Homeಮುಖಪುಟಶಾಸಕ ಬಂದಾಗ ಎದ್ದು ನಿಲ್ಲದ ವೈದ್ಯನ ವಿರುದ್ಧ ಕ್ರಮ : ಸರ್ಕಾರಕ್ಕೆ ಛೀಮಾರಿ ಹಾಕಿದ ಕೋರ್ಟ್,...

ಶಾಸಕ ಬಂದಾಗ ಎದ್ದು ನಿಲ್ಲದ ವೈದ್ಯನ ವಿರುದ್ಧ ಕ್ರಮ : ಸರ್ಕಾರಕ್ಕೆ ಛೀಮಾರಿ ಹಾಕಿದ ಕೋರ್ಟ್, 50 ಸಾವಿರ ದಂಡ

- Advertisement -
- Advertisement -

ಆಸ್ಪತ್ರೆಯ ತುರ್ತು ವಾರ್ಡ್‌ಗೆ ಶಾಸಕ ಬಂದಾಗ ಎದ್ದು ನಿಂತಿಲ್ಲ ಎಂಬ ಕಾರಣಕ್ಕೆ ಕೋವಿಡ್ ಕರ್ತವ್ಯದಲ್ಲಿದ್ದ ವೈದ್ಯನ ವಿರುದ್ದ ಕ್ರಮ ಕೈಗೊಂಡಿರುವ ಹರಿಯಾಣ ಸರ್ಕಾರವನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶುಕ್ರವಾರ (ನವೆಂಬರ್ 21) ತೀವ್ರ ತರಾಟೆಗೆ ತೆಗೆದುಕೊಂಡಿದೆ. ಸರ್ಕಾರದ ವರ್ತನೆ ಸಂವೇದನಾರಹಿತ ಮತ್ತು ಅತ್ಯಂತ ಕಳವಳಕಾರಿ ಎಂದು ಟೀಕಿಸಿದೆ.

ವೈದ್ಯಕೀಯ ವೃತ್ತಿಗೆ ತಮ್ಮನ್ನು ಸಮರ್ಪಿಸಿಕೊಂಡಿರುವ ವೈದ್ಯರನ್ನು ದುರ್ಬಳಕೆ ಮಾಡುವಂತಹ ಅನಗತ್ಯ ಮತ್ತು ಅಹಿತಕರ ಕೃತ್ಯಗಳು ನಡೆಯಬಾರದು, ಅವುಗಳನ್ನು ತಡೆಯಬೇಕು ಎಂದು ನ್ಯಾಯಮೂರ್ತಿಗಳಾದ ಅಶ್ವನಿ ಕುಮಾರ್ ಮಿಶ್ರಾ ಮತ್ತು ರೋಹಿತ್ ಕಪೂರ್ ಅವರಿದ್ದ ದ್ವಿಸದಸ್ಯ ಪೀಠ ಹೇಳಿದೆ.

ಅರ್ಜಿದಾರ ವೈದ್ಯನ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗೆ ಅಗತ್ಯವಿರುವ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನೀಡುವಂತೆ ಹರಿಯಾಣ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸರ್ಕಾರಕ್ಕೆ 50 ಸಾವಿರ ರೂಪಾಯಿ ದಂಡ ವಿಧಿಸಿದೆ.

ಅರ್ಜಿದಾರರಾದ ಡಾ. ಮನೋಜ್ ಅವರು ಹರಿಯಾಣ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುತ್ತಿದ್ದ ಅಪಘಾತ ವೈದ್ಯಕೀಯ ಅಧಿಕಾರಿಯಾಗಿದ್ದರು. ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ, ಅವರು ಸರ್ಕಾರಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಕರ್ತವ್ಯದಲ್ಲಿದ್ದರು. ಆಸ್ಪತ್ರೆಗೆ ಶಾಸಕರೊಬ್ಬರು ಭೇಟಿ ನೀಡಿದಾಗ ಡಾ. ಮನೋಜ್ ಅವರು ಎದ್ದು ನಿಂತಿಲ್ಲ ಎಂಬ ಕಾರಣಕ್ಕೆ ಶಾಸಕ ಸಿಟ್ಟಾಗಿದ್ದರು.

ಇದಾದ ಬಳಿಕ, ಹರಿಯಾಣ ನಾಗರಿಕ ಸೇವೆಗಳ (ಶಿಕ್ಷೆ ಮತ್ತು ಮೇಲ್ಮನವಿ) ನಿಯಮಗಳು, 2016ರ ನಿಯಮ 8ರ ಅಡಿಯಲ್ಲಿ ಡಾ. ಮನೋಜ್ ಅವರಿಗೆ ಸರ್ಕಾರ ಕಾರಣ ಕೇಳಿ (ಶೋ-ಕಾಸ್) ನೋಟಿಸ್ ಜಾರಿ ಮಾಡಿತ್ತು.

