Homeಮುಖಪುಟತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

- Advertisement -
- Advertisement -

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ.

ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್ ಜಿ.ಎಸ್. ಆಶಾನಾಥ್ ಮತ್ತು ಕೌನ್ಸಿಲರ್ ಆರ್. ವಿನೋದ್ ಅವರು ‘ಭಾರತ ಮಾತೆ’ಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇತರ ಕೆಲವು ಕೌನ್ಸಿಲರ್‌ಗಳು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪರಿಭಾಷೆಯಾದ ‘ಬಲಿದಾನಿ’ಗಳ (ಹುತಾತ್ಮರು) ಹೆಸರಿನಲ್ಲಿ ಪ್ರಮಾಣ ವಚನ ವಚನ ಸ್ವೀಕಾರ ಮಾಡಿದ್ದರು. ಇನ್ನು ಹಲವರು ಶ್ರೀ ಪದ್ಮನಾಭಸ್ವಾಮಿ ಹಾಗೂ ಕೆಲವರು ‘ಆಟ್ಟುಕಲ್ ಅಮ್ಮ’ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಇವರ ಜೊತೆಗೆ ಕೆಲವರು ತಮ್ಮ ಸ್ಥಳೀಯ ದೇವತೆಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು; ಉದಾಹರಣೆಗೆ ತಿರುವಲ್ಲಂ ಕೌನ್ಸಿಲರ್ ಗೋಪಕುಮಾರ್ ಅವರು ತಿರುವಲ್ಲಂ ಪರಶುರಾಮರ ಹೆಸರಿನಲ್ಲಿ, ಕಮಲೇಶ್ವರಂ ಕೌನ್ಸಿಲರ್ ವಿ. ಗಿರಿ ಅವರು ಇರುಂಕುಳಂಗರ ದುರ್ಗಾ ಭಗವತಿಯ ಹೆಸರಿನಲ್ಲಿ ಮತ್ತು ಪಂಗೋಡ್ ಕೌನ್ಸಿಲರ್ ವಿಷ್ಣು ಮೋಹನ್ ಅವರು ಉದಿಯನ್ನೂರು ದೇವಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಹಾಗೆಯೇ ವಲಿಯಾಸಾಲ ಕೌನ್ಸಿಲರ್ ವಿ.ಎಸ್. ಸೂರ್ಯ ಅವರು ‘ಕಾವಿಲಮ್ಮ’ನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು.

20 ಕೌನ್ಸಿಲರ್‌ಗಳಲ್ಲಿ ಆರ್. ಸುಗತನ್ ಕೂಡ ಒಬ್ಬರು. ಇವರನ್ನು ಕೇರಳದ ಸಮಾಜ ವಿರೋಧಿ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಕಾಪಾ) ಅಡಿಯಲ್ಲಿ ಬಂಧಿಸಲಾಗಿದೆ. ಇವರು ಪ್ರಸ್ತುತ ತ್ರಿಸ್ಸೂರ್‌ನ ವಿಯ್ಯೂರ್ ಸೆಂಟ್ರಲ್ ಜೈಲಿನ ಉನ್ನತ ಭದ್ರತಾ ಸುಧಾರಣಾ ಕೇಂದ್ರದಲ್ಲಿದ್ದಾರೆ. ಕೊಲೆಯತ್ನ ಸೇರಿದಂತೆ ಹಲವಾರು ಗಂಭೀರ ಆರೋಪಗಳು ಒಳಗೊಂಡಂತೆ ಇವರ ವಿರುದ್ಧ 19ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಿವೆ. ಈ ಹಿನ್ನೆಲೆಯಲ್ಲಿ ಇವರು ಮುಂದಿನ ನಾಲ್ಕು ವಾರಗಳೊಳಗೆ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವೇ ಎಂಬುದನ್ನು ಕಾದು ನೋಡಬೇಕಾಗಿದೆ. ಸುಗತನ್ ಅವರು ಈ ಹಿಂದೆ ‘ಗುರುದೇವನ್’ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಸಿಪಿಐ(ಎಂ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಮತ್ತು ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯಡಿಎಫ್‌) ಎರಡೂ ಒಟ್ಟಿಗೆ ಸೇರಿ ಈ 20 ಬಿಜೆಪಿ ಕೌನ್ಸಿಲರ್‌ಗಳನ್ನು ಅನರ್ಹಗೊಳಿಸುವಂತೆ ಒತ್ತಾಯಿಸುತ್ತಿವೆ.

