Homeಕರ್ನಾಟಕ'ಕುವೆಂಪು ಸಮಗ್ರ ಸಾಹಿತ್ಯ ಸಂಪುಟ 12' ಮಾರಾಟಕ್ಕೆ ಹೈಕೋರ್ಟ್ ತಡೆ

‘ಕುವೆಂಪು ಸಮಗ್ರ ಸಾಹಿತ್ಯ ಸಂಪುಟ 12’ ಮಾರಾಟಕ್ಕೆ ಹೈಕೋರ್ಟ್ ತಡೆ

- Advertisement -
- Advertisement -

ಹಂಪಿ ಕನ್ನಡ ವಿಶ್ವವಿದ್ಯಾಲಯವು ಕಾಪಿರೈಟ್ ಕಾಯ್ದೆ ಉಲ್ಲಂಘಿಸಿದೆ ಎಂದು ಆರೋಪಿಸಿರುವ ಹಿರಿಯ ಸಾಹಿತಿ ಪುಸಕ್ತಮನೆ ಹರಿಹರಪ್ರಿಯ, ವಿವಿಯು ಹೊರತಂದಿರುವ 12 ಸಂಪುಟಗಳ ಕುವೆಂಪು ಸಮಗ್ರ ಸಾಹಿತ್ಯ ಸರಣಿ ಮಾರಾಟಕ್ಕೆ ತಡೆ ತಂದಿದ್ದಾರೆ.

ಕೃತಿಚೌರ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪ್ರಕಟಿಸಿರುವ ಕುವೆಂಪು ಸಮಗ್ರ ಸಾಹಿತ್ಯದ 12ನೇ ಸಂಪುಟದ ಮಾರಾಟಕ್ಕೆ ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷೆನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯಕ ಬುಧವಾರ (ಮಾ.17) ತಡೆಯಾಜ್ಞೆ ನೀಡಿದ್ದಾರೆ.

ಪುಸ್ತಕಮನೆ ಹರಿಹರಪ್ರಿಯ ಅವರು 1974ರಲ್ಲಿ ಸಂಪಾದಿಸಿದ್ದ ಕುವೆಂಪು ಪತ್ರಗಳು ಪುಸ್ತಕದಿಂದ ಕುವೆಂಪು ಅವರ 62 ಪತ್ರಗಳನ್ನು ಯಥಾವತ್ತಾಗಿ ಕನ್ನಡ ವಿಶ್ವವಿದ್ಯಾಲಯ ಕುವೆಂಪು ಸಮಗ್ರ ಸಾಹಿತ್ಯದ ಹನ್ನೆರಡನೇ ಸಂಪುಟದಲ್ಲಿ ಪ್ರಕಟಿಸಿದೆ ಎಂಬ ಆರೋಪವಿದೆ.

ಇದನ್ನೂ ಓದಿ: ಕುವೆಂಪು ಅವರ ಶ್ರೀರಾಮಾಯಣ ದರ್ಶನಂ ಮಹಾಕಾವ್ಯದಲ್ಲಿ ಸ್ವಪ್ನಗಳ ಪಾತ್ರ

“ವಿಶ್ವವಿದ್ಯಾಲಯದ ಸಿಂಡಿಕೇಟ್‍ನ ಸದಸ್ಯರ ಗಮನಕ್ಕೆ ವಿಷಯ ತಂದರೂ ಪ್ರಯೋಜನವಾಗಿಲ್ಲ. ವಿಧಿಯಿಲ್ಲದೆ ನ್ಯಾಯಾಲಯದ ಮೊರೆ ಹೋಗಿರುವೆ. ನ್ಯಾಯಾಲಯದ ಆದೇಶ ಸ್ವಲ್ಪ ಸಮಾಧಾನ ತಂದಿದೆ. ವಿಶ್ವವಿದ್ಯಾಲಯ ಈಗಲಾದರೂ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು” ಎಂದು ಹರಿಹರಪ್ರಿಯ ಹೇಳಿದ್ದಾರೆ.

ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎ. ಸುಬ್ಬಣ್ಣ ರೈ, “ಸಂಪುಟ ಮಾರಾಟಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿರುವ ವಿಷಯ ನನ್ನ ಗಮನಕ್ಕೆ ಬಂದಿಲ್ಲ” ಎಂದು ತಿಳಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಹಂಪಿ ವಿಶ್ವವಿದ್ಯಾಲಯದ ಪ್ರಸಾರಂಗದ ನಿರ್ದೇಶಕರಾದ ಪ್ರಶಾಂತ್ ಮಾತನಾಡಿ, “ಮೊದಲನೆಯದಾಗಿ, ಇದು ಮಧ್ಯಂತರ ಆದೇಶವಾಗಿದೆ. ಇದು ಎರಡೂ ಕಡೆಯವರಿಗೆ ಅನ್ಯಾಯವಾಗಬಾರದು ಎಂಬ ಕಾರಣಕ್ಕೆ ಕೋರ್ಟ್ ಇಂತಹ ಆದೇಶ ಹೊರಡಿಸಿದೆ ಎಂದು ಭಾವಿಸಿದ್ದೇನೆ. ಆದರೆ ಅಂತಿಮ ತೀರ್ಪು ಬೇರೆಯೇ ಆಗಿರುವ ಸಾಧ್ಯತೆಯಿದೆ. ಎರಡನೆಯದಾಗಿ, ನಾವು ಈ ಸಂಪುಟದಲ್ಲಿ 250ಕ್ಕೂ ಹೆಚ್ಚು ಪತ್ರಗಳನ್ನು ಬಳಸಿಕೊಂಡಿದ್ದೇವೆ. ಅದರಲ್ಲಿ 62 ಪತ್ರಗಳ ಹಕ್ಕು ನನ್ನದು ಎಂದು ಹರಹರಪ್ರಿಯ ಅವರು ಹೇಳುತ್ತಿದ್ದಾರೆ. ಆದರೆ ಕುವೆಂಪು ಅವರ ಎಲ್ಲಾ ಬರಹಗಳಿಗೂ ನಿಜವಾದ ಹಕ್ಕುದಾರರು ಪೂರ್ಣಚಂದ್ರ ತೇಜಸ್ವಿಯವರ ಪತ್ನಿ ರಾಜೇಶ್ವರಿ ಮತ್ತು ಕುವೆಂಪು ಅವರ ಮಗಳು ತಾರಿಣಿಗೆ ಸೇರಿದ್ದಾಗಿದೆ. ಹಾಗಾಗಿ ಈ ಪ್ರಕರಣದಲ್ಲಿ ಕೋರ್ಟ್‌ನ ಅಂತಿಮ ತೀರ್ಪು ಏನಾಗಲಿದೆ ಎಂದು ಕಾದುನೋಡಬೇಕಿದೆ” ಎಂದು ಹೇಳಿದರು.

ಕೆ.ಸಿ.ಶಿವಾರೆಡ್ಡಿ ಸಂಪಾದಕತ್ವದ ಕುವೆಂಪು ಸಮಗ್ರ ಸಾಹಿತ್ಯವನ್ನು 2020ರ ನವೆಂಬರ್ ನಲ್ಲಿ ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಲಾಗಿತ್ತು. 12ನೆ ಸಂಪುಟಗಳಲ್ಲಿ ಪ್ರಕಟಿಸಿರುವ ಕುವೆಂಪು ಅವರ 62 ಪತ್ರಗಳೇ ಈಗ ವಿವಾದ ಸೃಷ್ಟಿಸಿವೆ.


ಇದನ್ನೂ ಓದಿ: ಸಾಂಸ್ಕೃತಿಕ ಕ್ರಾಂತಿಯ ರೂವಾರಿ ಕುವೆಂಪು ಹೊರಿಸಿದ ಹೊರೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...