Homeಮುಖಪುಟತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

- Advertisement -
- Advertisement -

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ “ಅನರ್ಹ” ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ, ಮುಂಬರುವ ಏಷ್ಯನ್ ಗೇಮ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವರು ಕಣಕ್ಕಿಳಿಯಲು ಅನುಕೂಲವಾಗುವಂತೆ, ಅವರ ಫಿಟ್‌ನೆಸ್ ಪರಿಶೀಲಿಸಲು ತಜ್ಞರ ಸಮಿತಿಯೊಂದನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರನ್ನೊಳಗೊಂಡ ಪೀಠವು, “ತಾಯ್ತನದ ರಜೆಯ (Maternity Break) ನಂತರ ಕಣಕ್ಕೆ ಮರಳುತ್ತಿರುವ ಫೋಗಟ್ ಅವರನ್ನು ಸ್ಪರ್ಧಿಸದಂತೆ ತಡೆಯುತ್ತಿರುವುದು ಎಷ್ಟು ಸರಿ?” ಎಂದು ಒಕ್ಕೂಟವನ್ನು ಪ್ರಶ್ನಿಸಿದೆ. “ನಮ್ಮ ದೇಶದಲ್ಲಿ ತಾಯ್ತನವನ್ನು ಸಂಭ್ರಮಿಸಲಾಗುತ್ತದೆ, ಹಾಗಿರುವಾಗ ಅದು ಒಬ್ಬ ಕ್ರೀಡಾಪಟುವಿನ ವೃತ್ತಿಜೀವನಕ್ಕೆ ಮಾರಕವಾಗಬೇಕೇ?” ಎಂದು ಕೋರ್ಟ್ ಮೌಖಿಕವಾಗಿ ಪ್ರಶ್ನಿಸಿದೆ. ಏಕಸದಸ್ಯ ಪೀಠದ ಆದೇಶದ ವಿರುದ್ಧ ವಿನೇಶ್ ಫೋಗಟ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸುವಾಗ ಹೈಕೋರ್ಟ್ ಈ ಆಕ್ರೋಶ ವ್ಯಕ್ತಪಡಿಸಿದೆ.

ಹಿಂದೆ ಪ್ರಸಿದ್ಧ ಅಥ್ಲೀಟ್‌ಗಳಿಗೆ ನಿಯಮಗಳಲ್ಲಿ ವಿನಾಯಿತಿ ನೀಡುತ್ತಿದ್ದ ಕುಸ್ತಿ ಒಕ್ಕೂಟ, ಈಗ ವಿನೇಶ್ ಅವರ ವಿಷಯದಲ್ಲಿ ದಿಢೀರನೆ ನಿಯಮ ಬದಲಿಸಿರುವುದಕ್ಕೆ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. “ಹಳೆಯ ನಿಯಮಗಳನ್ನು ಗಾಳಿಗೆ ತೂರಿ ಈ ರೀತಿ ನಡೆದುಕೊಳ್ಳುತ್ತಿರುವುದು ನಿಮ್ಮ ಉದ್ದೇಶವನ್ನು ಎದ್ದು ತೋರಿಸುತ್ತದೆ. ಕ್ರೀಡಾ ಸಂಸ್ಥೆಯಾಗಿ ಈ ರೀತಿ ವರ್ತಿಸಬೇಡಿ, ಇದು ಕ್ರೀಡಾ ಜಗತ್ತಿಗೆ ಒಳ್ಳೆಯದಲ್ಲ. ಒಕ್ಕೂಟವು ಯಾವುದೇ ಕ್ರೀಡಾಪಟುವಿನ ವಿರುದ್ಧ ‘ಸೇಡಿನ ರಾಜಕಾರಣ’ ಮಾಡಬಾರದು” ಎಂದು ನ್ಯಾಯಾಲಯ ಎಚ್ಚರಿಸಿದೆ.

