Homeಮುಖಪುಟಡ್ರಗ್ಸ್ ಪ್ರಕರಣ : ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣ ರದ್ದು

ಡ್ರಗ್ಸ್ ಪ್ರಕರಣ : ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣ ರದ್ದು

- Advertisement -
- Advertisement -

ನಟಿ ರಾಗಿಣಿ ದ್ವಿವೇದಿ ವಿರುದ್ಧದ ಮಾದಕವಸ್ತು ಸೇವನೆ ಹಾಗೂ ಮಾರಾಟಕ್ಕೆ ರೇವ್‌ ಪಾರ್ಟಿ ಆಯೋಜಿಸಿದ್ದರು ಎನ್ನಲಾದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಭೌತಿಕ ಸಾಕ್ಷ್ಯಗಳನ್ನು ಒದಗಿಸುವಲ್ಲಿ ಪ್ರಾಸಿಕ್ಯೂಷನ್‌ ವಿಫಲವಾದ ಕಾರಣಕ್ಕೆ ಪ್ರಕರಣದ ಎಲ್ಲ ಪ್ರಕ್ರಿಯೆಗಳನ್ನು ರದ್ದುಪಡಿಸಿರುವುದಾಗಿ ನ್ಯಾಯಾಲಯ ಹೇಳಿದೆ. ಮತ್ತೊಬ್ಬ ಆರೋಪಿ ಪ್ರಶಾಂತ್ ರಂಕ ವಿರುದ್ಧದ ಪ್ರಕರಣವನ್ನು ಕೂಡ ರದ್ದುಪಡಿಸಲಾಗಿದೆ.

‘ಸ್ಯಾಂಡಲ್‌ವುಡ್‌ ಡ್ರಗ್‌ ಪ್ರಕರಣ’ ಎಂದೇ ಮಾಧ್ಯಮಗಳಲ್ಲಿ ವರದಿಯಾಗಿದ್ದ ಈ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ನಟಿ ರಾಗಿಣಿ ದ್ವಿವೇದಿ ಹಾಗೂ ನಾಲ್ಕನೇ ಆರೋಪಿ ಪ್ರಶಾಂತ್‌ ರಂಕ ಅವರು ಪ್ರಕರಣದ ರದ್ದುಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಹೇಮಂತ್‌ ಚಂದನ್‌ಗೌಡರ್‌ ಅವರ ಹೈಕೋರ್ಟ್ ಏಕಸದಸ್ಯ ಪೀಠ ಪುರಸ್ಕರಿಸಿದೆ.

“ಸಹ ಆರೋಪಿಗಳ ಹೇಳಿಕೆ ಮತ್ತು ಆರೋಪ ಪಟ್ಟಿಯಲ್ಲಿನ ಸಾಕ್ಷಿಗಳನ್ನು ಹೊರತುಪಡಿಸಿ ನಟಿ ರಾಗಿಣಿ ದ್ವಿವೇದಿ ಮತ್ತು ಪ್ರಶಾಂತ್‌ ರಂಕ ಅವರು ಮೋಜು ಕೂಟಗಳನ್ನು (ರೇವ್ ಪಾರ್ಟಿ) ಆಯೋಜಿಸಿದ್ದರು ಅಥವಾ ಮಾದಕ ವಸ್ತುಗಳನ್ನು ಮಾರಾಟ ಮಾಡಿದ್ದರು ಎಂಬುವುದಕ್ಕೆ ಪ್ರಾಸಿಕ್ಯೂಷನ್‌ ಯಾವುದೇ ಭೌತಿಕ ಸಾಕ್ಷ್ಯಗಳನ್ನು ಒದಗಿಸಿಲ್ಲ” ಎಂದಿರುವ ನ್ಯಾಯಾಲಯ, ಅವರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದೆ.

ಕಳೆದ (2024) ಜೂನ್‌ನಲ್ಲಿ ಮತ್ತೊಬ್ಬ ನಟಿ ಸಂಜನಾ ಗಲ್ರಾನಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿತ್ತು.

