Homeಕರ್ನಾಟಕಪೊಲೀಸರಿಗೆ ಬೆದರಿಕೆ ಪ್ರಕರಣ: ಶಾಸಕ ಹರೀಶ್ ಪೂಂಜಾರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಪೊಲೀಸರಿಗೆ ಬೆದರಿಕೆ ಪ್ರಕರಣ: ಶಾಸಕ ಹರೀಶ್ ಪೂಂಜಾರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೈಕೋರ್ಟ್

- Advertisement -
- Advertisement -

ಠಾಣೆಗೆ ನುಗ್ಗಿ ಪೊಲೀಸರಿಗೆ ಬೆದರಿಕೆ ಹಾಕಿದ್ದಲ್ಲದೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಶುಕ್ರವಾರ (ಮೇ 31) ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಪೊಲೀಸರಿಗೆ ಬೆದರಿಕೆ ಹಾಕಿದ ಸಂಬಂಧ ತಮ್ಮ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಹರೀಶ್‌ ಪೂಂಜಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ಏಕಸದಸ್ಯ ಪೀಠ, ಪೂಂಜಾ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಪೂಂಜಾ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು “ಪಕ್ಷದ ಕಾರ್ಯಕರ್ತ ಶಶಿರಾಜ್‌ ಶೆಟ್ಟಿ ವಿರುದ್ಧ ಎಫ್‌ಐಆರ್‌ ದಾಖಲಿಸದೇ ಬೆಳ್ತಂಗಡಿ ಪೊಲೀಸರು ಕರೆದೊಯ್ದಿದ್ದರು. ಶಶಿರಾಜ್‌ ಪತ್ನಿಯ ಕೋರಿಕೆ ಮೇರೆಗೆ ಮೇ 19ರ ರಾತ್ರಿ ಪೂಂಜಾ ಪೊಲೀಸ್‌ ಠಾಣೆಗೆ ಹೋಗಿದ್ದರು. ಯಾವ ಆಧಾರದ ಮೇಲೆ ಶಶಿರಾಜ್‌ ಅವರನ್ನು ಬಂಧಿಸಿದ್ದೀರಿ? ಎಫ್‌ಐಆರ್‌ ಹಾಕಿದ್ದೀರಾ? ಎಂದು ಕೇಳಿದ್ದರು. ಈ ಸಂದರ್ಭದಲ್ಲಿ ಸೂಕ್ತ ಪ್ರತಿಕ್ರಿಯೆ ಬಾರದ ಹಿನ್ನೆಲೆ ಪೂಂಜಾ ಏರುಧ್ವನಿಯಲ್ಲಿ ಮಾತನಾಡಿರಬಹುದು. ಇದಕ್ಕಾಗಿ, ಪೂಂಜಾ ವಿರುದ್ಧ ಐಪಿಸಿ ಸೆಕ್ಷನ್‌ 353 ಮತ್ತು 504ರ ಅಡಿ ಪ್ರಕರಣ ದಾಖಲಿಸಲಾಗಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ಶಾಸಕ, ಸಚಿವರು ಪೊಲೀಸ್‌ ಠಾಣೆಗೆ ಹೋದರೆ ಪೊಲೀಸರು ಹೇಗೆ ಕೆಲಸ ಮಾಡಬೇಕು?” ಎಂದು ಪ್ರಶ್ನಿಸಿದೆ.

ಈ ವೇಳೆ ಪ್ರತಿಕ್ರಿಯಿಸಿದ ನಾವದಗಿ ಅವರು “ಗ್ರಾಮೀಣ ಪ್ರದೇಶದಲ್ಲಿ ಎಫ್‌ಐಆರ್‌ ದಾಖಲಿಸದೇ ಯಾರನ್ನಾದರೂ ಪೊಲೀಸರು ವಶಕ್ಕೆ ಪಡೆದರೆ ಮೊದಲು ಶಾಸಕರನ್ನು ಸಂಪರ್ಕಿಸಲಾಗುತ್ತದೆ. ಕಾನೂನು ಬಾಹಿರವಾಗಿ ತನ್ನ ಕ್ಷೇತ್ರದಲ್ಲಿ ಏನಾದರೂ ನಡೆದರೆ ಅದನ್ನು ಪರಿಶೀಲಿಸಲು ಶಾಸಕರು ಮುಕ್ತರಾಗಿರುತ್ತಾರೆ. ಅದರಲ್ಲೂ ಎಫ್‌ಐಆರ್‌ ದಾಖಲಾಗದೇ ಯಾರನ್ನಾದರೂ ಪೊಲೀಸರು ಕರೆದೊಯ್ದರೆ ಅದನ್ನು ಅವರು ಪರಿಶೀಲಿಸಬಹುದು” ಎಂದಿದ್ದಾರೆ.