ಅದಕ್ಕೆ ಮನೋಜ್ ಅವರು ಜೂನ್ 2024ರಲ್ಲಿ ಉತ್ತರಿಸಿದ್ದರು. “ನನಗೆ ಬಂದಿದ್ದು ಶಾಸಕ ಎಂದು ಗೊತ್ತಿರಲಿಲ್ಲ. ಹಾಗಾಗಿ ಎದ್ದು ನಿಂತಿರಲಿಲ್ಲ, ಉದ್ದೇಶಪೂರ್ವಕವಾಗಿ ಅಗೌರವ ತೋರಿಲ್ಲ. ಹಾಗಾಗಿ, ಅದು ಅಗೌರವಕ್ಕೆ ಸಮನಾಗುವುದಿಲ್ಲ” ಎಂದು ಮನೋಜ್ ಹೇಳಿದ್ದರು.

ಆ ಬಳಿಕ ಸರ್ಕಾರ ಯಾವುದೇ ಆದೇಶ ಹೊರಡಿಸಿರಲಿಲ್ಲ. ಆದರೆ, ಶೋಕಾಸ್ ನೋಟಿಸ್ ಪ್ರಕ್ರಿಯೆ ಬಾಕಿ ಉಳಿಸಿಕೊಂಡಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಮನೋಜ್ ಅವರ ಉನ್ನತ ಶಿಕ್ಷಣಕ್ಕೆ ಎನ್‌ಒಸಿ ನೀಡಿರಲಿಲ್ಲ ಎನ್ನಲಾಗಿದೆ.

ಕೋವಿಡ್-19 ಸಮಯದಲ್ಲಿ ತುರ್ತು ಕರ್ತವ್ಯದಲ್ಲಿದ್ದ ಸರ್ಕಾರಿ ವೈದ್ಯರೊಬ್ಬರು, ಶಾಸಕರು ಬಂದಾಗ ಎದ್ದು ನಿಲ್ಲಲಿಲ್ಲ ಎಂಬ ಏಕೈಕ ಕಾರಣಕ್ಕೆ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ನೋಡಿ ನಮಗೆ ತೀವ್ರ ನೋವು ಮತ್ತು ಆಘಾತವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಶಾಸಕರೊಬ್ಬರು ಆಸ್ಪತ್ರೆಯ ತುರ್ತು ವಿಭಾಗಕ್ಕೆ ಪ್ರವೇಶಿಸಿದಾಗ ವೈದ್ಯರು ಎದ್ದು ನಿಲ್ಲುತ್ತಾರೆಂದು ನಿರೀಕ್ಷಿಸುವುದು ಮತ್ತು ಅವರು ಎದ್ದು ನಿಲ್ಲದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲು ಪ್ರಸ್ತಾಪಿಸುವುದು ತುಂಬಾ ಬೇಸರದ ಸಂಗತಿ ಎಂದಿದೆ.

ಅರ್ಜಿದಾರ ವೈದ್ಯರು ನೀಡಿದ ವಿವರಣೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅವರಿಗೆ ಬಂದಿರುವುದು ಶಾಸಕ ಎಂಬುವುದು ಗೊತ್ತಿರಲಿಲ್ಲ ಮತ್ತು ಉದ್ದೇಶಪೂರ್ವಕವಾಗಿ ಅಗೌರವ ತೋರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ನವೆಂಬರ್ 21ರ ಆದೇಶದಲ್ಲಿ ನ್ಯಾಯಾಲಯ ಹೇಳಿದೆ.

ನಮ್ಮ ಅಭಿಪ್ರಾಯದಲ್ಲಿ, ಇಂತಹ ಆರೋಪದಡಿಯಲ್ಲಿ (ಎದ್ದು ನಿಂತಿಲ್ಲ) ಅರ್ಜಿದಾರನ ವಿರುದ್ಧ ಕ್ರಮ ಕೈಗೊಳ್ಳುವುದು ರಾಜ್ಯ ಸರ್ಕಾರದಿಂದ ಸಂವೇದನಾರಹಿತ ಮತ್ತು ಅಮಾನವೀಯ ಕ್ರಮವಾಗಿದೆ. ಅದೇ ರೀತಿ, ಶೋಕಾಸ್ ನೋಟಿಸ್ ಬಾಕಿ ಇದೆ ಎಂಬ ಏಕೈಕ ಕಾರಣಕ್ಕೆ ಎನ್‌ಒಸಿ ನೀಡದೆ ಅವರು ಉನ್ನತ ವೈದ್ಯಕೀಯ ಶಿಕ್ಷಣ ಪಡೆಯುವ ಹಕ್ಕನ್ನು ತಡೆಯುವುದು ಕೂಡ ಅತ್ಯಂತ ಅನ್ಯಾಯದ ಕ್ರಮವಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ವೈದ್ಯಕೀಯ ಶಿಕ್ಷಣ ಪಡೆಯುವುದು ಕಠಿಣ ಸವಾಲು ಎಂದು ಒತ್ತಿ ಹೇಳಿದ ನ್ಯಾಯಾಲಯ, ಎಂಬಿಬಿಎಸ್ ಕೋರ್ಸ್‌ಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ಅಸಾಧಾರಣವಾಗಿ ಉತ್ತಮ ಪ್ರದರ್ಶನ ನೀಡಬೇಕು ಎಂದಿದೆ.

