Homeದಲಿತ್ ಫೈಲ್ಸ್ಹಾವೇರಿ: ಪೊಲೀಸ್ ರೈಡ್‌ ಬಳಿಕ ಪರದಾಡುತ್ತಿದೆ ‘ಸಿಂಧೋಳ ಅಲೆಮಾರಿ ಸಮುದಾಯ’

ಹಾವೇರಿ: ಪೊಲೀಸ್ ರೈಡ್‌ ಬಳಿಕ ಪರದಾಡುತ್ತಿದೆ ‘ಸಿಂಧೋಳ ಅಲೆಮಾರಿ ಸಮುದಾಯ’

ಮೈಗೆ ಚಾಟಿಯೇಟು ಹೊಡೆದುಕೊಳ್ಳುತ್ತಾ, ದೇಹವನ್ನು ಘಾಸಿಗೊಳಿಸಿಕೊಂಡು ಭಿಕ್ಷಾಟನೆ ಮಾಡುವ ಅಲೆಮಾರಿ ಸಮುದಾಯ ‘ಸಿಂಧೋಳ’.

- Advertisement -
- Advertisement -

ಮಾರಿ ದೇವತೆಯನ್ನು ತಲೆಯ ಹೊತ್ತು, ಬೀದಿಬೀದಿಯಲ್ಲಿ ಸಾಗುತ್ತಾ, ಅರೆ ಬಾರಿಸುತ್ತಾ, ಮೈಗೆ ಚಾಟಿಯೇಟು ಹೊಡೆದುಕೊಳ್ಳುತ್ತಾ, ದೇಹವನ್ನು ಘಾಸಿಗೊಳಿಸಿಕೊಂಡು ಭಿಕ್ಷಾಟನೆ ಮಾಡುವ ಅಲೆಮಾರಿ ಸಮುದಾಯ ‘ಸಿಂಧೋಳ’.

ರಾಜ್ಯದಲ್ಲಿ ಈ ಜನಾಂಗದವರು ಹೆಚ್ಚು ಸಂಖ್ಯೆಯಲ್ಲೇನೂ ಇಲ್ಲ. ಅಲ್ಲಲ್ಲಿ ಬಿಡಾರಗಳನ್ನು ಹಾಕಿಕೊಂಡು ಹೊಟ್ಟೆಪಾಡು ಮಾಡುತ್ತಾರೆ. ಇತ್ತೀಚಿನ ವರ್ಷಗಳಲ್ಲಿ ಕೃಷಿ ಕೂಲಿಕಾರರಾಗಿಯೂ ದುಡಿಯುತ್ತಿದ್ದಾರೆ. ಬೇಟೆಯಾಡಿ ಬದುಕುವುದಕ್ಕೆ ಅರಣ್ಯ ಇಲಾಖೆಯವರು ಬಿಡದೇ ಇರುವುದರಿಂದ ಆಹಾರ ಅಭ್ರತೆಯನ್ನೂ ಎದರಿಸುತ್ತಿದ್ದಾರೆ. ಸ್ವಂತ ಮನೆಗಳಿಲ್ಲ, ಜಮೀನಿಲ್ಲ, ಸರ್ಕಾರ ಉದ್ಯೋಗ ಪಡೆದವರ ದಾಖಲೆಯೂ ಇಲ್ಲ. ಇಂತಹ ಸಮುದಾಯಗಳನ್ನು ಅಧಿಕಾರ ವರ್ಗ ಅಷ್ಟಾಗಿ ಗಮನಿಸುವುದೂ ಇಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಸಿಂಧೋಳ ಜನಾಂಗದ ಸುಮಾರು 40 ಕುಟುಂಬಗಳು ಹಲವು ವರ್ಷಗಳಿಂದ ಕೃಷಿ ಇಲಾಖೆಯ ಜಮೀನಿನಲ್ಲಿ ಟೆಂಟ್ ಹಾಕಿಕೊಂಡು ವಾಸವಿದ್ದವು. ಈ ಜಾಗದಲ್ಲಿ ಕೋಲ್ಡ್‌ ಸ್ಟೋರೇಜ್‌ ನಿರ್ಮಿಸಲು ಇಲಾಖೆ ಮುಂದಾಯಿತು. ಜಾಗ ಖಾಲಿ ಮಾಡುವಂತೆ ಸಿಂಧೋಳರಿಗೆ ಮೂರ್ನಾಲ್ಕು ಭಾರಿ ಸೂಚನೆಯನ್ನೂ ನೀಡಿತು. ಆದರೆ ಹೋಗುವುದೆಲ್ಲಿಗೆ?