ಮೇ 30 ಮತ್ತು 31 ರಂದು ನಡೆಯಲಿರುವ ಏಷ್ಯನ್ ಗೇಮ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ವಿನೇಶ್ ಫೋಗಟ್ ಭಾಗವಹಿಸಲು ಅವಕಾಶ ಸಿಗುವಂತೆ ನೋಡಿಕೊಳ್ಳಿ ಎಂದು ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಅಲ್ಲದೆ, ಅವರ ದೈಹಿಕ ಸಾಮರ್ಥ್ಯ ಮತ್ತು ಸಿದ್ಧತೆಯನ್ನು ಅಳೆಯಲು ತಜ್ಞರ ಸಮಿತಿಯನ್ನು ರಚಿಸಲು ತಿಳಿಸಿದೆ. “ತಜ್ಞರ ಮೂಲಕ ಅವರ ಅವಕಾಶಗಳನ್ನು ಮರುಪರಿಶೀಲಿಸಿ… ಅವರು ಸ್ಪರ್ಧೆಯಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿಕೊಳ್ಳಿ” ಎಂದು ಪೀಠವು ಸರ್ಕಾರದ ಪರ ವಕೀಲರಿಗೆ ಸೂಚಿಸಿತು.

ವಿಶೇಷ ಸಂದರ್ಭಗಳಲ್ಲಿ ಅರ್ಹತಾ ನಿಯಮಗಳನ್ನು ಸಡಿಲಿಸಲು ‘ಭಾರತೀಯ ಕ್ರೀಡಾ ಪ್ರಾಧಿಕಾರ’ದ (SAI) ನಿಯಮಾವಳಿಗಳಲ್ಲಿ ಅವಕಾಶವಿದೆ ಎಂದು ಇದೇ ವೇಳೆ ಕೇಂದ್ರ ಸರ್ಕಾರವು ನ್ಯಾಯಾಲಯಕ್ಕೆ ತಿಳಿಸಿತು.

ಕಣದಿಂದ ಹೊರದೂಡಲು ಸಂಚು?

ಜೂನ್ 26, 2026 ರವರೆಗೆ ತಮ್ಮನ್ನು ದೇಶೀಯ ಕೂಟಗಳಿಂದ ಅನರ್ಹಗೊಳಿಸಿರುವ ಕುಸ್ತಿ ಒಕ್ಕೂಟದ ನಿರ್ಧಾರವನ್ನು ವಿನೇಶ್ ಫೋಗಟ್ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. “ನಿವೃತ್ತಿ ಪಡೆದು ಮತ್ತೆ ಕಣಕ್ಕೆ ಮರಳುವ ಅಥ್ಲೀಟ್‌ಗಳು ಕಡ್ಡಾಯವಾಗಿ ಆರು ತಿಂಗಳ ಮುಂಚಿತವಾಗಿ ನೋಟಿಸ್ ನೀಡಬೇಕು” ಎಂಬ ಉದ್ದೀಪನ ಮದ್ದು ತಡೆ (Anti-doping) ನಿಯಮವನ್ನು ಒಕ್ಕೂಟ ನೆಪವಾಗಿ ಮುಂದಿಟ್ಟಿತ್ತು.

ಆದರೆ ವಿನೇಶ್ ಪರ ವಕೀಲರು, “ಇದು ವಿನೇಶ್ ಅವರು ಮತ್ತೆ ಕುಸ್ತಿ ಅಖಾಡಕ್ಕೆ ಇಳಿಯಬಾರದು ಎಂಬ ಏಕೈಕ ಉದ್ದೇಶದಿಂದ ಮಾಡಿರುವ ಸಂಚು” ಎಂದು ವಾದಿಸಿದರು. ಮೇ 10 ರಂದು ಗೊಂಡಾದಲ್ಲಿ ನಡೆದ ದೇಶೀಯ ಪಂದ್ಯಾವಳಿಯಲ್ಲಿ ವಿನೇಶ್ ಭಾಗವಹಿಸುವ ಕೇವಲ ಒಂದು ದಿನ ಮುಂಚೆ, ಅಂದರೆ ಮೇ 9 ರಂದು ಅವರಿಗೆ ಒಕ್ಕೂಟವು ಕಾರಣ ಕೇಳಿ ನೋಟಿಸ್ ನೀಡಿತ್ತು. ಇದನ್ನು ಉಲ್ಲೇಖಿಸಿದ ವಕೀಲರು, “ಅವರನ್ನು ಹೇಗಾದರೂ ಮಾಡಿ ಹೊರದಬ್ಬಲು ಯಾರೋ ಇಲ್ಲದ ಕಾರಣಗಳನ್ನು ಹುಡುಕುತ್ತಿದ್ದಾರೆ” ಎಂದು ವಾದ ಮಂಡಿಸಿದರು.

