Homeಕರ್ನಾಟಕಪೊಲೀಸರಿಗೆ ಬೆದರಿಕೆ ಪ್ರಕರಣ: ಶಾಸಕ ಹರೀಶ್ ಪೂಂಜಾರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಪೊಲೀಸರಿಗೆ ಬೆದರಿಕೆ ಪ್ರಕರಣ: ಶಾಸಕ ಹರೀಶ್ ಪೂಂಜಾರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೈಕೋರ್ಟ್

- Advertisement -
- Advertisement -

ಠಾಣೆಗೆ ನುಗ್ಗಿ ಪೊಲೀಸರಿಗೆ ಬೆದರಿಕೆ ಹಾಕಿದ್ದಲ್ಲದೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಶುಕ್ರವಾರ (ಮೇ 31) ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಪೊಲೀಸರಿಗೆ ಬೆದರಿಕೆ ಹಾಕಿದ ಸಂಬಂಧ ತಮ್ಮ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಹರೀಶ್‌ ಪೂಂಜಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ಏಕಸದಸ್ಯ ಪೀಠ, ಪೂಂಜಾ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಪೂಂಜಾ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು “ಪಕ್ಷದ ಕಾರ್ಯಕರ್ತ ಶಶಿರಾಜ್‌ ಶೆಟ್ಟಿ ವಿರುದ್ಧ ಎಫ್‌ಐಆರ್‌ ದಾಖಲಿಸದೇ ಬೆಳ್ತಂಗಡಿ ಪೊಲೀಸರು ಕರೆದೊಯ್ದಿದ್ದರು. ಶಶಿರಾಜ್‌ ಪತ್ನಿಯ ಕೋರಿಕೆ ಮೇರೆಗೆ ಮೇ 19ರ ರಾತ್ರಿ ಪೂಂಜಾ ಪೊಲೀಸ್‌ ಠಾಣೆಗೆ ಹೋಗಿದ್ದರು. ಯಾವ ಆಧಾರದ ಮೇಲೆ ಶಶಿರಾಜ್‌ ಅವರನ್ನು ಬಂಧಿಸಿದ್ದೀರಿ? ಎಫ್‌ಐಆರ್‌ ಹಾಕಿದ್ದೀರಾ? ಎಂದು ಕೇಳಿದ್ದರು. ಈ ಸಂದರ್ಭದಲ್ಲಿ ಸೂಕ್ತ ಪ್ರತಿಕ್ರಿಯೆ ಬಾರದ ಹಿನ್ನೆಲೆ ಪೂಂಜಾ ಏರುಧ್ವನಿಯಲ್ಲಿ ಮಾತನಾಡಿರಬಹುದು. ಇದಕ್ಕಾಗಿ, ಪೂಂಜಾ ವಿರುದ್ಧ ಐಪಿಸಿ ಸೆಕ್ಷನ್‌ 353 ಮತ್ತು 504ರ ಅಡಿ ಪ್ರಕರಣ ದಾಖಲಿಸಲಾಗಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ಶಾಸಕ, ಸಚಿವರು ಪೊಲೀಸ್‌ ಠಾಣೆಗೆ ಹೋದರೆ ಪೊಲೀಸರು ಹೇಗೆ ಕೆಲಸ ಮಾಡಬೇಕು?” ಎಂದು ಪ್ರಶ್ನಿಸಿದೆ.

ಈ ವೇಳೆ ಪ್ರತಿಕ್ರಿಯಿಸಿದ ನಾವದಗಿ ಅವರು “ಗ್ರಾಮೀಣ ಪ್ರದೇಶದಲ್ಲಿ ಎಫ್‌ಐಆರ್‌ ದಾಖಲಿಸದೇ ಯಾರನ್ನಾದರೂ ಪೊಲೀಸರು ವಶಕ್ಕೆ ಪಡೆದರೆ ಮೊದಲು ಶಾಸಕರನ್ನು ಸಂಪರ್ಕಿಸಲಾಗುತ್ತದೆ. ಕಾನೂನು ಬಾಹಿರವಾಗಿ ತನ್ನ ಕ್ಷೇತ್ರದಲ್ಲಿ ಏನಾದರೂ ನಡೆದರೆ ಅದನ್ನು ಪರಿಶೀಲಿಸಲು ಶಾಸಕರು ಮುಕ್ತರಾಗಿರುತ್ತಾರೆ. ಅದರಲ್ಲೂ ಎಫ್‌ಐಆರ್‌ ದಾಖಲಾಗದೇ ಯಾರನ್ನಾದರೂ ಪೊಲೀಸರು ಕರೆದೊಯ್ದರೆ ಅದನ್ನು ಅವರು ಪರಿಶೀಲಿಸಬಹುದು” ಎಂದಿದ್ದಾರೆ.

