Homeಕರ್ನಾಟಕವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

- Advertisement -
- Advertisement -

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ ನೀಡುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಂಗಳವಾರ (ಡಿಸೆಂಬರ್ 9) ಮಧ್ಯಂತರ ತಡೆ ನೀಡಿದೆ.

ಬೆಂಗಳೂರು ಹೋಟೆಲ್‌ ಸಂಘದ ಕೋರಿಕೆಯಂತೆ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಲಾಗಿದೆ. ರಾಜ್ಯ ಸರ್ಕಾರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯ ಹೊಂದಿದೆ ಎಂದು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರ ಏಕಸದಸ್ಯ ಪೀಠ ಹೇಳಿದೆ.

ಅಲ್ಲದೇ, ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಗೆ ಪೀಠ ನೋಟಿಸ್‌ ಜಾರಿಗೊಳಿಸಿದ್ದು, ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಹೈಕೋರ್ಟ್‌ನ ಚಳಿಗಾಲದ ರಜೆ ಮುಗಿದ ಬಳಿಕ ನಿಗದಿಪಡಿಸಲು ನಿರ್ದೇಶಿಸಿದೆ.

ವಿಚಾರಣೆ ವೇಳೆ ಹೋಟೆಲ್‌ ಸಂಘದ ಪರ ವಾದ ಮಂಡಿಸಿದ ವಕೀಲ ಬಿ ಕೆ ಪ್ರಶಾಂತ್‌, “ಕಾರ್ಮಿಕ ಇಲಾಖೆಯು 18 ರಿಂದ 52 ವಯೋಮಾನದ ಮಹಿಳಾ ಉದ್ಯೋಗಿಗಳಿಗೆ ಮಾಸಿಕ ಒಂದು ದಿನದ ಋತುಚಕ್ರದ ರಜೆ ನೀಡುವುದನ್ನು ಕಡ್ಡಾಯಗೊಳಿಸಿದೆ. 1948ರ ಕಾರ್ಖಾನೆ ಕಾಯ್ದೆ, 1961ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ, 1951ರ ಪ್ಲಾಂಟೇಶನ್ ಕಾರ್ಮಿಕ ಕಾಯ್ದೆ, 1966ರ ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ ಮತ್ತು 1961ರ ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆಯಡಿ ಬರುವ ಸಂಸ್ಥೆಗಳಿಗೆ ಅನ್ವಯಿಸುವಂತೆ ಈ ಕಾರ್ಯಕಾರಿ ಆದೇಶ ಹೊರಡಿಸಲಾಗಿದೆ” ಎಂದರು.

ಮುಂದುವರಿದು, “ಆದರೆ, ಈ ಎಲ್ಲಾ ಕಾಯ್ದೆಗಳು ಈಗಾಲೇ ಸಮಗ್ರ ರಜೆ ನೀತಿಯನ್ನು ಹೊಂದಿವೆ. ಕಾರ್ಖಾನೆ ಕಾಯ್ದೆ ಪ್ರಕಾರ 20 ದಿನಗಳ ದುಡಿಮೆಗೆ ಒಂದು ಗಳಿಕೆ ರಜೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ವರ್ಷಕ್ಕೆ 18 ರಜೆ ನೀಡಲಾಗುತ್ತಿದೆ. ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು 18 ದಿನಗಳ ಗಳಿಕೆ ರಜೆಯ ಜೊತೆಗೆ 12 ದಿನ ಅನಾರೋಗ್ಯದ ರಜೆ ನೀಡುತ್ತಿವೆ. ಇದರ ಜೊತೆಗೆ 12 ಸಾಮಾನ್ಯ ರಜೆಯೂ (ಕ್ಯಾಷುವಲ್‌ ಲೀವ್) ಇದೆ. ಆದರೆ, ಯಾವುದೇ ರಾಜ್ಯ ಅಥವಾ ಕೇಂದ್ರ ಸರ್ಕಾರದ ಕಾಯ್ದೆಯಲ್ಲಿ ಋತುಚಕ್ರದ ರಜೆ ಕಡ್ಡಾಯಗೊಳಿಸಿಲ್ಲ” ಎಂದು ತಿಳಿಸಿದರು.

