Homeದಲಿತ್ ಫೈಲ್ಸ್ಹಾವೇರಿ: ಪೊಲೀಸ್ ರೈಡ್‌ ಬಳಿಕ ಪರದಾಡುತ್ತಿದೆ ‘ಸಿಂಧೋಳ ಅಲೆಮಾರಿ ಸಮುದಾಯ’

ಹಾವೇರಿ: ಪೊಲೀಸ್ ರೈಡ್‌ ಬಳಿಕ ಪರದಾಡುತ್ತಿದೆ ‘ಸಿಂಧೋಳ ಅಲೆಮಾರಿ ಸಮುದಾಯ’

ಮೈಗೆ ಚಾಟಿಯೇಟು ಹೊಡೆದುಕೊಳ್ಳುತ್ತಾ, ದೇಹವನ್ನು ಘಾಸಿಗೊಳಿಸಿಕೊಂಡು ಭಿಕ್ಷಾಟನೆ ಮಾಡುವ ಅಲೆಮಾರಿ ಸಮುದಾಯ ‘ಸಿಂಧೋಳ’.

- Advertisement -
- Advertisement -

ಮಾರಿ ದೇವತೆಯನ್ನು ತಲೆಯ ಹೊತ್ತು, ಬೀದಿಬೀದಿಯಲ್ಲಿ ಸಾಗುತ್ತಾ, ಅರೆ ಬಾರಿಸುತ್ತಾ, ಮೈಗೆ ಚಾಟಿಯೇಟು ಹೊಡೆದುಕೊಳ್ಳುತ್ತಾ, ದೇಹವನ್ನು ಘಾಸಿಗೊಳಿಸಿಕೊಂಡು ಭಿಕ್ಷಾಟನೆ ಮಾಡುವ ಅಲೆಮಾರಿ ಸಮುದಾಯ ‘ಸಿಂಧೋಳ’.

ರಾಜ್ಯದಲ್ಲಿ ಈ ಜನಾಂಗದವರು ಹೆಚ್ಚು ಸಂಖ್ಯೆಯಲ್ಲೇನೂ ಇಲ್ಲ. ಅಲ್ಲಲ್ಲಿ ಬಿಡಾರಗಳನ್ನು ಹಾಕಿಕೊಂಡು ಹೊಟ್ಟೆಪಾಡು ಮಾಡುತ್ತಾರೆ. ಇತ್ತೀಚಿನ ವರ್ಷಗಳಲ್ಲಿ ಕೃಷಿ ಕೂಲಿಕಾರರಾಗಿಯೂ ದುಡಿಯುತ್ತಿದ್ದಾರೆ. ಬೇಟೆಯಾಡಿ ಬದುಕುವುದಕ್ಕೆ ಅರಣ್ಯ ಇಲಾಖೆಯವರು ಬಿಡದೇ ಇರುವುದರಿಂದ ಆಹಾರ ಅಭ್ರತೆಯನ್ನೂ ಎದರಿಸುತ್ತಿದ್ದಾರೆ. ಸ್ವಂತ ಮನೆಗಳಿಲ್ಲ, ಜಮೀನಿಲ್ಲ, ಸರ್ಕಾರ ಉದ್ಯೋಗ ಪಡೆದವರ ದಾಖಲೆಯೂ ಇಲ್ಲ. ಇಂತಹ ಸಮುದಾಯಗಳನ್ನು ಅಧಿಕಾರ ವರ್ಗ ಅಷ್ಟಾಗಿ ಗಮನಿಸುವುದೂ ಇಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಸಿಂಧೋಳ ಜನಾಂಗದ ಸುಮಾರು 40 ಕುಟುಂಬಗಳು ಹಲವು ವರ್ಷಗಳಿಂದ ಕೃಷಿ ಇಲಾಖೆಯ ಜಮೀನಿನಲ್ಲಿ ಟೆಂಟ್ ಹಾಕಿಕೊಂಡು ವಾಸವಿದ್ದವು. ಈ ಜಾಗದಲ್ಲಿ ಕೋಲ್ಡ್‌ ಸ್ಟೋರೇಜ್‌ ನಿರ್ಮಿಸಲು ಇಲಾಖೆ ಮುಂದಾಯಿತು. ಜಾಗ ಖಾಲಿ ಮಾಡುವಂತೆ ಸಿಂಧೋಳರಿಗೆ ಮೂರ್ನಾಲ್ಕು ಭಾರಿ ಸೂಚನೆಯನ್ನೂ ನೀಡಿತು. ಆದರೆ ಹೋಗುವುದೆಲ್ಲಿಗೆ?

