Homeದಲಿತ್ ಫೈಲ್ಸ್ಹಾವೇರಿ: ಪೊಲೀಸ್ ರೈಡ್‌ ಬಳಿಕ ಪರದಾಡುತ್ತಿದೆ ‘ಸಿಂಧೋಳ ಅಲೆಮಾರಿ ಸಮುದಾಯ’

ಹಾವೇರಿ: ಪೊಲೀಸ್ ರೈಡ್‌ ಬಳಿಕ ಪರದಾಡುತ್ತಿದೆ ‘ಸಿಂಧೋಳ ಅಲೆಮಾರಿ ಸಮುದಾಯ’

ಮೈಗೆ ಚಾಟಿಯೇಟು ಹೊಡೆದುಕೊಳ್ಳುತ್ತಾ, ದೇಹವನ್ನು ಘಾಸಿಗೊಳಿಸಿಕೊಂಡು ಭಿಕ್ಷಾಟನೆ ಮಾಡುವ ಅಲೆಮಾರಿ ಸಮುದಾಯ ‘ಸಿಂಧೋಳ’.

- Advertisement -
- Advertisement -

ಮಾರಿ ದೇವತೆಯನ್ನು ತಲೆಯ ಹೊತ್ತು, ಬೀದಿಬೀದಿಯಲ್ಲಿ ಸಾಗುತ್ತಾ, ಅರೆ ಬಾರಿಸುತ್ತಾ, ಮೈಗೆ ಚಾಟಿಯೇಟು ಹೊಡೆದುಕೊಳ್ಳುತ್ತಾ, ದೇಹವನ್ನು ಘಾಸಿಗೊಳಿಸಿಕೊಂಡು ಭಿಕ್ಷಾಟನೆ ಮಾಡುವ ಅಲೆಮಾರಿ ಸಮುದಾಯ ‘ಸಿಂಧೋಳ’.

ರಾಜ್ಯದಲ್ಲಿ ಈ ಜನಾಂಗದವರು ಹೆಚ್ಚು ಸಂಖ್ಯೆಯಲ್ಲೇನೂ ಇಲ್ಲ. ಅಲ್ಲಲ್ಲಿ ಬಿಡಾರಗಳನ್ನು ಹಾಕಿಕೊಂಡು ಹೊಟ್ಟೆಪಾಡು ಮಾಡುತ್ತಾರೆ. ಇತ್ತೀಚಿನ ವರ್ಷಗಳಲ್ಲಿ ಕೃಷಿ ಕೂಲಿಕಾರರಾಗಿಯೂ ದುಡಿಯುತ್ತಿದ್ದಾರೆ. ಬೇಟೆಯಾಡಿ ಬದುಕುವುದಕ್ಕೆ ಅರಣ್ಯ ಇಲಾಖೆಯವರು ಬಿಡದೇ ಇರುವುದರಿಂದ ಆಹಾರ ಅಭ್ರತೆಯನ್ನೂ ಎದರಿಸುತ್ತಿದ್ದಾರೆ. ಸ್ವಂತ ಮನೆಗಳಿಲ್ಲ, ಜಮೀನಿಲ್ಲ, ಸರ್ಕಾರ ಉದ್ಯೋಗ ಪಡೆದವರ ದಾಖಲೆಯೂ ಇಲ್ಲ. ಇಂತಹ ಸಮುದಾಯಗಳನ್ನು ಅಧಿಕಾರ ವರ್ಗ ಅಷ್ಟಾಗಿ ಗಮನಿಸುವುದೂ ಇಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಸಿಂಧೋಳ ಜನಾಂಗದ ಸುಮಾರು 40 ಕುಟುಂಬಗಳು ಹಲವು ವರ್ಷಗಳಿಂದ ಕೃಷಿ ಇಲಾಖೆಯ ಜಮೀನಿನಲ್ಲಿ ಟೆಂಟ್ ಹಾಕಿಕೊಂಡು ವಾಸವಿದ್ದವು. ಈ ಜಾಗದಲ್ಲಿ ಕೋಲ್ಡ್‌ ಸ್ಟೋರೇಜ್‌ ನಿರ್ಮಿಸಲು ಇಲಾಖೆ ಮುಂದಾಯಿತು. ಜಾಗ ಖಾಲಿ ಮಾಡುವಂತೆ ಸಿಂಧೋಳರಿಗೆ ಮೂರ್ನಾಲ್ಕು ಭಾರಿ ಸೂಚನೆಯನ್ನೂ ನೀಡಿತು. ಆದರೆ ಹೋಗುವುದೆಲ್ಲಿಗೆ?

