Homeಮುಖಪುಟತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

- Advertisement -
- Advertisement -

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ.

ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್ ಜಿ.ಎಸ್. ಆಶಾನಾಥ್ ಮತ್ತು ಕೌನ್ಸಿಲರ್ ಆರ್. ವಿನೋದ್ ಅವರು ‘ಭಾರತ ಮಾತೆ’ಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇತರ ಕೆಲವು ಕೌನ್ಸಿಲರ್‌ಗಳು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪರಿಭಾಷೆಯಾದ ‘ಬಲಿದಾನಿ’ಗಳ (ಹುತಾತ್ಮರು) ಹೆಸರಿನಲ್ಲಿ ಪ್ರಮಾಣ ವಚನ ವಚನ ಸ್ವೀಕಾರ ಮಾಡಿದ್ದರು. ಇನ್ನು ಹಲವರು ಶ್ರೀ ಪದ್ಮನಾಭಸ್ವಾಮಿ ಹಾಗೂ ಕೆಲವರು ‘ಆಟ್ಟುಕಲ್ ಅಮ್ಮ’ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಇವರ ಜೊತೆಗೆ ಕೆಲವರು ತಮ್ಮ ಸ್ಥಳೀಯ ದೇವತೆಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು; ಉದಾಹರಣೆಗೆ ತಿರುವಲ್ಲಂ ಕೌನ್ಸಿಲರ್ ಗೋಪಕುಮಾರ್ ಅವರು ತಿರುವಲ್ಲಂ ಪರಶುರಾಮರ ಹೆಸರಿನಲ್ಲಿ, ಕಮಲೇಶ್ವರಂ ಕೌನ್ಸಿಲರ್ ವಿ. ಗಿರಿ ಅವರು ಇರುಂಕುಳಂಗರ ದುರ್ಗಾ ಭಗವತಿಯ ಹೆಸರಿನಲ್ಲಿ ಮತ್ತು ಪಂಗೋಡ್ ಕೌನ್ಸಿಲರ್ ವಿಷ್ಣು ಮೋಹನ್ ಅವರು ಉದಿಯನ್ನೂರು ದೇವಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಹಾಗೆಯೇ ವಲಿಯಾಸಾಲ ಕೌನ್ಸಿಲರ್ ವಿ.ಎಸ್. ಸೂರ್ಯ ಅವರು ‘ಕಾವಿಲಮ್ಮ’ನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು.

20 ಕೌನ್ಸಿಲರ್‌ಗಳಲ್ಲಿ ಆರ್. ಸುಗತನ್ ಕೂಡ ಒಬ್ಬರು. ಇವರನ್ನು ಕೇರಳದ ಸಮಾಜ ವಿರೋಧಿ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಕಾಪಾ) ಅಡಿಯಲ್ಲಿ ಬಂಧಿಸಲಾಗಿದೆ. ಇವರು ಪ್ರಸ್ತುತ ತ್ರಿಸ್ಸೂರ್‌ನ ವಿಯ್ಯೂರ್ ಸೆಂಟ್ರಲ್ ಜೈಲಿನ ಉನ್ನತ ಭದ್ರತಾ ಸುಧಾರಣಾ ಕೇಂದ್ರದಲ್ಲಿದ್ದಾರೆ. ಕೊಲೆಯತ್ನ ಸೇರಿದಂತೆ ಹಲವಾರು ಗಂಭೀರ ಆರೋಪಗಳು ಒಳಗೊಂಡಂತೆ ಇವರ ವಿರುದ್ಧ 19ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಿವೆ. ಈ ಹಿನ್ನೆಲೆಯಲ್ಲಿ ಇವರು ಮುಂದಿನ ನಾಲ್ಕು ವಾರಗಳೊಳಗೆ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವೇ ಎಂಬುದನ್ನು ಕಾದು ನೋಡಬೇಕಾಗಿದೆ. ಸುಗತನ್ ಅವರು ಈ ಹಿಂದೆ ‘ಗುರುದೇವನ್’ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಸಿಪಿಐ(ಎಂ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಮತ್ತು ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯಡಿಎಫ್‌) ಎರಡೂ ಒಟ್ಟಿಗೆ ಸೇರಿ ಈ 20 ಬಿಜೆಪಿ ಕೌನ್ಸಿಲರ್‌ಗಳನ್ನು ಅನರ್ಹಗೊಳಿಸುವಂತೆ ಒತ್ತಾಯಿಸುತ್ತಿವೆ.