ಇದನ್ನೂ ಓದಿರಿ: ರಾಜಸ್ಥಾನ: ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಯುವಕನ ಮೇಲೆ ಅಮಾನುಷ ಹಲ್ಲೆ

ಜಾಗ ಖಾಲಿ ಮಾಡಿಸಲು ಹೀಗೆ ಸೂಚನೆ ನೀಡುತ್ತಿದ್ದಾರೆಂದು ಭಾವಿಸಿದ ಸಿಂಧೋಳರು ಅಲ್ಲಿಯೇ ಉಳಿದರು. ಆದರೆ ಕಳೆದ ಜೂನ್‌ 18ರಂದು ಪೊಲೀಸರೊಂದಿಗೆ ಬಂದ ಕೃಷಿ ಅಧಿಕಾರಿಗಳು ಅಲೆಮಾರಿಗಳ ಗುಡಿಸಲುಗಳನ್ನು ಕಿತ್ತೊಗೆದರು. ಕನಿಷ್ಠ ಮಾನವೀಯತೆಯನ್ನೂ ತೋರದೆ ಗುಡಿಸಲುಗಳನ್ನು ಕೆಡವಿದರು. ಇದರ ಜೊತೆಗೆ ಮಳೆಯೂ ಸುರಿಯುತ್ತಿತ್ತು. “ಒಂದೆರಡು ದಿನ ಸಮಯ ಕೊಡಿ. ಬೇರೆಡೆ ತೆರಳುತ್ತೇವೆ” ಎಂದು ಅಲೆಮಾರಿಗಳು ಅಂಗಲಾಚಿದರು. ಆದರೆ ಅದಕ್ಕೆ ಪೊಲೀಸರು ಆಸ್ಪದ ನೀಡಲಿಲ್ಲ.

ಘಟನೆಯ ಕುರಿತು ‘ನಾನುಗೌರಿ.ಕಾಂ’ಗೆ ಮಾಹಿತಿ ನೀಡಿದ ಅಲೆಮಾರಿ ಬುಡಕಟ್ಟು ಮಹಾಸಭಾದ ವೀರೇಶ್, “ಇಲ್ಲಿನ ಸಿಂಧೋಳರಲ್ಲಿ ನಾಲ್ಕೈದು ಗರ್ಭಿಣಿಯರಿದ್ದು, ಹೆರಿಗೆಯ ದಿನಗಳನ್ನು ಎಣಿಸುತ್ತಿದ್ದಾರೆ. ವಯಸ್ಸಾದವರು, ಅಂಗವಿಕಲ ಮಕ್ಕಳೂ ಇದ್ದಾರೆ. ಪೊಲೀಸರು ರೈಡ್ ಮಾಡಿದಾಗ ಬಿಡಾರದ ವಸ್ತುಗಳು ಹಾನಿಗೊಳಗಾದ ಕಾರಣ ಮತ್ತೆ ಗುಡಿಸಲುಗಳನ್ನು ಕಟ್ಟಿಕೊಳ್ಳಲೂ ಆಗುತ್ತಿಲ್ಲ. ಜೇಬಿನಲ್ಲಿ ಹಣವೂ ಇಲ್ಲ. ಆಹಾರ ಧಾನ್ಯಗಳನ್ನು ಪೊಲೀಸರು ಮಳೆಗೆ ಬೀಸಾಡಿದ್ದರಿಂದ ಆಹಾರದ ಅಭಾವವೂ ಉಂಟಾಗಿದೆ. ಹಳ್ಳಿಗಳಿಗೆ ಹೋಗಿ ಭಿಕ್ಷಾಟನೆ ಮಾಡಲೂ ಸಾಧ್ಯವಾಗುತ್ತಿಲ್ಲ. ಅನೇಕರು ಉಪವಾಸವಿರುವುದಾಗಿ ಹೇಳಿದ್ದಾರೆ” ಎಂದು ಮಾಹಿತಿ ನೀಡಿದರು.

