Homeಕರ್ನಾಟಕಹಾವೇರಿ: ಅನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ತಿರುವು; ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಆರೋಪ

ಹಾವೇರಿ: ಅನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ತಿರುವು; ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಆರೋಪ

- Advertisement -
- Advertisement -

ಹಾವೇರಿ ಜಿಲ್ಲೆ ಹಾನಗಲ್‌ ಪಟ್ಟಣದಲ್ಲಿ ನಡೆದಿದ್ದ ಅನೈತಿಕ ಪೊಲೀಸ್‌ಗಿರಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಸಂತ್ರಸ್ತ ಮಹಿಳೆಯನ್ನು ಅಪಹರಿಸಿ ಏಳು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಅನ್ಯಕೋಮಿನ ಪುರುಷನೊಂದಿಗೆ ಲಾಡ್ಜ್‌ನಲ್ಲಿದ್ದ ವಿವಾಹಿತ ಮಹಿಳೆಗೆ ಥಳಿಸಿ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

ಲಾಡ್ಜ್‌ನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿರುವ ದೃಶ್ಯ

ಹೋಟೆಲ್​ನಲ್ಲಿ ಹಲ್ಲೆ ಮಾಡಿದ ಬಳಿಕ ಅರಣ್ಯ ಪ್ರದೇಶಕ್ಕೆ ಕಾರಿನಲ್ಲಿ ಕರೆದೊಯ್ದು 7 ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಆಕೆ, “ಒಬ್ಬರಾದ ಮೇಲೆ ಒಬ್ಬರು ನನ್ನನ್ನು ಅತ್ಯಾಚಾರ ಮಾಡಿದ್ದಾರೆ. ಮಾರಣಾಂತಿಕವಾಗಿ ಹಲ್ಲೆ ಕೂಡ ನಡೆಸಿದ್ದಾರೆ” ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

“ಆರೋಪಿಗಳು ನನ್ನ ಪತ್ನಿಯನ್ನು ಅರಣ್ಯಕ್ಕೆ ಕರೆದೊಯ್ದು ಅತ್ಯಾಚಾರಗೈದು, ಹಿಂಸೆ ನೀಡಿದ್ದಾರೆ. ಅವರು ಎಲ್ಲವನ್ನೂ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಗೊತ್ತಾಗಿದೆ” ಎಂದು ಮಹಿಳೆಯ ಪತಿ ಹೇಳಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಅತ್ಯಾಚಾರದ ಬಗ್ಗೆ ಉಲ್ಲೇಖಿಸಿಲ್ಲ ಎಸ್ಪಿ: 

ಸಂತ್ರಸ್ಥ ಮಹಿಳೆ ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಹೇಳಿಕೆ ನೀಡಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಹಾವೇರಿ ಜಿಲ್ಲಾ ಎಸ್ಪಿ ಅಂಶು ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಿನ್ನೆ ಸಂತ್ರಸ್ತೆಯ 161 ಹೇಳಿಕೆ ಪಡೆಯಲಾಗಿದೆ. ಅದರಲ್ಲಿ ಎಲ್ಲಿಯೂ ಸಾಮೂಹಿಕ ಅತ್ಯಾಚಾರದ ಬಗ್ಗೆ ಆಕೆ ಉಲ್ಲೇಖಿಸಿಲ್ಲ ಎಂದು ಹೇಳಿದ್ದಾರೆ.

ಲಿಖಿತ ಹೇಳಿಕೆ ಕೂಡ ಪಡೆಯಲಾಗಿದೆ. ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ನಿನ್ನೆಯವರೆಗೂ ಅತ್ಯಾಚಾರ ಆಗಿದೆ ಎಂದು ಆರೋಪ ಮಾಡಿಲ್ಲ, ಹೇಳಿಕೆಯಲ್ಲಿ ತಿಳಿಸಿಲ್ಲ. ಮ್ಯಾಜಿಸ್ಟ್ರೇಟ್ ಮುಂದೆ ಇಂದು 164 ಹೇಳಿಕೆಗಳನ್ನು​ ಸಲ್ಲಿಸಲಾಗುತ್ತದೆ. ಮ್ಯಾಜಿಸ್ಟ್ರೇಟ್ ಮುಂದೆ ಏನು ಹೇಳ್ತಾರೆ ಅದರ ಮೇಲೆ ತನಿಖೆ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ.

ಬೊಮ್ಮಾಯಿ ಖಂಡನೆ: 

ಘಟನೆಯನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ವಸತಿ ಗೃಹನಲ್ಲಿದ್ದ ಜೋಡಿಯ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್ ಗಿರಿ ನಡೆಸಿರುವುದು ಖಂಡನೀಯ. ಅಮಾಯಕರ ಮೇಲೆ ನೈತಿಕ ಪೋಲಿಸ್ ಗಿರಿ ನಡೆಸಿರುವ ಎಲ್ಲ ಗೂಂಡಾಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಯುವತಿಯ ಮೇಲೆ ಹಲ್ಲೆ ನಡೆಸಿ, ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ತೆರಳಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪವೂ ಕೇಳಿ ಬರುತ್ತಿದೆ. ಈ ರೀತಿ ಮಹಿಳೆಯ ಮೇಲೆ ದೌರ್ಜನ್ಯ ನಡೆಸಿ ಪುಂಡರು ರಾಜಾರೋಷವಾಗಿ ನೈತಿಕ ಪೊಲೀಸ್ ಗಿರಿ ಮಾಡಲು ಬಿಟ್ಟಿರುವುದನ್ನು ನೋಡಿದರೆ, ರಾಜ್ಯದಲ್ಲಿ ಸರ್ಕಾರ ಜೀವಂತ ಇದೀಯಾ ಇಲ್ಲವೋ ಎನ್ನುವಂತಾಗಿದೆ” ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ:

ಜನವರಿ 8ರಂದು ಸೋಮವಾರ ಅನ್ಯಕೋಮಿನ ಇಬ್ಬರು ವಿವಾಹಿತರು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಕ್ಲಕ್ರಾಸ್ ಬಳಿ ಇರುವ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದರು. ಈ ವೇಳೆ ಕೆಲ ಯುವಕರು ಏಕಾಏಕಿ ಹೋಟೆಲ್ ಗೆ ನುಗ್ಗಿ ದಾಂಧಲೆ ಮಾಡಿ ಮಹಿಳೆ ಮತ್ತು ಪುರುಷನ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೇ ಹಲ್ಲೆ ಮಾಡುವಾಗ ವಿಡಿಯೋ ಮಾಡಿಕೊಂಡಿದ್ದರು. ಘಟನೆಗೆ ಸಂಬಂಧಿಸಿದ್ದು ಎನ್ನಲಾದ 2 ವಿಡಿಯೋಗಳು ವೈರಲ್ ಆಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...