Homeಮುಖಪುಟಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

- Advertisement -
- Advertisement -

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯ ನಂತರ ಈ ಆದೇಶ ಹೊರಡಿಸಲಾಗಿದೆ.

ಅಧಿಕಾರಿಗಳು ಅಂದಾಜು ಪ್ರಕಾರ 500 ಕೋಟಿ ರೂಪಾಯಿ ಮೌಲ್ಯದ ಆಶ್ರಮದ ಭೂಮಿ ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದ ಬಳಿ ಇದೆ.

ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ, ಹಲವು ದಶಕಗಳ ಹಿಂದೆ ಕೇವಲ ಸೀಮಿತ ಧಾರ್ಮಿಕ ಬಳಕೆಗಾಗಿ ಮಾತ್ರ ಆಶ್ರಮಕ್ಕೆ ಭೂಮಿ ಮಂಜೂರು ಮಾಡಲಾಗಿತ್ತು. ಈ ಮಂಜೂರಾತಿಯು ಕೆಲವು ಕಟ್ಟುನಿಟ್ಟಾದ ಷರತ್ತುಗಳಿಗೆ ಒಳಪಟ್ಟಿದ್ದು, ಅದರಂತೆ ಅಲ್ಲಿ ಯಾವುದೇ ರೀತಿಯ ವಾಣಿಜ್ಯ ಚಟುವಟಿಕೆಗಳನ್ನು ನಡೆಸುವಂತಿಲ್ಲ, ಅನಧಿಕೃತ ಕಟ್ಟಡಗಳನ್ನು ನಿರ್ಮಿಸುವಂತಿಲ್ಲ ಮತ್ತು ಸರ್ಕಾರವು ನಿಗದಿಪಡಿಸಿದ ಪ್ರದೇಶವನ್ನು ಮೀರಿ ಜಾಗವನ್ನು ವಿಸ್ತರಣೆ ಮಾಡುವಂತಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಷರತ್ತುಗಳನ್ನು ಕಾಲಾನಂತರದಲ್ಲಿ ಉಲ್ಲಂಘಿಸಲಾಗಿದೆ, ಮೂಲತಃ ಹಂಚಿಕೆಯಾಗಿದ್ದಕ್ಕಿಂತ ಹೆಚ್ಚಿನ ಭೂಮಿಯಲ್ಲಿ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ ಎಂದಿದೆ.

ರಾಜ್ಯ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಪ್ರಮುಖ ಸರ್ಕಾರಿ ಅಭಿಯೋಜಕ. ಭೂಮಿಯನ್ನು ಮರಳಿ ಪಡೆಯುವ ಕ್ರಮವು ದೀರ್ಘ ಮತ್ತು ರಚನಾತ್ಮಕ ಆಡಳಿತ ಪ್ರಕ್ರಿಯೆಯ ಫಲಿತಾಂಶವಾಗಿದೆ ಎಂದು ತಿಳಿಸಿದ್ದಾರೆ. ಆಶ್ರಮಕ್ಕೆ ಅನೇಕ ಶಾಸನಬದ್ಧ ನೋಟಿಸ್‌ಗಳನ್ನು ನೀಡಲಾಗಿದೆ ಮತ್ತು ಪದೇ ಪದೇ ವಿಚಾರಣೆಗೆ ಅವಕಾಶಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

ಅನಧಿಕೃತ ನಿರ್ಮಾಣಗಳನ್ನು ಸಕ್ರಮಗೊಳಿಸುವಂತೆ ಕೋರಿ ಆಶ್ರಮವು ಹಲವಾರು ಅರ್ಜಿಗಳನ್ನು ಸಲ್ಲಿಸಿದೆ. ಈ ಅರ್ಜಿಗಳನ್ನು ಪುರಸ್ಕರಿಸಿದರೆ ಉಲ್ಲಂಘನೆಗಳನ್ನು ಒಪ್ಪಿಕೊಂಡಂತೆ ಎಂದು ಸರ್ಕಾರಿ ಅಭಿಯೋಜಕ ಹೇಳಿದ್ದಾರೆ.

