Homeಮುಖಪುಟಜಿಗ್ನೇಶ್‌ ಜಾಮೀನು: ಅಸ್ಸಾಂ ಪೊಲೀಸರನ್ನು ಕುಟುಕಿದ ಕೆಳ ನ್ಯಾಯಾಲಯದ ನಡೆಗೆ ಹೈಕೋರ್ಟ್ ಅಸಮ್ಮತಿ

ಜಿಗ್ನೇಶ್‌ ಜಾಮೀನು: ಅಸ್ಸಾಂ ಪೊಲೀಸರನ್ನು ಕುಟುಕಿದ ಕೆಳ ನ್ಯಾಯಾಲಯದ ನಡೆಗೆ ಹೈಕೋರ್ಟ್ ಅಸಮ್ಮತಿ

- Advertisement -
- Advertisement -

ಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರಿಗೆ ಜಾಮೀನು ಮಂಜೂರು ಮಾಡುವ ಆದೇಶದಲ್ಲಿ ಅಸ್ಸಾಂ ಪೊಲೀಸರ ಕುರಿತು ಬಾರ್ಪೇಟಾ ನ್ಯಾಯಾಲಯವು ನೀಡಿರುವ ಹೇಳಿಕೆಗಳಿಗೆ ಗುವಾಹಟಿ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.

ಮೋದಿಯವರನ್ನು ಟೀಕಿಸಿದ ಟ್ವೀಟ್‌ ಆಧರಿಸಿ ಜಿಗ್ನೇಶ್ ಮೇಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ದೊರೆತ ಮರುಗಳಿಗೆಯೇ ಜಿಗ್ನೇಶ್ ಅವರನ್ನು ಮತ್ತೆ ಬಂಧಿಸಲಾಯಿತು. ಕರ್ತವ್ಯ ನಿರತ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪವನ್ನು ಮೇವಾನಿ ಮೇಲೆ ಹೊರಿಸಲಾಗಿತ್ತು. ಎರಡನೇ ಪ್ರಕರಣದ ಜಾಮೀನು ಅರ್ಜಿಯನ್ನು ವಿಚಾರಿಸಿದ್ದ ಬಾರ್ಪೇಟಾ ನ್ಯಾಯಾಲಯ ಪೊಲೀಸ್ ಪಡೆಯನ್ನು ಕಟುವಾಗಿ ಟೀಕಿಸಿತ್ತು. “ನಕಲಿ ಪ್ರಕರಣವನ್ನು ದಾಖಲಿಸಲಾಗಿದೆ” ಎಂದು ತರಾಟೆಗೆ ತೆಗೆದುಕೊಳ್ಳುವ ಜೊತೆಗೆ ರಾಜ್ಯದ ಪೊಲೀಸ್‌ ವ್ಯವಸ್ಥೆಯ ಕುರಿತು ಬೇಸರ ವ್ಯಕ್ತಪಡಿಸಿತ್ತು. ಈ ಅಭಿಪ್ರಾಯಗಳಿಗೆ ಈಗ ಹೈಕೋರ್ಟ್‌ನಿಂದ ತಡೆ ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕೆಳ ನ್ಯಾಯಾಲಯವು ತನ್ನ ಮಿತಿಯನ್ನು ಮೀರಿದೆ. ಪೊಲೀಸ್ ಪಡೆ ಮತ್ತು ಅಸ್ಸಾಂ ಸರ್ಕಾರವನ್ನು ನಿರುತ್ಸಾಹಗೊಳಿಸಿದೆ” ಎಂದು ಹೈಕೋರ್ಟ್ ಅಭಿಪ್ರಾಯ ತಾಳಿದೆ.

ಬಾರ್ಪೇಟಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅಪರೇಶ್ ಚಕ್ರವರ್ತಿ ಅವರು ಮಾಡಿರುವ ಅವಲೋಕನಗಳನ್ನು ಪ್ರಶ್ನಿಸಿ ಅಸ್ಸಾಂ ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೇಬಾಶಿಸ್ ಬರುವಾ, “ದಲಿತ ನಾಯಕ ಮತ್ತು ಸ್ವತಂತ್ರ ಶಾಸಕರಾದ ಮೇವಾನಿ ಅವರಿಗೆ ಜಾಮೀನು ನೀಡಿರುವ ಬಗ್ಗೆ ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸಲಿಲ್ಲ” ಎಂದು ವರದಿ ಹೇಳಿದೆ.

ಜಾಮೀನು ನೀಡುವ ವೇಳೆ ಹೈಕೋರ್ಟ್‌ಗೆ ಮನವಿ ಮಾಡಿದ್ದ ಬಾರ್ಪೇಟಾ ಜಿಲ್ಲಾ ಕೋರ್ಟ್, “ಆರೋಪಿಯ ವಿರುದ್ಧ ಈ ರೀತಿಯ ಸುಳ್ಳು ಪ್ರಕರಣ ದಾಖಲಿಸುವ ಪ್ರವೃತ್ತಿ ನಿತ್ಯವೂ ನಡೆಯುತ್ತಿದ್ದು, ಇವುಗಳನ್ನು ತಡೆಯಲು ಅಸ್ಸಾಂ ಪೊಲೀಸರಿಗೆ ನಿರ್ದೇಶನವನ್ನು ನೀಡಬೇಕು” ಎಂದು ಕೋರಿತ್ತು.