ಇದನ್ನೂ ಓದಿರಿ: ರಾಜಸ್ಥಾನ: ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಯುವಕನ ಮೇಲೆ ಅಮಾನುಷ ಹಲ್ಲೆ

ಜಾಗ ಖಾಲಿ ಮಾಡಿಸಲು ಹೀಗೆ ಸೂಚನೆ ನೀಡುತ್ತಿದ್ದಾರೆಂದು ಭಾವಿಸಿದ ಸಿಂಧೋಳರು ಅಲ್ಲಿಯೇ ಉಳಿದರು. ಆದರೆ ಕಳೆದ ಜೂನ್‌ 18ರಂದು ಪೊಲೀಸರೊಂದಿಗೆ ಬಂದ ಕೃಷಿ ಅಧಿಕಾರಿಗಳು ಅಲೆಮಾರಿಗಳ ಗುಡಿಸಲುಗಳನ್ನು ಕಿತ್ತೊಗೆದರು. ಕನಿಷ್ಠ ಮಾನವೀಯತೆಯನ್ನೂ ತೋರದೆ ಗುಡಿಸಲುಗಳನ್ನು ಕೆಡವಿದರು. ಇದರ ಜೊತೆಗೆ ಮಳೆಯೂ ಸುರಿಯುತ್ತಿತ್ತು. “ಒಂದೆರಡು ದಿನ ಸಮಯ ಕೊಡಿ. ಬೇರೆಡೆ ತೆರಳುತ್ತೇವೆ” ಎಂದು ಅಲೆಮಾರಿಗಳು ಅಂಗಲಾಚಿದರು. ಆದರೆ ಅದಕ್ಕೆ ಪೊಲೀಸರು ಆಸ್ಪದ ನೀಡಲಿಲ್ಲ.

ಘಟನೆಯ ಕುರಿತು ‘ನಾನುಗೌರಿ.ಕಾಂ’ಗೆ ಮಾಹಿತಿ ನೀಡಿದ ಅಲೆಮಾರಿ ಬುಡಕಟ್ಟು ಮಹಾಸಭಾದ ವೀರೇಶ್, “ಇಲ್ಲಿನ ಸಿಂಧೋಳರಲ್ಲಿ ನಾಲ್ಕೈದು ಗರ್ಭಿಣಿಯರಿದ್ದು, ಹೆರಿಗೆಯ ದಿನಗಳನ್ನು ಎಣಿಸುತ್ತಿದ್ದಾರೆ. ವಯಸ್ಸಾದವರು, ಅಂಗವಿಕಲ ಮಕ್ಕಳೂ ಇದ್ದಾರೆ. ಪೊಲೀಸರು ರೈಡ್ ಮಾಡಿದಾಗ ಬಿಡಾರದ ವಸ್ತುಗಳು ಹಾನಿಗೊಳಗಾದ ಕಾರಣ ಮತ್ತೆ ಗುಡಿಸಲುಗಳನ್ನು ಕಟ್ಟಿಕೊಳ್ಳಲೂ ಆಗುತ್ತಿಲ್ಲ. ಜೇಬಿನಲ್ಲಿ ಹಣವೂ ಇಲ್ಲ. ಆಹಾರ ಧಾನ್ಯಗಳನ್ನು ಪೊಲೀಸರು ಮಳೆಗೆ ಬೀಸಾಡಿದ್ದರಿಂದ ಆಹಾರದ ಅಭಾವವೂ ಉಂಟಾಗಿದೆ. ಹಳ್ಳಿಗಳಿಗೆ ಹೋಗಿ ಭಿಕ್ಷಾಟನೆ ಮಾಡಲೂ ಸಾಧ್ಯವಾಗುತ್ತಿಲ್ಲ. ಅನೇಕರು ಉಪವಾಸವಿರುವುದಾಗಿ ಹೇಳಿದ್ದಾರೆ” ಎಂದು ಮಾಹಿತಿ ನೀಡಿದರು.

