Homeದಲಿತ್ ಫೈಲ್ಸ್ಹಾವೇರಿ: ಪೊಲೀಸ್ ರೈಡ್‌ ಬಳಿಕ ಪರದಾಡುತ್ತಿದೆ ‘ಸಿಂಧೋಳ ಅಲೆಮಾರಿ ಸಮುದಾಯ’

ಹಾವೇರಿ: ಪೊಲೀಸ್ ರೈಡ್‌ ಬಳಿಕ ಪರದಾಡುತ್ತಿದೆ ‘ಸಿಂಧೋಳ ಅಲೆಮಾರಿ ಸಮುದಾಯ’

ಮೈಗೆ ಚಾಟಿಯೇಟು ಹೊಡೆದುಕೊಳ್ಳುತ್ತಾ, ದೇಹವನ್ನು ಘಾಸಿಗೊಳಿಸಿಕೊಂಡು ಭಿಕ್ಷಾಟನೆ ಮಾಡುವ ಅಲೆಮಾರಿ ಸಮುದಾಯ ‘ಸಿಂಧೋಳ’.

- Advertisement -
- Advertisement -

ಮಾರಿ ದೇವತೆಯನ್ನು ತಲೆಯ ಹೊತ್ತು, ಬೀದಿಬೀದಿಯಲ್ಲಿ ಸಾಗುತ್ತಾ, ಅರೆ ಬಾರಿಸುತ್ತಾ, ಮೈಗೆ ಚಾಟಿಯೇಟು ಹೊಡೆದುಕೊಳ್ಳುತ್ತಾ, ದೇಹವನ್ನು ಘಾಸಿಗೊಳಿಸಿಕೊಂಡು ಭಿಕ್ಷಾಟನೆ ಮಾಡುವ ಅಲೆಮಾರಿ ಸಮುದಾಯ ‘ಸಿಂಧೋಳ’.

ರಾಜ್ಯದಲ್ಲಿ ಈ ಜನಾಂಗದವರು ಹೆಚ್ಚು ಸಂಖ್ಯೆಯಲ್ಲೇನೂ ಇಲ್ಲ. ಅಲ್ಲಲ್ಲಿ ಬಿಡಾರಗಳನ್ನು ಹಾಕಿಕೊಂಡು ಹೊಟ್ಟೆಪಾಡು ಮಾಡುತ್ತಾರೆ. ಇತ್ತೀಚಿನ ವರ್ಷಗಳಲ್ಲಿ ಕೃಷಿ ಕೂಲಿಕಾರರಾಗಿಯೂ ದುಡಿಯುತ್ತಿದ್ದಾರೆ. ಬೇಟೆಯಾಡಿ ಬದುಕುವುದಕ್ಕೆ ಅರಣ್ಯ ಇಲಾಖೆಯವರು ಬಿಡದೇ ಇರುವುದರಿಂದ ಆಹಾರ ಅಭ್ರತೆಯನ್ನೂ ಎದರಿಸುತ್ತಿದ್ದಾರೆ. ಸ್ವಂತ ಮನೆಗಳಿಲ್ಲ, ಜಮೀನಿಲ್ಲ, ಸರ್ಕಾರ ಉದ್ಯೋಗ ಪಡೆದವರ ದಾಖಲೆಯೂ ಇಲ್ಲ. ಇಂತಹ ಸಮುದಾಯಗಳನ್ನು ಅಧಿಕಾರ ವರ್ಗ ಅಷ್ಟಾಗಿ ಗಮನಿಸುವುದೂ ಇಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಸಿಂಧೋಳ ಜನಾಂಗದ ಸುಮಾರು 40 ಕುಟುಂಬಗಳು ಹಲವು ವರ್ಷಗಳಿಂದ ಕೃಷಿ ಇಲಾಖೆಯ ಜಮೀನಿನಲ್ಲಿ ಟೆಂಟ್ ಹಾಕಿಕೊಂಡು ವಾಸವಿದ್ದವು. ಈ ಜಾಗದಲ್ಲಿ ಕೋಲ್ಡ್‌ ಸ್ಟೋರೇಜ್‌ ನಿರ್ಮಿಸಲು ಇಲಾಖೆ ಮುಂದಾಯಿತು. ಜಾಗ ಖಾಲಿ ಮಾಡುವಂತೆ ಸಿಂಧೋಳರಿಗೆ ಮೂರ್ನಾಲ್ಕು ಭಾರಿ ಸೂಚನೆಯನ್ನೂ ನೀಡಿತು. ಆದರೆ ಹೋಗುವುದೆಲ್ಲಿಗೆ?