ವೈದ್ಯಕೀಯ ಕೋರ್ಸ್‌ಗಳಿಗೆ ದೀರ್ಘಾವಧಿಯವರೆಗೆ ಆಳವಾದ ಸಮರ್ಪಣೆ ಮತ್ತು ಬದ್ಧತೆಯ ಅಗತ್ಯವಿರುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಎಂಬಿಬಿಎಸ್ ಮುಗಿಸಿ ಸರ್ಕಾರಿ ಸೇವೆಗೆ ಸೇರಿದ ನಂತರ, ವೈದ್ಯರು ಜನಸಾಮಾನ್ಯರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕಾಗುತ್ತದೆ. ಸಾರ್ವಜನಿಕ ಪ್ರತಿನಿಧಿಗಳು ಮತ್ತು ಜವಾಬ್ದಾರಿಯುತ ಇತರರು ಅಂತಹ ಸಮರ್ಪಿತ ವೃತ್ತಿಪರರಿಗೆ ಗೌರವ ಮತ್ತು ಮೂಲಭೂತ ಸೌಜನ್ಯಗಳನ್ನು ನೀಡಬೇಕು ಎಂದು ನ್ಯಾಯಾಲಯ ತಿಳಿಸಿದೆ.

ರೋಗಿಗಳ ಸಂಬಂಧಿಕರು ಅಥವಾ ಸಾರ್ವಜನಿಕ ಪ್ರತಿನಿಧಿಗಳು ಸರಿಯಾದ ಕಾರಣವಿಲ್ಲದೆ ಸಮರ್ಪಿತ ವೈದ್ಯಕೀಯ ವೃತ್ತಿಪರರನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂಬ ವರದಿಗಳು ಪತ್ರಿಕೆಗಳಲ್ಲಿ ಆಗಾಗ್ಗೆ ಪ್ರಕಟವಾಗುವುದನ್ನು ನಾವು ಬೇಸರದಿಂದ ನೋಡಿದ್ದೇವೆ. ಅಂತಹ ಅನಪೇಕ್ಷಿತ ಘಟನೆಗಳನ್ನು ಪರಿಶೀಲಿಸುವ ಮತ್ತು ಪ್ರಾಮಾಣಿಕ ವೈದ್ಯಕೀಯ ವೃತ್ತಿಪರರಿಗೆ ಸೂಕ್ತ ಮನ್ನಣೆ ನೀಡುವ ಸಮಯ ಬಂದಿದೆ ಎಂದು ನ್ಯಾಯಾಲಯ ಹೇಳಿದೆ.

ಶಾಸಕ ಬಂದಾಗ ವೈದ್ಯ ಎದ್ದು ನಿಲ್ಲಲಿಲ್ಲ ಎಂಬ ಕಾರಣಕ್ಕೆ ಅವರ ವಿರುದ್ಧ ಪ್ರತಿಕೂಲ ಕ್ರಮ ಕೈಗೊಳ್ಳಲು ಅವಕಾಶ ನೀಡುವುದು ಸಂಪೂರ್ಣ ಅನ್ಯಾಯ ಮತ್ತು ಸ್ಪಷ್ಟವಾಗಿ ಅನಿಯಂತ್ರಿತವಾಗುತ್ತದೆ ಎಂದು ಪೀಠ ಹೇಳಿದೆ. ಶೋಕಾಸ್ ನೋಟಿಸ್‌ನಂತಹ ಪ್ರಕ್ರಿಯೆಗಳನ್ನು ವರ್ಷಗಳ ಕಾಲ ಬಾಕಿ ಇಡುವುದು ಮತ್ತು ಅದನ್ನೇ ನೆಪವಾಗಿಸಿ ಎನ್‌ಒಸಿ ನಿರಾಕರಿಸುವುದು ಸಮರ್ಥನೀಯವಲ್ಲ ಎಂದಿದೆ.

ಆದ್ದರಿಂದ, ಅರ್ಜಿದಾರರಿಗೆ (ವೈದ್ಯನಿಗೆ) ತಕ್ಷಣವೇ ಎನ್‌ಒಸಿ ನೀಡುವಂತೆ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶಿಸಿದೆ, ಜೊತೆಗೆ ರಾಜ್ಯ ಸರ್ಕಾರ ರೂ. 50,000 ದಂಡವನ್ನು ಚಂಡೀಗಢದಲ್ಲಿರುವ ಪಿಜಿಐಎಂಇಎರ್‌ ಸಂಸ್ಥೆಯ ಬಡ ರೋಗಿಗಳ ಕಲ್ಯಾಣ ನಿಧಿಯಲ್ಲಿ ಠೇವಣಿ ಇಡಬೇಕು ಎಂದು ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...