ಇದನ್ನೂ ಓದಿರಿ: ರಾಜಸ್ಥಾನ: ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಯುವಕನ ಮೇಲೆ ಅಮಾನುಷ ಹಲ್ಲೆ

ಜಾಗ ಖಾಲಿ ಮಾಡಿಸಲು ಹೀಗೆ ಸೂಚನೆ ನೀಡುತ್ತಿದ್ದಾರೆಂದು ಭಾವಿಸಿದ ಸಿಂಧೋಳರು ಅಲ್ಲಿಯೇ ಉಳಿದರು. ಆದರೆ ಕಳೆದ ಜೂನ್‌ 18ರಂದು ಪೊಲೀಸರೊಂದಿಗೆ ಬಂದ ಕೃಷಿ ಅಧಿಕಾರಿಗಳು ಅಲೆಮಾರಿಗಳ ಗುಡಿಸಲುಗಳನ್ನು ಕಿತ್ತೊಗೆದರು. ಕನಿಷ್ಠ ಮಾನವೀಯತೆಯನ್ನೂ ತೋರದೆ ಗುಡಿಸಲುಗಳನ್ನು ಕೆಡವಿದರು. ಇದರ ಜೊತೆಗೆ ಮಳೆಯೂ ಸುರಿಯುತ್ತಿತ್ತು. “ಒಂದೆರಡು ದಿನ ಸಮಯ ಕೊಡಿ. ಬೇರೆಡೆ ತೆರಳುತ್ತೇವೆ” ಎಂದು ಅಲೆಮಾರಿಗಳು ಅಂಗಲಾಚಿದರು. ಆದರೆ ಅದಕ್ಕೆ ಪೊಲೀಸರು ಆಸ್ಪದ ನೀಡಲಿಲ್ಲ.

ಘಟನೆಯ ಕುರಿತು ‘ನಾನುಗೌರಿ.ಕಾಂ’ಗೆ ಮಾಹಿತಿ ನೀಡಿದ ಅಲೆಮಾರಿ ಬುಡಕಟ್ಟು ಮಹಾಸಭಾದ ವೀರೇಶ್, “ಇಲ್ಲಿನ ಸಿಂಧೋಳರಲ್ಲಿ ನಾಲ್ಕೈದು ಗರ್ಭಿಣಿಯರಿದ್ದು, ಹೆರಿಗೆಯ ದಿನಗಳನ್ನು ಎಣಿಸುತ್ತಿದ್ದಾರೆ. ವಯಸ್ಸಾದವರು, ಅಂಗವಿಕಲ ಮಕ್ಕಳೂ ಇದ್ದಾರೆ. ಪೊಲೀಸರು ರೈಡ್ ಮಾಡಿದಾಗ ಬಿಡಾರದ ವಸ್ತುಗಳು ಹಾನಿಗೊಳಗಾದ ಕಾರಣ ಮತ್ತೆ ಗುಡಿಸಲುಗಳನ್ನು ಕಟ್ಟಿಕೊಳ್ಳಲೂ ಆಗುತ್ತಿಲ್ಲ. ಜೇಬಿನಲ್ಲಿ ಹಣವೂ ಇಲ್ಲ. ಆಹಾರ ಧಾನ್ಯಗಳನ್ನು ಪೊಲೀಸರು ಮಳೆಗೆ ಬೀಸಾಡಿದ್ದರಿಂದ ಆಹಾರದ ಅಭಾವವೂ ಉಂಟಾಗಿದೆ. ಹಳ್ಳಿಗಳಿಗೆ ಹೋಗಿ ಭಿಕ್ಷಾಟನೆ ಮಾಡಲೂ ಸಾಧ್ಯವಾಗುತ್ತಿಲ್ಲ. ಅನೇಕರು ಉಪವಾಸವಿರುವುದಾಗಿ ಹೇಳಿದ್ದಾರೆ” ಎಂದು ಮಾಹಿತಿ ನೀಡಿದರು.