ಇಷ್ಟೆಲ್ಲ ಆದ ಮೇಲೆ ರಟ್ಟಿಹಳ್ಳಿ ತಾಲ್ಲೂಕು ಆಡಳಿತ ಕ್ರಮ ವಹಿಸಲು ಮುಂದಾಯಿತು. ಮೂರು ಕಿಮೀ ದೂರದಲ್ಲಿನ ಖಾಲಿ ಜಾಗದಲ್ಲಿ ತಂಗಲು ಸೂಚಿಸಿತು. ಆ ಜಾಗವಾದರೂ ತಗ್ಗು ಹಾಗೂ ಕಸದಿಂದ ಕೂಡಿದೆ. ಮಳೆ ಬಂದರೆ ಈ ಪ್ರದೇಶಕ್ಕೆ ನೀರು ನುಗ್ಗುತ್ತದೆ. ತಾತ್ಕಾಲಿಕವಾಗಿ ಪಕ್ಕದ ಬೋರ್‌ವೆಲ್‌ನಿಂದ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ವಿದ್ಯುತ್‌ ಸಂಪರ್ಕವನ್ನೇನೋ ಕಲ್ಪಿಸಿದ್ದಾರೆ.

“ಬೇರೆ ಕಡೆ ಜಾಗ ಮಾಡಿಕೊಡುತ್ತೇವೆ. ಪಟ್ಟಣ ಪಂಚಾಯಿತಿಯಲ್ಲಿ ಚುನಾಯಿತ ಸದಸ್ಯರಿಲ್ಲ. ಚುನಾಯಿತ ಸದಸ್ಯರು ಬಂದ ತಕ್ಷಣವೇ ಮೊದಲ ಅಜೆಂಡಾದಲ್ಲೇ ಸಿಂಧೋಳರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಇದೆಲ್ಲ ಸಾಧ್ಯವಾಗುವುದು ಯಾವಾಗ ಎಂಬ ಸ್ಪಷ್ಟತೆ ಇಲ್ಲ. ಸದ್ಯಕ್ಕೆ ಸಮುದಾಯ ಅತಂತ್ರವಾಗಿದೆ” ಎನ್ನುತ್ತಾರೆ ವೀರೇಶ್.

