Homeಮುಖಪುಟ'ದೆಹಲಿ ಗಲಭೆ' ಕುರಿತ ಸಿನಿಮಾ ಬಿಡುಗಡೆಗೆ ತಡೆಕೋರಿ ಶರ್ಜೀಲ್ ಇಮಾಮ್ ಅರ್ಜಿ : ಸರ್ಕಾರದ ಪ್ರತಿಕ್ರಿಯೆ...

‘ದೆಹಲಿ ಗಲಭೆ’ ಕುರಿತ ಸಿನಿಮಾ ಬಿಡುಗಡೆಗೆ ತಡೆಕೋರಿ ಶರ್ಜೀಲ್ ಇಮಾಮ್ ಅರ್ಜಿ : ಸರ್ಕಾರದ ಪ್ರತಿಕ್ರಿಯೆ ಕೋರಿದ ಕೋರ್ಟ್

- Advertisement -
- Advertisement -

ಫೆಬ್ರವರಿ 2020ರಲ್ಲಿ ದೆಹಲಿಯಲ್ಲಿ ನಡೆದ ಗಲಭೆಯ ಕುರಿತಾದ ಚಲನಚಿತ್ರ ‘2020 ಡೆಲ್ಲಿ’ ಬಿಡುಗಡೆಯನ್ನು ಮುಂದೂಡಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಶರ್ಜೀಲ್ ಇಮಾಮ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಗುರುವಾರ (ಜ.30) ಕೇಂದ್ರ ಸರ್ಕಾರ ಮತ್ತು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯಿಂದ(ಸಿಬಿಎಫ್‌ಸಿ) ಪ್ರತಿಕ್ರಿಯೆ ಕೋರಿದೆ ಎಂದು ಪಿಟಿಐ ವರದಿ ಮಾಡಿದೆ.

ನ್ಯಾಯಾಲಯ ದೆಹಲಿ ಪೊಲೀಸರು ಮತ್ತು ಚಿತ್ರದ ನಿರ್ಮಾಪಕರಿಗೂ ನೋಟಿಸ್ ಜಾರಿ ಮಾಡಿದೆ ಎಂದು ವರದಿ ಹೇಳಿದೆ.

ರಾಷ್ಟ್ರ ರಾಜಧಾನಿಯಲ್ಲಿ ನಡೆದ ಗಲಭೆಗಳಿಗೆ ಸಂಬಂಧಿಸಿದಂತೆ ಪಿತೂರಿ ನಡೆಸಿದ ಆರೋಪದ ಮೇಲೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಿ, ಪ್ರಸ್ತುತ ಶರ್ಜೀಲ್ ಇಮಾಮ್ ಅವರನ್ನು ಜೈಲಿನಲ್ಲಿಡಲಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ವಿರುದ್ಧ ನಡೆದಿದ್ದ ಪ್ರತಿಭಟನೆ ಮತ್ತು ನಂತರ ನಡೆದ ಗಲಭೆಗಳನ್ನು ಆಧರಿಸಿದ ‘2020 ಡೆಲ್ಲಿ’ ಚಿತ್ರ ನಿರ್ಮಿಸಲಾಗಿದೆ. ಶನಿವಾರ (ಜ.1) ಅದು ಬಿಡುಗಡೆಯಾಗಲಿದೆ.

ಸಿನಿಮಾದ ಚಿತ್ರಕಥೆಗಾರ ಮತ್ತು ನಿರ್ದೇಶಕ ದೇವೇಂದ್ರ ಮಾಲ್ವಿಯಾ, ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (ಸಿಬಿಎಫ್‌ಸಿ) ಸಲಹೆಗಾರರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಈ ಚಿತ್ರವು ತನ್ನ ಪ್ರಕರಣದಲ್ಲಿ ನ್ಯಾಯಾಂಗ ಪ್ರಕ್ರಿಯೆಯ ಮೇಲೆ ಮಾತ್ರವಲ್ಲದೆ, ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಲವಾರು ವಿಚಾರಣೆ ಮತ್ತು ಜಾಮೀನು ಅರ್ಜಿಗಳ ಮೇಲೂ ಪರಿಣಾಮ ಬೀರಬಹುದು ಎಂದು ಶರ್ಜೀಲ್ ಇಮಾಮ್ ಕಳವಳ ವ್ಯಕ್ತಪಡಿಸಿದ್ದಾರೆ.

