Homeಮುಖಪುಟಜಿಗ್ನೇಶ್‌ ಜಾಮೀನು: ಅಸ್ಸಾಂ ಪೊಲೀಸರನ್ನು ಕುಟುಕಿದ ಕೆಳ ನ್ಯಾಯಾಲಯದ ನಡೆಗೆ ಹೈಕೋರ್ಟ್ ಅಸಮ್ಮತಿ

ಜಿಗ್ನೇಶ್‌ ಜಾಮೀನು: ಅಸ್ಸಾಂ ಪೊಲೀಸರನ್ನು ಕುಟುಕಿದ ಕೆಳ ನ್ಯಾಯಾಲಯದ ನಡೆಗೆ ಹೈಕೋರ್ಟ್ ಅಸಮ್ಮತಿ

- Advertisement -
- Advertisement -

ಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರಿಗೆ ಜಾಮೀನು ಮಂಜೂರು ಮಾಡುವ ಆದೇಶದಲ್ಲಿ ಅಸ್ಸಾಂ ಪೊಲೀಸರ ಕುರಿತು ಬಾರ್ಪೇಟಾ ನ್ಯಾಯಾಲಯವು ನೀಡಿರುವ ಹೇಳಿಕೆಗಳಿಗೆ ಗುವಾಹಟಿ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.

ಮೋದಿಯವರನ್ನು ಟೀಕಿಸಿದ ಟ್ವೀಟ್‌ ಆಧರಿಸಿ ಜಿಗ್ನೇಶ್ ಮೇಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ದೊರೆತ ಮರುಗಳಿಗೆಯೇ ಜಿಗ್ನೇಶ್ ಅವರನ್ನು ಮತ್ತೆ ಬಂಧಿಸಲಾಯಿತು. ಕರ್ತವ್ಯ ನಿರತ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪವನ್ನು ಮೇವಾನಿ ಮೇಲೆ ಹೊರಿಸಲಾಗಿತ್ತು. ಎರಡನೇ ಪ್ರಕರಣದ ಜಾಮೀನು ಅರ್ಜಿಯನ್ನು ವಿಚಾರಿಸಿದ್ದ ಬಾರ್ಪೇಟಾ ನ್ಯಾಯಾಲಯ ಪೊಲೀಸ್ ಪಡೆಯನ್ನು ಕಟುವಾಗಿ ಟೀಕಿಸಿತ್ತು. “ನಕಲಿ ಪ್ರಕರಣವನ್ನು ದಾಖಲಿಸಲಾಗಿದೆ” ಎಂದು ತರಾಟೆಗೆ ತೆಗೆದುಕೊಳ್ಳುವ ಜೊತೆಗೆ ರಾಜ್ಯದ ಪೊಲೀಸ್‌ ವ್ಯವಸ್ಥೆಯ ಕುರಿತು ಬೇಸರ ವ್ಯಕ್ತಪಡಿಸಿತ್ತು. ಈ ಅಭಿಪ್ರಾಯಗಳಿಗೆ ಈಗ ಹೈಕೋರ್ಟ್‌ನಿಂದ ತಡೆ ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕೆಳ ನ್ಯಾಯಾಲಯವು ತನ್ನ ಮಿತಿಯನ್ನು ಮೀರಿದೆ. ಪೊಲೀಸ್ ಪಡೆ ಮತ್ತು ಅಸ್ಸಾಂ ಸರ್ಕಾರವನ್ನು ನಿರುತ್ಸಾಹಗೊಳಿಸಿದೆ” ಎಂದು ಹೈಕೋರ್ಟ್ ಅಭಿಪ್ರಾಯ ತಾಳಿದೆ.

ಬಾರ್ಪೇಟಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅಪರೇಶ್ ಚಕ್ರವರ್ತಿ ಅವರು ಮಾಡಿರುವ ಅವಲೋಕನಗಳನ್ನು ಪ್ರಶ್ನಿಸಿ ಅಸ್ಸಾಂ ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೇಬಾಶಿಸ್ ಬರುವಾ, “ದಲಿತ ನಾಯಕ ಮತ್ತು ಸ್ವತಂತ್ರ ಶಾಸಕರಾದ ಮೇವಾನಿ ಅವರಿಗೆ ಜಾಮೀನು ನೀಡಿರುವ ಬಗ್ಗೆ ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸಲಿಲ್ಲ” ಎಂದು ವರದಿ ಹೇಳಿದೆ.

ಜಾಮೀನು ನೀಡುವ ವೇಳೆ ಹೈಕೋರ್ಟ್‌ಗೆ ಮನವಿ ಮಾಡಿದ್ದ ಬಾರ್ಪೇಟಾ ಜಿಲ್ಲಾ ಕೋರ್ಟ್, “ಆರೋಪಿಯ ವಿರುದ್ಧ ಈ ರೀತಿಯ ಸುಳ್ಳು ಪ್ರಕರಣ ದಾಖಲಿಸುವ ಪ್ರವೃತ್ತಿ ನಿತ್ಯವೂ ನಡೆಯುತ್ತಿದ್ದು, ಇವುಗಳನ್ನು ತಡೆಯಲು ಅಸ್ಸಾಂ ಪೊಲೀಸರಿಗೆ ನಿರ್ದೇಶನವನ್ನು ನೀಡಬೇಕು” ಎಂದು ಕೋರಿತ್ತು.