ಇದನ್ನೂ ಓದಿರಿ: ರಾಜಸ್ಥಾನ: ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಯುವಕನ ಮೇಲೆ ಅಮಾನುಷ ಹಲ್ಲೆ

ಜಾಗ ಖಾಲಿ ಮಾಡಿಸಲು ಹೀಗೆ ಸೂಚನೆ ನೀಡುತ್ತಿದ್ದಾರೆಂದು ಭಾವಿಸಿದ ಸಿಂಧೋಳರು ಅಲ್ಲಿಯೇ ಉಳಿದರು. ಆದರೆ ಕಳೆದ ಜೂನ್‌ 18ರಂದು ಪೊಲೀಸರೊಂದಿಗೆ ಬಂದ ಕೃಷಿ ಅಧಿಕಾರಿಗಳು ಅಲೆಮಾರಿಗಳ ಗುಡಿಸಲುಗಳನ್ನು ಕಿತ್ತೊಗೆದರು. ಕನಿಷ್ಠ ಮಾನವೀಯತೆಯನ್ನೂ ತೋರದೆ ಗುಡಿಸಲುಗಳನ್ನು ಕೆಡವಿದರು. ಇದರ ಜೊತೆಗೆ ಮಳೆಯೂ ಸುರಿಯುತ್ತಿತ್ತು. “ಒಂದೆರಡು ದಿನ ಸಮಯ ಕೊಡಿ. ಬೇರೆಡೆ ತೆರಳುತ್ತೇವೆ” ಎಂದು ಅಲೆಮಾರಿಗಳು ಅಂಗಲಾಚಿದರು. ಆದರೆ ಅದಕ್ಕೆ ಪೊಲೀಸರು ಆಸ್ಪದ ನೀಡಲಿಲ್ಲ.

ಘಟನೆಯ ಕುರಿತು ‘ನಾನುಗೌರಿ.ಕಾಂ’ಗೆ ಮಾಹಿತಿ ನೀಡಿದ ಅಲೆಮಾರಿ ಬುಡಕಟ್ಟು ಮಹಾಸಭಾದ ವೀರೇಶ್, “ಇಲ್ಲಿನ ಸಿಂಧೋಳರಲ್ಲಿ ನಾಲ್ಕೈದು ಗರ್ಭಿಣಿಯರಿದ್ದು, ಹೆರಿಗೆಯ ದಿನಗಳನ್ನು ಎಣಿಸುತ್ತಿದ್ದಾರೆ. ವಯಸ್ಸಾದವರು, ಅಂಗವಿಕಲ ಮಕ್ಕಳೂ ಇದ್ದಾರೆ. ಪೊಲೀಸರು ರೈಡ್ ಮಾಡಿದಾಗ ಬಿಡಾರದ ವಸ್ತುಗಳು ಹಾನಿಗೊಳಗಾದ ಕಾರಣ ಮತ್ತೆ ಗುಡಿಸಲುಗಳನ್ನು ಕಟ್ಟಿಕೊಳ್ಳಲೂ ಆಗುತ್ತಿಲ್ಲ. ಜೇಬಿನಲ್ಲಿ ಹಣವೂ ಇಲ್ಲ. ಆಹಾರ ಧಾನ್ಯಗಳನ್ನು ಪೊಲೀಸರು ಮಳೆಗೆ ಬೀಸಾಡಿದ್ದರಿಂದ ಆಹಾರದ ಅಭಾವವೂ ಉಂಟಾಗಿದೆ. ಹಳ್ಳಿಗಳಿಗೆ ಹೋಗಿ ಭಿಕ್ಷಾಟನೆ ಮಾಡಲೂ ಸಾಧ್ಯವಾಗುತ್ತಿಲ್ಲ. ಅನೇಕರು ಉಪವಾಸವಿರುವುದಾಗಿ ಹೇಳಿದ್ದಾರೆ” ಎಂದು ಮಾಹಿತಿ ನೀಡಿದರು.

