Homeಕರ್ನಾಟಕಪೊಲೀಸರಿಗೆ ಬೆದರಿಕೆ ಪ್ರಕರಣ: ಶಾಸಕ ಹರೀಶ್ ಪೂಂಜಾರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಪೊಲೀಸರಿಗೆ ಬೆದರಿಕೆ ಪ್ರಕರಣ: ಶಾಸಕ ಹರೀಶ್ ಪೂಂಜಾರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೈಕೋರ್ಟ್

- Advertisement -
- Advertisement -

ಠಾಣೆಗೆ ನುಗ್ಗಿ ಪೊಲೀಸರಿಗೆ ಬೆದರಿಕೆ ಹಾಕಿದ್ದಲ್ಲದೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಶುಕ್ರವಾರ (ಮೇ 31) ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಪೊಲೀಸರಿಗೆ ಬೆದರಿಕೆ ಹಾಕಿದ ಸಂಬಂಧ ತಮ್ಮ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಹರೀಶ್‌ ಪೂಂಜಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ಏಕಸದಸ್ಯ ಪೀಠ, ಪೂಂಜಾ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಪೂಂಜಾ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು “ಪಕ್ಷದ ಕಾರ್ಯಕರ್ತ ಶಶಿರಾಜ್‌ ಶೆಟ್ಟಿ ವಿರುದ್ಧ ಎಫ್‌ಐಆರ್‌ ದಾಖಲಿಸದೇ ಬೆಳ್ತಂಗಡಿ ಪೊಲೀಸರು ಕರೆದೊಯ್ದಿದ್ದರು. ಶಶಿರಾಜ್‌ ಪತ್ನಿಯ ಕೋರಿಕೆ ಮೇರೆಗೆ ಮೇ 19ರ ರಾತ್ರಿ ಪೂಂಜಾ ಪೊಲೀಸ್‌ ಠಾಣೆಗೆ ಹೋಗಿದ್ದರು. ಯಾವ ಆಧಾರದ ಮೇಲೆ ಶಶಿರಾಜ್‌ ಅವರನ್ನು ಬಂಧಿಸಿದ್ದೀರಿ? ಎಫ್‌ಐಆರ್‌ ಹಾಕಿದ್ದೀರಾ? ಎಂದು ಕೇಳಿದ್ದರು. ಈ ಸಂದರ್ಭದಲ್ಲಿ ಸೂಕ್ತ ಪ್ರತಿಕ್ರಿಯೆ ಬಾರದ ಹಿನ್ನೆಲೆ ಪೂಂಜಾ ಏರುಧ್ವನಿಯಲ್ಲಿ ಮಾತನಾಡಿರಬಹುದು. ಇದಕ್ಕಾಗಿ, ಪೂಂಜಾ ವಿರುದ್ಧ ಐಪಿಸಿ ಸೆಕ್ಷನ್‌ 353 ಮತ್ತು 504ರ ಅಡಿ ಪ್ರಕರಣ ದಾಖಲಿಸಲಾಗಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ಶಾಸಕ, ಸಚಿವರು ಪೊಲೀಸ್‌ ಠಾಣೆಗೆ ಹೋದರೆ ಪೊಲೀಸರು ಹೇಗೆ ಕೆಲಸ ಮಾಡಬೇಕು?” ಎಂದು ಪ್ರಶ್ನಿಸಿದೆ.

ಈ ವೇಳೆ ಪ್ರತಿಕ್ರಿಯಿಸಿದ ನಾವದಗಿ ಅವರು “ಗ್ರಾಮೀಣ ಪ್ರದೇಶದಲ್ಲಿ ಎಫ್‌ಐಆರ್‌ ದಾಖಲಿಸದೇ ಯಾರನ್ನಾದರೂ ಪೊಲೀಸರು ವಶಕ್ಕೆ ಪಡೆದರೆ ಮೊದಲು ಶಾಸಕರನ್ನು ಸಂಪರ್ಕಿಸಲಾಗುತ್ತದೆ. ಕಾನೂನು ಬಾಹಿರವಾಗಿ ತನ್ನ ಕ್ಷೇತ್ರದಲ್ಲಿ ಏನಾದರೂ ನಡೆದರೆ ಅದನ್ನು ಪರಿಶೀಲಿಸಲು ಶಾಸಕರು ಮುಕ್ತರಾಗಿರುತ್ತಾರೆ. ಅದರಲ್ಲೂ ಎಫ್‌ಐಆರ್‌ ದಾಖಲಾಗದೇ ಯಾರನ್ನಾದರೂ ಪೊಲೀಸರು ಕರೆದೊಯ್ದರೆ ಅದನ್ನು ಅವರು ಪರಿಶೀಲಿಸಬಹುದು” ಎಂದಿದ್ದಾರೆ.

