Homeಕರ್ನಾಟಕಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ ಅಪರಾಧವಲ್ಲ ಎಂದಿದ್ದ ಆದೇಶ ಹಿಂಪಡೆದ ಹೈಕೋರ್ಟ್

ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ ಅಪರಾಧವಲ್ಲ ಎಂದಿದ್ದ ಆದೇಶ ಹಿಂಪಡೆದ ಹೈಕೋರ್ಟ್

- Advertisement -
- Advertisement -

ಆನ್‌ಲೈನ್‌ನಲ್ಲಿ ಮಕ್ಕಳ ಅಶ್ಲೀಲ ವಿಡಿಯೋ/ಚಿತ್ರ ವೀಕ್ಷಿಸಿದ ವ್ಯಕ್ತಿಯ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್‌ 67 ಬಿ ಅಡಿ ಪ್ರಕರಣ ದಾಖಲಿಸಲಾಗದು ಎಂದು ಜುಲೈ 10ರಂದು ನೀಡಿದ್ದ ತನ್ನ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಹಿಂಪಡೆದಿದೆ.

ಐಟಿ ಕಾಯ್ದೆಯ ಸೆಕ್ಷನ್‌ 67ಬಿ (ಬಿ) ಅನ್ನು ಪರಿಗಣಿಸದೆ ಆದೇಶ ನೀಡಲಾಗಿದ್ದು, ಇದು ತಪ್ಪಾಗಿದೆ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಈ ಹಿಂದೆ ನೀಡಿದ್ದ ತನ್ನದೇ ಆದೇಶವನ್ನು ಹಿಂಪಡೆದಿದೆ.

ಅಶ್ಲೀಲ ವೆಬ್‌ಸೈಟ್‌ ವೀಕ್ಷಿಸುವುದು ಮಾಹಿತಿ ಪ್ರಸಾರ ಅಥವಾ ವರ್ಗಾವಣೆ ಮಾಡಿದಂತಾಗುವುದಿಲ್ಲ ಎಂದು ನ್ಯಾಯಾಲಯವು ಅರ್ಜಿದಾರ ಇನಾಯುತುಲ್ಲಾ ಎನ್‌ ವಿರುದ್ಧ ಪ್ರಕರಣ ರದ್ದುಪಡಿಸಿತ್ತು. ಐಟಿ ಕಾಯ್ದೆಯ ಸೆಕ್ಷನ್‌ 67ಬಿ ಅಡಿ ಅಪರಾಧವಾಗಬೇಕಾದರೆ ಮಾಹಿತಿ ಪ್ರಸಾರ ಅಥವಾ ವರ್ಗಾವಣೆ ಮಾಡಬೇಕು ಎಂದು ಹೇಳಿತ್ತು.

ಆದೇಶ ಹಿಂಪಡೆಯುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೆಮೊ ವಿಚಾರಣೆ ನಡೆಸಿದ ನ್ಯಾ. ನಾಗಪ್ರಸನ್ನ ಅವರು, ಐಟಿ ಕಾಯ್ದೆಯ ಸೆಕ್ಷನ್‌ 67 ಬಿ (ಎ) ಆಧರಿಸಿ ಆದೇಶ ನೀಡಲಾಗಿತ್ತು. ಆದರೆ, ಕಾಯ್ದೆಯೆ ಸೆಕ್ಷನ್‌ 67ಬಿ (ಬಿ) ಅಡಿ ವಿದ್ಯುನ್ಮಾನ ಮಾದರಿಯಲ್ಲಿ ಮಕ್ಕಳನ್ನು ಅಶ್ಲೀಲ, ಲೈಂಗಿಕವಾಗಿ ಬಿಂಬಿಸುವ ಟೆಕ್ಸ್ಟ್‌ ಅಥವಾ ಡಿಜಿಟಲ್‌ ಇಮೇಜ್‌ಗಳನ್ನು ಕಳುಹಿಸುವುದು, ಕೇಳುವುದು, ಅದನ್ನು ಬ್ರೌಸ್‌ ಮಾಡುವುದು, ಡೌನ್‌ಲೋಡ್‌, ಜಾಹೀರಾತು, ಪ್ರಮೋಟ್‌, ಹಂಚಿಕೆ ಮಾಡುವುದು ಸೆಕ್ಷನ್‌ 67ಬಿ ಅಡಿ ಪ್ರಕ್ರಿಯೆಗೆ ನಾಂದಿ ಹಾಡಲಿದೆ ಎಂದಿದೆ.

ಹಾಲಿ ಪ್ರಕರಣಕ್ಕೆ ಕಾಯ್ದೆಯೆ ಸೆಕ್ಷನ್‌ 67ಬಿ ಯ ಉಪ ಸೆಕ್ಷನ್‌ ಬಿ ಅನ್ವಯಿಸುತ್ತದೆ. ಮುಂದಿನ ತನಿಖೆಗೆ ಅವಕಾಶ ನೀಡದೇ ಪ್ರಕ್ರಿಯೆ ರದ್ದುಪಡಿಸಿದ್ದು, ಐಟಿ ಕಾಯಿದೆ ಸೆಕ್ಷನ್‌ 67ಬಿ (ಬಿ) ಹಿನ್ನೆಲೆಯಲ್ಲಿ ನಿಸ್ಸಂಶಯವಾಗಿ ಅರ್ಜಿದಾರರ ವಿರುದ್ಧದ ಪ್ರಕ್ರಿಯೆ ವಜಾ ಮಾಡಿರುವುದನ್ನು ಹಿಂಪಡೆಯಲು ಸಕಾರಣವಿದೆ” ಎಂದು ಪೀಠ ಹೇಳಿದೆ.

ಒಮ್ಮೆ ಆದೇಶ ನೀಡಿದ ಮೇಲೆ ಹಿಂಪಡೆಯಲು ಅಥವಾ ಅದನ್ನು ಮರು ಪರಿಶೀಲಿಸಿಲು ಸಿಆರ್‌ಪಿಸಿ ಸೆಕ್ಷನ್‌ 362 ಅಡಿ ಈ ನ್ಯಾಯಾಲಯಕ್ಕೆ ನಿರ್ಬಂಧವಿದೆ ಎಂಬ ಅರ್ಜಿದಾರರ ಪರ ವಕೀಲರ ವಾದ ತಿರಸ್ಕರಿಸಿದ ನ್ಯಾಯಾಲಯ, “ಸಿಆರ್‌ಪಿಸಿ ಸೆಕ್ಷನ್‌ 482 ಅನ್ನು ಸೆಕ್ಷನ್‌ 362 ನಿಯಂತ್ರಿಸಲಾಗದು. ಅಂತರ್ಗತವಾದ ಅಧಿಕಾರಗಳನ್ನು ಇತರೆ ನಿಬಂಧನೆಗಳು ನಿಯಂತ್ರಿಸಲಾಗದು” ಎಂದು ಹೇಳಿದೆ.

ಇದನ್ನೂ ಓದಿ : ದಲಿತ ಸಮುದಾಯದ ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ; ‘ಪ್ರಬುದ್ಧ’ ಯೋಜನೆ ಪುನರಾರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...