ಇಷ್ಟೆಲ್ಲ ಆದ ಮೇಲೆ ರಟ್ಟಿಹಳ್ಳಿ ತಾಲ್ಲೂಕು ಆಡಳಿತ ಕ್ರಮ ವಹಿಸಲು ಮುಂದಾಯಿತು. ಮೂರು ಕಿಮೀ ದೂರದಲ್ಲಿನ ಖಾಲಿ ಜಾಗದಲ್ಲಿ ತಂಗಲು ಸೂಚಿಸಿತು. ಆ ಜಾಗವಾದರೂ ತಗ್ಗು ಹಾಗೂ ಕಸದಿಂದ ಕೂಡಿದೆ. ಮಳೆ ಬಂದರೆ ಈ ಪ್ರದೇಶಕ್ಕೆ ನೀರು ನುಗ್ಗುತ್ತದೆ. ತಾತ್ಕಾಲಿಕವಾಗಿ ಪಕ್ಕದ ಬೋರ್‌ವೆಲ್‌ನಿಂದ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ವಿದ್ಯುತ್‌ ಸಂಪರ್ಕವನ್ನೇನೋ ಕಲ್ಪಿಸಿದ್ದಾರೆ.

“ಬೇರೆ ಕಡೆ ಜಾಗ ಮಾಡಿಕೊಡುತ್ತೇವೆ. ಪಟ್ಟಣ ಪಂಚಾಯಿತಿಯಲ್ಲಿ ಚುನಾಯಿತ ಸದಸ್ಯರಿಲ್ಲ. ಚುನಾಯಿತ ಸದಸ್ಯರು ಬಂದ ತಕ್ಷಣವೇ ಮೊದಲ ಅಜೆಂಡಾದಲ್ಲೇ ಸಿಂಧೋಳರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಇದೆಲ್ಲ ಸಾಧ್ಯವಾಗುವುದು ಯಾವಾಗ ಎಂಬ ಸ್ಪಷ್ಟತೆ ಇಲ್ಲ. ಸದ್ಯಕ್ಕೆ ಸಮುದಾಯ ಅತಂತ್ರವಾಗಿದೆ” ಎನ್ನುತ್ತಾರೆ ವೀರೇಶ್.