ಎಲ್‌ಡಿಎಫ್‌ ಕೌನ್ಸಿಲ್ ಪಕ್ಷದ ನಾಯಕ ಅಡ್ವೊಕೇಟ್ ಎಸ್.ಪಿ. ದೀಪಕ್ ಅವರು 20 ಬಿಜೆಪಿ ಕೌನ್ಸಿಲರ್‌ಗಳನ್ನು ಅನರ್ಹಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿದಾರರು ದೇವನಾಮದಲ್ಲಿ ಅಥವಾ ಕೇರಳ ಮುನ್ಸಿಪಾಲಿಟಿ ಕಾಯ್ದೆ 1994ರ ಸೆಕ್ಷನ್ 143ರ ಅಡಿಯಲ್ಲಿ ಕಡ್ಡಾಯಗೊಳಿಸಿರುವಂತೆ ಪ್ರಾಮಾಣಿಕವಾಗಿ ದೃಢೀಕರಿಸಿ ಪ್ರಮಾಣ ವಚನ ಸ್ವೀಕರಿಸುವ ಬದಲಾಗಿ, ವಿವಿಧ ದೇವತೆಗಳು, ಹುತಾತ್ಮರು, ರಾಜಕೀಯ ಚಳುವಳಿಗಳು ಮತ್ತು ರಾಜಕೀಯ ನಾಯಕರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ಈ ಅರ್ಜಿಯಲ್ಲಿ ಆರೋಪಿಸಲಾಗಿತ್ತು.

ಪ್ರಮಾಣ ವಚನವು ಸಂವಿಧಾನಕ್ಕೆ ಬದ್ಧವಾಗಿರಬೇಕೇ ಹೊರತು, ಯಾವುದೇ ರಾಜಕೀಯ ಪಕ್ಷಕ್ಕಾಗಲಿ ಅಥವಾ ಅದರ ಹುತಾತ್ಮರಿಗಾಗಲಿ ಅಲ್ಲ ಎಂದು ವಾದಿಸಿದ್ದರು. ಆದ್ದರಿಂದ ಈ ರೀತಿಯ ಪ್ರಮಾಣ ವಚನಗಳು ರಾಜ್ಯ ಚುನಾವಣಾ ಆಯೋಗದ ಕಡ್ಡಾಯ ನಿರ್ದೇಶನಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರ ಹೇಳಿದ್ದರು.

ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ ಏಕಸದಸ್ಯ ಪೀಠ, ಮುನ್ಸಿಪಾಲಿಟಿ ಕಾಯ್ದೆಯ ಸೆಕ್ಷನ್ 531ರ ಪ್ರಯೋಜನವು ಪ್ರತಿವಾದಿ-ಕೌನ್ಸಿಲರ್‌ಗಳಿಗೆ ಇಂದಿನವರೆಗೆ (ಜೂ.24) ಲಭ್ಯವಿರುತ್ತದೆ ಎಂದು ಸ್ಪಷ್ಟಪಡಿಸಿದೆ.

ಕೇರಳ ಮುನ್ಸಿಪಾಲಿಟಿ ಕಾಯ್ದೆಯ ಸೆಕ್ಷನ್ 531ರ ಪ್ರಕಾರ, ಕೌನ್ಸಿಲ್‌ನ ರಚನೆಯಲ್ಲಿನ ಯಾವುದೇ ನ್ಯೂನತೆ, ಖಾಲಿ ಹುದ್ದೆ, ಅಕ್ರಮ ಅಥವಾ ವ್ಯಕ್ತಿಯೊಬ್ಬರ ಚುನಾವಣೆಯಲ್ಲಿನ ಕಾನೂನುಬಾಹಿರತೆಯ ಕಾರಣಕ್ಕಾಗಿ ಮಾತ್ರ ಮುನ್ಸಿಪಾಲಿಟಿ ಕೌನ್ಸಿಲ್, ಸ್ಥಾಯಿ ಸಮಿತಿ ಅಥವಾ ಇತರ ಯಾವುದೇ ಸಮಿತಿಯ ಯಾವುದೇ ಕಾಯ್ದೆ ಅಥವಾ ನಡಾವಳಿಗಳು ಅಸಿಂಧುಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸುತ್ತದೆ.

