Homeಕರ್ನಾಟಕ'ಕುವೆಂಪು ಸಮಗ್ರ ಸಾಹಿತ್ಯ ಸಂಪುಟ 12' ಮಾರಾಟಕ್ಕೆ ಹೈಕೋರ್ಟ್ ತಡೆ

‘ಕುವೆಂಪು ಸಮಗ್ರ ಸಾಹಿತ್ಯ ಸಂಪುಟ 12’ ಮಾರಾಟಕ್ಕೆ ಹೈಕೋರ್ಟ್ ತಡೆ

- Advertisement -
- Advertisement -

ಹಂಪಿ ಕನ್ನಡ ವಿಶ್ವವಿದ್ಯಾಲಯವು ಕಾಪಿರೈಟ್ ಕಾಯ್ದೆ ಉಲ್ಲಂಘಿಸಿದೆ ಎಂದು ಆರೋಪಿಸಿರುವ ಹಿರಿಯ ಸಾಹಿತಿ ಪುಸಕ್ತಮನೆ ಹರಿಹರಪ್ರಿಯ, ವಿವಿಯು ಹೊರತಂದಿರುವ 12 ಸಂಪುಟಗಳ ಕುವೆಂಪು ಸಮಗ್ರ ಸಾಹಿತ್ಯ ಸರಣಿ ಮಾರಾಟಕ್ಕೆ ತಡೆ ತಂದಿದ್ದಾರೆ.

ಕೃತಿಚೌರ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪ್ರಕಟಿಸಿರುವ ಕುವೆಂಪು ಸಮಗ್ರ ಸಾಹಿತ್ಯದ 12ನೇ ಸಂಪುಟದ ಮಾರಾಟಕ್ಕೆ ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷೆನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯಕ ಬುಧವಾರ (ಮಾ.17) ತಡೆಯಾಜ್ಞೆ ನೀಡಿದ್ದಾರೆ.

ಪುಸ್ತಕಮನೆ ಹರಿಹರಪ್ರಿಯ ಅವರು 1974ರಲ್ಲಿ ಸಂಪಾದಿಸಿದ್ದ ಕುವೆಂಪು ಪತ್ರಗಳು ಪುಸ್ತಕದಿಂದ ಕುವೆಂಪು ಅವರ 62 ಪತ್ರಗಳನ್ನು ಯಥಾವತ್ತಾಗಿ ಕನ್ನಡ ವಿಶ್ವವಿದ್ಯಾಲಯ ಕುವೆಂಪು ಸಮಗ್ರ ಸಾಹಿತ್ಯದ ಹನ್ನೆರಡನೇ ಸಂಪುಟದಲ್ಲಿ ಪ್ರಕಟಿಸಿದೆ ಎಂಬ ಆರೋಪವಿದೆ.

ಇದನ್ನೂ ಓದಿ: ಕುವೆಂಪು ಅವರ ಶ್ರೀರಾಮಾಯಣ ದರ್ಶನಂ ಮಹಾಕಾವ್ಯದಲ್ಲಿ ಸ್ವಪ್ನಗಳ ಪಾತ್ರ

“ವಿಶ್ವವಿದ್ಯಾಲಯದ ಸಿಂಡಿಕೇಟ್‍ನ ಸದಸ್ಯರ ಗಮನಕ್ಕೆ ವಿಷಯ ತಂದರೂ ಪ್ರಯೋಜನವಾಗಿಲ್ಲ. ವಿಧಿಯಿಲ್ಲದೆ ನ್ಯಾಯಾಲಯದ ಮೊರೆ ಹೋಗಿರುವೆ. ನ್ಯಾಯಾಲಯದ ಆದೇಶ ಸ್ವಲ್ಪ ಸಮಾಧಾನ ತಂದಿದೆ. ವಿಶ್ವವಿದ್ಯಾಲಯ ಈಗಲಾದರೂ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು” ಎಂದು ಹರಿಹರಪ್ರಿಯ ಹೇಳಿದ್ದಾರೆ.

ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎ. ಸುಬ್ಬಣ್ಣ ರೈ, “ಸಂಪುಟ ಮಾರಾಟಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿರುವ ವಿಷಯ ನನ್ನ ಗಮನಕ್ಕೆ ಬಂದಿಲ್ಲ” ಎಂದು ತಿಳಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಹಂಪಿ ವಿಶ್ವವಿದ್ಯಾಲಯದ ಪ್ರಸಾರಂಗದ ನಿರ್ದೇಶಕರಾದ ಪ್ರಶಾಂತ್ ಮಾತನಾಡಿ, “ಮೊದಲನೆಯದಾಗಿ, ಇದು ಮಧ್ಯಂತರ ಆದೇಶವಾಗಿದೆ. ಇದು ಎರಡೂ ಕಡೆಯವರಿಗೆ ಅನ್ಯಾಯವಾಗಬಾರದು ಎಂಬ ಕಾರಣಕ್ಕೆ ಕೋರ್ಟ್ ಇಂತಹ ಆದೇಶ ಹೊರಡಿಸಿದೆ ಎಂದು ಭಾವಿಸಿದ್ದೇನೆ. ಆದರೆ ಅಂತಿಮ ತೀರ್ಪು ಬೇರೆಯೇ ಆಗಿರುವ ಸಾಧ್ಯತೆಯಿದೆ. ಎರಡನೆಯದಾಗಿ, ನಾವು ಈ ಸಂಪುಟದಲ್ಲಿ 250ಕ್ಕೂ ಹೆಚ್ಚು ಪತ್ರಗಳನ್ನು ಬಳಸಿಕೊಂಡಿದ್ದೇವೆ. ಅದರಲ್ಲಿ 62 ಪತ್ರಗಳ ಹಕ್ಕು ನನ್ನದು ಎಂದು ಹರಹರಪ್ರಿಯ ಅವರು ಹೇಳುತ್ತಿದ್ದಾರೆ. ಆದರೆ ಕುವೆಂಪು ಅವರ ಎಲ್ಲಾ ಬರಹಗಳಿಗೂ ನಿಜವಾದ ಹಕ್ಕುದಾರರು ಪೂರ್ಣಚಂದ್ರ ತೇಜಸ್ವಿಯವರ ಪತ್ನಿ ರಾಜೇಶ್ವರಿ ಮತ್ತು ಕುವೆಂಪು ಅವರ ಮಗಳು ತಾರಿಣಿಗೆ ಸೇರಿದ್ದಾಗಿದೆ. ಹಾಗಾಗಿ ಈ ಪ್ರಕರಣದಲ್ಲಿ ಕೋರ್ಟ್‌ನ ಅಂತಿಮ ತೀರ್ಪು ಏನಾಗಲಿದೆ ಎಂದು ಕಾದುನೋಡಬೇಕಿದೆ” ಎಂದು ಹೇಳಿದರು.

ಕೆ.ಸಿ.ಶಿವಾರೆಡ್ಡಿ ಸಂಪಾದಕತ್ವದ ಕುವೆಂಪು ಸಮಗ್ರ ಸಾಹಿತ್ಯವನ್ನು 2020ರ ನವೆಂಬರ್ ನಲ್ಲಿ ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಲಾಗಿತ್ತು. 12ನೆ ಸಂಪುಟಗಳಲ್ಲಿ ಪ್ರಕಟಿಸಿರುವ ಕುವೆಂಪು ಅವರ 62 ಪತ್ರಗಳೇ ಈಗ ವಿವಾದ ಸೃಷ್ಟಿಸಿವೆ.


ಇದನ್ನೂ ಓದಿ: ಸಾಂಸ್ಕೃತಿಕ ಕ್ರಾಂತಿಯ ರೂವಾರಿ ಕುವೆಂಪು ಹೊರಿಸಿದ ಹೊರೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...