ಶಾಶ್ವತ ಪರಿಹಾರಕ್ಕೆ ಸಿಂಧೋಳರ ಮನವಿ

“ತಾತ್ಕಾಲಿಕ ನೀರಿನ ವ್ಯವಸ್ಥೆ ಹಾಗೂ ವಿದ್ಯುತ್ ವ್ಯವಸ್ಥೆ ಕಲ್ಪಿಸಿದ್ದಾರೆ. ಸದರಿ ಜಾಗದಲ್ಲಿ ಗುಡಿಸಲು ನಿರ್ಮಿಸುತ್ತಿದ್ದೇವೆ. ನಮಗೆ ಸ್ವಂತ ನಿವೇಶನಗಳಿಲ್ಲ, ಮನೆಗಳಿಲ್ಲ. ಜೀವನ ನಡೆಸುವುದು ಕಷ್ಟವಾಗಿದೆ. ಈಗ ನೀಡಿರುವ ಜಾಗವು ತಗ್ಗುಪ್ರದೇಶದಿಂದ ಕೂಡಿದೆ. ಮಳೆ ಬಂದರೆ ನೀರು ನುಗ್ಗುತ್ತದೆ. ಕಸದ ರಾಶಿ ಈ ಜಾಗದಲ್ಲಿದೆ. ಹೀಗಾಗಿ ಕಸವನ್ನು ತೆರವುಗೊಳಿಸಿ ತಗ್ಗು ಪ್ರದೇಶವನ್ನು ಸಮತಟ್ಟು ಮಾಡಬೇಕು. ಎಲ್ಲ ಕುಟುಂಬಗಳಿಗೆ ತಾತ್ಕಾಲಿಕ ಹಕ್ಕು ಪತ್ರ ನೀಡಬೇಕು. ವಸತಿ ಸೌಲಭ್ಯ ಕಲ್ಪಿಸಬೇಕು. ಶಾಶ್ವತ ವಿದ್ಯುತ್‌, ಕುಡಿಯುವ ನೀರು, ಗಟಾರ ಹಾಗೂ ಅಂಗನವಾಡಿ ವ್ಯವಸ್ಥೆ ಕಲ್ಪಿಸಬೇಕು”- ಇತ್ಯಾದಿ ಬೇಡಿಕೆಗಳನ್ನು ಸಿಂಧೋಳರು ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ.

ಇದನ್ನೂ ಓದಿರಿ: ವಿಚಾರಣೆಯಿಲ್ಲದೆ 2 ವರ್ಷ ಜೈಲಿನಲ್ಲೇ ಕಳೆದ ಬುಡಕಟ್ಟು ಯುವತಿ!

ಸಮುದಾಯದ ಬೇಡಿಕೆಯನ್ನು ಉಲ್ಲೇಖಿಸಿ ಹಿರೇಕೆರೂರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಹಬೂಬಸಾಬ್‌ ಪ. ನದಾಫ್‌ ಅವರು, ಇಲಾಖೆಯ ಉಪ ನಿರ್ದೇಶರಿಗೆ, ರಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಪತ್ರ ಬರೆದಿದ್ದಾರೆ. ಮೇಲಧಿಕಾರಿಗಳು ಹೆಚ್ಚಿನ ಕ್ರಮ ವಹಿಸುವ ತುರ್ತು ಎದುರಾಗಿದೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕನಾಥ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಸಿಂಧೋಳ ಜನರು ಅಸ್ಪೃಶ್ಯರಲ್ಲೇ ಅಸ್ಪೃಶ್ಯರು. ಕಟ್ಟಕಡೆಯ ಸಮುದಾಯ ಎಂದರೂ ತಪ್ಪಾಗದು. ಇಡೀ ಕರ್ನಾಟಕದಲ್ಲಿ ಸುಮಾರು 10ರಿಂದ 15 ಸಾವಿರ ಜನರು ಈ ಸಮುದಾಯದಲ್ಲಿರಬಹುದು. ಆದರೆ ಯಾವುದೇ ಸರ್ಕಾರವಿದ್ದಾಗಲೂ ಸಿಂಧೋಳರ ಅಭಿವೃದ್ಧಿಗೆ ಕ್ರಮ ವಹಿಸಲಿಲ್ಲ. ಈ ಜನರು ಹಸಿವಿನಿಂದ ನರಳುವಾಗ ಅಧಿಕಾರಸ್ಥರು ಯೋಗದ ವಿಜೃಂಭಣೆಯಲ್ಲಿ ಮುಳುಗಿದ್ದಾರೆ. ಹಸಿದ ಜನರ ಮುಂದೆ ಮಾನವೀಯತೆಗಾಗಿ ಯೋಗ ಮಾಡುತ್ತಾರಂತೆ” ಎಂದು ವಿಷಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...