Homeಮುಖಪುಟಡ್ರಗ್ಸ್ ಪ್ರಕರಣ : ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣ ರದ್ದು

ಡ್ರಗ್ಸ್ ಪ್ರಕರಣ : ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣ ರದ್ದು

- Advertisement -
- Advertisement -

ನಟಿ ರಾಗಿಣಿ ದ್ವಿವೇದಿ ವಿರುದ್ಧದ ಮಾದಕವಸ್ತು ಸೇವನೆ ಹಾಗೂ ಮಾರಾಟಕ್ಕೆ ರೇವ್‌ ಪಾರ್ಟಿ ಆಯೋಜಿಸಿದ್ದರು ಎನ್ನಲಾದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಭೌತಿಕ ಸಾಕ್ಷ್ಯಗಳನ್ನು ಒದಗಿಸುವಲ್ಲಿ ಪ್ರಾಸಿಕ್ಯೂಷನ್‌ ವಿಫಲವಾದ ಕಾರಣಕ್ಕೆ ಪ್ರಕರಣದ ಎಲ್ಲ ಪ್ರಕ್ರಿಯೆಗಳನ್ನು ರದ್ದುಪಡಿಸಿರುವುದಾಗಿ ನ್ಯಾಯಾಲಯ ಹೇಳಿದೆ. ಮತ್ತೊಬ್ಬ ಆರೋಪಿ ಪ್ರಶಾಂತ್ ರಂಕ ವಿರುದ್ಧದ ಪ್ರಕರಣವನ್ನು ಕೂಡ ರದ್ದುಪಡಿಸಲಾಗಿದೆ.

‘ಸ್ಯಾಂಡಲ್‌ವುಡ್‌ ಡ್ರಗ್‌ ಪ್ರಕರಣ’ ಎಂದೇ ಮಾಧ್ಯಮಗಳಲ್ಲಿ ವರದಿಯಾಗಿದ್ದ ಈ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ನಟಿ ರಾಗಿಣಿ ದ್ವಿವೇದಿ ಹಾಗೂ ನಾಲ್ಕನೇ ಆರೋಪಿ ಪ್ರಶಾಂತ್‌ ರಂಕ ಅವರು ಪ್ರಕರಣದ ರದ್ದುಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಹೇಮಂತ್‌ ಚಂದನ್‌ಗೌಡರ್‌ ಅವರ ಹೈಕೋರ್ಟ್ ಏಕಸದಸ್ಯ ಪೀಠ ಪುರಸ್ಕರಿಸಿದೆ.

“ಸಹ ಆರೋಪಿಗಳ ಹೇಳಿಕೆ ಮತ್ತು ಆರೋಪ ಪಟ್ಟಿಯಲ್ಲಿನ ಸಾಕ್ಷಿಗಳನ್ನು ಹೊರತುಪಡಿಸಿ ನಟಿ ರಾಗಿಣಿ ದ್ವಿವೇದಿ ಮತ್ತು ಪ್ರಶಾಂತ್‌ ರಂಕ ಅವರು ಮೋಜು ಕೂಟಗಳನ್ನು (ರೇವ್ ಪಾರ್ಟಿ) ಆಯೋಜಿಸಿದ್ದರು ಅಥವಾ ಮಾದಕ ವಸ್ತುಗಳನ್ನು ಮಾರಾಟ ಮಾಡಿದ್ದರು ಎಂಬುವುದಕ್ಕೆ ಪ್ರಾಸಿಕ್ಯೂಷನ್‌ ಯಾವುದೇ ಭೌತಿಕ ಸಾಕ್ಷ್ಯಗಳನ್ನು ಒದಗಿಸಿಲ್ಲ” ಎಂದಿರುವ ನ್ಯಾಯಾಲಯ, ಅವರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದೆ.

ಕಳೆದ (2024) ಜೂನ್‌ನಲ್ಲಿ ಮತ್ತೊಬ್ಬ ನಟಿ ಸಂಜನಾ ಗಲ್ರಾನಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿತ್ತು.