ಇಷ್ಟೆಲ್ಲ ಆದ ಮೇಲೆ ರಟ್ಟಿಹಳ್ಳಿ ತಾಲ್ಲೂಕು ಆಡಳಿತ ಕ್ರಮ ವಹಿಸಲು ಮುಂದಾಯಿತು. ಮೂರು ಕಿಮೀ ದೂರದಲ್ಲಿನ ಖಾಲಿ ಜಾಗದಲ್ಲಿ ತಂಗಲು ಸೂಚಿಸಿತು. ಆ ಜಾಗವಾದರೂ ತಗ್ಗು ಹಾಗೂ ಕಸದಿಂದ ಕೂಡಿದೆ. ಮಳೆ ಬಂದರೆ ಈ ಪ್ರದೇಶಕ್ಕೆ ನೀರು ನುಗ್ಗುತ್ತದೆ. ತಾತ್ಕಾಲಿಕವಾಗಿ ಪಕ್ಕದ ಬೋರ್‌ವೆಲ್‌ನಿಂದ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ವಿದ್ಯುತ್‌ ಸಂಪರ್ಕವನ್ನೇನೋ ಕಲ್ಪಿಸಿದ್ದಾರೆ.

“ಬೇರೆ ಕಡೆ ಜಾಗ ಮಾಡಿಕೊಡುತ್ತೇವೆ. ಪಟ್ಟಣ ಪಂಚಾಯಿತಿಯಲ್ಲಿ ಚುನಾಯಿತ ಸದಸ್ಯರಿಲ್ಲ. ಚುನಾಯಿತ ಸದಸ್ಯರು ಬಂದ ತಕ್ಷಣವೇ ಮೊದಲ ಅಜೆಂಡಾದಲ್ಲೇ ಸಿಂಧೋಳರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಇದೆಲ್ಲ ಸಾಧ್ಯವಾಗುವುದು ಯಾವಾಗ ಎಂಬ ಸ್ಪಷ್ಟತೆ ಇಲ್ಲ. ಸದ್ಯಕ್ಕೆ ಸಮುದಾಯ ಅತಂತ್ರವಾಗಿದೆ” ಎನ್ನುತ್ತಾರೆ ವೀರೇಶ್.