ಆಗ ಪೀಠವು “ಎಫ್‌ಐಆರ್‌ ಆದ ತಕ್ಷಣ ಶಾಸಕರು ಠಾಣೆಯಲ್ಲಿ ಹೋಗಿ ಕುಳಿತರೆ ಪೊಲೀಸ್‌ ಅಧಿಕಾರಿ ಹೇಗೆ ಕೆಲಸ ಮಾಡಬೇಕು? ಇಂಥ ಸಂದರ್ಭದಲ್ಲಿ ಶಾಸಕರು ಪೊಲೀಸ್‌ ಠಾಣೆಗೆ ಹೋಗಬಹುದು ಎಂಬ ಸಂಬಂಧದ ಒಂದೇ ಒಂದು ಐತಿಹ್ಯ ಹೊಂದಿರುವ ತೀರ್ಪು ತೋರಿಸಿ” ಎಂದಿದೆ.

“ನಾಳೆ ಪೊಲೀಸರು ಭಯೋತ್ಪಾದಕನೊಬ್ಬನನ್ನು ಬಂಧಿಸುತ್ತಾರೆ. ಒಬ್ಬ ಮಹಿಳೆ ಬಂದು ನನ್ನ ಗಂಡನನ್ನು ಬಂಧಿಸಿದ್ದಾರೆ ಠಾಣೆಗೆ ಹೋಗೋಣ ಬನ್ನಿ ಎಂದರೆ ಹೋಗುತ್ತೀರಾ?” ಎಂದು ಖಾರವಾಗಿ ಪ್ರಶ್ನಿಸಿದೆ.

“ನಿಮಗೆ ಸಮಸ್ಯೆಯಾದರೆ ಪರಿಹಾರಕ್ಕೆ ಮಾನವ ಹಕ್ಕುಗಳ ಆಯೋಗ ಇದೆ. ಅಲ್ಲಿಗೆ ಮನವಿ ನೀಡಬಹುದು. ನೀವ್ಯಾರು (ಪೂಂಜಾ) ಠಾಣೆಗೆ ಹೋಗಲು? ಶಶಿರಾಜ್‌ ಬಂಧನ ಅಕ್ರಮವಾಗಿದ್ದರೆ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಬೇಕಿತ್ತು” ಎಂದು ಕಿಡಿಕಾರಿದೆ.

ವಿಚಾರಣೆಯ ವೇಳೆ ನಾವದಗಿ ಅವರು “ಪೊಲೀಸರೇ ದೂರು ಕೊಟ್ಟು ಅವರೇ ತನಿಖೆ ನಡೆಸುತ್ತಿದ್ದಾರೆ. ಪೂಂಜಾ ಪೊಲೀಸರ ಬಗ್ಗೆ ಏನೋ ಅಂದಿದ್ದಾರೆ ಎಂಬುವುದು ಆರೋಪ. ಅದನ್ನು ಅವರೇ ತನಿಖೆ ನಡೆಸುತ್ತಿದ್ದಾರೆ. ಸಬ್‌ ಇನ್‌ಸ್ಪೆಕ್ಟರ್‌ ದೂರು ನೀಡಿದ್ದಾರೆ. ಅವರೇ ದೂರು ನೀಡಿ ಅವರೇ ತನಿಖೆ ನಡೆಸಲಾಗದು” ಎಂದು ಹೇಳಿದ್ದಾರೆ.

ನಾವದಗಿ ವಾದಕ್ಕೆ ಆಕ್ಷೇಪಿಸಿದ ಹೆಚ್ಚುವರಿ ಸರ್ಕಾರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ಪೊಲೀಸರ ನಿಂದನೆ ಪ್ರಕರಣವನ್ನು ಪುತ್ತೂರು ಠಾಣೆಯ ಸರ್ಕಲ್‌ ಇನ್‌ಸ್ಪೆಕ್ಟರ್‌ ತನಿಖೆ ನಡೆಸಿ, ಸಂಬಂಧಿತ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ನ್ಯಾಯಾಲಯ ಸಂಜ್ಞೇ ಪರಿಗಣಿಸಿದೆ” ಎಂದು ಪೀಠಕ್ಕೆ ವಿವರಿಸಿದ್ದಾರೆ.

ಅಂತಿಮವಾಗಿ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ನ್ಯಾಯಾಲಯವು ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ವಿಚಾರಣೆಯನ್ನು ಮುಂದಿನ ಶುಕ್ರವಾರಕ್ಕೆ ಮುಂದೂಡಿದೆ. ಈ ನಡುವೆ, ಪೂಂಜಾ ವಿರುದ್ಧ ಯಾವುದೇ ಕ್ರಮಕೈಗೊಳ್ಳದಂತೆ ಸಾವಧಾನದಿಂದ ಇರಬೇಕು ಎಂದು ರಾಜ್ಯ ಸರ್ಕಾರಕ್ಕೆ ಮೌಖಿಕವಾಗಿ ಆದೇಶಿಸಿದೆ.

ಇದನ್ನೂ ಓದಿ : ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಶಾಂತ್ ತಿಮ್ಮಯ್ಯ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...