Homeಕರ್ನಾಟಕವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

- Advertisement -
- Advertisement -

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ ನೀಡುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಂಗಳವಾರ (ಡಿಸೆಂಬರ್ 9) ಮಧ್ಯಂತರ ತಡೆ ನೀಡಿದೆ.

ಬೆಂಗಳೂರು ಹೋಟೆಲ್‌ ಸಂಘದ ಕೋರಿಕೆಯಂತೆ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಲಾಗಿದೆ. ರಾಜ್ಯ ಸರ್ಕಾರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯ ಹೊಂದಿದೆ ಎಂದು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರ ಏಕಸದಸ್ಯ ಪೀಠ ಹೇಳಿದೆ.

ಅಲ್ಲದೇ, ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಗೆ ಪೀಠ ನೋಟಿಸ್‌ ಜಾರಿಗೊಳಿಸಿದ್ದು, ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಹೈಕೋರ್ಟ್‌ನ ಚಳಿಗಾಲದ ರಜೆ ಮುಗಿದ ಬಳಿಕ ನಿಗದಿಪಡಿಸಲು ನಿರ್ದೇಶಿಸಿದೆ.

ವಿಚಾರಣೆ ವೇಳೆ ಹೋಟೆಲ್‌ ಸಂಘದ ಪರ ವಾದ ಮಂಡಿಸಿದ ವಕೀಲ ಬಿ ಕೆ ಪ್ರಶಾಂತ್‌, “ಕಾರ್ಮಿಕ ಇಲಾಖೆಯು 18 ರಿಂದ 52 ವಯೋಮಾನದ ಮಹಿಳಾ ಉದ್ಯೋಗಿಗಳಿಗೆ ಮಾಸಿಕ ಒಂದು ದಿನದ ಋತುಚಕ್ರದ ರಜೆ ನೀಡುವುದನ್ನು ಕಡ್ಡಾಯಗೊಳಿಸಿದೆ. 1948ರ ಕಾರ್ಖಾನೆ ಕಾಯ್ದೆ, 1961ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ, 1951ರ ಪ್ಲಾಂಟೇಶನ್ ಕಾರ್ಮಿಕ ಕಾಯ್ದೆ, 1966ರ ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ ಮತ್ತು 1961ರ ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆಯಡಿ ಬರುವ ಸಂಸ್ಥೆಗಳಿಗೆ ಅನ್ವಯಿಸುವಂತೆ ಈ ಕಾರ್ಯಕಾರಿ ಆದೇಶ ಹೊರಡಿಸಲಾಗಿದೆ” ಎಂದರು.

ಮುಂದುವರಿದು, “ಆದರೆ, ಈ ಎಲ್ಲಾ ಕಾಯ್ದೆಗಳು ಈಗಾಲೇ ಸಮಗ್ರ ರಜೆ ನೀತಿಯನ್ನು ಹೊಂದಿವೆ. ಕಾರ್ಖಾನೆ ಕಾಯ್ದೆ ಪ್ರಕಾರ 20 ದಿನಗಳ ದುಡಿಮೆಗೆ ಒಂದು ಗಳಿಕೆ ರಜೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ವರ್ಷಕ್ಕೆ 18 ರಜೆ ನೀಡಲಾಗುತ್ತಿದೆ. ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು 18 ದಿನಗಳ ಗಳಿಕೆ ರಜೆಯ ಜೊತೆಗೆ 12 ದಿನ ಅನಾರೋಗ್ಯದ ರಜೆ ನೀಡುತ್ತಿವೆ. ಇದರ ಜೊತೆಗೆ 12 ಸಾಮಾನ್ಯ ರಜೆಯೂ (ಕ್ಯಾಷುವಲ್‌ ಲೀವ್) ಇದೆ. ಆದರೆ, ಯಾವುದೇ ರಾಜ್ಯ ಅಥವಾ ಕೇಂದ್ರ ಸರ್ಕಾರದ ಕಾಯ್ದೆಯಲ್ಲಿ ಋತುಚಕ್ರದ ರಜೆ ಕಡ್ಡಾಯಗೊಳಿಸಿಲ್ಲ” ಎಂದು ತಿಳಿಸಿದರು.