“ಕಷ್ಟಪಟ್ಟು ಗಳಿಸಿದ ನಮ್ಮ ಪ್ರಜಾಪ್ರಭುತ್ವವನ್ನು ಪೊಲೀಸ್ ರಾಜ್ಯವಾಗಿ ಪರಿವರ್ತಿಸುತ್ತಿರುವುದನ್ನು ಸರಳವಾಗಿ ಯೋಚಿಸಲು ಸಾಧ್ಯವಿಲ್ಲ. ಅಸ್ಸಾಂ ಪೊಲೀಸರು ಕೂಡಾ ಅದೇ ವಿಚಾರದ ಬಗ್ಗೆ ಯೋಚಿಸುತ್ತಿದ್ದರೆ, ಅದು ವಿಕೃತ ಚಿಂತನೆ” ಎಂದು ತಿಳಿಸಿತ್ತು.

ಪ್ರಕರಣದಲ್ಲಿ ಅಸ್ಸಾಂ ಪೊಲೀಸರು ‘ಸುಳ್ಳು ಎಫ್‌ಐಆರ್’ ದಾಖಲಿಸಿದ್ದು, ‘ನ್ಯಾಯಾಲಯ ಮತ್ತು ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಿದೆ’ ಎಂದು ರಾಜ್ಯದ ಪೊಲೀಸರನ್ನು ಕೋರ್ಟ್‌ ತರಾಟೆಗೆ ತೆಗೆದುಕೊಂಡಿತು.

ಆದರೆ ಈ ಅಭಿಪ್ರಾಯಗಳು ಕೆಳ ನ್ಯಾಯಾಲಯದ ವ್ಯಾಪ್ತಿಯನ್ನು ಮೀರಿವೆ ಎಂದು ನ್ಯಾಯಮೂರ್ತಿ ಬರುವಾ ತಿಳಿಸಿದ್ದಾರೆ.

ರಜೆಯ ಕಾರಣ ಸೋಮವಾರ ನ್ಯಾಯಾಲಯವನ್ನು ಮುಚ್ಚಿದ್ದರಿಂದ ಅಡ್ವೊಕೇಟ್ ಜನರಲ್ ದೇವಜಿತ್ ಸೈಕಿಯಾ ಅವರು ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಲು ವಿಶೇಷ ಅನುಮತಿ ಪಡೆದರು.

ಇದನ್ನೂ ಓದಿರಿ: ಗೋಡ್ಸೆ ಭಕ್ತರು ಪ್ರಧಾನಿ ಕಾರ್ಯಾಲಯದಲ್ಲಿದ್ದಾರೆ, ಅವರೆ ನನ್ನ ಬಂಧನಕ್ಕೆ ನೇರ ಕಾರಣ: ಜಿಗ್ನೇಶ್ ಮೇವಾನಿ

ಮೇವಾನಿಯನ್ನು ಅಸ್ಸಾಂ ಪೊಲೀಸರು ಮೊದಲು ಏಪ್ರಿಲ್ 19 ರಂದು ಗುಜರಾತ್‌ನ ಪಾಲನ್‌ಪುರ್ ಪಟ್ಟಣದಿಂದ ಬಂಧಿಸಿದ್ದು, ಕೊಕ್ರಜಾರ್‌ನಲ್ಲಿ ಅವರ ವಿರುದ್ಧ ಪ್ರಧಾನಿಯವರ ಟ್ವೀಟ್‌ಗಾಗಿ ಎಫ್‌ಐಆರ್ ದಾಖಲಾಗಿತ್ತು. ಏಪ್ರಿಲ್ 21 ರಂದು ಗುವಾಹಟಿ ವಿಮಾನ ನಿಲ್ದಾಣದಿಂದ ಕೊಕ್ರಜಾರ್‌ಗೆ ಸರ್ಕಾರಿ ವಾಹನದಲ್ಲಿ ಕರೆದೊಯ್ಯುತ್ತಿದ್ದಾಗ, “ಜಿಗ್ನೇಶ್‌ ಮೇವಾನಿ ನನ್ನನ್ನು ಆಕ್ಷೇಪಾರ್ಹ ಪದಗಳಿಂದ ನಿಂದಿಸಿದ್ದಾರೆ. ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ” ಎಂದು ಮಹಿಳಾ ಪೊಲೀಸ್ ಅಧಿಕಾರಿ ತಮ್ಮ ದೂರಿನಲ್ಲಿ ತಿಳಿಸಿದ್ದರು. ಎಫ್‌ಐಆರ್ ಪ್ರಕಾರ, “ವಾಹನದಲ್ಲಿ ಇನ್ನಿಬ್ಬರು ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು”.

ಅದಾಗ್ಯೂ, ಮಹಿಳಾ ಅಧಿಕಾರಿಯ ಹೇಳಿಕೆಯನ್ನು ಎಫ್‌ಐಆರ್‌ನಲ್ಲಿ ಸೇರಿಸುವುದಿಲ್ಲ ಎಂದು ನ್ಯಾಯಾಲಯ ಶುಕ್ರವಾರ ಹೇಳಿದೆ. “ಇದು ಆರೋಪಿಯನ್ನು ದೀರ್ಘಕಾಲದವರೆಗೆ ಬಂಧನದಲ್ಲಿಡಲು, ನ್ಯಾಯಾಲಯ ಮತ್ತು ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳುವ ಉದ್ದೇಶದಿಂದ ರೂಪಿಸಲ್ಪಟ್ಟಿದೆ” ಎಂದು ತಿಳಿಸಿದೆ.

“ಇಬ್ಬರು ಪುರುಷ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯ ಗೌರವಕ್ಕೆ ಧಕ್ಕೆ ತರಲು ಯಾವುದೇ ವಿವೇಕಯುತ ವ್ಯಕ್ತಿ ಎಂದಿಗೂ ಪ್ರಯತ್ನಿಸುವುದಿಲ್ಲ. ಆರೋಪಿಯು ಹುಚ್ಚುತನದ ವ್ಯಕ್ತಿ ಎಂಬ ಯಾವ ದಾಖಲೆ ಕೂಡಾ ಇಲ್ಲ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...