ಆಗ ಪೀಠವು “ಎಫ್‌ಐಆರ್‌ ಆದ ತಕ್ಷಣ ಶಾಸಕರು ಠಾಣೆಯಲ್ಲಿ ಹೋಗಿ ಕುಳಿತರೆ ಪೊಲೀಸ್‌ ಅಧಿಕಾರಿ ಹೇಗೆ ಕೆಲಸ ಮಾಡಬೇಕು? ಇಂಥ ಸಂದರ್ಭದಲ್ಲಿ ಶಾಸಕರು ಪೊಲೀಸ್‌ ಠಾಣೆಗೆ ಹೋಗಬಹುದು ಎಂಬ ಸಂಬಂಧದ ಒಂದೇ ಒಂದು ಐತಿಹ್ಯ ಹೊಂದಿರುವ ತೀರ್ಪು ತೋರಿಸಿ” ಎಂದಿದೆ.

“ನಾಳೆ ಪೊಲೀಸರು ಭಯೋತ್ಪಾದಕನೊಬ್ಬನನ್ನು ಬಂಧಿಸುತ್ತಾರೆ. ಒಬ್ಬ ಮಹಿಳೆ ಬಂದು ನನ್ನ ಗಂಡನನ್ನು ಬಂಧಿಸಿದ್ದಾರೆ ಠಾಣೆಗೆ ಹೋಗೋಣ ಬನ್ನಿ ಎಂದರೆ ಹೋಗುತ್ತೀರಾ?” ಎಂದು ಖಾರವಾಗಿ ಪ್ರಶ್ನಿಸಿದೆ.

“ನಿಮಗೆ ಸಮಸ್ಯೆಯಾದರೆ ಪರಿಹಾರಕ್ಕೆ ಮಾನವ ಹಕ್ಕುಗಳ ಆಯೋಗ ಇದೆ. ಅಲ್ಲಿಗೆ ಮನವಿ ನೀಡಬಹುದು. ನೀವ್ಯಾರು (ಪೂಂಜಾ) ಠಾಣೆಗೆ ಹೋಗಲು? ಶಶಿರಾಜ್‌ ಬಂಧನ ಅಕ್ರಮವಾಗಿದ್ದರೆ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಬೇಕಿತ್ತು” ಎಂದು ಕಿಡಿಕಾರಿದೆ.

ವಿಚಾರಣೆಯ ವೇಳೆ ನಾವದಗಿ ಅವರು “ಪೊಲೀಸರೇ ದೂರು ಕೊಟ್ಟು ಅವರೇ ತನಿಖೆ ನಡೆಸುತ್ತಿದ್ದಾರೆ. ಪೂಂಜಾ ಪೊಲೀಸರ ಬಗ್ಗೆ ಏನೋ ಅಂದಿದ್ದಾರೆ ಎಂಬುವುದು ಆರೋಪ. ಅದನ್ನು ಅವರೇ ತನಿಖೆ ನಡೆಸುತ್ತಿದ್ದಾರೆ. ಸಬ್‌ ಇನ್‌ಸ್ಪೆಕ್ಟರ್‌ ದೂರು ನೀಡಿದ್ದಾರೆ. ಅವರೇ ದೂರು ನೀಡಿ ಅವರೇ ತನಿಖೆ ನಡೆಸಲಾಗದು” ಎಂದು ಹೇಳಿದ್ದಾರೆ.

ನಾವದಗಿ ವಾದಕ್ಕೆ ಆಕ್ಷೇಪಿಸಿದ ಹೆಚ್ಚುವರಿ ಸರ್ಕಾರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ಪೊಲೀಸರ ನಿಂದನೆ ಪ್ರಕರಣವನ್ನು ಪುತ್ತೂರು ಠಾಣೆಯ ಸರ್ಕಲ್‌ ಇನ್‌ಸ್ಪೆಕ್ಟರ್‌ ತನಿಖೆ ನಡೆಸಿ, ಸಂಬಂಧಿತ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ನ್ಯಾಯಾಲಯ ಸಂಜ್ಞೇ ಪರಿಗಣಿಸಿದೆ” ಎಂದು ಪೀಠಕ್ಕೆ ವಿವರಿಸಿದ್ದಾರೆ.

ಅಂತಿಮವಾಗಿ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ನ್ಯಾಯಾಲಯವು ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ವಿಚಾರಣೆಯನ್ನು ಮುಂದಿನ ಶುಕ್ರವಾರಕ್ಕೆ ಮುಂದೂಡಿದೆ. ಈ ನಡುವೆ, ಪೂಂಜಾ ವಿರುದ್ಧ ಯಾವುದೇ ಕ್ರಮಕೈಗೊಳ್ಳದಂತೆ ಸಾವಧಾನದಿಂದ ಇರಬೇಕು ಎಂದು ರಾಜ್ಯ ಸರ್ಕಾರಕ್ಕೆ ಮೌಖಿಕವಾಗಿ ಆದೇಶಿಸಿದೆ.

ಇದನ್ನೂ ಓದಿ : ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಶಾಂತ್ ತಿಮ್ಮಯ್ಯ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...