“ಋತುಚಕ್ರದ ರಜೆ ನೀಡಲು ಕಾಯ್ದೆಯ ಯಾವುದೇ ನಿಬಂಧನೆಯಲ್ಲೂ ಅವಕಾಶವಿಲ್ಲ. ಯಾವ ಅಧಿಕಾರದ ಅಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂಬುವುದು ಅಧಿಸೂಚನೆಯಲ್ಲಿ ಉಲ್ಲೇಖವಾಗಿಲ್ಲ” ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ಅಧಿಸೂಚನೆ ಹೊರಡಿಸುವಾಗ ರಾಜ್ಯ ಸರ್ಕಾರವು ಸಂಬಂಧಿತ ಸಂಸ್ಥೆಗಳ ಜೊತೆ ಸಭೆ ನಡೆಸಿದೆಯೇ? ಅವುಗಳಿಂದ ಆಕ್ಷೇಪಣೆ ಸ್ವೀಕರಿಸಿದೆಯೇ?” ಎಂದು ಪ್ರಶ್ನಿಸಿತು. ಇದಕ್ಕೆ ಪ್ರಶಾಂತ್‌ ಅವರು ‘ಇಲ್ಲ’ ಎಂದು ಉತ್ತರಿಸಿದರು.

ಈ ನಡುವೆ, ಬೇರೆ ಯಾವುದೇ ವಕೀಲರಿಗೆ ವಾದ ಮಂಡಿಸಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಪೀಠ, ಸರ್ಕಾರದ ಅಧಿಸೂಚನೆಗೆ ತಡೆ ನೀಡಿ, ವಿಚಾರಣೆಯನ್ನು ಮುಂದೂಡಿತು.

ಕೇರಳ, ಒಡಿಶಾ, ಬಿಹಾರ ಮತ್ತು ಸಿಕ್ಕಿಂ ರಾಜ್ಯಗಳ ಇರುವಂತೆ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಮುಟ್ಟಿನ ರಜೆ ನೀಡುವ ಆದೇಶಕ್ಕೆ 2025ರ ಅಕ್ಟೋಬರ್ 9ರಂದು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನವೆಂಬರ್ 12ರಂದು ರಾಜ್ಯ ಸರ್ಕಾರ ಈ ಕುರಿತು ಅಧಿಸೂಚನೆ ಹೊರಡಿಸಿದೆ.

ಸರ್ಕಾರವು ಪಾಲುದಾರರಿಂದ ಅಭಿಪ್ರಾಯಗಳನ್ನು ಕೇಳುವ ಯಾವುದೇ ಸೂಚನೆಯನ್ನು ನೀಡಿಲ್ಲವಾದ್ದರಿಂದ, ಅಧಿಸೂಚನೆಯು ನೈಸರ್ಗಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಹೋಟೆಲ್‌ ಸಂಘವು ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದೆ. ಈ ಕಾನೂನುಗಳು (ಮೇಲೆ ಉಲ್ಲೇಖಿಸಿದ ವಿವಿಧ ಕಾಯ್ದೆಗಳು) ಸರ್ಕಾರ ಈ ರೀತಿ ರಜೆಯನ್ನು (ಮುಟ್ಟಿನ ರಜೆ) ಕಡ್ಡಾಯಗೊಳಿಸುವ ಆದೇಶವನ್ನು ಹೊರಡಿಸಲು ಅನುವು ಮಾಡಿಕೊಡುವ ನಿಬಂಧನೆಗಳನ್ನು ಹೊಂದಿಲ್ಲ. ಆದ್ದರಿಂದ ಸರ್ಕಾರ ಅಂತಹ ಕಾರ್ಯಕಾರಿ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ ಎಂದು ವಾದಿಸಿದೆ.

ಈ ರೀತಿಯ ರಜೆ ನೀಡುವುದು ಉದ್ಯೋಗದಾತರ ಸ್ವತಂತ್ರ ಅಧಿಕಾರಕ್ಕೆ ಸಂಬಂಧಿಸಿದೆ. ಇದನ್ನು ಸಂಸ್ಥೆಗಳ ಮಾನವ ಸಂಪನ್ಮೂಲ ವಿಭಾಗ (ಹೆಚ್‌ಆರ್) ನಿರ್ಧರಿಸುತ್ತದೆ. ಹಾಗಾಗಿ, ಸರ್ಕಾರ ಇಂತಹ ಆಡಳಿತಾತ್ಮಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಅಲ್ಲದೆ, ಮಹಿಳೆಯರಿಗೆ ಅತ್ಯಧಿಕ ಉದ್ಯೋಗ ನೀಡುವ ಸರ್ಕಾರವೇ ತನ್ನ ಉದ್ಯೋಗಿಗಳಿಗೆ ಮಾಸಿಕ ಮುಟ್ಟಿನ ರಜೆಗಳನ್ನು ನೀಡಿಲ್ಲ. ಹೀಗಿರುವಾಗ, ಸರ್ಕಾರದ ಅಧಿಸೂಚನೆ ತಾರತಮ್ಯದಿಂದ ಕೂಡಿದೆ ಮತ್ತು ಮನಬಂದಂತೆ ಹೊರಡಿಸಿದಂತೆ ಕಾಣುತ್ತಿದೆ ಎಂದು ಹೋಟೆಲ್‌ ಸಂಘ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...