ಇಷ್ಟೆಲ್ಲ ಆದ ಮೇಲೆ ರಟ್ಟಿಹಳ್ಳಿ ತಾಲ್ಲೂಕು ಆಡಳಿತ ಕ್ರಮ ವಹಿಸಲು ಮುಂದಾಯಿತು. ಮೂರು ಕಿಮೀ ದೂರದಲ್ಲಿನ ಖಾಲಿ ಜಾಗದಲ್ಲಿ ತಂಗಲು ಸೂಚಿಸಿತು. ಆ ಜಾಗವಾದರೂ ತಗ್ಗು ಹಾಗೂ ಕಸದಿಂದ ಕೂಡಿದೆ. ಮಳೆ ಬಂದರೆ ಈ ಪ್ರದೇಶಕ್ಕೆ ನೀರು ನುಗ್ಗುತ್ತದೆ. ತಾತ್ಕಾಲಿಕವಾಗಿ ಪಕ್ಕದ ಬೋರ್‌ವೆಲ್‌ನಿಂದ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ವಿದ್ಯುತ್‌ ಸಂಪರ್ಕವನ್ನೇನೋ ಕಲ್ಪಿಸಿದ್ದಾರೆ.

“ಬೇರೆ ಕಡೆ ಜಾಗ ಮಾಡಿಕೊಡುತ್ತೇವೆ. ಪಟ್ಟಣ ಪಂಚಾಯಿತಿಯಲ್ಲಿ ಚುನಾಯಿತ ಸದಸ್ಯರಿಲ್ಲ. ಚುನಾಯಿತ ಸದಸ್ಯರು ಬಂದ ತಕ್ಷಣವೇ ಮೊದಲ ಅಜೆಂಡಾದಲ್ಲೇ ಸಿಂಧೋಳರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಇದೆಲ್ಲ ಸಾಧ್ಯವಾಗುವುದು ಯಾವಾಗ ಎಂಬ ಸ್ಪಷ್ಟತೆ ಇಲ್ಲ. ಸದ್ಯಕ್ಕೆ ಸಮುದಾಯ ಅತಂತ್ರವಾಗಿದೆ” ಎನ್ನುತ್ತಾರೆ ವೀರೇಶ್.