ಗ್ರಾಮ ಪಂಚಾಯತ್ ಸದಸ್ಯನ ಪ್ರಮಾಣವಚನವೂ ಅಸಿಂಧು

ಕೇರಳದ ಮಾಜಿ ಮುಖ್ಯಮಂತ್ರಿ ದಿವಂಗತ ಉಮ್ಮನ್ ಚಾಂಡಿ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ವಡಕ್ಕಂಚೇರಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಪ್ರಮಾಣ ವಚನವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನೂ ಸಹ ನ್ಯಾಯಾಲಯವು ಪರಿಶೀಲನೆ ನಡೆಸಿದೆ.

ಪಂಚಾಯತ್ ರಾಜ್ ಕಾಯ್ದೆಯಡಿ ನಿಗದಿಪಡಿಸಿದ ನಮೂನೆಯು ಕೇವಲ ಎರಡು ಆಯ್ಕೆಗಳನ್ನು ಮಾತ್ರ ನೀಡುತ್ತದೆ; ಅವುಗಳೆಂದರೆ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವುದು ಅಥವಾ ಪ್ರಾಮಾಣಿಕವಾಗಿ ದೃಢೀಕರಿಸುವುದು ಎಂದು ನ್ಯಾಯಾಲಯವು ಹೇಳಿದೆ. ನಿಗದಿಪಡಿಸಿದ ನಮೂನೆಯಿಂದ ಯಾವುದೇ ರೀತಿಯಲ್ಲಿ ವಿಚಲಿತರಾಗುವುದು ಶಾಸನಬದ್ಧ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಆದ್ದರಿಂದ ನ್ಯಾಯಾಲಯವು ಆ ಸದಸ್ಯನ ಪ್ರಮಾಣ ವಚನವನ್ನು ಸಹ ಅಸಿಂಧು ಎಂದು ಘೋಷಿಸಿದೆ.

ಕೇರಳ ಮುನ್ಸಿಪಾಲಿಟಿ ಕಾಯ್ದೆಗೆ ಭಿನ್ನವಾಗಿ, ಪಂಚಾಯತ್ ರಾಜ್ ಕಾಯ್ದೆಯು ಪ್ರಮಾಣ ವಚನ ಅಸಿಂಧುಗೊಂಡ ಸದಸ್ಯರು ಕೈಗೊಂಡ ಕ್ರಮಗಳನ್ನು ರಕ್ಷಿಸುವ ಯಾವುದೇ ನಿಬಂಧನೆಯನ್ನು ಹೊಂದಿಲ್ಲ ಎಂಬುದನ್ನು ನ್ಯಾಯಾಲಯವು ಗಮನಿಸಿದೆ. ಇದರ ಪರಿಣಾಮವಾಗಿ, ತೀರ್ಪು ಬಂದ ದಿನಾಂಕದವರೆಗೆ ಪ್ರತಿವಾದಿಯು ವಡಕ್ಕಂಚೇರಿ ಗ್ರಾಮ ಪಂಚಾಯತ್ ಸದಸ್ಯರಾಗಿ ನಿರ್ವಹಿಸಿದ ಎಲ್ಲಾ ಕಾರ್ಯಗಳು ಅಸಿಂಧು ಎಂದು ನ್ಯಾಯಾಲಯವು ತೀರ್ಪು ನೀಡಿದೆ; ಆದಾಗ್ಯೂ, ನೀಡಲಾದ ಸಮಯದೊಳಗೆ ಹೊಸದಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅವರು ತಮ್ಮ ಸ್ಥಾನವನ್ನು ಕ್ರಮಬದ್ಧಗೊಳಿಸಿಕೊಳ್ಳಬಹುದು ಎಂದು ಸ್ಪಷ್ಟಪಡಿಸಿದೆ.









ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...