Homeಕರ್ನಾಟಕಪೊಲೀಸರಿಗೆ ಬೆದರಿಕೆ ಪ್ರಕರಣ: ಶಾಸಕ ಹರೀಶ್ ಪೂಂಜಾರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಪೊಲೀಸರಿಗೆ ಬೆದರಿಕೆ ಪ್ರಕರಣ: ಶಾಸಕ ಹರೀಶ್ ಪೂಂಜಾರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೈಕೋರ್ಟ್

- Advertisement -
- Advertisement -

ಠಾಣೆಗೆ ನುಗ್ಗಿ ಪೊಲೀಸರಿಗೆ ಬೆದರಿಕೆ ಹಾಕಿದ್ದಲ್ಲದೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಶುಕ್ರವಾರ (ಮೇ 31) ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಪೊಲೀಸರಿಗೆ ಬೆದರಿಕೆ ಹಾಕಿದ ಸಂಬಂಧ ತಮ್ಮ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಹರೀಶ್‌ ಪೂಂಜಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ಏಕಸದಸ್ಯ ಪೀಠ, ಪೂಂಜಾ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಪೂಂಜಾ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು “ಪಕ್ಷದ ಕಾರ್ಯಕರ್ತ ಶಶಿರಾಜ್‌ ಶೆಟ್ಟಿ ವಿರುದ್ಧ ಎಫ್‌ಐಆರ್‌ ದಾಖಲಿಸದೇ ಬೆಳ್ತಂಗಡಿ ಪೊಲೀಸರು ಕರೆದೊಯ್ದಿದ್ದರು. ಶಶಿರಾಜ್‌ ಪತ್ನಿಯ ಕೋರಿಕೆ ಮೇರೆಗೆ ಮೇ 19ರ ರಾತ್ರಿ ಪೂಂಜಾ ಪೊಲೀಸ್‌ ಠಾಣೆಗೆ ಹೋಗಿದ್ದರು. ಯಾವ ಆಧಾರದ ಮೇಲೆ ಶಶಿರಾಜ್‌ ಅವರನ್ನು ಬಂಧಿಸಿದ್ದೀರಿ? ಎಫ್‌ಐಆರ್‌ ಹಾಕಿದ್ದೀರಾ? ಎಂದು ಕೇಳಿದ್ದರು. ಈ ಸಂದರ್ಭದಲ್ಲಿ ಸೂಕ್ತ ಪ್ರತಿಕ್ರಿಯೆ ಬಾರದ ಹಿನ್ನೆಲೆ ಪೂಂಜಾ ಏರುಧ್ವನಿಯಲ್ಲಿ ಮಾತನಾಡಿರಬಹುದು. ಇದಕ್ಕಾಗಿ, ಪೂಂಜಾ ವಿರುದ್ಧ ಐಪಿಸಿ ಸೆಕ್ಷನ್‌ 353 ಮತ್ತು 504ರ ಅಡಿ ಪ್ರಕರಣ ದಾಖಲಿಸಲಾಗಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ಶಾಸಕ, ಸಚಿವರು ಪೊಲೀಸ್‌ ಠಾಣೆಗೆ ಹೋದರೆ ಪೊಲೀಸರು ಹೇಗೆ ಕೆಲಸ ಮಾಡಬೇಕು?” ಎಂದು ಪ್ರಶ್ನಿಸಿದೆ.

ಈ ವೇಳೆ ಪ್ರತಿಕ್ರಿಯಿಸಿದ ನಾವದಗಿ ಅವರು “ಗ್ರಾಮೀಣ ಪ್ರದೇಶದಲ್ಲಿ ಎಫ್‌ಐಆರ್‌ ದಾಖಲಿಸದೇ ಯಾರನ್ನಾದರೂ ಪೊಲೀಸರು ವಶಕ್ಕೆ ಪಡೆದರೆ ಮೊದಲು ಶಾಸಕರನ್ನು ಸಂಪರ್ಕಿಸಲಾಗುತ್ತದೆ. ಕಾನೂನು ಬಾಹಿರವಾಗಿ ತನ್ನ ಕ್ಷೇತ್ರದಲ್ಲಿ ಏನಾದರೂ ನಡೆದರೆ ಅದನ್ನು ಪರಿಶೀಲಿಸಲು ಶಾಸಕರು ಮುಕ್ತರಾಗಿರುತ್ತಾರೆ. ಅದರಲ್ಲೂ ಎಫ್‌ಐಆರ್‌ ದಾಖಲಾಗದೇ ಯಾರನ್ನಾದರೂ ಪೊಲೀಸರು ಕರೆದೊಯ್ದರೆ ಅದನ್ನು ಅವರು ಪರಿಶೀಲಿಸಬಹುದು” ಎಂದಿದ್ದಾರೆ.

