Homeಮುಖಪುಟಜಿಗ್ನೇಶ್‌ ಜಾಮೀನು: ಅಸ್ಸಾಂ ಪೊಲೀಸರನ್ನು ಕುಟುಕಿದ ಕೆಳ ನ್ಯಾಯಾಲಯದ ನಡೆಗೆ ಹೈಕೋರ್ಟ್ ಅಸಮ್ಮತಿ

ಜಿಗ್ನೇಶ್‌ ಜಾಮೀನು: ಅಸ್ಸಾಂ ಪೊಲೀಸರನ್ನು ಕುಟುಕಿದ ಕೆಳ ನ್ಯಾಯಾಲಯದ ನಡೆಗೆ ಹೈಕೋರ್ಟ್ ಅಸಮ್ಮತಿ

- Advertisement -
- Advertisement -

ಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರಿಗೆ ಜಾಮೀನು ಮಂಜೂರು ಮಾಡುವ ಆದೇಶದಲ್ಲಿ ಅಸ್ಸಾಂ ಪೊಲೀಸರ ಕುರಿತು ಬಾರ್ಪೇಟಾ ನ್ಯಾಯಾಲಯವು ನೀಡಿರುವ ಹೇಳಿಕೆಗಳಿಗೆ ಗುವಾಹಟಿ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.

ಮೋದಿಯವರನ್ನು ಟೀಕಿಸಿದ ಟ್ವೀಟ್‌ ಆಧರಿಸಿ ಜಿಗ್ನೇಶ್ ಮೇಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ದೊರೆತ ಮರುಗಳಿಗೆಯೇ ಜಿಗ್ನೇಶ್ ಅವರನ್ನು ಮತ್ತೆ ಬಂಧಿಸಲಾಯಿತು. ಕರ್ತವ್ಯ ನಿರತ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪವನ್ನು ಮೇವಾನಿ ಮೇಲೆ ಹೊರಿಸಲಾಗಿತ್ತು. ಎರಡನೇ ಪ್ರಕರಣದ ಜಾಮೀನು ಅರ್ಜಿಯನ್ನು ವಿಚಾರಿಸಿದ್ದ ಬಾರ್ಪೇಟಾ ನ್ಯಾಯಾಲಯ ಪೊಲೀಸ್ ಪಡೆಯನ್ನು ಕಟುವಾಗಿ ಟೀಕಿಸಿತ್ತು. “ನಕಲಿ ಪ್ರಕರಣವನ್ನು ದಾಖಲಿಸಲಾಗಿದೆ” ಎಂದು ತರಾಟೆಗೆ ತೆಗೆದುಕೊಳ್ಳುವ ಜೊತೆಗೆ ರಾಜ್ಯದ ಪೊಲೀಸ್‌ ವ್ಯವಸ್ಥೆಯ ಕುರಿತು ಬೇಸರ ವ್ಯಕ್ತಪಡಿಸಿತ್ತು. ಈ ಅಭಿಪ್ರಾಯಗಳಿಗೆ ಈಗ ಹೈಕೋರ್ಟ್‌ನಿಂದ ತಡೆ ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕೆಳ ನ್ಯಾಯಾಲಯವು ತನ್ನ ಮಿತಿಯನ್ನು ಮೀರಿದೆ. ಪೊಲೀಸ್ ಪಡೆ ಮತ್ತು ಅಸ್ಸಾಂ ಸರ್ಕಾರವನ್ನು ನಿರುತ್ಸಾಹಗೊಳಿಸಿದೆ” ಎಂದು ಹೈಕೋರ್ಟ್ ಅಭಿಪ್ರಾಯ ತಾಳಿದೆ.

ಬಾರ್ಪೇಟಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅಪರೇಶ್ ಚಕ್ರವರ್ತಿ ಅವರು ಮಾಡಿರುವ ಅವಲೋಕನಗಳನ್ನು ಪ್ರಶ್ನಿಸಿ ಅಸ್ಸಾಂ ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೇಬಾಶಿಸ್ ಬರುವಾ, “ದಲಿತ ನಾಯಕ ಮತ್ತು ಸ್ವತಂತ್ರ ಶಾಸಕರಾದ ಮೇವಾನಿ ಅವರಿಗೆ ಜಾಮೀನು ನೀಡಿರುವ ಬಗ್ಗೆ ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸಲಿಲ್ಲ” ಎಂದು ವರದಿ ಹೇಳಿದೆ.

ಜಾಮೀನು ನೀಡುವ ವೇಳೆ ಹೈಕೋರ್ಟ್‌ಗೆ ಮನವಿ ಮಾಡಿದ್ದ ಬಾರ್ಪೇಟಾ ಜಿಲ್ಲಾ ಕೋರ್ಟ್, “ಆರೋಪಿಯ ವಿರುದ್ಧ ಈ ರೀತಿಯ ಸುಳ್ಳು ಪ್ರಕರಣ ದಾಖಲಿಸುವ ಪ್ರವೃತ್ತಿ ನಿತ್ಯವೂ ನಡೆಯುತ್ತಿದ್ದು, ಇವುಗಳನ್ನು ತಡೆಯಲು ಅಸ್ಸಾಂ ಪೊಲೀಸರಿಗೆ ನಿರ್ದೇಶನವನ್ನು ನೀಡಬೇಕು” ಎಂದು ಕೋರಿತ್ತು.

