Homeಮುಖಪುಟಡ್ರಗ್ಸ್ ಪ್ರಕರಣ : ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣ ರದ್ದು

ಡ್ರಗ್ಸ್ ಪ್ರಕರಣ : ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣ ರದ್ದು

- Advertisement -
- Advertisement -

ನಟಿ ರಾಗಿಣಿ ದ್ವಿವೇದಿ ವಿರುದ್ಧದ ಮಾದಕವಸ್ತು ಸೇವನೆ ಹಾಗೂ ಮಾರಾಟಕ್ಕೆ ರೇವ್‌ ಪಾರ್ಟಿ ಆಯೋಜಿಸಿದ್ದರು ಎನ್ನಲಾದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಭೌತಿಕ ಸಾಕ್ಷ್ಯಗಳನ್ನು ಒದಗಿಸುವಲ್ಲಿ ಪ್ರಾಸಿಕ್ಯೂಷನ್‌ ವಿಫಲವಾದ ಕಾರಣಕ್ಕೆ ಪ್ರಕರಣದ ಎಲ್ಲ ಪ್ರಕ್ರಿಯೆಗಳನ್ನು ರದ್ದುಪಡಿಸಿರುವುದಾಗಿ ನ್ಯಾಯಾಲಯ ಹೇಳಿದೆ. ಮತ್ತೊಬ್ಬ ಆರೋಪಿ ಪ್ರಶಾಂತ್ ರಂಕ ವಿರುದ್ಧದ ಪ್ರಕರಣವನ್ನು ಕೂಡ ರದ್ದುಪಡಿಸಲಾಗಿದೆ.

‘ಸ್ಯಾಂಡಲ್‌ವುಡ್‌ ಡ್ರಗ್‌ ಪ್ರಕರಣ’ ಎಂದೇ ಮಾಧ್ಯಮಗಳಲ್ಲಿ ವರದಿಯಾಗಿದ್ದ ಈ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ನಟಿ ರಾಗಿಣಿ ದ್ವಿವೇದಿ ಹಾಗೂ ನಾಲ್ಕನೇ ಆರೋಪಿ ಪ್ರಶಾಂತ್‌ ರಂಕ ಅವರು ಪ್ರಕರಣದ ರದ್ದುಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಹೇಮಂತ್‌ ಚಂದನ್‌ಗೌಡರ್‌ ಅವರ ಹೈಕೋರ್ಟ್ ಏಕಸದಸ್ಯ ಪೀಠ ಪುರಸ್ಕರಿಸಿದೆ.

“ಸಹ ಆರೋಪಿಗಳ ಹೇಳಿಕೆ ಮತ್ತು ಆರೋಪ ಪಟ್ಟಿಯಲ್ಲಿನ ಸಾಕ್ಷಿಗಳನ್ನು ಹೊರತುಪಡಿಸಿ ನಟಿ ರಾಗಿಣಿ ದ್ವಿವೇದಿ ಮತ್ತು ಪ್ರಶಾಂತ್‌ ರಂಕ ಅವರು ಮೋಜು ಕೂಟಗಳನ್ನು (ರೇವ್ ಪಾರ್ಟಿ) ಆಯೋಜಿಸಿದ್ದರು ಅಥವಾ ಮಾದಕ ವಸ್ತುಗಳನ್ನು ಮಾರಾಟ ಮಾಡಿದ್ದರು ಎಂಬುವುದಕ್ಕೆ ಪ್ರಾಸಿಕ್ಯೂಷನ್‌ ಯಾವುದೇ ಭೌತಿಕ ಸಾಕ್ಷ್ಯಗಳನ್ನು ಒದಗಿಸಿಲ್ಲ” ಎಂದಿರುವ ನ್ಯಾಯಾಲಯ, ಅವರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದೆ.

ಕಳೆದ (2024) ಜೂನ್‌ನಲ್ಲಿ ಮತ್ತೊಬ್ಬ ನಟಿ ಸಂಜನಾ ಗಲ್ರಾನಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿತ್ತು.

