Homeಕರ್ನಾಟಕ'ಮೈಸೂರು ಚಲೋ' ಮೆರವಣಿಗೆಗೆ ಹೈಕೋರ್ಟ್‌ ನಕಾರ : ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ

‘ಮೈಸೂರು ಚಲೋ’ ಮೆರವಣಿಗೆಗೆ ಹೈಕೋರ್ಟ್‌ ನಕಾರ : ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ

- Advertisement -
- Advertisement -

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಖಂಡಿಸಿ ಮೈಸೂರು ಚಲೋ ಮೆರವಣಿಗೆ ನಡೆಸಲು ಹೈಕೋರ್ಟ್ ಅನುಮತಿ ನಿರಾಕರಿಸಿದ್ದು, ಪುಟ್‌ಬಾಲ್ ಕ್ರೀಡಾಂಗಣದಲ್ಲಿ ಒಂದೂವರೆ ತಾಸು ಸಮಾವೇಶ ನಡೆಸಲು ಮಾತ್ರ ಷರತ್ತುಬದ್ದ ಅನುಮತಿ ನೀಡಿದೆ ಎಂದು ವರದಿಯಾಗಿದೆ.

ಮೈಸೂರು ಚಲೋಗೆ ಅನುಮತಿ ನಿರಾಕರಿಸಿದ್ದ ನಗರ ಪೊಲೀಸ್‌ ಆಯುಕ್ತರ ಕ್ರಮ ಪ್ರಶ್ನಿಸಿ ರಾಷ್ಟ್ರೀಯ ಸುರಕ್ಷಾ ಜನಾಂದೋಲನಾ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್‌. ದೇವದಾಸ್‌ ಅವರ ಏಕಸದಸ್ಯ ಪೀಠ ಸೋಮವಾರ (ಫೆ.24) ವಿಚಾರಣೆ ನಡೆಸಿದೆ.

ಮೈಸೂರಿನ ಫುಟ್‌ಬಾಲ್‌ ಕ್ರೀಡಾಂಗಣದ ವ್ಯಾಪ್ತಿಯಲ್ಲಿ ಅರ್ಜಿದಾರರು ಸಭೆ/ಸಮಾವೇಶ ನಡೆಸಬಹುದು. ಇದಕ್ಕೆ 1 ಲಕ್ಷ ರೂಪಾಯಿ ಮೌಲ್ಯದ ಬಾಂಡ್‌ ಅನ್ನು ಮೈಸೂರು ಪೊಲೀಸ್‌ ಆಯುಕ್ತರಿಗೆ ಒದಗಿಸಬೇಕು. ಸಮಾವೇಶದಲ್ಲಿ ಭಾಗಿಯಾಗುವ ಯಾರೂ ಪ್ರಚೋದನಾಕಾರಿ ಭಾಷಣ ಮಾಡದಂತೆ ಅರ್ಜಿದಾರರು ಖಾತರಿವಹಿಸಬೇಕು. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದರೆ ಅರ್ಜಿದಾರರನ್ನು ಹೊಣೆಗಾರರನ್ನಾಗಿಸಲಾಗುವುದು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಇಂದು (ಫೆ.24) ಬೆಳಿಗ್ಗೆ ಮೈಸೂರು ಚಲೋ ನಡೆಸಲು ರಾಷ್ಟ್ರೀಯ ಸುರಕ್ಷಾ ಜನಾಂದೋಲನಾ ಸಮಿತಿ ಮುಂದಾಗಿತ್ತು. ಆದರೆ, ನಿಷೇಧಾಜ್ಞೆ ಜಾರಿಗೊಳಿಸಿದ್ದ ಪೊಲೀಸರು ಮೆರವಣಿಗೆ, ಸಭೆಗೆ ಅನುಮತಿ ನಿರಾಕರಿಸಿದ್ದರು. ಆದರೆ, ಮಧ್ಯಾಹ್ನ 3:30ರ ಬಳಿಕ ಒಂದೂವರೆ ತಾಸು ಸಭೆ ನಡೆಸಲು ನ್ಯಾಯಾಲಯ ಅನುಮತಿ ನೀಡಿದೆ ಎಂದು ವರದಿ ಹೇಳಿದೆ.

ಮೈಸೂರು ಪೊಲೀಸ್‌ ಆಯುಕ್ತರು ಫುಟ್‌ಬಾಲ್‌ ಕ್ರೀಡಾಂಗಣ ವ್ಯಾಪ್ತಿಯಲ್ಲಿ ಅಗತ್ಯ ಬಂದೋಬಸ್ತ್‌ ಮಾಡಬೇಕು. ಇಡೀ ಸಭೆಯನ್ನು ವಿಡಿಯೋ ಚಿತ್ರೀಕರಣ ಮಾಡಬೇಕು. ಸೀಮಿತ ಅವಧಿಗೆ ನಿಷೇಧಾಜ್ಞೆ ಹಿಂಪಡೆಯಬೇಕು ಎಂದು ನ್ಯಾಯಾಲಯವು ನಿರ್ದೇಶಿಸಿದೆ. ಅರ್ಜಿ ಇತ್ಯರ್ಥಪಡಿಸಿದೆ ಎಂದು ವರದಿ ವಿವರಿಸಿದೆ.