ಎಲ್‌ಡಿಎಫ್‌ ಕೌನ್ಸಿಲ್ ಪಕ್ಷದ ನಾಯಕ ಅಡ್ವೊಕೇಟ್ ಎಸ್.ಪಿ. ದೀಪಕ್ ಅವರು 20 ಬಿಜೆಪಿ ಕೌನ್ಸಿಲರ್‌ಗಳನ್ನು ಅನರ್ಹಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿದಾರರು ದೇವನಾಮದಲ್ಲಿ ಅಥವಾ ಕೇರಳ ಮುನ್ಸಿಪಾಲಿಟಿ ಕಾಯ್ದೆ 1994ರ ಸೆಕ್ಷನ್ 143ರ ಅಡಿಯಲ್ಲಿ ಕಡ್ಡಾಯಗೊಳಿಸಿರುವಂತೆ ಪ್ರಾಮಾಣಿಕವಾಗಿ ದೃಢೀಕರಿಸಿ ಪ್ರಮಾಣ ವಚನ ಸ್ವೀಕರಿಸುವ ಬದಲಾಗಿ, ವಿವಿಧ ದೇವತೆಗಳು, ಹುತಾತ್ಮರು, ರಾಜಕೀಯ ಚಳುವಳಿಗಳು ಮತ್ತು ರಾಜಕೀಯ ನಾಯಕರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ಈ ಅರ್ಜಿಯಲ್ಲಿ ಆರೋಪಿಸಲಾಗಿತ್ತು.

ಪ್ರಮಾಣ ವಚನವು ಸಂವಿಧಾನಕ್ಕೆ ಬದ್ಧವಾಗಿರಬೇಕೇ ಹೊರತು, ಯಾವುದೇ ರಾಜಕೀಯ ಪಕ್ಷಕ್ಕಾಗಲಿ ಅಥವಾ ಅದರ ಹುತಾತ್ಮರಿಗಾಗಲಿ ಅಲ್ಲ ಎಂದು ವಾದಿಸಿದ್ದರು. ಆದ್ದರಿಂದ ಈ ರೀತಿಯ ಪ್ರಮಾಣ ವಚನಗಳು ರಾಜ್ಯ ಚುನಾವಣಾ ಆಯೋಗದ ಕಡ್ಡಾಯ ನಿರ್ದೇಶನಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರ ಹೇಳಿದ್ದರು.

ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ ಏಕಸದಸ್ಯ ಪೀಠ, ಮುನ್ಸಿಪಾಲಿಟಿ ಕಾಯ್ದೆಯ ಸೆಕ್ಷನ್ 531ರ ಪ್ರಯೋಜನವು ಪ್ರತಿವಾದಿ-ಕೌನ್ಸಿಲರ್‌ಗಳಿಗೆ ಇಂದಿನವರೆಗೆ (ಜೂ.24) ಲಭ್ಯವಿರುತ್ತದೆ ಎಂದು ಸ್ಪಷ್ಟಪಡಿಸಿದೆ.

ಕೇರಳ ಮುನ್ಸಿಪಾಲಿಟಿ ಕಾಯ್ದೆಯ ಸೆಕ್ಷನ್ 531ರ ಪ್ರಕಾರ, ಕೌನ್ಸಿಲ್‌ನ ರಚನೆಯಲ್ಲಿನ ಯಾವುದೇ ನ್ಯೂನತೆ, ಖಾಲಿ ಹುದ್ದೆ, ಅಕ್ರಮ ಅಥವಾ ವ್ಯಕ್ತಿಯೊಬ್ಬರ ಚುನಾವಣೆಯಲ್ಲಿನ ಕಾನೂನುಬಾಹಿರತೆಯ ಕಾರಣಕ್ಕಾಗಿ ಮಾತ್ರ ಮುನ್ಸಿಪಾಲಿಟಿ ಕೌನ್ಸಿಲ್, ಸ್ಥಾಯಿ ಸಮಿತಿ ಅಥವಾ ಇತರ ಯಾವುದೇ ಸಮಿತಿಯ ಯಾವುದೇ ಕಾಯ್ದೆ ಅಥವಾ ನಡಾವಳಿಗಳು ಅಸಿಂಧುಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸುತ್ತದೆ.