ಇನ್ನು, ಕುಸ್ತಿ ಒಕ್ಕೂಟ ನೀಡಿದ್ದ ನೋಟಿಸ್‌ನಲ್ಲಿ ಬಳಸಲಾಗಿದ್ದ ಪದಗಳ ಬಗ್ಗೆಯೂ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವಿನೇಶ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದನ್ನು ಒಕ್ಕೂಟವು ತನ್ನ ನೋಟಿಸ್‌ನಲ್ಲಿ “ರಾಷ್ಟ್ರೀಯ ಅವಮಾನ” ಎಂದು ಕರೆದಿತ್ತು. “ವಿನೇಶ್ ಅವರನ್ನೇ ಗುರಿಯಾಗಿಸಿಕೊಂಡು ನೀವು ನಿಯಮಗಳನ್ನು ಬದಲಾಯಿಸಿದ್ದೀರಿ ಎಂದು ನಾವು ಯಾಕೆ ಭಾವಿಸಬಾರದು?” ಎಂದು ಪೀಠವು ಒಕ್ಕೂಟವನ್ನು ತರಾಟೆಗೆ ತೆಗೆದುಕೊಂಡಿತು.

ಹೋರಾಟದ ಹಿನ್ನೆಲೆ

ಜುಲೈ 2025 ರಲ್ಲಿ ಮಗುವಿಗೆ ಜನ್ಮ ನೀಡಿದ್ದ ವಿನೇಶ್ ಫೋಗಟ್, ಇತ್ತೀಚೆಗಷ್ಟೇ ಮತ್ತೆ ತರಬೇತಿ ಆರಂಭಿಸಿದ್ದರು. ಒಕ್ಕೂಟದ ನಿಷೇಧದ ಆದೇಶದ ನಡುವೆಯೂ ಅವರು ಗೊಂಡಾದಲ್ಲಿ ನಡೆದ ನ್ಯಾಷನಲ್ ಓಪನ್ ರ‍್ಯಾಂಕಿಂಗ್ ಟೂರ್ನಮೆಂಟ್‌ನಲ್ಲಿ ಭಾಗವಹಿಸಿದ್ದರು.

ಭಾರತೀಯ ಕ್ರೀಡಾ ಇತಿಹಾಸದಲ್ಲಿ ವಿನೇಶ್ ಫೋಗಟ್ ಅತ್ಯಂತ ಪ್ರಭಾವಶಾಲಿ ಹೆಸರುಗಳಲ್ಲಿ ಒಂದು. 2023 ರಲ್ಲಿ ಭಾರತೀಯ ಕುಸ್ತಿ ಒಕ್ಕೂಟದ ಅಂದಿನ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಾಗ, ಮಹಿಳಾ ಕುಸ್ತಿಪಟುಗಳ ಪರವಾಗಿ ದೆಹಲಿಯ ರಸ್ತೆಯಲ್ಲಿ ಹೋರಾಟದ ಮುಂಚೂಣಿಯಲ್ಲಿದ್ದ ಧೀಮಂತ ಮಹಿಳೆ ಈ ವಿನೇಶ್.

ಕಳೆದ 2024 ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 50 ಕೆಜಿ ವಿಭಾಗದ ಫೈನಲ್ ತಲುಪಿದ್ದ ವಿನೇಶ್, ಅಂತಿಮ ಪಂದ್ಯದ ದಿನ ಬೆಳಗ್ಗೆ ಕೇವಲ 100 ಗ್ರಾಂ ಹೆಚ್ಚು ತೂಕ ಹೊಂದಿದ್ದ ಕಾರಣಕ್ಕೆ ದುರದೃಷ್ಟವಶಾತ್ ಅನರ್ಹಗೊಂಡಿದ್ದರು. ಇದು ಇಡೀ ದೇಶದ ಕ್ರೀಡಾಭಿಮಾನಿಗಳಿಗೆ ಭಾರಿ ಆಘಾತ ನೀಡಿತ್ತು. ಆದರೆ ಈಗ ಕೋರ್ಟ್ ನೀಡಿರುವ ಈ ಆದೇಶ ಅವರ ಮುಂದಿನ ಒಲಿಂಪಿಕ್ಸ್ ಮತ್ತು ಏಷ್ಯನ್ ಗೇಮ್ಸ್ ಕನಸಿಗೆ ಮತ್ತೆ ಮರುಜೀವ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....