Homeಕರ್ನಾಟಕಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ ಅಪರಾಧವಲ್ಲ ಎಂದಿದ್ದ ಆದೇಶ ಹಿಂಪಡೆದ ಹೈಕೋರ್ಟ್

ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ ಅಪರಾಧವಲ್ಲ ಎಂದಿದ್ದ ಆದೇಶ ಹಿಂಪಡೆದ ಹೈಕೋರ್ಟ್

- Advertisement -
- Advertisement -

ಆನ್‌ಲೈನ್‌ನಲ್ಲಿ ಮಕ್ಕಳ ಅಶ್ಲೀಲ ವಿಡಿಯೋ/ಚಿತ್ರ ವೀಕ್ಷಿಸಿದ ವ್ಯಕ್ತಿಯ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್‌ 67 ಬಿ ಅಡಿ ಪ್ರಕರಣ ದಾಖಲಿಸಲಾಗದು ಎಂದು ಜುಲೈ 10ರಂದು ನೀಡಿದ್ದ ತನ್ನ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಹಿಂಪಡೆದಿದೆ.

ಐಟಿ ಕಾಯ್ದೆಯ ಸೆಕ್ಷನ್‌ 67ಬಿ (ಬಿ) ಅನ್ನು ಪರಿಗಣಿಸದೆ ಆದೇಶ ನೀಡಲಾಗಿದ್ದು, ಇದು ತಪ್ಪಾಗಿದೆ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಈ ಹಿಂದೆ ನೀಡಿದ್ದ ತನ್ನದೇ ಆದೇಶವನ್ನು ಹಿಂಪಡೆದಿದೆ.

ಅಶ್ಲೀಲ ವೆಬ್‌ಸೈಟ್‌ ವೀಕ್ಷಿಸುವುದು ಮಾಹಿತಿ ಪ್ರಸಾರ ಅಥವಾ ವರ್ಗಾವಣೆ ಮಾಡಿದಂತಾಗುವುದಿಲ್ಲ ಎಂದು ನ್ಯಾಯಾಲಯವು ಅರ್ಜಿದಾರ ಇನಾಯುತುಲ್ಲಾ ಎನ್‌ ವಿರುದ್ಧ ಪ್ರಕರಣ ರದ್ದುಪಡಿಸಿತ್ತು. ಐಟಿ ಕಾಯ್ದೆಯ ಸೆಕ್ಷನ್‌ 67ಬಿ ಅಡಿ ಅಪರಾಧವಾಗಬೇಕಾದರೆ ಮಾಹಿತಿ ಪ್ರಸಾರ ಅಥವಾ ವರ್ಗಾವಣೆ ಮಾಡಬೇಕು ಎಂದು ಹೇಳಿತ್ತು.

ಆದೇಶ ಹಿಂಪಡೆಯುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೆಮೊ ವಿಚಾರಣೆ ನಡೆಸಿದ ನ್ಯಾ. ನಾಗಪ್ರಸನ್ನ ಅವರು, ಐಟಿ ಕಾಯ್ದೆಯ ಸೆಕ್ಷನ್‌ 67 ಬಿ (ಎ) ಆಧರಿಸಿ ಆದೇಶ ನೀಡಲಾಗಿತ್ತು. ಆದರೆ, ಕಾಯ್ದೆಯೆ ಸೆಕ್ಷನ್‌ 67ಬಿ (ಬಿ) ಅಡಿ ವಿದ್ಯುನ್ಮಾನ ಮಾದರಿಯಲ್ಲಿ ಮಕ್ಕಳನ್ನು ಅಶ್ಲೀಲ, ಲೈಂಗಿಕವಾಗಿ ಬಿಂಬಿಸುವ ಟೆಕ್ಸ್ಟ್‌ ಅಥವಾ ಡಿಜಿಟಲ್‌ ಇಮೇಜ್‌ಗಳನ್ನು ಕಳುಹಿಸುವುದು, ಕೇಳುವುದು, ಅದನ್ನು ಬ್ರೌಸ್‌ ಮಾಡುವುದು, ಡೌನ್‌ಲೋಡ್‌, ಜಾಹೀರಾತು, ಪ್ರಮೋಟ್‌, ಹಂಚಿಕೆ ಮಾಡುವುದು ಸೆಕ್ಷನ್‌ 67ಬಿ ಅಡಿ ಪ್ರಕ್ರಿಯೆಗೆ ನಾಂದಿ ಹಾಡಲಿದೆ ಎಂದಿದೆ.

ಹಾಲಿ ಪ್ರಕರಣಕ್ಕೆ ಕಾಯ್ದೆಯೆ ಸೆಕ್ಷನ್‌ 67ಬಿ ಯ ಉಪ ಸೆಕ್ಷನ್‌ ಬಿ ಅನ್ವಯಿಸುತ್ತದೆ. ಮುಂದಿನ ತನಿಖೆಗೆ ಅವಕಾಶ ನೀಡದೇ ಪ್ರಕ್ರಿಯೆ ರದ್ದುಪಡಿಸಿದ್ದು, ಐಟಿ ಕಾಯಿದೆ ಸೆಕ್ಷನ್‌ 67ಬಿ (ಬಿ) ಹಿನ್ನೆಲೆಯಲ್ಲಿ ನಿಸ್ಸಂಶಯವಾಗಿ ಅರ್ಜಿದಾರರ ವಿರುದ್ಧದ ಪ್ರಕ್ರಿಯೆ ವಜಾ ಮಾಡಿರುವುದನ್ನು ಹಿಂಪಡೆಯಲು ಸಕಾರಣವಿದೆ” ಎಂದು ಪೀಠ ಹೇಳಿದೆ.

ಒಮ್ಮೆ ಆದೇಶ ನೀಡಿದ ಮೇಲೆ ಹಿಂಪಡೆಯಲು ಅಥವಾ ಅದನ್ನು ಮರು ಪರಿಶೀಲಿಸಿಲು ಸಿಆರ್‌ಪಿಸಿ ಸೆಕ್ಷನ್‌ 362 ಅಡಿ ಈ ನ್ಯಾಯಾಲಯಕ್ಕೆ ನಿರ್ಬಂಧವಿದೆ ಎಂಬ ಅರ್ಜಿದಾರರ ಪರ ವಕೀಲರ ವಾದ ತಿರಸ್ಕರಿಸಿದ ನ್ಯಾಯಾಲಯ, “ಸಿಆರ್‌ಪಿಸಿ ಸೆಕ್ಷನ್‌ 482 ಅನ್ನು ಸೆಕ್ಷನ್‌ 362 ನಿಯಂತ್ರಿಸಲಾಗದು. ಅಂತರ್ಗತವಾದ ಅಧಿಕಾರಗಳನ್ನು ಇತರೆ ನಿಬಂಧನೆಗಳು ನಿಯಂತ್ರಿಸಲಾಗದು” ಎಂದು ಹೇಳಿದೆ.

ಇದನ್ನೂ ಓದಿ : ದಲಿತ ಸಮುದಾಯದ ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ; ‘ಪ್ರಬುದ್ಧ’ ಯೋಜನೆ ಪುನರಾರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...