ಇಂದು ವಿಚಾರಣೆ ವೇಳೆ ಅರ್ಜಿದಾರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಎಂ ಅರುಣ ಶ್ಯಾಮ್‌ ಅವರು “ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಜಿಹಾದಿ ಮನಸ್ಥಿತಿಯವರು ಹಲ್ಲೆ ನಡೆಸಿದ್ದಾರೆ. ಪೊಲೀಸರಿಗೆ ಬೆಂಬಲ ಸೂಚಿಸುವ ದೃಷ್ಟಿಯಿಂದ ಮೈಸೂರಿನ ಗನ್‌ ಹೌಸ್‌ನಿಂದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ಶಾಂತಿಯುತವಾಗಿ ಮೈಸೂರು ಚಲೋ ನಡೆಲು ಅನುಮತಿಸುವ ಮೂಲಕ ಅರ್ಜಿದಾರರ ಮೂಲಭೂತ ಹಕ್ಕು ರಕ್ಷಿಸಬೇಕು” ಎಂದು ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು “ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದೆ. ಒಂದು ವಾರ ಅಥವಾ 10 ದಿನಗಳ ಬಳಿಕ ಅರ್ಜಿದಾರರು ಸಭೆ/ಮೆರವಣಿಗೆ ನಡೆಸಬಹುದಾಗಿದೆ. ಈಗಾಗಲೇ ಸಭೆ ನಡೆಸಲು ಅನುಮತಿ ಕೋರಿ ಸಲ್ಲಿಸಿದ್ದಎರಡು ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಗೆ ಅಡ್ಡಿಯಾಗುವ ಸಾಧ್ಯತೆ ಇರುವುದರಿಂದ ಹಾಗೂ ಅಹಿತರಕರ ಘಟನೆ ನಡೆದರೆ ಅರ್ಜಿದಾರರನ್ನು ಹೊಣೆ ಮಾಡಲಾಗದು. ಹೀಗಾಗಿ, ಅನುಮತಿ ನೀಡಬಾರದು” ಎಂದಿದ್ದಾರೆ.

ಅರ್ಜಿದಾರರಿಗೆ ಸಭೆ ನಡೆಸಲು ಅನುಮತಿಸುವ ಮತ್ತು ಕಾನೂನು ಸುವ್ಯವಸ್ಥೆ ಪರಿಸ್ಥಿತಿಯ ಕುರಿತು ಸಾಕಷ್ಟು ಯೋಚಿಸಿದ ನ್ಯಾಯಾಲಯ ರಾಜ್ಯ ಸರ್ಕಾರ ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ಸಭೆ ನಡೆಸಲು ಅನುಮತಿಸುವ ಸಂಬಂಧ ಸೂಚನೆ ಪಡೆಯಲು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ (ಎಎಜಿ) ಭಾನುಪ್ರಕಾಶ್ ಅವರಿಗೆ ಸೂಚಿಸಿತ್ತು. ಇದರ ಆಧಾರದಲ್ಲಿ ನ್ಯಾಯಾಲಯಕ್ಕೆ ಮಾಹಿತಿ ಒದಗಿಸಿದ ಎಎಜಿ ಅವರು ಫುಟ್‌ಬಾಲ್‌ ಕ್ರೀಡಾಂಗಣದಲ್ಲಿ ಅತ್ಯಂತ ಕಡಿಮೆ ಸಂಖ್ಯೆಯ ಜನರೊಂದಿಗೆ ಸಭೆ ಮಾಡಲು ಅನುಮತಿಸಬಹುದು” ಎಂದಿದ್ದಾರೆ.

ಇದನ್ನು ಆಲಿಸಿದ ಪೀಠವು ಅರ್ಜಿದಾರರ ನಿರಂತರ ಕೋರಿಕೆಯ ಮೇರೆಗೆ ಸೀಮಿತ ಅವಧಿಗೆ ಸಭೆ/ಸಮಾವೇಶ ನಡೆಸಲು ಷರತ್ತುಗಳನ್ನು ವಿಧಿಸಿ, ಅನುಮತಿಸಿದೆ ಎಂದು ಬಾರ್ & ಬೆಂಚ್ ವರದಿ ತಿಳಿಸಿದೆ.

ಕೆಎಸ್‌ಆರ್‌ಟಿಸಿ ಕಂಡಕ್ಟರ್ ಹಲ್ಲೆ ಪ್ರಕರಣ | ಆರೋಪಿ ವಿರುದ್ಧ ಗೂಂಡಾ ಕಾಯ್ದೆ: ಸಚಿವ ರಾಮಲಿಂಗಾ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...