2020ರ ಜುಲೈ 5, 8 ಮತ್ತು 17ರಂದು ನಡೆದಿದ್ದ ಮೋಜು ಕೂಟಗಳನ್ನು (ರೇವ್ ಪಾರ್ಟಿ) ನಟಿ ರಾಗಿಣಿ ಮತ್ತು ಪ್ರಶಾಂತ್‌ ಅವರು ಆಯೋಜಿಸಿ, ಅಲ್ಲಿಗೆ ಬಂದವರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಅನುವು ಮಾಡಿಕೊಟ್ಟಿದ್ದಾರೆ ಎಂಬ ನಿರ್ದಿಷ್ಟ ಆರೋಪ ಮಾಡಲಾಗಿತ್ತು.

ಈ ಪ್ರಕರಣದ 16ನೇ ಆರೋಪಿ ಬಿ ಕೆ ರವಿಶಂಕರ್‌ ಎಂಬವರ ಸ್ವಯಂ ತಪ್ಪೊಪ್ಪಿಗೆ ಹೇಳಿಕೆ ಆಧರಿಸಿ ಅವರನ್ನು ಆರೋಪಿಯನ್ನಾಗಿಸಲಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ವಿವರಿಸಿದೆ.

ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ವೀರಣ್ಣ ಜಿ. ತಿಗಡಿ ಮತ್ತು ಅರ್ಜಿದಾರರ ಪರವಾಗಿ ವಕೀಲ ಎ ಮಹಮ್ಮದ್‌ ತಾಹೀರ್ ಮತ್ತು ವಿ ಭರತ್‌ ಕುಮಾರ್‌ ವಾದಿಸಿದ್ದರು.

ಪ್ರಕರಣದ ಹಿನ್ನೆಲೆ : ನಟಿ ರಾಗಿಣಿ ಮತ್ತು ಇತರರು ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಮೋಜು ಕೂಟಗಳನ್ನು ಆಯೋಜಿಸಿ, ಅನೇಕ ಗ್ರಾಹಕರನ್ನು ಕರೆಸಿ ಡ್ರಗ್‌ ಪೆಡ್ಲರ್‌ಗಳ ಮೂಲಕ ಕೂಟಕ್ಕೆ ಬರುವ ಉದ್ಯಮಿಗಳು, ಸೆಲೆಬ್ರಿಟಿಗಳು, ನಟ-ನಟಿಯರು, ಡಿಜೆಗಳು, ಸಾಫ್ಟ್‌ವೇರ್‌ ಉದ್ಯೋಗಿಗಳು ಇತರರಿಗೆ ಮಾದಕ ವಸ್ತುಗಳನ್ನು ಪೂರೈಸಿ, ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದಾರೆ ಎಂದು ಸಿಸಿಬಿಯ ಎಸಿಪಿ ಕೆ ಸಿ ಗೌತಮ್‌ ಅವರು ಕಾಟನ್‌ ಪೇಟೆ ಠಾಣೆಯಲ್ಲಿ 2020ರ ಸೆಪ್ಟೆಂಬರ್‌ 4ರಂದು ದೂರು ದಾಖಲಿಸಿದ್ದರು. ಪ್ರಕರಣದ ಕುರಿತು ತನಿಖೆ ಮಾಡುವಾಗ ಬಿ ಕೆ ರವಿಶಂಕರ್‌ ಎಂಬಾತನನ್ನು ವಶಕ್ಕೆ ಪಡೆದಿದ್ದ ಗೌತಮ್‌ ಅವರು ಮಾಹಿತಿ ಸಂಗ್ರಹಿಸಿದ್ದರು. ಈ ಮಾಹಿತಿ ಆಧಾರದಲ್ಲಿ ಪ್ರಕರಣ ದಾಖಲಿಸಿದ್ದರು.

ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...