“ಕಷ್ಟಪಟ್ಟು ಗಳಿಸಿದ ನಮ್ಮ ಪ್ರಜಾಪ್ರಭುತ್ವವನ್ನು ಪೊಲೀಸ್ ರಾಜ್ಯವಾಗಿ ಪರಿವರ್ತಿಸುತ್ತಿರುವುದನ್ನು ಸರಳವಾಗಿ ಯೋಚಿಸಲು ಸಾಧ್ಯವಿಲ್ಲ. ಅಸ್ಸಾಂ ಪೊಲೀಸರು ಕೂಡಾ ಅದೇ ವಿಚಾರದ ಬಗ್ಗೆ ಯೋಚಿಸುತ್ತಿದ್ದರೆ, ಅದು ವಿಕೃತ ಚಿಂತನೆ” ಎಂದು ತಿಳಿಸಿತ್ತು.

ಪ್ರಕರಣದಲ್ಲಿ ಅಸ್ಸಾಂ ಪೊಲೀಸರು ‘ಸುಳ್ಳು ಎಫ್‌ಐಆರ್’ ದಾಖಲಿಸಿದ್ದು, ‘ನ್ಯಾಯಾಲಯ ಮತ್ತು ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಿದೆ’ ಎಂದು ರಾಜ್ಯದ ಪೊಲೀಸರನ್ನು ಕೋರ್ಟ್‌ ತರಾಟೆಗೆ ತೆಗೆದುಕೊಂಡಿತು.

ಆದರೆ ಈ ಅಭಿಪ್ರಾಯಗಳು ಕೆಳ ನ್ಯಾಯಾಲಯದ ವ್ಯಾಪ್ತಿಯನ್ನು ಮೀರಿವೆ ಎಂದು ನ್ಯಾಯಮೂರ್ತಿ ಬರುವಾ ತಿಳಿಸಿದ್ದಾರೆ.

ರಜೆಯ ಕಾರಣ ಸೋಮವಾರ ನ್ಯಾಯಾಲಯವನ್ನು ಮುಚ್ಚಿದ್ದರಿಂದ ಅಡ್ವೊಕೇಟ್ ಜನರಲ್ ದೇವಜಿತ್ ಸೈಕಿಯಾ ಅವರು ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಲು ವಿಶೇಷ ಅನುಮತಿ ಪಡೆದರು.

ಇದನ್ನೂ ಓದಿರಿ: ಗೋಡ್ಸೆ ಭಕ್ತರು ಪ್ರಧಾನಿ ಕಾರ್ಯಾಲಯದಲ್ಲಿದ್ದಾರೆ, ಅವರೆ ನನ್ನ ಬಂಧನಕ್ಕೆ ನೇರ ಕಾರಣ: ಜಿಗ್ನೇಶ್ ಮೇವಾನಿ

ಮೇವಾನಿಯನ್ನು ಅಸ್ಸಾಂ ಪೊಲೀಸರು ಮೊದಲು ಏಪ್ರಿಲ್ 19 ರಂದು ಗುಜರಾತ್‌ನ ಪಾಲನ್‌ಪುರ್ ಪಟ್ಟಣದಿಂದ ಬಂಧಿಸಿದ್ದು, ಕೊಕ್ರಜಾರ್‌ನಲ್ಲಿ ಅವರ ವಿರುದ್ಧ ಪ್ರಧಾನಿಯವರ ಟ್ವೀಟ್‌ಗಾಗಿ ಎಫ್‌ಐಆರ್ ದಾಖಲಾಗಿತ್ತು. ಏಪ್ರಿಲ್ 21 ರಂದು ಗುವಾಹಟಿ ವಿಮಾನ ನಿಲ್ದಾಣದಿಂದ ಕೊಕ್ರಜಾರ್‌ಗೆ ಸರ್ಕಾರಿ ವಾಹನದಲ್ಲಿ ಕರೆದೊಯ್ಯುತ್ತಿದ್ದಾಗ, “ಜಿಗ್ನೇಶ್‌ ಮೇವಾನಿ ನನ್ನನ್ನು ಆಕ್ಷೇಪಾರ್ಹ ಪದಗಳಿಂದ ನಿಂದಿಸಿದ್ದಾರೆ. ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ” ಎಂದು ಮಹಿಳಾ ಪೊಲೀಸ್ ಅಧಿಕಾರಿ ತಮ್ಮ ದೂರಿನಲ್ಲಿ ತಿಳಿಸಿದ್ದರು. ಎಫ್‌ಐಆರ್ ಪ್ರಕಾರ, “ವಾಹನದಲ್ಲಿ ಇನ್ನಿಬ್ಬರು ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು”.

ಅದಾಗ್ಯೂ, ಮಹಿಳಾ ಅಧಿಕಾರಿಯ ಹೇಳಿಕೆಯನ್ನು ಎಫ್‌ಐಆರ್‌ನಲ್ಲಿ ಸೇರಿಸುವುದಿಲ್ಲ ಎಂದು ನ್ಯಾಯಾಲಯ ಶುಕ್ರವಾರ ಹೇಳಿದೆ. “ಇದು ಆರೋಪಿಯನ್ನು ದೀರ್ಘಕಾಲದವರೆಗೆ ಬಂಧನದಲ್ಲಿಡಲು, ನ್ಯಾಯಾಲಯ ಮತ್ತು ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳುವ ಉದ್ದೇಶದಿಂದ ರೂಪಿಸಲ್ಪಟ್ಟಿದೆ” ಎಂದು ತಿಳಿಸಿದೆ.

“ಇಬ್ಬರು ಪುರುಷ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯ ಗೌರವಕ್ಕೆ ಧಕ್ಕೆ ತರಲು ಯಾವುದೇ ವಿವೇಕಯುತ ವ್ಯಕ್ತಿ ಎಂದಿಗೂ ಪ್ರಯತ್ನಿಸುವುದಿಲ್ಲ. ಆರೋಪಿಯು ಹುಚ್ಚುತನದ ವ್ಯಕ್ತಿ ಎಂಬ ಯಾವ ದಾಖಲೆ ಕೂಡಾ ಇಲ್ಲ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...