Homeಕರ್ನಾಟಕವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

- Advertisement -
- Advertisement -

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ ನೀಡುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಂಗಳವಾರ (ಡಿಸೆಂಬರ್ 9) ಮಧ್ಯಂತರ ತಡೆ ನೀಡಿದೆ.

ಬೆಂಗಳೂರು ಹೋಟೆಲ್‌ ಸಂಘದ ಕೋರಿಕೆಯಂತೆ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಲಾಗಿದೆ. ರಾಜ್ಯ ಸರ್ಕಾರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯ ಹೊಂದಿದೆ ಎಂದು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರ ಏಕಸದಸ್ಯ ಪೀಠ ಹೇಳಿದೆ.

ಅಲ್ಲದೇ, ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಗೆ ಪೀಠ ನೋಟಿಸ್‌ ಜಾರಿಗೊಳಿಸಿದ್ದು, ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಹೈಕೋರ್ಟ್‌ನ ಚಳಿಗಾಲದ ರಜೆ ಮುಗಿದ ಬಳಿಕ ನಿಗದಿಪಡಿಸಲು ನಿರ್ದೇಶಿಸಿದೆ.

ವಿಚಾರಣೆ ವೇಳೆ ಹೋಟೆಲ್‌ ಸಂಘದ ಪರ ವಾದ ಮಂಡಿಸಿದ ವಕೀಲ ಬಿ ಕೆ ಪ್ರಶಾಂತ್‌, “ಕಾರ್ಮಿಕ ಇಲಾಖೆಯು 18 ರಿಂದ 52 ವಯೋಮಾನದ ಮಹಿಳಾ ಉದ್ಯೋಗಿಗಳಿಗೆ ಮಾಸಿಕ ಒಂದು ದಿನದ ಋತುಚಕ್ರದ ರಜೆ ನೀಡುವುದನ್ನು ಕಡ್ಡಾಯಗೊಳಿಸಿದೆ. 1948ರ ಕಾರ್ಖಾನೆ ಕಾಯ್ದೆ, 1961ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ, 1951ರ ಪ್ಲಾಂಟೇಶನ್ ಕಾರ್ಮಿಕ ಕಾಯ್ದೆ, 1966ರ ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ ಮತ್ತು 1961ರ ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆಯಡಿ ಬರುವ ಸಂಸ್ಥೆಗಳಿಗೆ ಅನ್ವಯಿಸುವಂತೆ ಈ ಕಾರ್ಯಕಾರಿ ಆದೇಶ ಹೊರಡಿಸಲಾಗಿದೆ” ಎಂದರು.

ಮುಂದುವರಿದು, “ಆದರೆ, ಈ ಎಲ್ಲಾ ಕಾಯ್ದೆಗಳು ಈಗಾಲೇ ಸಮಗ್ರ ರಜೆ ನೀತಿಯನ್ನು ಹೊಂದಿವೆ. ಕಾರ್ಖಾನೆ ಕಾಯ್ದೆ ಪ್ರಕಾರ 20 ದಿನಗಳ ದುಡಿಮೆಗೆ ಒಂದು ಗಳಿಕೆ ರಜೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ವರ್ಷಕ್ಕೆ 18 ರಜೆ ನೀಡಲಾಗುತ್ತಿದೆ. ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು 18 ದಿನಗಳ ಗಳಿಕೆ ರಜೆಯ ಜೊತೆಗೆ 12 ದಿನ ಅನಾರೋಗ್ಯದ ರಜೆ ನೀಡುತ್ತಿವೆ. ಇದರ ಜೊತೆಗೆ 12 ಸಾಮಾನ್ಯ ರಜೆಯೂ (ಕ್ಯಾಷುವಲ್‌ ಲೀವ್) ಇದೆ. ಆದರೆ, ಯಾವುದೇ ರಾಜ್ಯ ಅಥವಾ ಕೇಂದ್ರ ಸರ್ಕಾರದ ಕಾಯ್ದೆಯಲ್ಲಿ ಋತುಚಕ್ರದ ರಜೆ ಕಡ್ಡಾಯಗೊಳಿಸಿಲ್ಲ” ಎಂದು ತಿಳಿಸಿದರು.

