Homeಮುಖಪುಟಡ್ರಗ್ಸ್ ಪ್ರಕರಣ : ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣ ರದ್ದು

ಡ್ರಗ್ಸ್ ಪ್ರಕರಣ : ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣ ರದ್ದು

- Advertisement -
- Advertisement -

ನಟಿ ರಾಗಿಣಿ ದ್ವಿವೇದಿ ವಿರುದ್ಧದ ಮಾದಕವಸ್ತು ಸೇವನೆ ಹಾಗೂ ಮಾರಾಟಕ್ಕೆ ರೇವ್‌ ಪಾರ್ಟಿ ಆಯೋಜಿಸಿದ್ದರು ಎನ್ನಲಾದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಭೌತಿಕ ಸಾಕ್ಷ್ಯಗಳನ್ನು ಒದಗಿಸುವಲ್ಲಿ ಪ್ರಾಸಿಕ್ಯೂಷನ್‌ ವಿಫಲವಾದ ಕಾರಣಕ್ಕೆ ಪ್ರಕರಣದ ಎಲ್ಲ ಪ್ರಕ್ರಿಯೆಗಳನ್ನು ರದ್ದುಪಡಿಸಿರುವುದಾಗಿ ನ್ಯಾಯಾಲಯ ಹೇಳಿದೆ. ಮತ್ತೊಬ್ಬ ಆರೋಪಿ ಪ್ರಶಾಂತ್ ರಂಕ ವಿರುದ್ಧದ ಪ್ರಕರಣವನ್ನು ಕೂಡ ರದ್ದುಪಡಿಸಲಾಗಿದೆ.

‘ಸ್ಯಾಂಡಲ್‌ವುಡ್‌ ಡ್ರಗ್‌ ಪ್ರಕರಣ’ ಎಂದೇ ಮಾಧ್ಯಮಗಳಲ್ಲಿ ವರದಿಯಾಗಿದ್ದ ಈ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ನಟಿ ರಾಗಿಣಿ ದ್ವಿವೇದಿ ಹಾಗೂ ನಾಲ್ಕನೇ ಆರೋಪಿ ಪ್ರಶಾಂತ್‌ ರಂಕ ಅವರು ಪ್ರಕರಣದ ರದ್ದುಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಹೇಮಂತ್‌ ಚಂದನ್‌ಗೌಡರ್‌ ಅವರ ಹೈಕೋರ್ಟ್ ಏಕಸದಸ್ಯ ಪೀಠ ಪುರಸ್ಕರಿಸಿದೆ.

“ಸಹ ಆರೋಪಿಗಳ ಹೇಳಿಕೆ ಮತ್ತು ಆರೋಪ ಪಟ್ಟಿಯಲ್ಲಿನ ಸಾಕ್ಷಿಗಳನ್ನು ಹೊರತುಪಡಿಸಿ ನಟಿ ರಾಗಿಣಿ ದ್ವಿವೇದಿ ಮತ್ತು ಪ್ರಶಾಂತ್‌ ರಂಕ ಅವರು ಮೋಜು ಕೂಟಗಳನ್ನು (ರೇವ್ ಪಾರ್ಟಿ) ಆಯೋಜಿಸಿದ್ದರು ಅಥವಾ ಮಾದಕ ವಸ್ತುಗಳನ್ನು ಮಾರಾಟ ಮಾಡಿದ್ದರು ಎಂಬುವುದಕ್ಕೆ ಪ್ರಾಸಿಕ್ಯೂಷನ್‌ ಯಾವುದೇ ಭೌತಿಕ ಸಾಕ್ಷ್ಯಗಳನ್ನು ಒದಗಿಸಿಲ್ಲ” ಎಂದಿರುವ ನ್ಯಾಯಾಲಯ, ಅವರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದೆ.

ಕಳೆದ (2024) ಜೂನ್‌ನಲ್ಲಿ ಮತ್ತೊಬ್ಬ ನಟಿ ಸಂಜನಾ ಗಲ್ರಾನಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿತ್ತು.

