Homeಕರ್ನಾಟಕಆದೇಶ ಪಾಲಿಸದ ರಾಜ್ಯ ಸರ್ಕಾರಕ್ಕೆ ₹5 ಲಕ್ಷ ದಂಡ ವಿಧಿಸಿದ ಹೈಕೋರ್ಟ್

ಆದೇಶ ಪಾಲಿಸದ ರಾಜ್ಯ ಸರ್ಕಾರಕ್ಕೆ ₹5 ಲಕ್ಷ ದಂಡ ವಿಧಿಸಿದ ಹೈಕೋರ್ಟ್

- Advertisement -
- Advertisement -

ನಿವೃತ್ತ ಗ್ರಂಥಪಾಲಕಿಯೊಬ್ಬರ ವೇತನ ಮತ್ತು ಹಿಂಬಾಕಿ ಪಾವತಿ ವಿಚಾರದಲ್ಲಿ ನ್ಯಾಯಾಲಯದ ಆದೇಶ ಪಾಲಿಸದ ರಾಜ್ಯ ಸರ್ಕಾರವನ್ನು ಹೈಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿದ್ದು, 5 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಬೆಂಗಳೂರಿನ ವಿ.ಎ.ನಾಗಮಣಿ ಎಂಬವರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯ ವೇಳೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠವು ಸರ್ಕಾರದ ವಿರುದ್ದ ಕೆಂಡಾಮಂಡಲವಾಗಿದೆ.

“ಸರ್ಕಾರಕ್ಕೆ ಮೃದು ಭಾಷೆಯ ಆದೇಶ ಅರ್ಥವಾಗುವುದಿಲ್ಲ. ನಾವು ಪ್ರತಿಯೊಂದು ಆದೇಶವನ್ನು ಆಸಿಡ್‌ನಲ್ಲಿ ಅದ್ದಿದ ಲೇಖನಿಯಲ್ಲಿ (ಕಠಿಣವಾಗಿ) ಬರೆಯಬೇಕಿದೆ” ಎಂದು ನ್ಯಾಯಮೂರ್ತಿಗಳು ಮೌಖಿಕವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ಪರ ಹೈಕೋರ್ಟ್‌ಗೆ ಮೆಮೋ ಸಲ್ಲಿಸಿದ್ದ ವಕೀಲರು, ನ್ಯಾಯಾಲಯದ ಆದೇಶ ಪಾಲಿಸಲು ಆರು ವಾರಗಳ ಕಾಲವಕಾಶ ನೀಡುವಂತೆ ಕೋರಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಸಾಮಾನ್ಯವಾಗಿ ಸರ್ಕಾರ ಕೋರಿದರೆ ನ್ಯಾಯಾಲಯವು ಆರು ವಾರಗಳ ಸಮಯ ನೀಡುತ್ತದೆ. ಆದರೆ, ಈ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಸಮಯ ನೀಡಲು ಸಾಧ್ಯವಿಲ್ಲ ಎಂದಿದೆ.

ಪ್ರಕರಣ ಹಿನ್ನೆಲೆ : ಬೆಂಗಳೂರಿನ ಕೋನೇನ ಅಗ್ರಹಾರದ ಸರ್.ಎಂ.ವಿಶ್ವೇಶ್ವರಯ್ಯ ಪ್ರೌಢಶಾಲೆಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ನಿವೃತ್ತಿ ಹೊಂದಿರುವ ಗ್ರಂಥಪಾಲಕಿ ವಿ.ಎ.ನಾಗಮಣಿ ಅವರು, ತಮಗೆ ಗ್ರಂಥಪಾಲಕರ ದರ್ಜೆಯ ವೇತನ‌ ಮಂಜೂರು ಮಾಡಲು 2014ರಲ್ಲಿ ಹೈಕೋರ್ಟ್‌ಗೆ ಕೋರಿದ್ದರು.

ರಾಜ್ಯದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿದ್ದ 250ಕ್ಕೂ ಹೆಚ್ಚು ನೌಕರರು ಗ್ರಂಥಪಾಲಕರ ಹುದ್ದೆಯ ವೇತನ ಶ್ರೇಣಿ ಹೊಂದಿದ್ದು, ನನಗೂ ಇದೇ ವೇತನ ಶ್ರೇಣಿಯನ್ನು ಅನ್ವಯಿಸಲು ಆದೇಶಿಸಬೇಕು ಎಂದು ಮನವಿ ಮಾಡಿದ್ದರು.

ಅಕ್ಟೋಬರ್‌ 2021ರಲ್ಲಿ ನಾಗಮಣಿ ಅವರ ರಿಟ್ ಅರ್ಜಿ ಮಾನ್ಯ ಮಾಡಿದ್ದ ಹೈಕೋರ್ಟ್, ಅವರ ವೇತನ ತಾರತಮ್ಯ ಸರಿಪಡಿಸುವಂತೆ ಸರ್ಕಾರಕ್ಕೆ ಆದೇಶಿಸಿ, ಎರಡು ತಿಂಗಳ ಗಡುವು ನೀಡಿತ್ತು. ಆದರೆ, ರಾಜ್ಯ ಸರ್ಕಾರದ ಹೈಕೋರ್ಟ್‌ ಆದೇಶ ಪಾಲಿಸಿರಲಿಲ್ಲ. ಈ ಹಿನ್ನೆಲೆ, ನಾಗಮಣಿ ಅವರು ರಾಜ್ಯ ಸರ್ಕಾರದ ವಿರುದ್ದ ಸಿವಿಲ್ ನ್ಯಾಯಾಂಗ ‌ನಿಂದನೆ ಮೊಕದ್ದಮೆ ದಾಖಲಿಸಿದ್ದರು.

ಇದನ್ನೂ ಓದಿ : ಎಸ್ಸಿ-ಎಸ್ಟಿ ವಸತಿ ನಿಲಯಗಳಲ್ಲಿ ವಾರ್ಡನ್‌ಗಳ ಕೊರತೆ: ವರದಿ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...