ಶಾಶ್ವತ ಪರಿಹಾರಕ್ಕೆ ಸಿಂಧೋಳರ ಮನವಿ

“ತಾತ್ಕಾಲಿಕ ನೀರಿನ ವ್ಯವಸ್ಥೆ ಹಾಗೂ ವಿದ್ಯುತ್ ವ್ಯವಸ್ಥೆ ಕಲ್ಪಿಸಿದ್ದಾರೆ. ಸದರಿ ಜಾಗದಲ್ಲಿ ಗುಡಿಸಲು ನಿರ್ಮಿಸುತ್ತಿದ್ದೇವೆ. ನಮಗೆ ಸ್ವಂತ ನಿವೇಶನಗಳಿಲ್ಲ, ಮನೆಗಳಿಲ್ಲ. ಜೀವನ ನಡೆಸುವುದು ಕಷ್ಟವಾಗಿದೆ. ಈಗ ನೀಡಿರುವ ಜಾಗವು ತಗ್ಗುಪ್ರದೇಶದಿಂದ ಕೂಡಿದೆ. ಮಳೆ ಬಂದರೆ ನೀರು ನುಗ್ಗುತ್ತದೆ. ಕಸದ ರಾಶಿ ಈ ಜಾಗದಲ್ಲಿದೆ. ಹೀಗಾಗಿ ಕಸವನ್ನು ತೆರವುಗೊಳಿಸಿ ತಗ್ಗು ಪ್ರದೇಶವನ್ನು ಸಮತಟ್ಟು ಮಾಡಬೇಕು. ಎಲ್ಲ ಕುಟುಂಬಗಳಿಗೆ ತಾತ್ಕಾಲಿಕ ಹಕ್ಕು ಪತ್ರ ನೀಡಬೇಕು. ವಸತಿ ಸೌಲಭ್ಯ ಕಲ್ಪಿಸಬೇಕು. ಶಾಶ್ವತ ವಿದ್ಯುತ್‌, ಕುಡಿಯುವ ನೀರು, ಗಟಾರ ಹಾಗೂ ಅಂಗನವಾಡಿ ವ್ಯವಸ್ಥೆ ಕಲ್ಪಿಸಬೇಕು”- ಇತ್ಯಾದಿ ಬೇಡಿಕೆಗಳನ್ನು ಸಿಂಧೋಳರು ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ.

ಇದನ್ನೂ ಓದಿರಿ: ವಿಚಾರಣೆಯಿಲ್ಲದೆ 2 ವರ್ಷ ಜೈಲಿನಲ್ಲೇ ಕಳೆದ ಬುಡಕಟ್ಟು ಯುವತಿ!

ಸಮುದಾಯದ ಬೇಡಿಕೆಯನ್ನು ಉಲ್ಲೇಖಿಸಿ ಹಿರೇಕೆರೂರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಹಬೂಬಸಾಬ್‌ ಪ. ನದಾಫ್‌ ಅವರು, ಇಲಾಖೆಯ ಉಪ ನಿರ್ದೇಶರಿಗೆ, ರಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಪತ್ರ ಬರೆದಿದ್ದಾರೆ. ಮೇಲಧಿಕಾರಿಗಳು ಹೆಚ್ಚಿನ ಕ್ರಮ ವಹಿಸುವ ತುರ್ತು ಎದುರಾಗಿದೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕನಾಥ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಸಿಂಧೋಳ ಜನರು ಅಸ್ಪೃಶ್ಯರಲ್ಲೇ ಅಸ್ಪೃಶ್ಯರು. ಕಟ್ಟಕಡೆಯ ಸಮುದಾಯ ಎಂದರೂ ತಪ್ಪಾಗದು. ಇಡೀ ಕರ್ನಾಟಕದಲ್ಲಿ ಸುಮಾರು 10ರಿಂದ 15 ಸಾವಿರ ಜನರು ಈ ಸಮುದಾಯದಲ್ಲಿರಬಹುದು. ಆದರೆ ಯಾವುದೇ ಸರ್ಕಾರವಿದ್ದಾಗಲೂ ಸಿಂಧೋಳರ ಅಭಿವೃದ್ಧಿಗೆ ಕ್ರಮ ವಹಿಸಲಿಲ್ಲ. ಈ ಜನರು ಹಸಿವಿನಿಂದ ನರಳುವಾಗ ಅಧಿಕಾರಸ್ಥರು ಯೋಗದ ವಿಜೃಂಭಣೆಯಲ್ಲಿ ಮುಳುಗಿದ್ದಾರೆ. ಹಸಿದ ಜನರ ಮುಂದೆ ಮಾನವೀಯತೆಗಾಗಿ ಯೋಗ ಮಾಡುತ್ತಾರಂತೆ” ಎಂದು ವಿಷಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...