2020ರ ಜುಲೈ 5, 8 ಮತ್ತು 17ರಂದು ನಡೆದಿದ್ದ ಮೋಜು ಕೂಟಗಳನ್ನು (ರೇವ್ ಪಾರ್ಟಿ) ನಟಿ ರಾಗಿಣಿ ಮತ್ತು ಪ್ರಶಾಂತ್‌ ಅವರು ಆಯೋಜಿಸಿ, ಅಲ್ಲಿಗೆ ಬಂದವರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಅನುವು ಮಾಡಿಕೊಟ್ಟಿದ್ದಾರೆ ಎಂಬ ನಿರ್ದಿಷ್ಟ ಆರೋಪ ಮಾಡಲಾಗಿತ್ತು.

ಈ ಪ್ರಕರಣದ 16ನೇ ಆರೋಪಿ ಬಿ ಕೆ ರವಿಶಂಕರ್‌ ಎಂಬವರ ಸ್ವಯಂ ತಪ್ಪೊಪ್ಪಿಗೆ ಹೇಳಿಕೆ ಆಧರಿಸಿ ಅವರನ್ನು ಆರೋಪಿಯನ್ನಾಗಿಸಲಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ವಿವರಿಸಿದೆ.

ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ವೀರಣ್ಣ ಜಿ. ತಿಗಡಿ ಮತ್ತು ಅರ್ಜಿದಾರರ ಪರವಾಗಿ ವಕೀಲ ಎ ಮಹಮ್ಮದ್‌ ತಾಹೀರ್ ಮತ್ತು ವಿ ಭರತ್‌ ಕುಮಾರ್‌ ವಾದಿಸಿದ್ದರು.

ಪ್ರಕರಣದ ಹಿನ್ನೆಲೆ : ನಟಿ ರಾಗಿಣಿ ಮತ್ತು ಇತರರು ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಮೋಜು ಕೂಟಗಳನ್ನು ಆಯೋಜಿಸಿ, ಅನೇಕ ಗ್ರಾಹಕರನ್ನು ಕರೆಸಿ ಡ್ರಗ್‌ ಪೆಡ್ಲರ್‌ಗಳ ಮೂಲಕ ಕೂಟಕ್ಕೆ ಬರುವ ಉದ್ಯಮಿಗಳು, ಸೆಲೆಬ್ರಿಟಿಗಳು, ನಟ-ನಟಿಯರು, ಡಿಜೆಗಳು, ಸಾಫ್ಟ್‌ವೇರ್‌ ಉದ್ಯೋಗಿಗಳು ಇತರರಿಗೆ ಮಾದಕ ವಸ್ತುಗಳನ್ನು ಪೂರೈಸಿ, ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದಾರೆ ಎಂದು ಸಿಸಿಬಿಯ ಎಸಿಪಿ ಕೆ ಸಿ ಗೌತಮ್‌ ಅವರು ಕಾಟನ್‌ ಪೇಟೆ ಠಾಣೆಯಲ್ಲಿ 2020ರ ಸೆಪ್ಟೆಂಬರ್‌ 4ರಂದು ದೂರು ದಾಖಲಿಸಿದ್ದರು. ಪ್ರಕರಣದ ಕುರಿತು ತನಿಖೆ ಮಾಡುವಾಗ ಬಿ ಕೆ ರವಿಶಂಕರ್‌ ಎಂಬಾತನನ್ನು ವಶಕ್ಕೆ ಪಡೆದಿದ್ದ ಗೌತಮ್‌ ಅವರು ಮಾಹಿತಿ ಸಂಗ್ರಹಿಸಿದ್ದರು. ಈ ಮಾಹಿತಿ ಆಧಾರದಲ್ಲಿ ಪ್ರಕರಣ ದಾಖಲಿಸಿದ್ದರು.

ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...