ಗ್ರಾಮ ಪಂಚಾಯತ್ ಸದಸ್ಯನ ಪ್ರಮಾಣವಚನವೂ ಅಸಿಂಧು

ಕೇರಳದ ಮಾಜಿ ಮುಖ್ಯಮಂತ್ರಿ ದಿವಂಗತ ಉಮ್ಮನ್ ಚಾಂಡಿ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ವಡಕ್ಕಂಚೇರಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಪ್ರಮಾಣ ವಚನವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನೂ ಸಹ ನ್ಯಾಯಾಲಯವು ಪರಿಶೀಲನೆ ನಡೆಸಿದೆ.

ಪಂಚಾಯತ್ ರಾಜ್ ಕಾಯ್ದೆಯಡಿ ನಿಗದಿಪಡಿಸಿದ ನಮೂನೆಯು ಕೇವಲ ಎರಡು ಆಯ್ಕೆಗಳನ್ನು ಮಾತ್ರ ನೀಡುತ್ತದೆ; ಅವುಗಳೆಂದರೆ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವುದು ಅಥವಾ ಪ್ರಾಮಾಣಿಕವಾಗಿ ದೃಢೀಕರಿಸುವುದು ಎಂದು ನ್ಯಾಯಾಲಯವು ಹೇಳಿದೆ. ನಿಗದಿಪಡಿಸಿದ ನಮೂನೆಯಿಂದ ಯಾವುದೇ ರೀತಿಯಲ್ಲಿ ವಿಚಲಿತರಾಗುವುದು ಶಾಸನಬದ್ಧ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಆದ್ದರಿಂದ ನ್ಯಾಯಾಲಯವು ಆ ಸದಸ್ಯನ ಪ್ರಮಾಣ ವಚನವನ್ನು ಸಹ ಅಸಿಂಧು ಎಂದು ಘೋಷಿಸಿದೆ.

ಕೇರಳ ಮುನ್ಸಿಪಾಲಿಟಿ ಕಾಯ್ದೆಗೆ ಭಿನ್ನವಾಗಿ, ಪಂಚಾಯತ್ ರಾಜ್ ಕಾಯ್ದೆಯು ಪ್ರಮಾಣ ವಚನ ಅಸಿಂಧುಗೊಂಡ ಸದಸ್ಯರು ಕೈಗೊಂಡ ಕ್ರಮಗಳನ್ನು ರಕ್ಷಿಸುವ ಯಾವುದೇ ನಿಬಂಧನೆಯನ್ನು ಹೊಂದಿಲ್ಲ ಎಂಬುದನ್ನು ನ್ಯಾಯಾಲಯವು ಗಮನಿಸಿದೆ. ಇದರ ಪರಿಣಾಮವಾಗಿ, ತೀರ್ಪು ಬಂದ ದಿನಾಂಕದವರೆಗೆ ಪ್ರತಿವಾದಿಯು ವಡಕ್ಕಂಚೇರಿ ಗ್ರಾಮ ಪಂಚಾಯತ್ ಸದಸ್ಯರಾಗಿ ನಿರ್ವಹಿಸಿದ ಎಲ್ಲಾ ಕಾರ್ಯಗಳು ಅಸಿಂಧು ಎಂದು ನ್ಯಾಯಾಲಯವು ತೀರ್ಪು ನೀಡಿದೆ; ಆದಾಗ್ಯೂ, ನೀಡಲಾದ ಸಮಯದೊಳಗೆ ಹೊಸದಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅವರು ತಮ್ಮ ಸ್ಥಾನವನ್ನು ಕ್ರಮಬದ್ಧಗೊಳಿಸಿಕೊಳ್ಳಬಹುದು ಎಂದು ಸ್ಪಷ್ಟಪಡಿಸಿದೆ.









ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...