Homeಕರ್ನಾಟಕವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

- Advertisement -
- Advertisement -

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ ನೀಡುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಂಗಳವಾರ (ಡಿಸೆಂಬರ್ 9) ಮಧ್ಯಂತರ ತಡೆ ನೀಡಿದೆ.

ಬೆಂಗಳೂರು ಹೋಟೆಲ್‌ ಸಂಘದ ಕೋರಿಕೆಯಂತೆ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಲಾಗಿದೆ. ರಾಜ್ಯ ಸರ್ಕಾರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯ ಹೊಂದಿದೆ ಎಂದು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರ ಏಕಸದಸ್ಯ ಪೀಠ ಹೇಳಿದೆ.

ಅಲ್ಲದೇ, ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಗೆ ಪೀಠ ನೋಟಿಸ್‌ ಜಾರಿಗೊಳಿಸಿದ್ದು, ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಹೈಕೋರ್ಟ್‌ನ ಚಳಿಗಾಲದ ರಜೆ ಮುಗಿದ ಬಳಿಕ ನಿಗದಿಪಡಿಸಲು ನಿರ್ದೇಶಿಸಿದೆ.

ವಿಚಾರಣೆ ವೇಳೆ ಹೋಟೆಲ್‌ ಸಂಘದ ಪರ ವಾದ ಮಂಡಿಸಿದ ವಕೀಲ ಬಿ ಕೆ ಪ್ರಶಾಂತ್‌, “ಕಾರ್ಮಿಕ ಇಲಾಖೆಯು 18 ರಿಂದ 52 ವಯೋಮಾನದ ಮಹಿಳಾ ಉದ್ಯೋಗಿಗಳಿಗೆ ಮಾಸಿಕ ಒಂದು ದಿನದ ಋತುಚಕ್ರದ ರಜೆ ನೀಡುವುದನ್ನು ಕಡ್ಡಾಯಗೊಳಿಸಿದೆ. 1948ರ ಕಾರ್ಖಾನೆ ಕಾಯ್ದೆ, 1961ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ, 1951ರ ಪ್ಲಾಂಟೇಶನ್ ಕಾರ್ಮಿಕ ಕಾಯ್ದೆ, 1966ರ ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ ಮತ್ತು 1961ರ ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆಯಡಿ ಬರುವ ಸಂಸ್ಥೆಗಳಿಗೆ ಅನ್ವಯಿಸುವಂತೆ ಈ ಕಾರ್ಯಕಾರಿ ಆದೇಶ ಹೊರಡಿಸಲಾಗಿದೆ” ಎಂದರು.

ಮುಂದುವರಿದು, “ಆದರೆ, ಈ ಎಲ್ಲಾ ಕಾಯ್ದೆಗಳು ಈಗಾಲೇ ಸಮಗ್ರ ರಜೆ ನೀತಿಯನ್ನು ಹೊಂದಿವೆ. ಕಾರ್ಖಾನೆ ಕಾಯ್ದೆ ಪ್ರಕಾರ 20 ದಿನಗಳ ದುಡಿಮೆಗೆ ಒಂದು ಗಳಿಕೆ ರಜೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ವರ್ಷಕ್ಕೆ 18 ರಜೆ ನೀಡಲಾಗುತ್ತಿದೆ. ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು 18 ದಿನಗಳ ಗಳಿಕೆ ರಜೆಯ ಜೊತೆಗೆ 12 ದಿನ ಅನಾರೋಗ್ಯದ ರಜೆ ನೀಡುತ್ತಿವೆ. ಇದರ ಜೊತೆಗೆ 12 ಸಾಮಾನ್ಯ ರಜೆಯೂ (ಕ್ಯಾಷುವಲ್‌ ಲೀವ್) ಇದೆ. ಆದರೆ, ಯಾವುದೇ ರಾಜ್ಯ ಅಥವಾ ಕೇಂದ್ರ ಸರ್ಕಾರದ ಕಾಯ್ದೆಯಲ್ಲಿ ಋತುಚಕ್ರದ ರಜೆ ಕಡ್ಡಾಯಗೊಳಿಸಿಲ್ಲ” ಎಂದು ತಿಳಿಸಿದರು.