2020ರ ಜುಲೈ 5, 8 ಮತ್ತು 17ರಂದು ನಡೆದಿದ್ದ ಮೋಜು ಕೂಟಗಳನ್ನು (ರೇವ್ ಪಾರ್ಟಿ) ನಟಿ ರಾಗಿಣಿ ಮತ್ತು ಪ್ರಶಾಂತ್‌ ಅವರು ಆಯೋಜಿಸಿ, ಅಲ್ಲಿಗೆ ಬಂದವರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಅನುವು ಮಾಡಿಕೊಟ್ಟಿದ್ದಾರೆ ಎಂಬ ನಿರ್ದಿಷ್ಟ ಆರೋಪ ಮಾಡಲಾಗಿತ್ತು.

ಈ ಪ್ರಕರಣದ 16ನೇ ಆರೋಪಿ ಬಿ ಕೆ ರವಿಶಂಕರ್‌ ಎಂಬವರ ಸ್ವಯಂ ತಪ್ಪೊಪ್ಪಿಗೆ ಹೇಳಿಕೆ ಆಧರಿಸಿ ಅವರನ್ನು ಆರೋಪಿಯನ್ನಾಗಿಸಲಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ವಿವರಿಸಿದೆ.

ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ವೀರಣ್ಣ ಜಿ. ತಿಗಡಿ ಮತ್ತು ಅರ್ಜಿದಾರರ ಪರವಾಗಿ ವಕೀಲ ಎ ಮಹಮ್ಮದ್‌ ತಾಹೀರ್ ಮತ್ತು ವಿ ಭರತ್‌ ಕುಮಾರ್‌ ವಾದಿಸಿದ್ದರು.

ಪ್ರಕರಣದ ಹಿನ್ನೆಲೆ : ನಟಿ ರಾಗಿಣಿ ಮತ್ತು ಇತರರು ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಮೋಜು ಕೂಟಗಳನ್ನು ಆಯೋಜಿಸಿ, ಅನೇಕ ಗ್ರಾಹಕರನ್ನು ಕರೆಸಿ ಡ್ರಗ್‌ ಪೆಡ್ಲರ್‌ಗಳ ಮೂಲಕ ಕೂಟಕ್ಕೆ ಬರುವ ಉದ್ಯಮಿಗಳು, ಸೆಲೆಬ್ರಿಟಿಗಳು, ನಟ-ನಟಿಯರು, ಡಿಜೆಗಳು, ಸಾಫ್ಟ್‌ವೇರ್‌ ಉದ್ಯೋಗಿಗಳು ಇತರರಿಗೆ ಮಾದಕ ವಸ್ತುಗಳನ್ನು ಪೂರೈಸಿ, ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದಾರೆ ಎಂದು ಸಿಸಿಬಿಯ ಎಸಿಪಿ ಕೆ ಸಿ ಗೌತಮ್‌ ಅವರು ಕಾಟನ್‌ ಪೇಟೆ ಠಾಣೆಯಲ್ಲಿ 2020ರ ಸೆಪ್ಟೆಂಬರ್‌ 4ರಂದು ದೂರು ದಾಖಲಿಸಿದ್ದರು. ಪ್ರಕರಣದ ಕುರಿತು ತನಿಖೆ ಮಾಡುವಾಗ ಬಿ ಕೆ ರವಿಶಂಕರ್‌ ಎಂಬಾತನನ್ನು ವಶಕ್ಕೆ ಪಡೆದಿದ್ದ ಗೌತಮ್‌ ಅವರು ಮಾಹಿತಿ ಸಂಗ್ರಹಿಸಿದ್ದರು. ಈ ಮಾಹಿತಿ ಆಧಾರದಲ್ಲಿ ಪ್ರಕರಣ ದಾಖಲಿಸಿದ್ದರು.

ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...