Homeಕರ್ನಾಟಕಹಾವೇರಿ | ನರ್ಸ್ ಸ್ವಾತಿ ಬ್ಯಾಡಗಿ ಕೊಲೆ ಪ್ರಕರಣ ; ಆರೋಪಿ ಬಂಧನ

ಹಾವೇರಿ | ನರ್ಸ್ ಸ್ವಾತಿ ಬ್ಯಾಡಗಿ ಕೊಲೆ ಪ್ರಕರಣ ; ಆರೋಪಿ ಬಂಧನ

- Advertisement -
- Advertisement -

ಹಾವೇರಿ : ರಾಣೆಬೆನ್ನೂರು ತಾಲೂಕಿನ ಪತ್ತೇಪುರ ಬಳಿ ತುಂಗಾಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದ ನರ್ಸ್‌ (ಶುಶ್ರೂಷಕಿ) ಸ್ವಾತಿ ಬ್ಯಾಡಗಿ (22) ಕೊಲೆ ಪ್ರಕರಣ ಬೇಧಿಸಿರುವ ಪೊಲೀಸರು, ನಯಾಝ್ ಇಮಾಮ್‌ಸಾಬ್ ಬೆಣ್ಣಿಗೇರಿ (28) ಎಂಬ ಆರೋಪಿಯನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಕೃತ್ಯಕ್ಕೆ ಸಹಕರಿಸಿದ್ದಾರೆ ಎನ್ನಲಾದ ನಯಾಝ್‌ನ ಸ್ನೇಹಿತರಾದ ಮಾಸೂರಿನ ದುರ್ಗಾಚಾರಿ ಬಡಿಗೇರ ಮತ್ತು ವಿನಾಯಕ ಪೂಜಾರ ತಲೆಮರೆಸಿಕೊಂಡಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಇನ್ನೂ ಕೆಲ ವರದಿಗಳು ಇವರನ್ನೂ ಶುಕ್ರವಾರ (ಮಾ.14) ಬಂಧಿಸಲಾಗಿದೆ ಎಂದಿವೆ. ಪೊಲೀಸರು ಬಂಧನದ ಬಗ್ಗೆ ಇನ್ನೂ ಖಚಿತಪಡಿಸಿಲ್ಲ.

ಪ್ರಕರಣದ ಹಿನ್ನೆಲೆ : ರಟ್ಟೀಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ, ರಾಣೆಬೆನ್ನೂರಿನ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿದ್ದರು. ಮಾರ್ಚ್ 6ರಂದು ಅವರ ಮೃತದೇಹ ನದಿಯಲ್ಲಿ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಸ್ವಾತಿ ಅವರನ್ನು ಕೊಲೆ ಮಾಡಿ ನದಿಗೆಸೆದಿರುವ ವಿಚಾರ ಬಯಲಾಗಿತ್ತು.

ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗೆ, ಹಿರೇಕೆರೂರು ತಾಲೂಕು ಹಳೇ ವೀರಾಪುರದ ನಯಾಝ್, ತನ್ನ ಇಬ್ಬರು ಸ್ನೇಹಿತರಾದ ದುರ್ಗಾಚಾರಿ ಮತ್ತು ವಿನಾಯಕನ ಜೊತೆಗೂಡಿ ಸ್ವಾತಿ ಅವರನ್ನು ಕೊಲೆ ಮಾಡಿರುವುದು ಗೊತ್ತಾಗಿದೆ ಎಂದು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ತಿಳಿಸಿದ್ದಾರೆ.

ಮದುವೆಗೆ ಒತ್ತಾಯಿಸಿದ್ದಕ್ಕೆ ಕೊಲೆ 

ಹೋರಿ ಹಬ್ಬದ ಸಂದರ್ಭದಲ್ಲಿ ಸ್ವಾತಿ ಅವರಿಗೆ ನಯಾಝ್, ದುರ್ಗಾಚಾರಿ ಮತ್ತು ವಿನಾಯಕ ಅವರ ಪರಿಚಯ ಆಗಿತ್ತು. ಸ್ವಾತಿ ಮತ್ತು ನಯಾಝ್ ನಡುವಿನ ಸ್ನೇಹ ಸಲುಗೆಗೆ ತಿರುಗಿತ್ತು. ಸ್ವಾತಿ ತನ್ನನ್ನು ಮದುವೆಯಾಗುವಂತೆ ನಯಾಝ್‌ಗೆ ಒತ್ತಾಯಿಸುತ್ತಿದ್ದರು. ಆದರೆ, ನಯಾಝ್ ಒಪ್ಪಿರಲಿಲ್ಲ ಎನ್ನಲಾಗಿದೆ.

