Homeಮುಖಪುಟಜಿಗ್ನೇಶ್‌ ಜಾಮೀನು: ಅಸ್ಸಾಂ ಪೊಲೀಸರನ್ನು ಕುಟುಕಿದ ಕೆಳ ನ್ಯಾಯಾಲಯದ ನಡೆಗೆ ಹೈಕೋರ್ಟ್ ಅಸಮ್ಮತಿ

ಜಿಗ್ನೇಶ್‌ ಜಾಮೀನು: ಅಸ್ಸಾಂ ಪೊಲೀಸರನ್ನು ಕುಟುಕಿದ ಕೆಳ ನ್ಯಾಯಾಲಯದ ನಡೆಗೆ ಹೈಕೋರ್ಟ್ ಅಸಮ್ಮತಿ

- Advertisement -
- Advertisement -

ಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರಿಗೆ ಜಾಮೀನು ಮಂಜೂರು ಮಾಡುವ ಆದೇಶದಲ್ಲಿ ಅಸ್ಸಾಂ ಪೊಲೀಸರ ಕುರಿತು ಬಾರ್ಪೇಟಾ ನ್ಯಾಯಾಲಯವು ನೀಡಿರುವ ಹೇಳಿಕೆಗಳಿಗೆ ಗುವಾಹಟಿ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.

ಮೋದಿಯವರನ್ನು ಟೀಕಿಸಿದ ಟ್ವೀಟ್‌ ಆಧರಿಸಿ ಜಿಗ್ನೇಶ್ ಮೇಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ದೊರೆತ ಮರುಗಳಿಗೆಯೇ ಜಿಗ್ನೇಶ್ ಅವರನ್ನು ಮತ್ತೆ ಬಂಧಿಸಲಾಯಿತು. ಕರ್ತವ್ಯ ನಿರತ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪವನ್ನು ಮೇವಾನಿ ಮೇಲೆ ಹೊರಿಸಲಾಗಿತ್ತು. ಎರಡನೇ ಪ್ರಕರಣದ ಜಾಮೀನು ಅರ್ಜಿಯನ್ನು ವಿಚಾರಿಸಿದ್ದ ಬಾರ್ಪೇಟಾ ನ್ಯಾಯಾಲಯ ಪೊಲೀಸ್ ಪಡೆಯನ್ನು ಕಟುವಾಗಿ ಟೀಕಿಸಿತ್ತು. “ನಕಲಿ ಪ್ರಕರಣವನ್ನು ದಾಖಲಿಸಲಾಗಿದೆ” ಎಂದು ತರಾಟೆಗೆ ತೆಗೆದುಕೊಳ್ಳುವ ಜೊತೆಗೆ ರಾಜ್ಯದ ಪೊಲೀಸ್‌ ವ್ಯವಸ್ಥೆಯ ಕುರಿತು ಬೇಸರ ವ್ಯಕ್ತಪಡಿಸಿತ್ತು. ಈ ಅಭಿಪ್ರಾಯಗಳಿಗೆ ಈಗ ಹೈಕೋರ್ಟ್‌ನಿಂದ ತಡೆ ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕೆಳ ನ್ಯಾಯಾಲಯವು ತನ್ನ ಮಿತಿಯನ್ನು ಮೀರಿದೆ. ಪೊಲೀಸ್ ಪಡೆ ಮತ್ತು ಅಸ್ಸಾಂ ಸರ್ಕಾರವನ್ನು ನಿರುತ್ಸಾಹಗೊಳಿಸಿದೆ” ಎಂದು ಹೈಕೋರ್ಟ್ ಅಭಿಪ್ರಾಯ ತಾಳಿದೆ.

ಬಾರ್ಪೇಟಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅಪರೇಶ್ ಚಕ್ರವರ್ತಿ ಅವರು ಮಾಡಿರುವ ಅವಲೋಕನಗಳನ್ನು ಪ್ರಶ್ನಿಸಿ ಅಸ್ಸಾಂ ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೇಬಾಶಿಸ್ ಬರುವಾ, “ದಲಿತ ನಾಯಕ ಮತ್ತು ಸ್ವತಂತ್ರ ಶಾಸಕರಾದ ಮೇವಾನಿ ಅವರಿಗೆ ಜಾಮೀನು ನೀಡಿರುವ ಬಗ್ಗೆ ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸಲಿಲ್ಲ” ಎಂದು ವರದಿ ಹೇಳಿದೆ.

ಜಾಮೀನು ನೀಡುವ ವೇಳೆ ಹೈಕೋರ್ಟ್‌ಗೆ ಮನವಿ ಮಾಡಿದ್ದ ಬಾರ್ಪೇಟಾ ಜಿಲ್ಲಾ ಕೋರ್ಟ್, “ಆರೋಪಿಯ ವಿರುದ್ಧ ಈ ರೀತಿಯ ಸುಳ್ಳು ಪ್ರಕರಣ ದಾಖಲಿಸುವ ಪ್ರವೃತ್ತಿ ನಿತ್ಯವೂ ನಡೆಯುತ್ತಿದ್ದು, ಇವುಗಳನ್ನು ತಡೆಯಲು ಅಸ್ಸಾಂ ಪೊಲೀಸರಿಗೆ ನಿರ್ದೇಶನವನ್ನು ನೀಡಬೇಕು” ಎಂದು ಕೋರಿತ್ತು.