“ಸುಳ್ಳು, ಕಲ್ಪಿತ ಮತ್ತು ಕಾಲ್ಪನಿಕ ಕಥೆ ಹೊಂದಿರುವ ಚಿತ್ರವನ್ನು ನಿಜವಾದ ಘಟನೆಗಳನ್ನು ಆಧರಿಸಿ ನಿರ್ಮಿಸಲಾಗಿದೆ ಎಂದು ಬಿಂಬಿಸಲು ಪ್ರಯತ್ನಿಸಲಾಗುತ್ತಿದೆ. ತನ್ನನ್ನು ಭಯೋತ್ಪಾದಕ ಅಥವಾ ದೇಶದ್ರೋಹಿ ಎಂದು ತಪ್ಪಾಗಿ ಬ್ರಾಂಡ್ ಮಾಡುವ ಈ ಚಿತ್ರವು ಖಂಡಿತವಾಗಿಯೂ ಇನ್ನೂ ಪ್ರಾರಂಭಗೊಳ್ಳದ ವಿಚಾರಣೆಯ ಮೇಲೆ ಗಂಭೀರ ಪೂರ್ವಾಗ್ರಹ ಪೀಡಿತ ಪರಿಣಾಮ ಬೀರುತ್ತದೆ” ಎಂದು ಶರ್ಜೀಲ್ ಇಮಾಮ್ ವಾದಿಸಿದ್ದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ನ್ಯಾಯಾಲಯದ ತೀರ್ಪು ಬರುವ ಮುನ್ನವೇ ವ್ಯಕ್ತಿಗಳಿಗೆ ಭಯೋತ್ಪಾದಕರು ಎಂದು ಹಣೆಪಟ್ಟಿ ಕಟ್ಟುವುದು ನ್ಯಾಯಾಂಗದ ಪಕ್ಷಪಾತಕ್ಕೆ ಕಾರಣವಾಗಬಹುದು. ಅಲ್ಲದೆ, ಸಮಾನತೆ, ಜೀವನ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕನ್ನು ರಕ್ಷಿಸುವ ಸಂವಿಧಾನ 14 ಮತ್ತು 21 ನೇ ವಿಧಿಯ ವಿರುದ್ಧವೂ ಆಗುತ್ತದೆ ಎಂದು ಶರ್ಜೀಲ್ ಇಮಾಮ್ ಅರ್ಜಿಯಲ್ಲಿ ಹೇಳಿದ್ದಾರೆ.

ಫೆಬ್ರವರಿ 2020ರಲ್ಲಿ ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಬಲಿಗರು ಮತ್ತು ಅದನ್ನು ವಿರೋಧಿಸುವವರ ನಡುವೆ ಘರ್ಷಣೆಗಳು ನಡೆದಿದ್ದವು. ಈ ಹಿಂಸಾಚಾರದಲ್ಲಿ 53 ಜನರು ಸಾವನ್ನಪ್ಪಿದ್ದರು ಮತ್ತು ನೂರಾರು ಜನರು ಗಾಯಗೊಂಡಿದ್ದರು. ಮೃತರಲ್ಲಿ ಹೆಚ್ಚಿನವರು ಮುಸ್ಲಿಮರು.

ಈ ಹಿಂಸಾಚಾರವು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದದ ದೊಡ್ಡ ಪಿತೂರಿಯ ಭಾಗವಾಗಿದ್ದು, ವಿವಾದಾತ್ಮಕ ಪೌರತ್ವ ಕಾನೂನಿನ ವಿರುದ್ಧ ಪ್ರತಿಭಟನೆಗಳನ್ನು ಆಯೋಜಿಸಿದವರೇ ಗಲಭೆಯ ಹಿಂದಿನ ಸಂಚು ರೂಪಿಸಿದ್ದಾರೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.

ಉಮರ್ ಖಾಲಿದ್ ಮತ್ತು ಇತರರ ಬಿಡುಗಡೆಗೆ 150ಕ್ಕೂ ಹೆಚ್ಚು ಪ್ರಖ್ಯಾತ ಬರಹಗಾರರು, ಚಲನಚಿತ್ರ ನಿರ್ಮಾಪಕರಿಂದ ಹೇಳಿಕೆ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...