“ಋತುಚಕ್ರದ ರಜೆ ನೀಡಲು ಕಾಯ್ದೆಯ ಯಾವುದೇ ನಿಬಂಧನೆಯಲ್ಲೂ ಅವಕಾಶವಿಲ್ಲ. ಯಾವ ಅಧಿಕಾರದ ಅಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂಬುವುದು ಅಧಿಸೂಚನೆಯಲ್ಲಿ ಉಲ್ಲೇಖವಾಗಿಲ್ಲ” ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ಅಧಿಸೂಚನೆ ಹೊರಡಿಸುವಾಗ ರಾಜ್ಯ ಸರ್ಕಾರವು ಸಂಬಂಧಿತ ಸಂಸ್ಥೆಗಳ ಜೊತೆ ಸಭೆ ನಡೆಸಿದೆಯೇ? ಅವುಗಳಿಂದ ಆಕ್ಷೇಪಣೆ ಸ್ವೀಕರಿಸಿದೆಯೇ?” ಎಂದು ಪ್ರಶ್ನಿಸಿತು. ಇದಕ್ಕೆ ಪ್ರಶಾಂತ್‌ ಅವರು ‘ಇಲ್ಲ’ ಎಂದು ಉತ್ತರಿಸಿದರು.

ಈ ನಡುವೆ, ಬೇರೆ ಯಾವುದೇ ವಕೀಲರಿಗೆ ವಾದ ಮಂಡಿಸಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಪೀಠ, ಸರ್ಕಾರದ ಅಧಿಸೂಚನೆಗೆ ತಡೆ ನೀಡಿ, ವಿಚಾರಣೆಯನ್ನು ಮುಂದೂಡಿತು.

ಕೇರಳ, ಒಡಿಶಾ, ಬಿಹಾರ ಮತ್ತು ಸಿಕ್ಕಿಂ ರಾಜ್ಯಗಳ ಇರುವಂತೆ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಮುಟ್ಟಿನ ರಜೆ ನೀಡುವ ಆದೇಶಕ್ಕೆ 2025ರ ಅಕ್ಟೋಬರ್ 9ರಂದು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನವೆಂಬರ್ 12ರಂದು ರಾಜ್ಯ ಸರ್ಕಾರ ಈ ಕುರಿತು ಅಧಿಸೂಚನೆ ಹೊರಡಿಸಿದೆ.

ಸರ್ಕಾರವು ಪಾಲುದಾರರಿಂದ ಅಭಿಪ್ರಾಯಗಳನ್ನು ಕೇಳುವ ಯಾವುದೇ ಸೂಚನೆಯನ್ನು ನೀಡಿಲ್ಲವಾದ್ದರಿಂದ, ಅಧಿಸೂಚನೆಯು ನೈಸರ್ಗಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಹೋಟೆಲ್‌ ಸಂಘವು ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದೆ. ಈ ಕಾನೂನುಗಳು (ಮೇಲೆ ಉಲ್ಲೇಖಿಸಿದ ವಿವಿಧ ಕಾಯ್ದೆಗಳು) ಸರ್ಕಾರ ಈ ರೀತಿ ರಜೆಯನ್ನು (ಮುಟ್ಟಿನ ರಜೆ) ಕಡ್ಡಾಯಗೊಳಿಸುವ ಆದೇಶವನ್ನು ಹೊರಡಿಸಲು ಅನುವು ಮಾಡಿಕೊಡುವ ನಿಬಂಧನೆಗಳನ್ನು ಹೊಂದಿಲ್ಲ. ಆದ್ದರಿಂದ ಸರ್ಕಾರ ಅಂತಹ ಕಾರ್ಯಕಾರಿ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ ಎಂದು ವಾದಿಸಿದೆ.

ಈ ರೀತಿಯ ರಜೆ ನೀಡುವುದು ಉದ್ಯೋಗದಾತರ ಸ್ವತಂತ್ರ ಅಧಿಕಾರಕ್ಕೆ ಸಂಬಂಧಿಸಿದೆ. ಇದನ್ನು ಸಂಸ್ಥೆಗಳ ಮಾನವ ಸಂಪನ್ಮೂಲ ವಿಭಾಗ (ಹೆಚ್‌ಆರ್) ನಿರ್ಧರಿಸುತ್ತದೆ. ಹಾಗಾಗಿ, ಸರ್ಕಾರ ಇಂತಹ ಆಡಳಿತಾತ್ಮಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಅಲ್ಲದೆ, ಮಹಿಳೆಯರಿಗೆ ಅತ್ಯಧಿಕ ಉದ್ಯೋಗ ನೀಡುವ ಸರ್ಕಾರವೇ ತನ್ನ ಉದ್ಯೋಗಿಗಳಿಗೆ ಮಾಸಿಕ ಮುಟ್ಟಿನ ರಜೆಗಳನ್ನು ನೀಡಿಲ್ಲ. ಹೀಗಿರುವಾಗ, ಸರ್ಕಾರದ ಅಧಿಸೂಚನೆ ತಾರತಮ್ಯದಿಂದ ಕೂಡಿದೆ ಮತ್ತು ಮನಬಂದಂತೆ ಹೊರಡಿಸಿದಂತೆ ಕಾಣುತ್ತಿದೆ ಎಂದು ಹೋಟೆಲ್‌ ಸಂಘ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...