ಆಗ ಪೀಠವು “ಎಫ್‌ಐಆರ್‌ ಆದ ತಕ್ಷಣ ಶಾಸಕರು ಠಾಣೆಯಲ್ಲಿ ಹೋಗಿ ಕುಳಿತರೆ ಪೊಲೀಸ್‌ ಅಧಿಕಾರಿ ಹೇಗೆ ಕೆಲಸ ಮಾಡಬೇಕು? ಇಂಥ ಸಂದರ್ಭದಲ್ಲಿ ಶಾಸಕರು ಪೊಲೀಸ್‌ ಠಾಣೆಗೆ ಹೋಗಬಹುದು ಎಂಬ ಸಂಬಂಧದ ಒಂದೇ ಒಂದು ಐತಿಹ್ಯ ಹೊಂದಿರುವ ತೀರ್ಪು ತೋರಿಸಿ” ಎಂದಿದೆ.

“ನಾಳೆ ಪೊಲೀಸರು ಭಯೋತ್ಪಾದಕನೊಬ್ಬನನ್ನು ಬಂಧಿಸುತ್ತಾರೆ. ಒಬ್ಬ ಮಹಿಳೆ ಬಂದು ನನ್ನ ಗಂಡನನ್ನು ಬಂಧಿಸಿದ್ದಾರೆ ಠಾಣೆಗೆ ಹೋಗೋಣ ಬನ್ನಿ ಎಂದರೆ ಹೋಗುತ್ತೀರಾ?” ಎಂದು ಖಾರವಾಗಿ ಪ್ರಶ್ನಿಸಿದೆ.

“ನಿಮಗೆ ಸಮಸ್ಯೆಯಾದರೆ ಪರಿಹಾರಕ್ಕೆ ಮಾನವ ಹಕ್ಕುಗಳ ಆಯೋಗ ಇದೆ. ಅಲ್ಲಿಗೆ ಮನವಿ ನೀಡಬಹುದು. ನೀವ್ಯಾರು (ಪೂಂಜಾ) ಠಾಣೆಗೆ ಹೋಗಲು? ಶಶಿರಾಜ್‌ ಬಂಧನ ಅಕ್ರಮವಾಗಿದ್ದರೆ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಬೇಕಿತ್ತು” ಎಂದು ಕಿಡಿಕಾರಿದೆ.

ವಿಚಾರಣೆಯ ವೇಳೆ ನಾವದಗಿ ಅವರು “ಪೊಲೀಸರೇ ದೂರು ಕೊಟ್ಟು ಅವರೇ ತನಿಖೆ ನಡೆಸುತ್ತಿದ್ದಾರೆ. ಪೂಂಜಾ ಪೊಲೀಸರ ಬಗ್ಗೆ ಏನೋ ಅಂದಿದ್ದಾರೆ ಎಂಬುವುದು ಆರೋಪ. ಅದನ್ನು ಅವರೇ ತನಿಖೆ ನಡೆಸುತ್ತಿದ್ದಾರೆ. ಸಬ್‌ ಇನ್‌ಸ್ಪೆಕ್ಟರ್‌ ದೂರು ನೀಡಿದ್ದಾರೆ. ಅವರೇ ದೂರು ನೀಡಿ ಅವರೇ ತನಿಖೆ ನಡೆಸಲಾಗದು” ಎಂದು ಹೇಳಿದ್ದಾರೆ.

ನಾವದಗಿ ವಾದಕ್ಕೆ ಆಕ್ಷೇಪಿಸಿದ ಹೆಚ್ಚುವರಿ ಸರ್ಕಾರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ಪೊಲೀಸರ ನಿಂದನೆ ಪ್ರಕರಣವನ್ನು ಪುತ್ತೂರು ಠಾಣೆಯ ಸರ್ಕಲ್‌ ಇನ್‌ಸ್ಪೆಕ್ಟರ್‌ ತನಿಖೆ ನಡೆಸಿ, ಸಂಬಂಧಿತ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ನ್ಯಾಯಾಲಯ ಸಂಜ್ಞೇ ಪರಿಗಣಿಸಿದೆ” ಎಂದು ಪೀಠಕ್ಕೆ ವಿವರಿಸಿದ್ದಾರೆ.

ಅಂತಿಮವಾಗಿ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ನ್ಯಾಯಾಲಯವು ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ವಿಚಾರಣೆಯನ್ನು ಮುಂದಿನ ಶುಕ್ರವಾರಕ್ಕೆ ಮುಂದೂಡಿದೆ. ಈ ನಡುವೆ, ಪೂಂಜಾ ವಿರುದ್ಧ ಯಾವುದೇ ಕ್ರಮಕೈಗೊಳ್ಳದಂತೆ ಸಾವಧಾನದಿಂದ ಇರಬೇಕು ಎಂದು ರಾಜ್ಯ ಸರ್ಕಾರಕ್ಕೆ ಮೌಖಿಕವಾಗಿ ಆದೇಶಿಸಿದೆ.

ಇದನ್ನೂ ಓದಿ : ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಶಾಂತ್ ತಿಮ್ಮಯ್ಯ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...