ನಯಾಝ್‌ಗೆ ಬೇರೊಂದು ಹುಡುಗಿ ಜೊತೆ ಮದುವೆ ನಿಶ್ಚಯವಾಗಿತ್ತು. ಈ ವಿಷಯ ತಿಳಿದು ಸ್ವಾತಿ ನಯಾಝ್ ಮನೆ ಬಳಿ ತೆರಳಿ ಗಲಾಟೆ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ನಯಾಝ್ ಸ್ವಾತಿಯ ಕೊಲೆಗೆ ಸಂಚು ರೂಪಿಸಿದ್ದ ಎಂದು ವರದಿಯಾಗಿದೆ.

ಪಾಳುಬಿದ್ದ ಶಾಲೆಯಲ್ಲಿ ಕೊಲೆ

ಮಾರ್ಚ್‌ 3ರಂದು ಮಾತುಕತೆ ನೆಪದಲ್ಲಿ ಸ್ವಾತಿ ಅವರನ್ನು ರಟ್ಟೀಹಳ್ಳಿಗೆ ಕರೆಸಿಕೊಂಡಿದ್ದ ನಯಾಝ್, ಬಾಡಿಗೆ ಕಾರಿನಲ್ಲಿ ರಾಣೆಬೆನ್ನೂರಿನಲ್ಲಿರುವ ಸುವರ್ಣ ಉದ್ಯಾನವನಕ್ಕೆ ಕರೆದೊಯ್ದಿದ್ದ. ಅದೇ ಉದ್ಯಾನವನಕ್ಕೆ ದುರ್ಗಾಚಾರಿ ಹಾಗೂ ವಿನಾಯಕ ಬಂದಿದ್ದರು. ನಂತರ ನಾಲ್ವರು ರಟ್ಟೀಹಳ್ಳಿಯ ಕಬ್ಬಿಣಕಂತಿ ಮಠ ಬಳಿಯ ಪಾಲು ಬಿದ್ದ ತರಳುಬಾಳು ಶಾಲೆಗೆ ಹೋಗಿದ್ದರು. ಅಲ್ಲಿ ನಯಾಝ್ ಸ್ವಾತಿ ನಡುವೆ ಜಗಳ ತಾರಕಕ್ಕೇರಿದೆ. ಈ ವೇಳೆ ಮೂವರು ಆರೋಪಿಗಳು ಸೇರಿ ಸ್ವಾತಿ ಮೇಲೆ ಹಲ್ಲೆ ಮಾಡಿ, ಕುತ್ತಿಗೆಗೆ ಟವಲ್‌ನಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಬಳಿಕ ಶವವನ್ನು ಕಾರಿನ ಡಿಕ್ಕಿಯಲ್ಲಿ ಹಾಕಿಕೊಂಡು ಕೂಸಗಟ್ಟಿ ನಂದಿಗುಡಿ ಗ್ರಾಮದ ಬಳಿ ತುಂಗಾಭದ್ರಾ ನದಿಗೆ ಎಸೆದಿದ್ದರು. ಆ ಶವ ತೇಲಿಕೊಂಡು ಹೋಗಿ ಮಾರ್ಚ್‌ 6ರಂದು ಪತ್ತೇಪುರ ಬಳಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಕೋಮು ಬಣ್ಣ 

ಸ್ವಾತಿ ಕೊಲೆ ಪ್ರಕರಣದಲ್ಲಿ ನಯಾಝ್ ಬಂಧನವಾಗುತ್ತಿದ್ದಂತೆ ಪ್ರಕರಣಕ್ಕೆ ಕೆಲವರು ಕೋಮು ಬಣ್ಣ ಬಳಿಯಲು ಯತ್ನಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಂತೆ ಇದೂ ‘ಲವ್‌ ಜಿಹಾದ್’ ಕೊಲೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ #justiceforswati ಎಂಬ ಹ್ಯಾಷ್‌ಟ್ಯಾಗ್‌ನಲ್ಲಿ ಅಭಿಯಾನ ಆರಂಭಿಸಿದ್ದಾರೆ. ಆದರೆ, ಈ ಪ್ರಕರಣದ ಇಬ್ಬರು ಆರೋಪಿಗಳು ಹಿಂದೂಗಳೇ ಆಗಿದ್ದಾರೆ.