ಆಗ ಪೀಠವು “ಎಫ್‌ಐಆರ್‌ ಆದ ತಕ್ಷಣ ಶಾಸಕರು ಠಾಣೆಯಲ್ಲಿ ಹೋಗಿ ಕುಳಿತರೆ ಪೊಲೀಸ್‌ ಅಧಿಕಾರಿ ಹೇಗೆ ಕೆಲಸ ಮಾಡಬೇಕು? ಇಂಥ ಸಂದರ್ಭದಲ್ಲಿ ಶಾಸಕರು ಪೊಲೀಸ್‌ ಠಾಣೆಗೆ ಹೋಗಬಹುದು ಎಂಬ ಸಂಬಂಧದ ಒಂದೇ ಒಂದು ಐತಿಹ್ಯ ಹೊಂದಿರುವ ತೀರ್ಪು ತೋರಿಸಿ” ಎಂದಿದೆ.

“ನಾಳೆ ಪೊಲೀಸರು ಭಯೋತ್ಪಾದಕನೊಬ್ಬನನ್ನು ಬಂಧಿಸುತ್ತಾರೆ. ಒಬ್ಬ ಮಹಿಳೆ ಬಂದು ನನ್ನ ಗಂಡನನ್ನು ಬಂಧಿಸಿದ್ದಾರೆ ಠಾಣೆಗೆ ಹೋಗೋಣ ಬನ್ನಿ ಎಂದರೆ ಹೋಗುತ್ತೀರಾ?” ಎಂದು ಖಾರವಾಗಿ ಪ್ರಶ್ನಿಸಿದೆ.

“ನಿಮಗೆ ಸಮಸ್ಯೆಯಾದರೆ ಪರಿಹಾರಕ್ಕೆ ಮಾನವ ಹಕ್ಕುಗಳ ಆಯೋಗ ಇದೆ. ಅಲ್ಲಿಗೆ ಮನವಿ ನೀಡಬಹುದು. ನೀವ್ಯಾರು (ಪೂಂಜಾ) ಠಾಣೆಗೆ ಹೋಗಲು? ಶಶಿರಾಜ್‌ ಬಂಧನ ಅಕ್ರಮವಾಗಿದ್ದರೆ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಬೇಕಿತ್ತು” ಎಂದು ಕಿಡಿಕಾರಿದೆ.

ವಿಚಾರಣೆಯ ವೇಳೆ ನಾವದಗಿ ಅವರು “ಪೊಲೀಸರೇ ದೂರು ಕೊಟ್ಟು ಅವರೇ ತನಿಖೆ ನಡೆಸುತ್ತಿದ್ದಾರೆ. ಪೂಂಜಾ ಪೊಲೀಸರ ಬಗ್ಗೆ ಏನೋ ಅಂದಿದ್ದಾರೆ ಎಂಬುವುದು ಆರೋಪ. ಅದನ್ನು ಅವರೇ ತನಿಖೆ ನಡೆಸುತ್ತಿದ್ದಾರೆ. ಸಬ್‌ ಇನ್‌ಸ್ಪೆಕ್ಟರ್‌ ದೂರು ನೀಡಿದ್ದಾರೆ. ಅವರೇ ದೂರು ನೀಡಿ ಅವರೇ ತನಿಖೆ ನಡೆಸಲಾಗದು” ಎಂದು ಹೇಳಿದ್ದಾರೆ.

ನಾವದಗಿ ವಾದಕ್ಕೆ ಆಕ್ಷೇಪಿಸಿದ ಹೆಚ್ಚುವರಿ ಸರ್ಕಾರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ಪೊಲೀಸರ ನಿಂದನೆ ಪ್ರಕರಣವನ್ನು ಪುತ್ತೂರು ಠಾಣೆಯ ಸರ್ಕಲ್‌ ಇನ್‌ಸ್ಪೆಕ್ಟರ್‌ ತನಿಖೆ ನಡೆಸಿ, ಸಂಬಂಧಿತ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ನ್ಯಾಯಾಲಯ ಸಂಜ್ಞೇ ಪರಿಗಣಿಸಿದೆ” ಎಂದು ಪೀಠಕ್ಕೆ ವಿವರಿಸಿದ್ದಾರೆ.

ಅಂತಿಮವಾಗಿ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ನ್ಯಾಯಾಲಯವು ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ವಿಚಾರಣೆಯನ್ನು ಮುಂದಿನ ಶುಕ್ರವಾರಕ್ಕೆ ಮುಂದೂಡಿದೆ. ಈ ನಡುವೆ, ಪೂಂಜಾ ವಿರುದ್ಧ ಯಾವುದೇ ಕ್ರಮಕೈಗೊಳ್ಳದಂತೆ ಸಾವಧಾನದಿಂದ ಇರಬೇಕು ಎಂದು ರಾಜ್ಯ ಸರ್ಕಾರಕ್ಕೆ ಮೌಖಿಕವಾಗಿ ಆದೇಶಿಸಿದೆ.

ಇದನ್ನೂ ಓದಿ : ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಶಾಂತ್ ತಿಮ್ಮಯ್ಯ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...