“ಋತುಚಕ್ರದ ರಜೆ ನೀಡಲು ಕಾಯ್ದೆಯ ಯಾವುದೇ ನಿಬಂಧನೆಯಲ್ಲೂ ಅವಕಾಶವಿಲ್ಲ. ಯಾವ ಅಧಿಕಾರದ ಅಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂಬುವುದು ಅಧಿಸೂಚನೆಯಲ್ಲಿ ಉಲ್ಲೇಖವಾಗಿಲ್ಲ” ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ಅಧಿಸೂಚನೆ ಹೊರಡಿಸುವಾಗ ರಾಜ್ಯ ಸರ್ಕಾರವು ಸಂಬಂಧಿತ ಸಂಸ್ಥೆಗಳ ಜೊತೆ ಸಭೆ ನಡೆಸಿದೆಯೇ? ಅವುಗಳಿಂದ ಆಕ್ಷೇಪಣೆ ಸ್ವೀಕರಿಸಿದೆಯೇ?” ಎಂದು ಪ್ರಶ್ನಿಸಿತು. ಇದಕ್ಕೆ ಪ್ರಶಾಂತ್‌ ಅವರು ‘ಇಲ್ಲ’ ಎಂದು ಉತ್ತರಿಸಿದರು.

ಈ ನಡುವೆ, ಬೇರೆ ಯಾವುದೇ ವಕೀಲರಿಗೆ ವಾದ ಮಂಡಿಸಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಪೀಠ, ಸರ್ಕಾರದ ಅಧಿಸೂಚನೆಗೆ ತಡೆ ನೀಡಿ, ವಿಚಾರಣೆಯನ್ನು ಮುಂದೂಡಿತು.

ಕೇರಳ, ಒಡಿಶಾ, ಬಿಹಾರ ಮತ್ತು ಸಿಕ್ಕಿಂ ರಾಜ್ಯಗಳ ಇರುವಂತೆ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಮುಟ್ಟಿನ ರಜೆ ನೀಡುವ ಆದೇಶಕ್ಕೆ 2025ರ ಅಕ್ಟೋಬರ್ 9ರಂದು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನವೆಂಬರ್ 12ರಂದು ರಾಜ್ಯ ಸರ್ಕಾರ ಈ ಕುರಿತು ಅಧಿಸೂಚನೆ ಹೊರಡಿಸಿದೆ.

ಸರ್ಕಾರವು ಪಾಲುದಾರರಿಂದ ಅಭಿಪ್ರಾಯಗಳನ್ನು ಕೇಳುವ ಯಾವುದೇ ಸೂಚನೆಯನ್ನು ನೀಡಿಲ್ಲವಾದ್ದರಿಂದ, ಅಧಿಸೂಚನೆಯು ನೈಸರ್ಗಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಹೋಟೆಲ್‌ ಸಂಘವು ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದೆ. ಈ ಕಾನೂನುಗಳು (ಮೇಲೆ ಉಲ್ಲೇಖಿಸಿದ ವಿವಿಧ ಕಾಯ್ದೆಗಳು) ಸರ್ಕಾರ ಈ ರೀತಿ ರಜೆಯನ್ನು (ಮುಟ್ಟಿನ ರಜೆ) ಕಡ್ಡಾಯಗೊಳಿಸುವ ಆದೇಶವನ್ನು ಹೊರಡಿಸಲು ಅನುವು ಮಾಡಿಕೊಡುವ ನಿಬಂಧನೆಗಳನ್ನು ಹೊಂದಿಲ್ಲ. ಆದ್ದರಿಂದ ಸರ್ಕಾರ ಅಂತಹ ಕಾರ್ಯಕಾರಿ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ ಎಂದು ವಾದಿಸಿದೆ.