“ಋತುಚಕ್ರದ ರಜೆ ನೀಡಲು ಕಾಯ್ದೆಯ ಯಾವುದೇ ನಿಬಂಧನೆಯಲ್ಲೂ ಅವಕಾಶವಿಲ್ಲ. ಯಾವ ಅಧಿಕಾರದ ಅಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂಬುವುದು ಅಧಿಸೂಚನೆಯಲ್ಲಿ ಉಲ್ಲೇಖವಾಗಿಲ್ಲ” ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ಅಧಿಸೂಚನೆ ಹೊರಡಿಸುವಾಗ ರಾಜ್ಯ ಸರ್ಕಾರವು ಸಂಬಂಧಿತ ಸಂಸ್ಥೆಗಳ ಜೊತೆ ಸಭೆ ನಡೆಸಿದೆಯೇ? ಅವುಗಳಿಂದ ಆಕ್ಷೇಪಣೆ ಸ್ವೀಕರಿಸಿದೆಯೇ?” ಎಂದು ಪ್ರಶ್ನಿಸಿತು. ಇದಕ್ಕೆ ಪ್ರಶಾಂತ್‌ ಅವರು ‘ಇಲ್ಲ’ ಎಂದು ಉತ್ತರಿಸಿದರು.

ಈ ನಡುವೆ, ಬೇರೆ ಯಾವುದೇ ವಕೀಲರಿಗೆ ವಾದ ಮಂಡಿಸಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಪೀಠ, ಸರ್ಕಾರದ ಅಧಿಸೂಚನೆಗೆ ತಡೆ ನೀಡಿ, ವಿಚಾರಣೆಯನ್ನು ಮುಂದೂಡಿತು.

ಕೇರಳ, ಒಡಿಶಾ, ಬಿಹಾರ ಮತ್ತು ಸಿಕ್ಕಿಂ ರಾಜ್ಯಗಳ ಇರುವಂತೆ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಮುಟ್ಟಿನ ರಜೆ ನೀಡುವ ಆದೇಶಕ್ಕೆ 2025ರ ಅಕ್ಟೋಬರ್ 9ರಂದು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನವೆಂಬರ್ 12ರಂದು ರಾಜ್ಯ ಸರ್ಕಾರ ಈ ಕುರಿತು ಅಧಿಸೂಚನೆ ಹೊರಡಿಸಿದೆ.

ಸರ್ಕಾರವು ಪಾಲುದಾರರಿಂದ ಅಭಿಪ್ರಾಯಗಳನ್ನು ಕೇಳುವ ಯಾವುದೇ ಸೂಚನೆಯನ್ನು ನೀಡಿಲ್ಲವಾದ್ದರಿಂದ, ಅಧಿಸೂಚನೆಯು ನೈಸರ್ಗಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಹೋಟೆಲ್‌ ಸಂಘವು ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದೆ. ಈ ಕಾನೂನುಗಳು (ಮೇಲೆ ಉಲ್ಲೇಖಿಸಿದ ವಿವಿಧ ಕಾಯ್ದೆಗಳು) ಸರ್ಕಾರ ಈ ರೀತಿ ರಜೆಯನ್ನು (ಮುಟ್ಟಿನ ರಜೆ) ಕಡ್ಡಾಯಗೊಳಿಸುವ ಆದೇಶವನ್ನು ಹೊರಡಿಸಲು ಅನುವು ಮಾಡಿಕೊಡುವ ನಿಬಂಧನೆಗಳನ್ನು ಹೊಂದಿಲ್ಲ. ಆದ್ದರಿಂದ ಸರ್ಕಾರ ಅಂತಹ ಕಾರ್ಯಕಾರಿ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ ಎಂದು ವಾದಿಸಿದೆ.

ಈ ರೀತಿಯ ರಜೆ ನೀಡುವುದು ಉದ್ಯೋಗದಾತರ ಸ್ವತಂತ್ರ ಅಧಿಕಾರಕ್ಕೆ ಸಂಬಂಧಿಸಿದೆ. ಇದನ್ನು ಸಂಸ್ಥೆಗಳ ಮಾನವ ಸಂಪನ್ಮೂಲ ವಿಭಾಗ (ಹೆಚ್‌ಆರ್) ನಿರ್ಧರಿಸುತ್ತದೆ. ಹಾಗಾಗಿ, ಸರ್ಕಾರ ಇಂತಹ ಆಡಳಿತಾತ್ಮಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಅಲ್ಲದೆ, ಮಹಿಳೆಯರಿಗೆ ಅತ್ಯಧಿಕ ಉದ್ಯೋಗ ನೀಡುವ ಸರ್ಕಾರವೇ ತನ್ನ ಉದ್ಯೋಗಿಗಳಿಗೆ ಮಾಸಿಕ ಮುಟ್ಟಿನ ರಜೆಗಳನ್ನು ನೀಡಿಲ್ಲ. ಹೀಗಿರುವಾಗ, ಸರ್ಕಾರದ ಅಧಿಸೂಚನೆ ತಾರತಮ್ಯದಿಂದ ಕೂಡಿದೆ ಮತ್ತು ಮನಬಂದಂತೆ ಹೊರಡಿಸಿದಂತೆ ಕಾಣುತ್ತಿದೆ ಎಂದು ಹೋಟೆಲ್‌ ಸಂಘ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...