‘ಲವ್‌ ಜಿಹಾದ್’ ಕಥೆ ಕಟ್ಟಿದ ಬೊಮ್ಮಾಯಿ 

ಸ್ವಾತಿ ಕೊಲೆ ಪ್ರಕರಣದಲ್ಲಿ ನಯಾಝ್ ಬಂಧನವಾಗಿದೆ ಎಂಬ ವರದಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ, ಹಾಲಿ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಪ್ರಕರಣಕ್ಕೆ ಸಂಘಪರಿವಾರ ಕಲ್ಪಿತ ‘ಲವ್‌ ಜಿಹಾದ್’ ಕಥೆ ಕಟ್ಟಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಹಾಕಿರುವ ಅವರು, “ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು, ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ ಆಘಾತಕಾರಿ. ಹುಬ್ಬಳ್ಳಿಯಲ್ಲಿ ಕಾಲೇಜು ಯುವತಿ ನೇಹಾ ಹಿರೇಮಠ ಅವಳ ಬರ್ಬರ ಕೊಲೆಯ ನೋವು ಮಾಸುವ ಮುನ್ನ ಈಗ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಎನ್ನುವ ಯುವತಿಯ ಕೊಲೆಯಾಗಿದ್ದು, ಇದೂ ಕೂಡ ಲವ್ ಜಿಹಾದ್ ಎನ್ನುವ ಮಾತುಗಳು ಕೇಳಿ ಬರುತ್ತಿವೆ.”

“ಈ ಘಟನೆ ನಡೆದು ಒಂದು ವಾರ ಕಳೆದರೂ ಈ ಪ್ರಕರಣದಲ್ಲಿ ಬಂಧಿತನಾಗಿರುವ ನಯಾಜ್ ಎನ್ನುವ ಪ್ರಮುಖ ಆರೋಪಿಯ ರಕ್ಷಣೆಗೆ ದೊಡ್ಡ ಮಟ್ಟದ ಕಸರತ್ತು ನಡೆದಂತೆ ಕಾಣಿಸುತ್ತದೆ. ಸ್ವಾತಿಯನ್ನು ಪ್ರೀತಿಸುವ ನಾಟಕವಾಡಿ ಅನ್ಯ ಧರ್ಮದವಳೆಂದು ತಿರಸ್ಕರಿಸಿ ತನ್ನ ಧರ್ಮದ ಬೇರೆ ಯುವತಿಯ ಜೊತೆ ಮದುವೆ ಮಾಡಿಕೊಳ್ಳಲು ತೀರ್ಮಾನಿಸಿದ್ದನ್ನು ಪ್ರಶ್ನಿಸಿರುವುದಕ್ಕೆ ಸ್ವಾತಿಯ ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ಇದೆ.”

“ಇತ್ತೀಚಿನ ದಿನಗಳಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್ ಜಿಹಾದ್ ಜಾಲ ರಾಜ್ಯದಲ್ಲಿ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ಕೃತ್ಯ ನಡೆಸುವವರಿಗೆ ಪೊಲೀಸರ ಭಯ ಇಲ್ಲದಿರುವುದು ಇಂತಹ ಪ್ರಕರಣ ಹೆಚ್ಚಾಗಲು ಕಾರಣ. ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೇ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡುವುದರಿಂದ ಮಾತ್ರ ಇಂತಹ ಪ್ರಕರಣಗಳಿಗೆ ತಡೆ ಒಡ್ಡಬಹುದಾಗಿದೆ. ಇದರ ಬಗ್ಗೆ ಪೊಲೀಸರು ನಿಷ್ಠುರವಾಗಿ ಅಪರಾಧಿಗಳನ್ನು ಹಿಡಿದು ಅದರ ಹಿಂದೆ ಇರುವ ಶಕ್ತಿಗಳನ್ನು ಕಡಿವಾಣ ಹಾಕುವುದು ಅತ್ಯಂತ ಅವಶ್ಯ. ಆದರೆ, ಇಂತಹ ಪ್ರಕರಣಗಳು ಕೆಲವೇ ದಿನಗಳಲ್ಲಿ ಅಧಿಕಾರಿಗಳು ಗಾಂಭಿರ್ಯತೆಯಿಂದ ತೆಗೆದುಕೊಳ್ಳದೇ ಮರೆತು ಹೋಗುವುದು ಅತ್ಯಂತ ಖಂಡನೀಯ ಹೆಣ್ಣು ಮಕ್ಕಳ ಕುಟುಂಬ, ಬಂಧುಗಳು ಮತ್ತು ಸಮಾಜ ಅತ್ಯಂತ ನೋವು ಪಡುವ ಈ ಘಟನೆಯಲ್ಲಿ ಮೃತ ಕುಟುಂಬಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಮತ್ತು ನ್ಯಾಯ ದೊರಕಿಸಿ ಕೊಡಬೇಕು ಎಂದು ಆಗ್ರಹಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಬೊಮ್ಮಾಯಿ ಪೋಸ್ಟ್‌ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕೆಲವರು ಪೋಸ್ಟ್ ಕೆಳಗೆ ಕಾಮೆಂಟ್ ಮಾಡಿ ಛೀಮಾರಿ ಹಾಕಿದ್ದಾರೆ.

ಬಾಗಲಕೋಟೆ | ಸಮವಸ್ತ್ರದಲ್ಲೇ ಸ್ವಾಮಿ ಕಾಲಿಗೆ ಬಿದ್ದ 6 ಪೊಲೀಸರ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...