ಆಶ್ರಮದ ಆವರಣದಲ್ಲಿರುವ ಅಕ್ರಮ ನಿರ್ಮಾಣಗಳನ್ನು ಸಕ್ರಮಗೊಳಿಸುವ ಅರ್ಜಿಗಳನ್ನು ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಎಎಂಸಿ) ಪರಿಶೀಲಿಸಿದೆ ಮತ್ತು ಅವುಗಳನ್ನು ತಿರಸ್ಕರಿಸಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

30ಕ್ಕೂ ಹೆಚ್ಚು ನಿರ್ಮಾಣಗಳು ಅನಧಿಕೃತವೆಂದು ಕಂಡುಬಂದಿವೆ. ಅಂತಹ ನಿರ್ಮಾಣಗಳನ್ನು ಅನ್ವಯವಾಗುವ ಕಾನೂನುಗಳ ಅಡಿಯಲ್ಲಿ ಸಕ್ರಮಗೊಳಿಸಲು ಸಾಧ್ಯವಿಲ್ಲ ಎಂದು ಎಎಂಸಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.

ಆಶ್ರಮದ ಶುಲ್ಕ ಅರ್ಜಿಯನ್ನು ತಿರಸ್ಕರಿಸಿ, ಈ ವಿಷಯವನ್ನು ಸೂಕ್ತ ಮೇಲ್ಮನವಿ ಪ್ರಾಧಿಕಾರದ ಮುಂದೆ ಇಡುವಂತೆ ನಿರ್ದೇಶಿಸಿದ ಎಎಂಸಿಯ ಜನವರಿ 21, 2026 ರ ನಿರ್ಧಾರವನ್ನು ನ್ಯಾಯಾಲಯದ ಮುಂದೆ ಉಲ್ಲೇಖಿಸಲಾಗಿದೆ.

ಸಲ್ಲಿಕೆಗಳು ಮತ್ತು ದಾಖಲೆಗಳಲ್ಲಿ ಇರಿಸಲಾದ ಸಾಮಗ್ರಿಗಳನ್ನು ಪರಿಗಣಿಸಿದ ನಂತರ, ನ್ಯಾಯಾಲಯವು ಭೂಮಿಯನ್ನು ಮರಳಿ ಸ್ವಾಧೀನಪಡಿಸಿಕೊಳ್ಳುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿದೆ.

ಹಂಚಿಕೆ ಷರತ್ತುಗಳು ನಿರ್ದಿಷ್ಟ ಮತ್ತು ಬದ್ಧವಾಗಿವೆ. ದಾಖಲೆಯು ಅನುಮತಿಸಲಾದ ಮಿತಿಗಳನ್ನು ಮೀರಿ ವಿಸ್ತರಣೆ ಮತ್ತು ನಿರ್ಮಾಣ ಕಾರ್ಯ ಮಾಡಿರುವುದನ್ನು ತೋರಿಸಿದೆ ಎಂದು ನ್ಯಾಯಾಲಯ ಹೇಳಿದೆ. ಅಧಿಕಾರಿಗಳು ತೆಗೆದುಕೊಂಡ ಆಡಳಿತಾತ್ಮಕ ಕ್ರಮದಲ್ಲಿ ಯಾವುದೇ ಕಾನೂನುಬಾಹಿರತೆಯನ್ನು ಕಂಡುಕೊಂಡಿಲ್ಲ ಎಂದು ತಿಳಿಸಿದೆ.

ಸ್ವಯಂ ಘೋಷಿತ ದೇವಮಾನವ ಅಸಾರಾಂ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದು, ಪ್ರಸ್ತುತ ಆರು ತಿಂಗಳ ಅವಧಿಗೆ ಜಾಮೀನಿನ ಮೇಲೆ ಹೊರಗಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...