ಈ ರೀತಿಯ ರಜೆ ನೀಡುವುದು ಉದ್ಯೋಗದಾತರ ಸ್ವತಂತ್ರ ಅಧಿಕಾರಕ್ಕೆ ಸಂಬಂಧಿಸಿದೆ. ಇದನ್ನು ಸಂಸ್ಥೆಗಳ ಮಾನವ ಸಂಪನ್ಮೂಲ ವಿಭಾಗ (ಹೆಚ್‌ಆರ್) ನಿರ್ಧರಿಸುತ್ತದೆ. ಹಾಗಾಗಿ, ಸರ್ಕಾರ ಇಂತಹ ಆಡಳಿತಾತ್ಮಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಅಲ್ಲದೆ, ಮಹಿಳೆಯರಿಗೆ ಅತ್ಯಧಿಕ ಉದ್ಯೋಗ ನೀಡುವ ಸರ್ಕಾರವೇ ತನ್ನ ಉದ್ಯೋಗಿಗಳಿಗೆ ಮಾಸಿಕ ಮುಟ್ಟಿನ ರಜೆಗಳನ್ನು ನೀಡಿಲ್ಲ. ಹೀಗಿರುವಾಗ, ಸರ್ಕಾರದ ಅಧಿಸೂಚನೆ ತಾರತಮ್ಯದಿಂದ ಕೂಡಿದೆ ಮತ್ತು ಮನಬಂದಂತೆ ಹೊರಡಿಸಿದಂತೆ ಕಾಣುತ್ತಿದೆ ಎಂದು ಹೋಟೆಲ್‌ ಸಂಘ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಕಾರ

ಕೇರಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಸ್ತುತ ಗಡುವಾದ ಡಿಸೆಂಬರ್ 18ರವರೆಗೆ ವಿಷಯವನ್ನು ಮುಂದೂಡಿ, ಆ ನಂತರ ಗಡುವನ್ನು...

‘ಎಷ್ಟೇ ದೊಡ್ಡ ಸಂಸ್ಥೆಯಾದರೂ ಪ್ರಯಾಣಿಕರಿಗೆ ತೊಂದರೆ ನೀಡುವಂತಿಲ್ಲಾ’: ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿದ ವಿಮಾನಯಾನ ಸಚಿವ

ಡಿಸೆಂಬರ್ ಆರಂಭದಿಂದಲೂ ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ ಲೈಲ್ಸ್ ಸಂಸ್ಥೆಗೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಎಚ್ಚರಿಕೆ ನೀಡಿದ್ದಾರೆ.  "ಇಂಡಿಗೋದಲ್ಲಿನ ಅಡಚಣೆಗಳು ಸ್ಥಿರವಾಗುತ್ತಿವೆ; ದೇಶಾದ್ಯಂತ ಎಲ್ಲಾ ಇತರ ವಿಮಾನಯಾನ ಸಂಸ್ಥೆಗಳು ಸರಾಗವಾಗಿ ಕಾರ್ಯನಿರ್ವಹಿಸುತ್ತಿವೆ....

ಜಾರ್ಖಂಡ್‌| ದಲಿತರಿಗೆ ಸೇವೆ ಬಹಿಷ್ಕರಿಸಿದ ಕ್ಷೌರಿಕರು; ಪೊಲೀಸರ ಎಚ್ಚರಿಕೆ ಹೊರತಾಗಿಯೂ ಅಂಗಡಿಗಳು ಬಂದ್

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್‌ನ ಬಹರಗೋರಾ ಬ್ಲಾಕ್‌ನ ಜಯಪುರ ಗ್ರಾಮದಲ್ಲಿ ನಮಗೆ ಕ್ಷೌರಿಕರು ಸೇವೆಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಹಳ್ಳಿಯಲ್ಲಿರುವ ಎಲ್ಲ ಆರು...

ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ...

‘ಸಿಎಂ ಹುದ್ದೆಗೆ 500 ಕೋಟಿ’ ಹೇಳಿಕೆ : ನವಜೋತ್ ಕೌರ್ ಸಿಧು ಕಾಂಗ್ರೆಸ್‌ನಿಂದ ಅಮಾನತು

"500 ಕೋಟಿ ರೂಪಾಯಿಯ ಸೂಟ್‌ಕೇಸ್ ನೀಡುವ ವ್ಯಕ್ತಿ ಮುಖ್ಯಮಂತ್ರಿಯಾಗುತ್ತಾರೆ" ಎಂದು ಹೇಳಿಕೆ ನೀಡಿದ ಎರಡು ದಿನಗಳ ನಂತರ, ಮಾಜಿ ಕ್ರಿಕೆಟಿಗ ಮತ್ತು ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್...