ಶಾಶ್ವತ ಪರಿಹಾರಕ್ಕೆ ಸಿಂಧೋಳರ ಮನವಿ

“ತಾತ್ಕಾಲಿಕ ನೀರಿನ ವ್ಯವಸ್ಥೆ ಹಾಗೂ ವಿದ್ಯುತ್ ವ್ಯವಸ್ಥೆ ಕಲ್ಪಿಸಿದ್ದಾರೆ. ಸದರಿ ಜಾಗದಲ್ಲಿ ಗುಡಿಸಲು ನಿರ್ಮಿಸುತ್ತಿದ್ದೇವೆ. ನಮಗೆ ಸ್ವಂತ ನಿವೇಶನಗಳಿಲ್ಲ, ಮನೆಗಳಿಲ್ಲ. ಜೀವನ ನಡೆಸುವುದು ಕಷ್ಟವಾಗಿದೆ. ಈಗ ನೀಡಿರುವ ಜಾಗವು ತಗ್ಗುಪ್ರದೇಶದಿಂದ ಕೂಡಿದೆ. ಮಳೆ ಬಂದರೆ ನೀರು ನುಗ್ಗುತ್ತದೆ. ಕಸದ ರಾಶಿ ಈ ಜಾಗದಲ್ಲಿದೆ. ಹೀಗಾಗಿ ಕಸವನ್ನು ತೆರವುಗೊಳಿಸಿ ತಗ್ಗು ಪ್ರದೇಶವನ್ನು ಸಮತಟ್ಟು ಮಾಡಬೇಕು. ಎಲ್ಲ ಕುಟುಂಬಗಳಿಗೆ ತಾತ್ಕಾಲಿಕ ಹಕ್ಕು ಪತ್ರ ನೀಡಬೇಕು. ವಸತಿ ಸೌಲಭ್ಯ ಕಲ್ಪಿಸಬೇಕು. ಶಾಶ್ವತ ವಿದ್ಯುತ್‌, ಕುಡಿಯುವ ನೀರು, ಗಟಾರ ಹಾಗೂ ಅಂಗನವಾಡಿ ವ್ಯವಸ್ಥೆ ಕಲ್ಪಿಸಬೇಕು”- ಇತ್ಯಾದಿ ಬೇಡಿಕೆಗಳನ್ನು ಸಿಂಧೋಳರು ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ.

ಇದನ್ನೂ ಓದಿರಿ: ವಿಚಾರಣೆಯಿಲ್ಲದೆ 2 ವರ್ಷ ಜೈಲಿನಲ್ಲೇ ಕಳೆದ ಬುಡಕಟ್ಟು ಯುವತಿ!

ಸಮುದಾಯದ ಬೇಡಿಕೆಯನ್ನು ಉಲ್ಲೇಖಿಸಿ ಹಿರೇಕೆರೂರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಹಬೂಬಸಾಬ್‌ ಪ. ನದಾಫ್‌ ಅವರು, ಇಲಾಖೆಯ ಉಪ ನಿರ್ದೇಶರಿಗೆ, ರಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಪತ್ರ ಬರೆದಿದ್ದಾರೆ. ಮೇಲಧಿಕಾರಿಗಳು ಹೆಚ್ಚಿನ ಕ್ರಮ ವಹಿಸುವ ತುರ್ತು ಎದುರಾಗಿದೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕನಾಥ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಸಿಂಧೋಳ ಜನರು ಅಸ್ಪೃಶ್ಯರಲ್ಲೇ ಅಸ್ಪೃಶ್ಯರು. ಕಟ್ಟಕಡೆಯ ಸಮುದಾಯ ಎಂದರೂ ತಪ್ಪಾಗದು. ಇಡೀ ಕರ್ನಾಟಕದಲ್ಲಿ ಸುಮಾರು 10ರಿಂದ 15 ಸಾವಿರ ಜನರು ಈ ಸಮುದಾಯದಲ್ಲಿರಬಹುದು. ಆದರೆ ಯಾವುದೇ ಸರ್ಕಾರವಿದ್ದಾಗಲೂ ಸಿಂಧೋಳರ ಅಭಿವೃದ್ಧಿಗೆ ಕ್ರಮ ವಹಿಸಲಿಲ್ಲ. ಈ ಜನರು ಹಸಿವಿನಿಂದ ನರಳುವಾಗ ಅಧಿಕಾರಸ್ಥರು ಯೋಗದ ವಿಜೃಂಭಣೆಯಲ್ಲಿ ಮುಳುಗಿದ್ದಾರೆ. ಹಸಿದ ಜನರ ಮುಂದೆ ಮಾನವೀಯತೆಗಾಗಿ ಯೋಗ ಮಾಡುತ್ತಾರಂತೆ” ಎಂದು ವಿಷಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....