ಶಾಶ್ವತ ಪರಿಹಾರಕ್ಕೆ ಸಿಂಧೋಳರ ಮನವಿ

“ತಾತ್ಕಾಲಿಕ ನೀರಿನ ವ್ಯವಸ್ಥೆ ಹಾಗೂ ವಿದ್ಯುತ್ ವ್ಯವಸ್ಥೆ ಕಲ್ಪಿಸಿದ್ದಾರೆ. ಸದರಿ ಜಾಗದಲ್ಲಿ ಗುಡಿಸಲು ನಿರ್ಮಿಸುತ್ತಿದ್ದೇವೆ. ನಮಗೆ ಸ್ವಂತ ನಿವೇಶನಗಳಿಲ್ಲ, ಮನೆಗಳಿಲ್ಲ. ಜೀವನ ನಡೆಸುವುದು ಕಷ್ಟವಾಗಿದೆ. ಈಗ ನೀಡಿರುವ ಜಾಗವು ತಗ್ಗುಪ್ರದೇಶದಿಂದ ಕೂಡಿದೆ. ಮಳೆ ಬಂದರೆ ನೀರು ನುಗ್ಗುತ್ತದೆ. ಕಸದ ರಾಶಿ ಈ ಜಾಗದಲ್ಲಿದೆ. ಹೀಗಾಗಿ ಕಸವನ್ನು ತೆರವುಗೊಳಿಸಿ ತಗ್ಗು ಪ್ರದೇಶವನ್ನು ಸಮತಟ್ಟು ಮಾಡಬೇಕು. ಎಲ್ಲ ಕುಟುಂಬಗಳಿಗೆ ತಾತ್ಕಾಲಿಕ ಹಕ್ಕು ಪತ್ರ ನೀಡಬೇಕು. ವಸತಿ ಸೌಲಭ್ಯ ಕಲ್ಪಿಸಬೇಕು. ಶಾಶ್ವತ ವಿದ್ಯುತ್‌, ಕುಡಿಯುವ ನೀರು, ಗಟಾರ ಹಾಗೂ ಅಂಗನವಾಡಿ ವ್ಯವಸ್ಥೆ ಕಲ್ಪಿಸಬೇಕು”- ಇತ್ಯಾದಿ ಬೇಡಿಕೆಗಳನ್ನು ಸಿಂಧೋಳರು ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ.

ಇದನ್ನೂ ಓದಿರಿ: ವಿಚಾರಣೆಯಿಲ್ಲದೆ 2 ವರ್ಷ ಜೈಲಿನಲ್ಲೇ ಕಳೆದ ಬುಡಕಟ್ಟು ಯುವತಿ!

ಸಮುದಾಯದ ಬೇಡಿಕೆಯನ್ನು ಉಲ್ಲೇಖಿಸಿ ಹಿರೇಕೆರೂರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಹಬೂಬಸಾಬ್‌ ಪ. ನದಾಫ್‌ ಅವರು, ಇಲಾಖೆಯ ಉಪ ನಿರ್ದೇಶರಿಗೆ, ರಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಪತ್ರ ಬರೆದಿದ್ದಾರೆ. ಮೇಲಧಿಕಾರಿಗಳು ಹೆಚ್ಚಿನ ಕ್ರಮ ವಹಿಸುವ ತುರ್ತು ಎದುರಾಗಿದೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕನಾಥ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಸಿಂಧೋಳ ಜನರು ಅಸ್ಪೃಶ್ಯರಲ್ಲೇ ಅಸ್ಪೃಶ್ಯರು. ಕಟ್ಟಕಡೆಯ ಸಮುದಾಯ ಎಂದರೂ ತಪ್ಪಾಗದು. ಇಡೀ ಕರ್ನಾಟಕದಲ್ಲಿ ಸುಮಾರು 10ರಿಂದ 15 ಸಾವಿರ ಜನರು ಈ ಸಮುದಾಯದಲ್ಲಿರಬಹುದು. ಆದರೆ ಯಾವುದೇ ಸರ್ಕಾರವಿದ್ದಾಗಲೂ ಸಿಂಧೋಳರ ಅಭಿವೃದ್ಧಿಗೆ ಕ್ರಮ ವಹಿಸಲಿಲ್ಲ. ಈ ಜನರು ಹಸಿವಿನಿಂದ ನರಳುವಾಗ ಅಧಿಕಾರಸ್ಥರು ಯೋಗದ ವಿಜೃಂಭಣೆಯಲ್ಲಿ ಮುಳುಗಿದ್ದಾರೆ. ಹಸಿದ ಜನರ ಮುಂದೆ ಮಾನವೀಯತೆಗಾಗಿ ಯೋಗ ಮಾಡುತ್ತಾರಂತೆ” ಎಂದು ವಿಷಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...