“ಕಷ್ಟಪಟ್ಟು ಗಳಿಸಿದ ನಮ್ಮ ಪ್ರಜಾಪ್ರಭುತ್ವವನ್ನು ಪೊಲೀಸ್ ರಾಜ್ಯವಾಗಿ ಪರಿವರ್ತಿಸುತ್ತಿರುವುದನ್ನು ಸರಳವಾಗಿ ಯೋಚಿಸಲು ಸಾಧ್ಯವಿಲ್ಲ. ಅಸ್ಸಾಂ ಪೊಲೀಸರು ಕೂಡಾ ಅದೇ ವಿಚಾರದ ಬಗ್ಗೆ ಯೋಚಿಸುತ್ತಿದ್ದರೆ, ಅದು ವಿಕೃತ ಚಿಂತನೆ” ಎಂದು ತಿಳಿಸಿತ್ತು.

ಪ್ರಕರಣದಲ್ಲಿ ಅಸ್ಸಾಂ ಪೊಲೀಸರು ‘ಸುಳ್ಳು ಎಫ್‌ಐಆರ್’ ದಾಖಲಿಸಿದ್ದು, ‘ನ್ಯಾಯಾಲಯ ಮತ್ತು ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಿದೆ’ ಎಂದು ರಾಜ್ಯದ ಪೊಲೀಸರನ್ನು ಕೋರ್ಟ್‌ ತರಾಟೆಗೆ ತೆಗೆದುಕೊಂಡಿತು.

ಆದರೆ ಈ ಅಭಿಪ್ರಾಯಗಳು ಕೆಳ ನ್ಯಾಯಾಲಯದ ವ್ಯಾಪ್ತಿಯನ್ನು ಮೀರಿವೆ ಎಂದು ನ್ಯಾಯಮೂರ್ತಿ ಬರುವಾ ತಿಳಿಸಿದ್ದಾರೆ.

ರಜೆಯ ಕಾರಣ ಸೋಮವಾರ ನ್ಯಾಯಾಲಯವನ್ನು ಮುಚ್ಚಿದ್ದರಿಂದ ಅಡ್ವೊಕೇಟ್ ಜನರಲ್ ದೇವಜಿತ್ ಸೈಕಿಯಾ ಅವರು ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಲು ವಿಶೇಷ ಅನುಮತಿ ಪಡೆದರು.

ಇದನ್ನೂ ಓದಿರಿ: ಗೋಡ್ಸೆ ಭಕ್ತರು ಪ್ರಧಾನಿ ಕಾರ್ಯಾಲಯದಲ್ಲಿದ್ದಾರೆ, ಅವರೆ ನನ್ನ ಬಂಧನಕ್ಕೆ ನೇರ ಕಾರಣ: ಜಿಗ್ನೇಶ್ ಮೇವಾನಿ

ಮೇವಾನಿಯನ್ನು ಅಸ್ಸಾಂ ಪೊಲೀಸರು ಮೊದಲು ಏಪ್ರಿಲ್ 19 ರಂದು ಗುಜರಾತ್‌ನ ಪಾಲನ್‌ಪುರ್ ಪಟ್ಟಣದಿಂದ ಬಂಧಿಸಿದ್ದು, ಕೊಕ್ರಜಾರ್‌ನಲ್ಲಿ ಅವರ ವಿರುದ್ಧ ಪ್ರಧಾನಿಯವರ ಟ್ವೀಟ್‌ಗಾಗಿ ಎಫ್‌ಐಆರ್ ದಾಖಲಾಗಿತ್ತು. ಏಪ್ರಿಲ್ 21 ರಂದು ಗುವಾಹಟಿ ವಿಮಾನ ನಿಲ್ದಾಣದಿಂದ ಕೊಕ್ರಜಾರ್‌ಗೆ ಸರ್ಕಾರಿ ವಾಹನದಲ್ಲಿ ಕರೆದೊಯ್ಯುತ್ತಿದ್ದಾಗ, “ಜಿಗ್ನೇಶ್‌ ಮೇವಾನಿ ನನ್ನನ್ನು ಆಕ್ಷೇಪಾರ್ಹ ಪದಗಳಿಂದ ನಿಂದಿಸಿದ್ದಾರೆ. ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ” ಎಂದು ಮಹಿಳಾ ಪೊಲೀಸ್ ಅಧಿಕಾರಿ ತಮ್ಮ ದೂರಿನಲ್ಲಿ ತಿಳಿಸಿದ್ದರು. ಎಫ್‌ಐಆರ್ ಪ್ರಕಾರ, “ವಾಹನದಲ್ಲಿ ಇನ್ನಿಬ್ಬರು ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು”.

ಅದಾಗ್ಯೂ, ಮಹಿಳಾ ಅಧಿಕಾರಿಯ ಹೇಳಿಕೆಯನ್ನು ಎಫ್‌ಐಆರ್‌ನಲ್ಲಿ ಸೇರಿಸುವುದಿಲ್ಲ ಎಂದು ನ್ಯಾಯಾಲಯ ಶುಕ್ರವಾರ ಹೇಳಿದೆ. “ಇದು ಆರೋಪಿಯನ್ನು ದೀರ್ಘಕಾಲದವರೆಗೆ ಬಂಧನದಲ್ಲಿಡಲು, ನ್ಯಾಯಾಲಯ ಮತ್ತು ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳುವ ಉದ್ದೇಶದಿಂದ ರೂಪಿಸಲ್ಪಟ್ಟಿದೆ” ಎಂದು ತಿಳಿಸಿದೆ.

“ಇಬ್ಬರು ಪುರುಷ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯ ಗೌರವಕ್ಕೆ ಧಕ್ಕೆ ತರಲು ಯಾವುದೇ ವಿವೇಕಯುತ ವ್ಯಕ್ತಿ ಎಂದಿಗೂ ಪ್ರಯತ್ನಿಸುವುದಿಲ್ಲ. ಆರೋಪಿಯು ಹುಚ್ಚುತನದ ವ್ಯಕ್ತಿ ಎಂಬ ಯಾವ ದಾಖಲೆ ಕೂಡಾ ಇಲ್ಲ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...