Homeಕರ್ನಾಟಕಹಾವೇರಿ: ಅನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ತಿರುವು; ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಆರೋಪ

ಹಾವೇರಿ: ಅನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ತಿರುವು; ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಆರೋಪ

- Advertisement -
- Advertisement -

ಹಾವೇರಿ ಜಿಲ್ಲೆ ಹಾನಗಲ್‌ ಪಟ್ಟಣದಲ್ಲಿ ನಡೆದಿದ್ದ ಅನೈತಿಕ ಪೊಲೀಸ್‌ಗಿರಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಸಂತ್ರಸ್ತ ಮಹಿಳೆಯನ್ನು ಅಪಹರಿಸಿ ಏಳು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಅನ್ಯಕೋಮಿನ ಪುರುಷನೊಂದಿಗೆ ಲಾಡ್ಜ್‌ನಲ್ಲಿದ್ದ ವಿವಾಹಿತ ಮಹಿಳೆಗೆ ಥಳಿಸಿ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

ಲಾಡ್ಜ್‌ನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿರುವ ದೃಶ್ಯ

ಹೋಟೆಲ್​ನಲ್ಲಿ ಹಲ್ಲೆ ಮಾಡಿದ ಬಳಿಕ ಅರಣ್ಯ ಪ್ರದೇಶಕ್ಕೆ ಕಾರಿನಲ್ಲಿ ಕರೆದೊಯ್ದು 7 ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಆಕೆ, “ಒಬ್ಬರಾದ ಮೇಲೆ ಒಬ್ಬರು ನನ್ನನ್ನು ಅತ್ಯಾಚಾರ ಮಾಡಿದ್ದಾರೆ. ಮಾರಣಾಂತಿಕವಾಗಿ ಹಲ್ಲೆ ಕೂಡ ನಡೆಸಿದ್ದಾರೆ” ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

“ಆರೋಪಿಗಳು ನನ್ನ ಪತ್ನಿಯನ್ನು ಅರಣ್ಯಕ್ಕೆ ಕರೆದೊಯ್ದು ಅತ್ಯಾಚಾರಗೈದು, ಹಿಂಸೆ ನೀಡಿದ್ದಾರೆ. ಅವರು ಎಲ್ಲವನ್ನೂ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಗೊತ್ತಾಗಿದೆ” ಎಂದು ಮಹಿಳೆಯ ಪತಿ ಹೇಳಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಅತ್ಯಾಚಾರದ ಬಗ್ಗೆ ಉಲ್ಲೇಖಿಸಿಲ್ಲ ಎಸ್ಪಿ: 

ಸಂತ್ರಸ್ಥ ಮಹಿಳೆ ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಹೇಳಿಕೆ ನೀಡಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಹಾವೇರಿ ಜಿಲ್ಲಾ ಎಸ್ಪಿ ಅಂಶು ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಿನ್ನೆ ಸಂತ್ರಸ್ತೆಯ 161 ಹೇಳಿಕೆ ಪಡೆಯಲಾಗಿದೆ. ಅದರಲ್ಲಿ ಎಲ್ಲಿಯೂ ಸಾಮೂಹಿಕ ಅತ್ಯಾಚಾರದ ಬಗ್ಗೆ ಆಕೆ ಉಲ್ಲೇಖಿಸಿಲ್ಲ ಎಂದು ಹೇಳಿದ್ದಾರೆ.

ಲಿಖಿತ ಹೇಳಿಕೆ ಕೂಡ ಪಡೆಯಲಾಗಿದೆ. ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ನಿನ್ನೆಯವರೆಗೂ ಅತ್ಯಾಚಾರ ಆಗಿದೆ ಎಂದು ಆರೋಪ ಮಾಡಿಲ್ಲ, ಹೇಳಿಕೆಯಲ್ಲಿ ತಿಳಿಸಿಲ್ಲ. ಮ್ಯಾಜಿಸ್ಟ್ರೇಟ್ ಮುಂದೆ ಇಂದು 164 ಹೇಳಿಕೆಗಳನ್ನು​ ಸಲ್ಲಿಸಲಾಗುತ್ತದೆ. ಮ್ಯಾಜಿಸ್ಟ್ರೇಟ್ ಮುಂದೆ ಏನು ಹೇಳ್ತಾರೆ ಅದರ ಮೇಲೆ ತನಿಖೆ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ.

ಬೊಮ್ಮಾಯಿ ಖಂಡನೆ: 

ಘಟನೆಯನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ವಸತಿ ಗೃಹನಲ್ಲಿದ್ದ ಜೋಡಿಯ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್ ಗಿರಿ ನಡೆಸಿರುವುದು ಖಂಡನೀಯ. ಅಮಾಯಕರ ಮೇಲೆ ನೈತಿಕ ಪೋಲಿಸ್ ಗಿರಿ ನಡೆಸಿರುವ ಎಲ್ಲ ಗೂಂಡಾಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಯುವತಿಯ ಮೇಲೆ ಹಲ್ಲೆ ನಡೆಸಿ, ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ತೆರಳಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪವೂ ಕೇಳಿ ಬರುತ್ತಿದೆ. ಈ ರೀತಿ ಮಹಿಳೆಯ ಮೇಲೆ ದೌರ್ಜನ್ಯ ನಡೆಸಿ ಪುಂಡರು ರಾಜಾರೋಷವಾಗಿ ನೈತಿಕ ಪೊಲೀಸ್ ಗಿರಿ ಮಾಡಲು ಬಿಟ್ಟಿರುವುದನ್ನು ನೋಡಿದರೆ, ರಾಜ್ಯದಲ್ಲಿ ಸರ್ಕಾರ ಜೀವಂತ ಇದೀಯಾ ಇಲ್ಲವೋ ಎನ್ನುವಂತಾಗಿದೆ” ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ:

ಜನವರಿ 8ರಂದು ಸೋಮವಾರ ಅನ್ಯಕೋಮಿನ ಇಬ್ಬರು ವಿವಾಹಿತರು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಕ್ಲಕ್ರಾಸ್ ಬಳಿ ಇರುವ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದರು. ಈ ವೇಳೆ ಕೆಲ ಯುವಕರು ಏಕಾಏಕಿ ಹೋಟೆಲ್ ಗೆ ನುಗ್ಗಿ ದಾಂಧಲೆ ಮಾಡಿ ಮಹಿಳೆ ಮತ್ತು ಪುರುಷನ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೇ ಹಲ್ಲೆ ಮಾಡುವಾಗ ವಿಡಿಯೋ ಮಾಡಿಕೊಂಡಿದ್ದರು. ಘಟನೆಗೆ ಸಂಬಂಧಿಸಿದ್ದು ಎನ್ನಲಾದ 2 ವಿಡಿಯೋಗಳು ವೈರಲ್ ಆಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...