“ಕಷ್ಟಪಟ್ಟು ಗಳಿಸಿದ ನಮ್ಮ ಪ್ರಜಾಪ್ರಭುತ್ವವನ್ನು ಪೊಲೀಸ್ ರಾಜ್ಯವಾಗಿ ಪರಿವರ್ತಿಸುತ್ತಿರುವುದನ್ನು ಸರಳವಾಗಿ ಯೋಚಿಸಲು ಸಾಧ್ಯವಿಲ್ಲ. ಅಸ್ಸಾಂ ಪೊಲೀಸರು ಕೂಡಾ ಅದೇ ವಿಚಾರದ ಬಗ್ಗೆ ಯೋಚಿಸುತ್ತಿದ್ದರೆ, ಅದು ವಿಕೃತ ಚಿಂತನೆ” ಎಂದು ತಿಳಿಸಿತ್ತು.

ಪ್ರಕರಣದಲ್ಲಿ ಅಸ್ಸಾಂ ಪೊಲೀಸರು ‘ಸುಳ್ಳು ಎಫ್‌ಐಆರ್’ ದಾಖಲಿಸಿದ್ದು, ‘ನ್ಯಾಯಾಲಯ ಮತ್ತು ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಿದೆ’ ಎಂದು ರಾಜ್ಯದ ಪೊಲೀಸರನ್ನು ಕೋರ್ಟ್‌ ತರಾಟೆಗೆ ತೆಗೆದುಕೊಂಡಿತು.

ಆದರೆ ಈ ಅಭಿಪ್ರಾಯಗಳು ಕೆಳ ನ್ಯಾಯಾಲಯದ ವ್ಯಾಪ್ತಿಯನ್ನು ಮೀರಿವೆ ಎಂದು ನ್ಯಾಯಮೂರ್ತಿ ಬರುವಾ ತಿಳಿಸಿದ್ದಾರೆ.

ರಜೆಯ ಕಾರಣ ಸೋಮವಾರ ನ್ಯಾಯಾಲಯವನ್ನು ಮುಚ್ಚಿದ್ದರಿಂದ ಅಡ್ವೊಕೇಟ್ ಜನರಲ್ ದೇವಜಿತ್ ಸೈಕಿಯಾ ಅವರು ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಲು ವಿಶೇಷ ಅನುಮತಿ ಪಡೆದರು.

ಇದನ್ನೂ ಓದಿರಿ: ಗೋಡ್ಸೆ ಭಕ್ತರು ಪ್ರಧಾನಿ ಕಾರ್ಯಾಲಯದಲ್ಲಿದ್ದಾರೆ, ಅವರೆ ನನ್ನ ಬಂಧನಕ್ಕೆ ನೇರ ಕಾರಣ: ಜಿಗ್ನೇಶ್ ಮೇವಾನಿ

ಮೇವಾನಿಯನ್ನು ಅಸ್ಸಾಂ ಪೊಲೀಸರು ಮೊದಲು ಏಪ್ರಿಲ್ 19 ರಂದು ಗುಜರಾತ್‌ನ ಪಾಲನ್‌ಪುರ್ ಪಟ್ಟಣದಿಂದ ಬಂಧಿಸಿದ್ದು, ಕೊಕ್ರಜಾರ್‌ನಲ್ಲಿ ಅವರ ವಿರುದ್ಧ ಪ್ರಧಾನಿಯವರ ಟ್ವೀಟ್‌ಗಾಗಿ ಎಫ್‌ಐಆರ್ ದಾಖಲಾಗಿತ್ತು. ಏಪ್ರಿಲ್ 21 ರಂದು ಗುವಾಹಟಿ ವಿಮಾನ ನಿಲ್ದಾಣದಿಂದ ಕೊಕ್ರಜಾರ್‌ಗೆ ಸರ್ಕಾರಿ ವಾಹನದಲ್ಲಿ ಕರೆದೊಯ್ಯುತ್ತಿದ್ದಾಗ, “ಜಿಗ್ನೇಶ್‌ ಮೇವಾನಿ ನನ್ನನ್ನು ಆಕ್ಷೇಪಾರ್ಹ ಪದಗಳಿಂದ ನಿಂದಿಸಿದ್ದಾರೆ. ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ” ಎಂದು ಮಹಿಳಾ ಪೊಲೀಸ್ ಅಧಿಕಾರಿ ತಮ್ಮ ದೂರಿನಲ್ಲಿ ತಿಳಿಸಿದ್ದರು. ಎಫ್‌ಐಆರ್ ಪ್ರಕಾರ, “ವಾಹನದಲ್ಲಿ ಇನ್ನಿಬ್ಬರು ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು”.

ಅದಾಗ್ಯೂ, ಮಹಿಳಾ ಅಧಿಕಾರಿಯ ಹೇಳಿಕೆಯನ್ನು ಎಫ್‌ಐಆರ್‌ನಲ್ಲಿ ಸೇರಿಸುವುದಿಲ್ಲ ಎಂದು ನ್ಯಾಯಾಲಯ ಶುಕ್ರವಾರ ಹೇಳಿದೆ. “ಇದು ಆರೋಪಿಯನ್ನು ದೀರ್ಘಕಾಲದವರೆಗೆ ಬಂಧನದಲ್ಲಿಡಲು, ನ್ಯಾಯಾಲಯ ಮತ್ತು ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳುವ ಉದ್ದೇಶದಿಂದ ರೂಪಿಸಲ್ಪಟ್ಟಿದೆ” ಎಂದು ತಿಳಿಸಿದೆ.

“ಇಬ್ಬರು ಪುರುಷ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯ ಗೌರವಕ್ಕೆ ಧಕ್ಕೆ ತರಲು ಯಾವುದೇ ವಿವೇಕಯುತ ವ್ಯಕ್ತಿ ಎಂದಿಗೂ ಪ್ರಯತ್ನಿಸುವುದಿಲ್ಲ. ಆರೋಪಿಯು ಹುಚ್ಚುತನದ ವ್ಯಕ್ತಿ ಎಂಬ ಯಾವ ದಾಖಲೆ ಕೂಡಾ ಇಲ್ಲ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...