2020ರ ಜುಲೈ 5, 8 ಮತ್ತು 17ರಂದು ನಡೆದಿದ್ದ ಮೋಜು ಕೂಟಗಳನ್ನು (ರೇವ್ ಪಾರ್ಟಿ) ನಟಿ ರಾಗಿಣಿ ಮತ್ತು ಪ್ರಶಾಂತ್‌ ಅವರು ಆಯೋಜಿಸಿ, ಅಲ್ಲಿಗೆ ಬಂದವರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಅನುವು ಮಾಡಿಕೊಟ್ಟಿದ್ದಾರೆ ಎಂಬ ನಿರ್ದಿಷ್ಟ ಆರೋಪ ಮಾಡಲಾಗಿತ್ತು.

ಈ ಪ್ರಕರಣದ 16ನೇ ಆರೋಪಿ ಬಿ ಕೆ ರವಿಶಂಕರ್‌ ಎಂಬವರ ಸ್ವಯಂ ತಪ್ಪೊಪ್ಪಿಗೆ ಹೇಳಿಕೆ ಆಧರಿಸಿ ಅವರನ್ನು ಆರೋಪಿಯನ್ನಾಗಿಸಲಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ವಿವರಿಸಿದೆ.

ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ವೀರಣ್ಣ ಜಿ. ತಿಗಡಿ ಮತ್ತು ಅರ್ಜಿದಾರರ ಪರವಾಗಿ ವಕೀಲ ಎ ಮಹಮ್ಮದ್‌ ತಾಹೀರ್ ಮತ್ತು ವಿ ಭರತ್‌ ಕುಮಾರ್‌ ವಾದಿಸಿದ್ದರು.

ಪ್ರಕರಣದ ಹಿನ್ನೆಲೆ : ನಟಿ ರಾಗಿಣಿ ಮತ್ತು ಇತರರು ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಮೋಜು ಕೂಟಗಳನ್ನು ಆಯೋಜಿಸಿ, ಅನೇಕ ಗ್ರಾಹಕರನ್ನು ಕರೆಸಿ ಡ್ರಗ್‌ ಪೆಡ್ಲರ್‌ಗಳ ಮೂಲಕ ಕೂಟಕ್ಕೆ ಬರುವ ಉದ್ಯಮಿಗಳು, ಸೆಲೆಬ್ರಿಟಿಗಳು, ನಟ-ನಟಿಯರು, ಡಿಜೆಗಳು, ಸಾಫ್ಟ್‌ವೇರ್‌ ಉದ್ಯೋಗಿಗಳು ಇತರರಿಗೆ ಮಾದಕ ವಸ್ತುಗಳನ್ನು ಪೂರೈಸಿ, ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದಾರೆ ಎಂದು ಸಿಸಿಬಿಯ ಎಸಿಪಿ ಕೆ ಸಿ ಗೌತಮ್‌ ಅವರು ಕಾಟನ್‌ ಪೇಟೆ ಠಾಣೆಯಲ್ಲಿ 2020ರ ಸೆಪ್ಟೆಂಬರ್‌ 4ರಂದು ದೂರು ದಾಖಲಿಸಿದ್ದರು. ಪ್ರಕರಣದ ಕುರಿತು ತನಿಖೆ ಮಾಡುವಾಗ ಬಿ ಕೆ ರವಿಶಂಕರ್‌ ಎಂಬಾತನನ್ನು ವಶಕ್ಕೆ ಪಡೆದಿದ್ದ ಗೌತಮ್‌ ಅವರು ಮಾಹಿತಿ ಸಂಗ್ರಹಿಸಿದ್ದರು. ಈ ಮಾಹಿತಿ ಆಧಾರದಲ್ಲಿ ಪ್ರಕರಣ ದಾಖಲಿಸಿದ್ದರು.

ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...