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಕನಿಷ್ಠ 30 ಜನರಿಗೆ ಗಾಯ, ಸಾವಿರಾರು ಜನರ ಸ್ಥಳಾಂತರ

ಸೋಮವಾರ (ಡಿಸೆಂಬರ್ 8) ರಾತ್ರಿ (ಭಾರತೀಯ ಕಾಲಮಾನ ಸಂಜೆ 7.45) ಈಶಾನ್ಯ ಜಪಾನ್‌ನಲ್ಲಿ ಸಂಭವಿಸಿದ 7.5 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 30 ಜನರು ಗಾಯಗೊಂಡಿದ್ದು, ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು...

ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ ‘ವಂದೇ ಮಾತರಂ’ ಕುರಿತು ಚರ್ಚೆ ಏಕೆ? ಪ್ರಿಯಾಂಕಾ ಗಾಂಧಿ

ಸೋಮವಾರ ಲೋಕಸಭೆಯಲ್ಲಿ 'ವಂದೇ ಮಾತರಂನ 150 ವರ್ಷಗಳು' ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ, ಚರ್ಚಿಸಲು ಹೆಚ್ಚು ಮುಖ್ಯವಾದ ವಿಷಯಗಳಿರುವಾಗ, ಈ...

ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇ.30 ಮಹಿಳಾ ಮೀಸಲಾತಿಗೆ ಸುಪ್ರೀಂ ಕೋರ್ಟ್ ಆದೇಶ

ಮಹತ್ವದ ಆದೇಶವೊಂದರಲ್ಲಿ, ಚುನಾವಣೆಗಳು ಇನ್ನೂ ಘೋಷಣೆಯಾಗದ ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇಕಡ 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರಿಗೆ ಮೀಸಲಿಡಲು ಸೋಮವಾರ (ಡಿಸೆಂಬರ್ 8) ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಪ್ರಸಕ್ತ ವರ್ಷಕ್ಕೆ, ಶೇಕಡ 20ರಷ್ಟು ಮಹಿಳಾ...

ಮಹಾರಾಷ್ಟ್ರ| ಶಿವಾಜಿಯ ಪಾದ ಮುಟ್ಟಿ ಕ್ಷಮೆಯಾಚಿಸುವಂತೆ ಒತ್ತಾಯ; ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಂದುತ್ವ ಗುಂಪಿನಿಂದ ಕಿರುಕುಳ

ವಿದ್ಯಾರ್ಥಿಗಳು, ಆಡಳಿತ ಮಂಡಳಿ ಅನುಮತಿಯೊಂದಿಗೆ ಕ್ಯಾಂಪಸ್‌ನಲ್ಲಿ ಶುಕ್ರವಾರದ ಪ್ರಾರ್ಥನೆ ಮಾಡಿದ್ದಾರೆ ಎಂದು ತಿಳಿದ ನಂತರ ಅವರಿಗೆ ಕಿರುಕುಳ ನೀಡಿರುವ ಬಲಪಂಥೀಯ ಕಾರ್ಯಕರ್ತರ ಗುಂಪು, ಮುಸ್ಲಿಂ ವಿದ್ಯಾರ್ಥಿಗಳ ಗುಂಪನ್ನು ಕ್ಷಮೆಯಾಚಿಸಲು ಹಾಗೂ ಛತ್ರಪತಿ ಶಿವಾಜಿ...

ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ ; 570 ಜನರ ಬಂಧನ : ಸಚಿವ ಕೆ.ಎಚ್‌ ಮುನಿಯಪ್ಪ

ಅನ್ನಭಾಗ್ಯ ಪಡಿತರ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ 461 ಎಫ್‌ಐಆರ್‌ಗಳನ್ನು ದಾಖಲಿಸಿ, 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್‌ ಮುನಿಯಪ್ಪ...