಸರಿಯಾಗಿ ಅಭಿವೃದ್ಧಿಪಡಿಸಲಾಗಿಲ್ಲ. ಬಹುತೇಕ ಮಾರಾಟಗಾರರು ಬಂದಿಲ್ಲ. ನಿಮಗೆ ವೇದಿಕೆ ಮತ್ತು ನಿಮ್ಮ ಹೆಸರು ಮುಖ್ಯವಷ್ಟೇ. ಜನಸಾಮಾನ್ಯರು ಮತ್ತು ಪುಸ್ತಕ ವ್ಯಾಪಾರಿಗಳು ಏನು ಮಾಡಬೇಕು?’’ ಎಂದು ಪ್ರಶ್ನಿಸಿದರು.

ಕನ್ನಡದ ಬಗ್ಗೆ ಆಸೆ, ಆಸಕ್ತರಾದವರು ಕಸಾಪ ಅಧ್ಯಕ್ಷರಾಗುವುದು ಮುಖ್ಯ. ಐಎಎಸ್, ಐಪಿಎಸ್ ಅಧಿಕಾರಿಗಳಲ್ಲ. ಕನ್ನಡ ಪುಸ್ತಕ ಮತ್ತು ಪ್ರಕಾಶನದ ಬಗ್ಗೆ ಆಸಕ್ತಿ ಇರುವವರು ಅಧ್ಯಕ್ಷರಾಗಬೇಕು. ಜೋಶಿಯವರು ಕನ್ನಡ, ಕನ್ನಡ ಎನ್ನುತ್ತಾರೆ. ಇಲ್ಲಿನ ಮಳಿಗೆಗಳಿಗೆ ಕ್ರಮಾಂಕ ಕೊಡುವಾಗ ಎ, ಬಿ, ಸಿ, ಡಿ ಅಂತ ನೀಡಿದ್ದಾರೆ. ಅದನ್ನೇ ಅ, ಆ, ಇ, ಈ ಅಂತ ಕೊಡಬಹುದಿತ್ತಲ್ಲ’’ ಎಂದು ಬೇಸರ ವ್ಯಕ್ತಪಡಿಸಿದರು.

ಮಳಿಗೆಗಳಲ್ಲಿ ಬಿದ್ದಿರುವ ಕಸದ ವಿಲೇವಾರಿಗೆ ಕ್ರಮ ಜರುಗಿಸಿಲ್ಲ. ಮಳಿಗೆಗಳ ಮುಂದೆ ಕಸವನ್ನು ಗುಡ್ಡೆ ಹಾಕಿಕೊಂಡ ಪುಸ್ತಕ ಪ್ರೇಮಿಗಳನ್ನು ಒಳಗೆ ಕರೆಯುವಂತಾಗಿದೆ. ಈ ಹಿಂದಿನ ಸಮ್ಮೇಳನಗಳಲ್ಲಿ ಕಸಾಪ ಪ್ರತಿನಿಧಿಗಳು ನಮ್ಮತ್ತ ಬಂದು, ನಮ್ಮ ಅಗತ್ಯತೆಗಳ ಕುರಿತು ಕನಿಷ್ಠ ವಿಚಾರಿಸಿಕೊಳ್ಳುತ್ತಿದ್ದರು ಎಂದು ಪ್ರಕಾಶಕರೊಬ್ಬರು ತಿಳಿಸಿದರು.

ಮೊದಲೆಲ್ಲ ಪುಸ್ತಕ ಮಾರಾಟಗಾರರು ಜಿಲ್ಲಾ ಕಸಾಪ ಕಚೇರಿಯಲ್ಲಿ ನೊಂದಣಿ ಮಾಡಿಕೊಂಡಿದ್ದರೆ ಮುಗಿಯುತ್ತಿತ್ತು. ಆಪ್ ಮೂಲಕ ನೊಂದಣಿ ಎಂಬ ನಿಯಮ ತಂದು ಸಮ್ಮೇಳನ ಆರಂಭದಿಂದಲೇ ಪುಸ್ತಕ ಮಾರಾಟಗಾರರ ಮೇಲೆ ಪ್ರಹಾರ ಮಾಡಲಾಯಿತು. ಈಗ ಸಮ್ಮೇಳನದ ಸಮಯದಲ್ಲೂ ಕಸಾಪ ಪ್ರತಿನಿಧಿಗಳು ಪುಸ್ತಕ ಮಳಿಗೆಗಳತ್ತ ಸುಳಿಯದೆ ಮತ್ತದೇ ಧೋರಣೆ ಮುಂದುವರಿಸಿದ್ದಾರೆ ಎಂದು ಮಾರಾಟಗಾರರು ವಿಷಾಧಿಸಿದರು.

ಮತ್ತೊಬ್ಬ ಪ್ರಕಾಶಕರು ಪ್ರತಿಕ್ರಿಯಿಸಿ, “ಅಕ್ಷರ ಜಾತ್ರೆಗೆ ಜನಸಾಗರ ಹರಿದುಬರುತ್ತಿದೆ. ಧೂಳು ಎದ್ದೇಳದಂತೆ ಹಸಿರು ಕಾರ್ಪೇಟ್ ಹಾಸಿರುವುದರಿಂದ ಧೂಳಿನ ಸಮಸ್ಯೆ ತಲೆದೋರಿಲ್ಲದಿರುವುದು ಖುಷಿಯ ಸಂಗತಿ. ವಿಚಾರ ಸಾಹಿತ್ಯ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತ್ಯ ಕೃತಿಗಳಿಗೆ ಹೆಚ್ಚಿನ ಬೇಡಿಕೆ ಇದೆ. ಹಾವೇರಿ ಸಮ್ಮೇಳನ ಸ್ವಲ್ಪಮಟ್ಟಿಗೆ ಲಾಭವನ್ನು ಮಾಡಿಕೊಟ್ಟಿದೆ’’ ಎಂದರು.

ಇದನ್ನೂ ಓದಿ; ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...